Homeಸಿನಿಮಾಕ್ರೀಡೆಹೀನಾಯವಾಗಿ ಸೋತ ಬೆಂಗಳೂರು ಬುಲ್ಸ್: ಕ್ಷೀಣಿಸಿದ ನೇರ ಸೆಮಿಫೈನಲ್ ತಲುಪುವ ಸಾಧ್ಯತೆ

ಹೀನಾಯವಾಗಿ ಸೋತ ಬೆಂಗಳೂರು ಬುಲ್ಸ್: ಕ್ಷೀಣಿಸಿದ ನೇರ ಸೆಮಿಫೈನಲ್ ತಲುಪುವ ಸಾಧ್ಯತೆ

- Advertisement -
- Advertisement -

ಬುಧವಾರ ರಾತ್ರಿ ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡದ ಎದುರು 20 ಪಾಯಿಂಟ್‌ಗಳ ಅಂತರದಿಂದ ಬೆಂಗಳೂರು ಬುಲ್ಸ್ ತಂಡ ಹೀನಾಯ ಸೋಲು ಕಂಡಿತು. ಆ ಮೂಲಕ ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದು, ನೇರ ಸೆಮಿಫೈನಲ್ ತಲುಪುವುದು ಅವಕಾಶದಿಂದ ದೂರ ಸರಿಯುತ್ತಿದೆ.

ಈ ಹಿಂದೆ ಬೆಂಗಾಲ್ ವಾರಿಯರ್ಸ್ ಮತ್ತು ಪುಣೇರಿ ಪಲ್ಟಾನ್ ವಿರುದ್ಧ ಸೋತಿದ್ದ ಬೆಂಗಳೂರು ಬುಲ್ಸ್, ದಬಾಂಗ್ ಡೆಲ್ಲಿ ವಿರುದ್ಧ ಗೆದ್ದು ಎರಡನೇ ಸ್ಥಾನ ಪಡೆದಿತ್ತು. ಆದರೆ ಬುಧವಾರ ಎಲ್ಲಾ ಡಿಫೆಂಡರ್‌ಗಳು ವಿಫಲರಾದ ಕಾರಣ 25-45 ಅಂತರದಲ್ಲಿ ಸೋಲು ಕಂಡಿತು. ರೈಡಿಂಗ್‌ನಲ್ಲಿ ಭರತ್ ಸೂಪರ್ ಟೆನ್ ಗಳಿಸಿದರೂ ಸಹ ಡೆಫೆಂಡರ್‌ಗಳು ಕೈಚೆಲ್ಲಿ ಅಂಕಗಳು ಸೋರಿ ಹೋದವು. ಗೆದ್ದ ಜೈಪುರ್ ತಂಡ 69 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ ಅಷ್ಟೇ ಅಂಕ ಪಡೆದಿರುವ ಪುಣೇರಿ ಪಲ್ಟಾನ್ ಎರಡನೇ ಸ್ಥಾನಲ್ಲಿದೆ. ಈ ಎರಡೂ ತಂಡಗಳು ಗೆಲವಿನ ಲಯದಲ್ಲಿರುವ ಕಾರಣ ಇವು ಕೊನೆಯವರೆಗೂ ಅಂಕಪಟ್ಟಿಯಲ್ಲಿ ಮೊದಲು ಮತ್ತು ಎರಡನೇ ಸ್ಥಾನದಲ್ಲಿಯೇ ಉಳಿಯುವ ಸಾಧ್ಯತೆಯಿದ್ದು, ಒಂದಕ್ಕಿಂತ ಹೆಚ್ಚು ಪಂದ್ಯ ಸೋಲದಿದ್ದರೆ ನೇರವಾಗಿ ಸೆಮಿಫೈನಲ್ ತಲುಪುವ ಅವಕಾಶ ಹೊಂದಿವೆ.

ಪ್ರೊ ಕಬಡ್ಡಿಯ ಲೀಗ್‌ ಹಂತ ಡಬಲ್ ರೌಂಡ್ ರಾಬಿನ್ ಆಧಾರದಲ್ಲಿ ನಡೆಯುತ್ತದೆ. ಪ್ರತಿ ತಂಡಕ್ಕೂ 22 ಪಂದ್ಯಗಳು ಸಿಗುತ್ತವೆ. ಅಂಕಪಟ್ಟಿಯಲ್ಲಿ ಮೊದಲ ಆರು ಸ್ಥಾನ ಪಡೆದ ತಂಡಗಳು ಪ್ಲೇಆಫ್ ಪ್ರವೇಶಿಸಿದರೆ, ಉಳಿದ 6 ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಅದರಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ. ಉಳಿದ ನಾಲ್ಕು ತಂಡಗಳು ಪ್ಲೇ ಆಫ್‌ನಲ್ಲಿ ಕ್ವಾಲಿಫೈಯರ್ ಪಂದ್ಯ ಎದುರಿಸಿ ಗೆದ್ದ ತಂಡಗಳು ಮಾತ್ರ ಸೆಮಿಫೈನಲ್ ಪ್ರವೇಶಿಸುತ್ತವೆ. ಸೋತ ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಹಾಗಾಗಿ ಮೊದಲ ಎರಡು ಸ್ಥಾನ ಪಡೆಯುವುದು ಉತ್ತಮ. ಇಷ್ಟು ದಿನ ಮೊದಲು ಮತ್ತು ಎರಡನೇ ಸ್ಥಾನದಲ್ಲಿರುತ್ತಿದ್ದ ಬೆಂಗಳೂರು 3 ಸೋಲಿನೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದೆ.

ಇದುವರೆಗೆ ಆಡಿದ 19 ಪಂದ್ಯಗಳಲ್ಲಿ 11 ಗೆಲುವು, 7 ಸೋಲು ಮತ್ತು ಒಂದು ಟೈನೊಂದಿಗೆ 63 ಅಂಕ ಗಳಿಸಿರುವ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದೆ. ಇನ್ನೂ ಲೀಗ್ ಹಂತದಲ್ಲಿ ಮೂರು ಪಂದ್ಯಗಳು ಉಳಿದಿದ್ದು ಎರಡು ಪಂದ್ಯ ಗೆದ್ದರೆ ಸುಲಭವಾಗಿ ಪ್ಲೇ ಆಫ್‌ ಪ್ರವೇಶಿಸಲಿದೆ. ಒಂದು ವೇಳೆ ಮೂರಕ್ಕೆ ಮೂರನ್ನು ಸೋತರೆ ಅದು ಪ್ಲೇ ಪ್ರವೇಶಿಸುವುದು ಕಷ್ಟವಾಗುತ್ತದೆ. ಆಗ ಉಳಿದ ತಂಡಗಳು ಸೋಲನ್ನು ಬಯಸಬೇಕಾಗುತ್ತದೆ.

ಪ್ಲೆ ಆಫ್‌ ರೇಸ್‌ನಲ್ಲಿ 8 ತಂಡಗಳು

ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ಪುಣೇರಿ ಪಲ್ಟಾನ್ ಈಗಾಗಲೇ ಪ್ಲೇ ಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿವೆ. ಉಳಿದ ನಾಲ್ಕು ಸ್ಥಾನಗಳಿಗಾಗಿ ಬೆಂಗಳೂರು ಬುಲ್ಸ್ (63 ಅಂಕ), ಯುಪಿ ಯೋಧ (60 ಅಂಕ), ತಮಿಳು ತಲೈವಾಸ್ (56 ಅಂಕ), ದಬಾಂಗ್ ಡೆಲ್ಲಿ (54 ಅಂಕ), ಯು ಮುಂಬಾ (50 ಅಂಕ), ಬೆಂಗಾಲ್ ವಾರಿಯರ್ಸ್ (49 ಅಂಕ) ಪಟ್ನಾ ಪೈರೇಟ್ಸ್ (48 ಅಂಕ) ಮತ್ತು ಹರ್ಯಾಣ ಸ್ಟೀಲರ್ಸ್ (46 ಅಂಕ) ಸೇರಿ ಒಟ್ಟು 8 ತಂಡಗಳು ಸೆಣಸಾಟ ನಡೆಸುತ್ತಿವೆ. ಕೆಲವು ತಂಡಗಳಿಗೆ ಇನ್ನೂ 4 ಪಂದ್ಯಗಳಿದ್ದು ಎಲ್ಲವನ್ನು ಗೆದ್ದವರು ಪ್ಲೇ ಆಫ್ ಪ್ರವೇಶಿಸಬಹುದಾಗಿದೆ. ಆದರೆ 41 ಅಂಕ ಗಳಿಸಿರುವ ಗುಜರಾತ್ ಜೈಂಟ್ಸ್ ಮತ್ತು 15 ಅಂಕ ಗಳಿಸಿರುವ ತೆಲುಗು ಟೈಟನ್ಸ್ ಮಾತ್ರ ಪ್ಲೇ ಆಪ್‌ ರೇಸ್‌ನಿಂದ ಹೊರಬಿದ್ದಿವೆ.

ಡಿಸೆಂಬರ್ 13ರಂದು 2 ಎಲಿಮಿನೇಟರ್ ಪಂದ್ಯಗಳು ನಡೆಯುತ್ತವೆ. ಒಂದು ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೂರು ಮತ್ತು ಆರನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸಿದರೆ ಮತ್ತೊಂದು ಪಂದ್ಯದಲ್ಲಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸುತ್ತವೆ. ಗೆದ್ದವರು ಸೆಮಿಫೈನಲ್ ಪ್ರವೇಶಿಸುತ್ತಾರೆ. ಸೋತವರು ಮನೆಗೆ ನಡೆಯುತ್ತಾರೆ.

ಡಿಸೆಂಬರ್ 15ರಂದು ಎರಡು ಸೆಮಿಫೈನಲ್ ಪಂದ್ಯಗಳು ನಡೆದರೆ, ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದನ್ನೂ ಓದಿ: ಮತ್ತೆ ಸಂಜು ಸ್ಯಾಮ್ಸನ್ ಕೈಬಿಟ್ಟಿದ್ದಕ್ಕೆ ಅಭಿಮಾನಿಗಳ ಆಕ್ರೋಶ: ಸಂಸದ ಶಶಿ ತರೂರ್ ಸಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...