Homeಕರ್ನಾಟಕಬೆಂಗಳೂರಿನ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇಮೇಲ್ - ಅರೋಪಿಯ ಬಂಧನ

ಬೆಂಗಳೂರಿನ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇಮೇಲ್ – ಅರೋಪಿಯ ಬಂಧನ

- Advertisement -
- Advertisement -

ಬೆಂಗಳೂರಿನ ಕಾಲೇಜುಗಳಲ್ಲಿ ಹೈಡ್ರೋಜನ್ ಆಧಾರಿತ ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಇರಿಸಿರುವುದಾಗಿ ಹೇಳಿಕೊಂಡು ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದ ಆರೋಪಿಯನ್ನು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಗುರುವಾರ ಬಂಧಿಸಲಾಗಿದೆ. ಆರೋಪಿಯನ್ನು ದೀಪಂಜನ್ ಮಿತ್ರ (48) ಎಂದು ಗುರುತಿಸಲಾಗಿದೆ. ಎರಡು ಶಿಕ್ಷಣ ಸಂಸ್ಥೆಗಳು ನೀಡಿದ ದೂರಿನ ಮೇರೆಗೆ ವಿವಿ ಪುರಂ ಮತ್ತು ಹನುಮಂತನಗರ ಪೊಲೀಸ್ ಠಾಣೆಗಳ ಜಂಟಿ ತನಿಖೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಬೆಂಗಳೂರಿನ ಕಾಲೇಜುಗಳಿಗೆ ಬಾಂಬ್ ಬೆದರಿಕೆ

ಅಕ್ಟೋಬರ್ 4 ರಂದು, ಬೆಂಗಳೂರಿನ ಮೂರು ಪ್ರಮುಖ ಎಂಜಿನಿಯರಿಂಗ್ ಕಾಲೇಜುಗಳಾದ ಬೆಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ), ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಎಂಎಸ್ ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬಿಐಟಿಯ ಪ್ರಾಂಶುಪಾಲರು ಅಕ್ಟೋಬರ್ 4 ರಂದು [email protected] ವಿಳಾಸದಿಂದ ಬೆದರಿಕೆ ಇಮೇಲ್ ಪಡೆದ ಕೆಲವೇ ಕ್ಷಣಗಳಲ್ಲಿ ದೂರು ದಾಖಲಿಸಿದ್ದರು. ಕಾಲೇಜಿನಲ್ಲಿ ಸುಧಾರಿತ ಹೈಡ್ರೋಜನ್ ಆಧಾರಿತ IED ಗಳನ್ನು ಇಡಲಾಗಿದೆ ಎಂದು ಎಂದು ಇಮೇಲ್ ಹೇಳಿಕೊಂಡಿತ್ತು. ಬೆಂಗಳೂರಿನ ಕಾಲೇಜುಗಳಿಗೆ ಬಾಂಬ್ ಬೆದರಿಕೆ

ಅದೇ ದಿನ ಹನುಮಂತನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಿಎಂಎಸ್ ಕಾಲೇಜಿನ ಪ್ರಾಂಶುಪಾಲರು ಇದೇ ರೀತಿ ದೂರು ನೀಡಿದ್ದು, ಮತ್ತೊಂದು ಪ್ರಕರಣ ದಾಖಲಾಗಿತ್ತು. ದೂರು ದಾಖಲಾದ ಕೂಡಲೇ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತ ಲೋಕೇಶ್ ಬರಮಪ್ಪ ಜಗಲಸರ್ ಅವರ ನೇತೃತ್ವದಲ್ಲಿ ವಿವಿ ಪುರಂ ಮತ್ತು ಹನುಮಂತನಗರ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ತಂಡವನ್ನು ರಚಿಸಲಾಗಿತ್ತು.

ಎರಡೂ ಪ್ರಕರಣಗಳ ತಾಂತ್ರಿಕ ತನಿಖೆಯು ಡಾರ್ಜಿಲಿಂಗ್ ಜಿಲ್ಲೆಯ ಸಾಲಿಸ್‌ಬರಿ ಟೌನ್‌ನಲ್ಲಿರುವ ಶಂಕಿತ ವ್ಯಕ್ತಿಯನ್ನು ಬೆಟ್ಟು ಮಾಡಿತ್ತು. ಶಂಕಿತನನ್ನು ಅಕ್ಟೋಬರ್ 17 ರಂದು ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಆರೋಪಿಯು ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ.

ವಿವಿ ಪುರಂ ಉಪ ವಿಭಾಗದ ಸಹಾಯಕ ಪೊಲೀಸ್ ಕಮಿಷನರ್ ಶಮೀದ್ ಪಾಷಾ, ವಿವಿ ಪುರಂ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಧರ್ಮೇಂದ್ರ ಮತ್ತು ಅವರ ತಂಡ ಅರೋಪಿಯನ್ನು ತಾಂತ್ರಿಕ ವಿಶ್ಲೇಷಣೆಯನ್ನು ಬಳಸಿಕೊಂಡು ಪತ್ತೆ ಹಚ್ಚಿತ್ತು.

“ನಾವು ಶಂಕಿತನನ್ನು ಸಿಡಿಆರ್ ಮತ್ತು ಇಮೇಲ್ ವಿಳಾಸಗಳನ್ನು ರಚಿಸಲು ಬಳಸಿದ ರೆಫರಲ್ ಐಡಿಯನ್ನು ಬಳಸಿಕೊಂಡು ಪತ್ತೆಹಚ್ಚಿದೆವು. ಅದರ ಮೂಲಕ ಅವರು ನಕಲಿ ಬಾಂಬ್ ಬೆದರಿಕೆಗಳನ್ನು ಕಳುಹಿಸುತ್ತಿದ್ದರು” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆರೋಪಿಯು ಮೈಲ್ ಕಳುಹಿಸಲು ಬಳಸಿದ HP ಲ್ಯಾಪ್‌ಟಾಪ್ ಮತ್ತು ನೋಕಿಯಾ ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಯು ಇದೇ ರೀತಿಯಲ್ಲಿ ಕನಿಷ್ಠ 10 ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾನೆ. ಬೆಂಗಳೂರಿನಾದ್ಯಂತ ಇತರ ಶಾಲಾ-ಕಾಲೇಜುಗಳಿಗೆ ಕಳುಹಿಸಲಾದ ಬಾಂಬ್ ಬೆದರಿಕೆ ಇಮೇಲ್‌ಗಳಲ್ಲಿ ತನ್ನ ಕೈವಾಡವನ್ನು ಒಪ್ಪಿಕೊಂಡಿದ್ದಾನೆ. ಈ ಹೆಚ್ಚುವರಿ ಘಟನೆಗಳಲ್ಲಿ ಶಂಕಿತನ ಪಾತ್ರವನ್ನು ನಿರ್ಧರಿಸಲು ಅಧಿಕಾರಿಗಳು ಈಗ ತನಿಖೆಯನ್ನು ನಡೆಸುತ್ತಿದ್ದಾರೆ.

ಬಿ ಕಾಮ್ ಪದವೀಧರನಾಗಿರುವ ದೀಪಂಜನ್ ಮಿತ್ರ 2012 ರಿಂದ ನಿರುದ್ಯೋಗಿಯಾಗಿದ್ದಾನೆ. 2012ರ ವರೆಗೆ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಆತ, ಕಂಪ್ಯೂಟರ್ ಸೈನ್ಸ್‌ನಲ್ಲಿ ಅನೇಕ ಸರ್ಟಿಫಿಕೇಶನ್ ಕೋರ್ಸ್‌ಗಳನ್ನು ಸಹ ಪೂರ್ಣಗೊಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. “ನಿರುದ್ಯೋಗಿಯಾಗಿದ್ದ ಆರೋಪಿ ಮಾನಸಿಕವಾಗಿ ತೊಂದರೆಗೀಡಾಗಿದ್ದ. ಹೀಗಾಗಿ ನಕಲಿ ಇಮೇಲ್‌ಗಳನ್ನು ಕಳುಹಿಸಿದ್ದಾನೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅದಾಗ್ಯೂ, ಆರೋಪಿಯ ಚಟುವಟಿಕೆಗಳ ಸಂಪೂರ್ಣ ವ್ಯಾಪ್ತಿ ಮತ್ತು ಯಾವುದೇ ಸಂಭಾವ್ಯ ಸಹಚರರನ್ನು ಗುರುತಿಸಲು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮುಡಾ ಕಚೇರಿ ಮೇಲೆ ಇಡಿ ದಾಳಿ | ಸಿಎಂ ಸಿದ್ದರಾಮಯ್ಯ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ

ಮುಡಾ ಕಚೇರಿ ಮೇಲೆ ಇಡಿ ದಾಳಿ | ಸಿಎಂ ಸಿದ್ದರಾಮಯ್ಯ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...