Homeಸಿನಿಮಾಕ್ರೀಡೆಹೀನಾಯವಾಗಿ ಸೋತ ಬೆಂಗಳೂರು ಬುಲ್ಸ್: ಕ್ಷೀಣಿಸಿದ ನೇರ ಸೆಮಿಫೈನಲ್ ತಲುಪುವ ಸಾಧ್ಯತೆ

ಹೀನಾಯವಾಗಿ ಸೋತ ಬೆಂಗಳೂರು ಬುಲ್ಸ್: ಕ್ಷೀಣಿಸಿದ ನೇರ ಸೆಮಿಫೈನಲ್ ತಲುಪುವ ಸಾಧ್ಯತೆ

- Advertisement -
- Advertisement -

ಬುಧವಾರ ರಾತ್ರಿ ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡದ ಎದುರು 20 ಪಾಯಿಂಟ್‌ಗಳ ಅಂತರದಿಂದ ಬೆಂಗಳೂರು ಬುಲ್ಸ್ ತಂಡ ಹೀನಾಯ ಸೋಲು ಕಂಡಿತು. ಆ ಮೂಲಕ ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದು, ನೇರ ಸೆಮಿಫೈನಲ್ ತಲುಪುವುದು ಅವಕಾಶದಿಂದ ದೂರ ಸರಿಯುತ್ತಿದೆ.

ಈ ಹಿಂದೆ ಬೆಂಗಾಲ್ ವಾರಿಯರ್ಸ್ ಮತ್ತು ಪುಣೇರಿ ಪಲ್ಟಾನ್ ವಿರುದ್ಧ ಸೋತಿದ್ದ ಬೆಂಗಳೂರು ಬುಲ್ಸ್, ದಬಾಂಗ್ ಡೆಲ್ಲಿ ವಿರುದ್ಧ ಗೆದ್ದು ಎರಡನೇ ಸ್ಥಾನ ಪಡೆದಿತ್ತು. ಆದರೆ ಬುಧವಾರ ಎಲ್ಲಾ ಡಿಫೆಂಡರ್‌ಗಳು ವಿಫಲರಾದ ಕಾರಣ 25-45 ಅಂತರದಲ್ಲಿ ಸೋಲು ಕಂಡಿತು. ರೈಡಿಂಗ್‌ನಲ್ಲಿ ಭರತ್ ಸೂಪರ್ ಟೆನ್ ಗಳಿಸಿದರೂ ಸಹ ಡೆಫೆಂಡರ್‌ಗಳು ಕೈಚೆಲ್ಲಿ ಅಂಕಗಳು ಸೋರಿ ಹೋದವು. ಗೆದ್ದ ಜೈಪುರ್ ತಂಡ 69 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ ಅಷ್ಟೇ ಅಂಕ ಪಡೆದಿರುವ ಪುಣೇರಿ ಪಲ್ಟಾನ್ ಎರಡನೇ ಸ್ಥಾನಲ್ಲಿದೆ. ಈ ಎರಡೂ ತಂಡಗಳು ಗೆಲವಿನ ಲಯದಲ್ಲಿರುವ ಕಾರಣ ಇವು ಕೊನೆಯವರೆಗೂ ಅಂಕಪಟ್ಟಿಯಲ್ಲಿ ಮೊದಲು ಮತ್ತು ಎರಡನೇ ಸ್ಥಾನದಲ್ಲಿಯೇ ಉಳಿಯುವ ಸಾಧ್ಯತೆಯಿದ್ದು, ಒಂದಕ್ಕಿಂತ ಹೆಚ್ಚು ಪಂದ್ಯ ಸೋಲದಿದ್ದರೆ ನೇರವಾಗಿ ಸೆಮಿಫೈನಲ್ ತಲುಪುವ ಅವಕಾಶ ಹೊಂದಿವೆ.

ಪ್ರೊ ಕಬಡ್ಡಿಯ ಲೀಗ್‌ ಹಂತ ಡಬಲ್ ರೌಂಡ್ ರಾಬಿನ್ ಆಧಾರದಲ್ಲಿ ನಡೆಯುತ್ತದೆ. ಪ್ರತಿ ತಂಡಕ್ಕೂ 22 ಪಂದ್ಯಗಳು ಸಿಗುತ್ತವೆ. ಅಂಕಪಟ್ಟಿಯಲ್ಲಿ ಮೊದಲ ಆರು ಸ್ಥಾನ ಪಡೆದ ತಂಡಗಳು ಪ್ಲೇಆಫ್ ಪ್ರವೇಶಿಸಿದರೆ, ಉಳಿದ 6 ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಅದರಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ. ಉಳಿದ ನಾಲ್ಕು ತಂಡಗಳು ಪ್ಲೇ ಆಫ್‌ನಲ್ಲಿ ಕ್ವಾಲಿಫೈಯರ್ ಪಂದ್ಯ ಎದುರಿಸಿ ಗೆದ್ದ ತಂಡಗಳು ಮಾತ್ರ ಸೆಮಿಫೈನಲ್ ಪ್ರವೇಶಿಸುತ್ತವೆ. ಸೋತ ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಹಾಗಾಗಿ ಮೊದಲ ಎರಡು ಸ್ಥಾನ ಪಡೆಯುವುದು ಉತ್ತಮ. ಇಷ್ಟು ದಿನ ಮೊದಲು ಮತ್ತು ಎರಡನೇ ಸ್ಥಾನದಲ್ಲಿರುತ್ತಿದ್ದ ಬೆಂಗಳೂರು 3 ಸೋಲಿನೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದೆ.

ಇದುವರೆಗೆ ಆಡಿದ 19 ಪಂದ್ಯಗಳಲ್ಲಿ 11 ಗೆಲುವು, 7 ಸೋಲು ಮತ್ತು ಒಂದು ಟೈನೊಂದಿಗೆ 63 ಅಂಕ ಗಳಿಸಿರುವ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದೆ. ಇನ್ನೂ ಲೀಗ್ ಹಂತದಲ್ಲಿ ಮೂರು ಪಂದ್ಯಗಳು ಉಳಿದಿದ್ದು ಎರಡು ಪಂದ್ಯ ಗೆದ್ದರೆ ಸುಲಭವಾಗಿ ಪ್ಲೇ ಆಫ್‌ ಪ್ರವೇಶಿಸಲಿದೆ. ಒಂದು ವೇಳೆ ಮೂರಕ್ಕೆ ಮೂರನ್ನು ಸೋತರೆ ಅದು ಪ್ಲೇ ಪ್ರವೇಶಿಸುವುದು ಕಷ್ಟವಾಗುತ್ತದೆ. ಆಗ ಉಳಿದ ತಂಡಗಳು ಸೋಲನ್ನು ಬಯಸಬೇಕಾಗುತ್ತದೆ.

ಪ್ಲೆ ಆಫ್‌ ರೇಸ್‌ನಲ್ಲಿ 8 ತಂಡಗಳು

ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ಪುಣೇರಿ ಪಲ್ಟಾನ್ ಈಗಾಗಲೇ ಪ್ಲೇ ಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿವೆ. ಉಳಿದ ನಾಲ್ಕು ಸ್ಥಾನಗಳಿಗಾಗಿ ಬೆಂಗಳೂರು ಬುಲ್ಸ್ (63 ಅಂಕ), ಯುಪಿ ಯೋಧ (60 ಅಂಕ), ತಮಿಳು ತಲೈವಾಸ್ (56 ಅಂಕ), ದಬಾಂಗ್ ಡೆಲ್ಲಿ (54 ಅಂಕ), ಯು ಮುಂಬಾ (50 ಅಂಕ), ಬೆಂಗಾಲ್ ವಾರಿಯರ್ಸ್ (49 ಅಂಕ) ಪಟ್ನಾ ಪೈರೇಟ್ಸ್ (48 ಅಂಕ) ಮತ್ತು ಹರ್ಯಾಣ ಸ್ಟೀಲರ್ಸ್ (46 ಅಂಕ) ಸೇರಿ ಒಟ್ಟು 8 ತಂಡಗಳು ಸೆಣಸಾಟ ನಡೆಸುತ್ತಿವೆ. ಕೆಲವು ತಂಡಗಳಿಗೆ ಇನ್ನೂ 4 ಪಂದ್ಯಗಳಿದ್ದು ಎಲ್ಲವನ್ನು ಗೆದ್ದವರು ಪ್ಲೇ ಆಫ್ ಪ್ರವೇಶಿಸಬಹುದಾಗಿದೆ. ಆದರೆ 41 ಅಂಕ ಗಳಿಸಿರುವ ಗುಜರಾತ್ ಜೈಂಟ್ಸ್ ಮತ್ತು 15 ಅಂಕ ಗಳಿಸಿರುವ ತೆಲುಗು ಟೈಟನ್ಸ್ ಮಾತ್ರ ಪ್ಲೇ ಆಪ್‌ ರೇಸ್‌ನಿಂದ ಹೊರಬಿದ್ದಿವೆ.

ಡಿಸೆಂಬರ್ 13ರಂದು 2 ಎಲಿಮಿನೇಟರ್ ಪಂದ್ಯಗಳು ನಡೆಯುತ್ತವೆ. ಒಂದು ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೂರು ಮತ್ತು ಆರನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸಿದರೆ ಮತ್ತೊಂದು ಪಂದ್ಯದಲ್ಲಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸುತ್ತವೆ. ಗೆದ್ದವರು ಸೆಮಿಫೈನಲ್ ಪ್ರವೇಶಿಸುತ್ತಾರೆ. ಸೋತವರು ಮನೆಗೆ ನಡೆಯುತ್ತಾರೆ.

ಡಿಸೆಂಬರ್ 15ರಂದು ಎರಡು ಸೆಮಿಫೈನಲ್ ಪಂದ್ಯಗಳು ನಡೆದರೆ, ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದನ್ನೂ ಓದಿ: ಮತ್ತೆ ಸಂಜು ಸ್ಯಾಮ್ಸನ್ ಕೈಬಿಟ್ಟಿದ್ದಕ್ಕೆ ಅಭಿಮಾನಿಗಳ ಆಕ್ರೋಶ: ಸಂಸದ ಶಶಿ ತರೂರ್ ಸಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...