Homeಕರ್ನಾಟಕಬೆಂಗಳೂರಿನ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇಮೇಲ್ - ಅರೋಪಿಯ ಬಂಧನ

ಬೆಂಗಳೂರಿನ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇಮೇಲ್ – ಅರೋಪಿಯ ಬಂಧನ

- Advertisement -
- Advertisement -

ಬೆಂಗಳೂರಿನ ಕಾಲೇಜುಗಳಲ್ಲಿ ಹೈಡ್ರೋಜನ್ ಆಧಾರಿತ ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಇರಿಸಿರುವುದಾಗಿ ಹೇಳಿಕೊಂಡು ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದ ಆರೋಪಿಯನ್ನು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಗುರುವಾರ ಬಂಧಿಸಲಾಗಿದೆ. ಆರೋಪಿಯನ್ನು ದೀಪಂಜನ್ ಮಿತ್ರ (48) ಎಂದು ಗುರುತಿಸಲಾಗಿದೆ. ಎರಡು ಶಿಕ್ಷಣ ಸಂಸ್ಥೆಗಳು ನೀಡಿದ ದೂರಿನ ಮೇರೆಗೆ ವಿವಿ ಪುರಂ ಮತ್ತು ಹನುಮಂತನಗರ ಪೊಲೀಸ್ ಠಾಣೆಗಳ ಜಂಟಿ ತನಿಖೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಬೆಂಗಳೂರಿನ ಕಾಲೇಜುಗಳಿಗೆ ಬಾಂಬ್ ಬೆದರಿಕೆ

ಅಕ್ಟೋಬರ್ 4 ರಂದು, ಬೆಂಗಳೂರಿನ ಮೂರು ಪ್ರಮುಖ ಎಂಜಿನಿಯರಿಂಗ್ ಕಾಲೇಜುಗಳಾದ ಬೆಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ), ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಎಂಎಸ್ ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬಿಐಟಿಯ ಪ್ರಾಂಶುಪಾಲರು ಅಕ್ಟೋಬರ್ 4 ರಂದು [email protected] ವಿಳಾಸದಿಂದ ಬೆದರಿಕೆ ಇಮೇಲ್ ಪಡೆದ ಕೆಲವೇ ಕ್ಷಣಗಳಲ್ಲಿ ದೂರು ದಾಖಲಿಸಿದ್ದರು. ಕಾಲೇಜಿನಲ್ಲಿ ಸುಧಾರಿತ ಹೈಡ್ರೋಜನ್ ಆಧಾರಿತ IED ಗಳನ್ನು ಇಡಲಾಗಿದೆ ಎಂದು ಎಂದು ಇಮೇಲ್ ಹೇಳಿಕೊಂಡಿತ್ತು. ಬೆಂಗಳೂರಿನ ಕಾಲೇಜುಗಳಿಗೆ ಬಾಂಬ್ ಬೆದರಿಕೆ

ಅದೇ ದಿನ ಹನುಮಂತನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಿಎಂಎಸ್ ಕಾಲೇಜಿನ ಪ್ರಾಂಶುಪಾಲರು ಇದೇ ರೀತಿ ದೂರು ನೀಡಿದ್ದು, ಮತ್ತೊಂದು ಪ್ರಕರಣ ದಾಖಲಾಗಿತ್ತು. ದೂರು ದಾಖಲಾದ ಕೂಡಲೇ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತ ಲೋಕೇಶ್ ಬರಮಪ್ಪ ಜಗಲಸರ್ ಅವರ ನೇತೃತ್ವದಲ್ಲಿ ವಿವಿ ಪುರಂ ಮತ್ತು ಹನುಮಂತನಗರ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ತಂಡವನ್ನು ರಚಿಸಲಾಗಿತ್ತು.

ಎರಡೂ ಪ್ರಕರಣಗಳ ತಾಂತ್ರಿಕ ತನಿಖೆಯು ಡಾರ್ಜಿಲಿಂಗ್ ಜಿಲ್ಲೆಯ ಸಾಲಿಸ್‌ಬರಿ ಟೌನ್‌ನಲ್ಲಿರುವ ಶಂಕಿತ ವ್ಯಕ್ತಿಯನ್ನು ಬೆಟ್ಟು ಮಾಡಿತ್ತು. ಶಂಕಿತನನ್ನು ಅಕ್ಟೋಬರ್ 17 ರಂದು ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಆರೋಪಿಯು ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ.

ವಿವಿ ಪುರಂ ಉಪ ವಿಭಾಗದ ಸಹಾಯಕ ಪೊಲೀಸ್ ಕಮಿಷನರ್ ಶಮೀದ್ ಪಾಷಾ, ವಿವಿ ಪುರಂ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಧರ್ಮೇಂದ್ರ ಮತ್ತು ಅವರ ತಂಡ ಅರೋಪಿಯನ್ನು ತಾಂತ್ರಿಕ ವಿಶ್ಲೇಷಣೆಯನ್ನು ಬಳಸಿಕೊಂಡು ಪತ್ತೆ ಹಚ್ಚಿತ್ತು.

“ನಾವು ಶಂಕಿತನನ್ನು ಸಿಡಿಆರ್ ಮತ್ತು ಇಮೇಲ್ ವಿಳಾಸಗಳನ್ನು ರಚಿಸಲು ಬಳಸಿದ ರೆಫರಲ್ ಐಡಿಯನ್ನು ಬಳಸಿಕೊಂಡು ಪತ್ತೆಹಚ್ಚಿದೆವು. ಅದರ ಮೂಲಕ ಅವರು ನಕಲಿ ಬಾಂಬ್ ಬೆದರಿಕೆಗಳನ್ನು ಕಳುಹಿಸುತ್ತಿದ್ದರು” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆರೋಪಿಯು ಮೈಲ್ ಕಳುಹಿಸಲು ಬಳಸಿದ HP ಲ್ಯಾಪ್‌ಟಾಪ್ ಮತ್ತು ನೋಕಿಯಾ ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಯು ಇದೇ ರೀತಿಯಲ್ಲಿ ಕನಿಷ್ಠ 10 ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾನೆ. ಬೆಂಗಳೂರಿನಾದ್ಯಂತ ಇತರ ಶಾಲಾ-ಕಾಲೇಜುಗಳಿಗೆ ಕಳುಹಿಸಲಾದ ಬಾಂಬ್ ಬೆದರಿಕೆ ಇಮೇಲ್‌ಗಳಲ್ಲಿ ತನ್ನ ಕೈವಾಡವನ್ನು ಒಪ್ಪಿಕೊಂಡಿದ್ದಾನೆ. ಈ ಹೆಚ್ಚುವರಿ ಘಟನೆಗಳಲ್ಲಿ ಶಂಕಿತನ ಪಾತ್ರವನ್ನು ನಿರ್ಧರಿಸಲು ಅಧಿಕಾರಿಗಳು ಈಗ ತನಿಖೆಯನ್ನು ನಡೆಸುತ್ತಿದ್ದಾರೆ.

ಬಿ ಕಾಮ್ ಪದವೀಧರನಾಗಿರುವ ದೀಪಂಜನ್ ಮಿತ್ರ 2012 ರಿಂದ ನಿರುದ್ಯೋಗಿಯಾಗಿದ್ದಾನೆ. 2012ರ ವರೆಗೆ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಆತ, ಕಂಪ್ಯೂಟರ್ ಸೈನ್ಸ್‌ನಲ್ಲಿ ಅನೇಕ ಸರ್ಟಿಫಿಕೇಶನ್ ಕೋರ್ಸ್‌ಗಳನ್ನು ಸಹ ಪೂರ್ಣಗೊಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. “ನಿರುದ್ಯೋಗಿಯಾಗಿದ್ದ ಆರೋಪಿ ಮಾನಸಿಕವಾಗಿ ತೊಂದರೆಗೀಡಾಗಿದ್ದ. ಹೀಗಾಗಿ ನಕಲಿ ಇಮೇಲ್‌ಗಳನ್ನು ಕಳುಹಿಸಿದ್ದಾನೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅದಾಗ್ಯೂ, ಆರೋಪಿಯ ಚಟುವಟಿಕೆಗಳ ಸಂಪೂರ್ಣ ವ್ಯಾಪ್ತಿ ಮತ್ತು ಯಾವುದೇ ಸಂಭಾವ್ಯ ಸಹಚರರನ್ನು ಗುರುತಿಸಲು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮುಡಾ ಕಚೇರಿ ಮೇಲೆ ಇಡಿ ದಾಳಿ | ಸಿಎಂ ಸಿದ್ದರಾಮಯ್ಯ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ

ಮುಡಾ ಕಚೇರಿ ಮೇಲೆ ಇಡಿ ದಾಳಿ | ಸಿಎಂ ಸಿದ್ದರಾಮಯ್ಯ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...