Homeಸಿನಿಮಾಕ್ರೀಡೆಹೀನಾಯವಾಗಿ ಸೋತ ಬೆಂಗಳೂರು ಬುಲ್ಸ್: ಕ್ಷೀಣಿಸಿದ ನೇರ ಸೆಮಿಫೈನಲ್ ತಲುಪುವ ಸಾಧ್ಯತೆ

ಹೀನಾಯವಾಗಿ ಸೋತ ಬೆಂಗಳೂರು ಬುಲ್ಸ್: ಕ್ಷೀಣಿಸಿದ ನೇರ ಸೆಮಿಫೈನಲ್ ತಲುಪುವ ಸಾಧ್ಯತೆ

- Advertisement -
- Advertisement -

ಬುಧವಾರ ರಾತ್ರಿ ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡದ ಎದುರು 20 ಪಾಯಿಂಟ್‌ಗಳ ಅಂತರದಿಂದ ಬೆಂಗಳೂರು ಬುಲ್ಸ್ ತಂಡ ಹೀನಾಯ ಸೋಲು ಕಂಡಿತು. ಆ ಮೂಲಕ ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದು, ನೇರ ಸೆಮಿಫೈನಲ್ ತಲುಪುವುದು ಅವಕಾಶದಿಂದ ದೂರ ಸರಿಯುತ್ತಿದೆ.

ಈ ಹಿಂದೆ ಬೆಂಗಾಲ್ ವಾರಿಯರ್ಸ್ ಮತ್ತು ಪುಣೇರಿ ಪಲ್ಟಾನ್ ವಿರುದ್ಧ ಸೋತಿದ್ದ ಬೆಂಗಳೂರು ಬುಲ್ಸ್, ದಬಾಂಗ್ ಡೆಲ್ಲಿ ವಿರುದ್ಧ ಗೆದ್ದು ಎರಡನೇ ಸ್ಥಾನ ಪಡೆದಿತ್ತು. ಆದರೆ ಬುಧವಾರ ಎಲ್ಲಾ ಡಿಫೆಂಡರ್‌ಗಳು ವಿಫಲರಾದ ಕಾರಣ 25-45 ಅಂತರದಲ್ಲಿ ಸೋಲು ಕಂಡಿತು. ರೈಡಿಂಗ್‌ನಲ್ಲಿ ಭರತ್ ಸೂಪರ್ ಟೆನ್ ಗಳಿಸಿದರೂ ಸಹ ಡೆಫೆಂಡರ್‌ಗಳು ಕೈಚೆಲ್ಲಿ ಅಂಕಗಳು ಸೋರಿ ಹೋದವು. ಗೆದ್ದ ಜೈಪುರ್ ತಂಡ 69 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ ಅಷ್ಟೇ ಅಂಕ ಪಡೆದಿರುವ ಪುಣೇರಿ ಪಲ್ಟಾನ್ ಎರಡನೇ ಸ್ಥಾನಲ್ಲಿದೆ. ಈ ಎರಡೂ ತಂಡಗಳು ಗೆಲವಿನ ಲಯದಲ್ಲಿರುವ ಕಾರಣ ಇವು ಕೊನೆಯವರೆಗೂ ಅಂಕಪಟ್ಟಿಯಲ್ಲಿ ಮೊದಲು ಮತ್ತು ಎರಡನೇ ಸ್ಥಾನದಲ್ಲಿಯೇ ಉಳಿಯುವ ಸಾಧ್ಯತೆಯಿದ್ದು, ಒಂದಕ್ಕಿಂತ ಹೆಚ್ಚು ಪಂದ್ಯ ಸೋಲದಿದ್ದರೆ ನೇರವಾಗಿ ಸೆಮಿಫೈನಲ್ ತಲುಪುವ ಅವಕಾಶ ಹೊಂದಿವೆ.

ಪ್ರೊ ಕಬಡ್ಡಿಯ ಲೀಗ್‌ ಹಂತ ಡಬಲ್ ರೌಂಡ್ ರಾಬಿನ್ ಆಧಾರದಲ್ಲಿ ನಡೆಯುತ್ತದೆ. ಪ್ರತಿ ತಂಡಕ್ಕೂ 22 ಪಂದ್ಯಗಳು ಸಿಗುತ್ತವೆ. ಅಂಕಪಟ್ಟಿಯಲ್ಲಿ ಮೊದಲ ಆರು ಸ್ಥಾನ ಪಡೆದ ತಂಡಗಳು ಪ್ಲೇಆಫ್ ಪ್ರವೇಶಿಸಿದರೆ, ಉಳಿದ 6 ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಅದರಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ. ಉಳಿದ ನಾಲ್ಕು ತಂಡಗಳು ಪ್ಲೇ ಆಫ್‌ನಲ್ಲಿ ಕ್ವಾಲಿಫೈಯರ್ ಪಂದ್ಯ ಎದುರಿಸಿ ಗೆದ್ದ ತಂಡಗಳು ಮಾತ್ರ ಸೆಮಿಫೈನಲ್ ಪ್ರವೇಶಿಸುತ್ತವೆ. ಸೋತ ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಹಾಗಾಗಿ ಮೊದಲ ಎರಡು ಸ್ಥಾನ ಪಡೆಯುವುದು ಉತ್ತಮ. ಇಷ್ಟು ದಿನ ಮೊದಲು ಮತ್ತು ಎರಡನೇ ಸ್ಥಾನದಲ್ಲಿರುತ್ತಿದ್ದ ಬೆಂಗಳೂರು 3 ಸೋಲಿನೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದೆ.

ಇದುವರೆಗೆ ಆಡಿದ 19 ಪಂದ್ಯಗಳಲ್ಲಿ 11 ಗೆಲುವು, 7 ಸೋಲು ಮತ್ತು ಒಂದು ಟೈನೊಂದಿಗೆ 63 ಅಂಕ ಗಳಿಸಿರುವ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದೆ. ಇನ್ನೂ ಲೀಗ್ ಹಂತದಲ್ಲಿ ಮೂರು ಪಂದ್ಯಗಳು ಉಳಿದಿದ್ದು ಎರಡು ಪಂದ್ಯ ಗೆದ್ದರೆ ಸುಲಭವಾಗಿ ಪ್ಲೇ ಆಫ್‌ ಪ್ರವೇಶಿಸಲಿದೆ. ಒಂದು ವೇಳೆ ಮೂರಕ್ಕೆ ಮೂರನ್ನು ಸೋತರೆ ಅದು ಪ್ಲೇ ಪ್ರವೇಶಿಸುವುದು ಕಷ್ಟವಾಗುತ್ತದೆ. ಆಗ ಉಳಿದ ತಂಡಗಳು ಸೋಲನ್ನು ಬಯಸಬೇಕಾಗುತ್ತದೆ.

ಪ್ಲೆ ಆಫ್‌ ರೇಸ್‌ನಲ್ಲಿ 8 ತಂಡಗಳು

ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ಪುಣೇರಿ ಪಲ್ಟಾನ್ ಈಗಾಗಲೇ ಪ್ಲೇ ಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿವೆ. ಉಳಿದ ನಾಲ್ಕು ಸ್ಥಾನಗಳಿಗಾಗಿ ಬೆಂಗಳೂರು ಬುಲ್ಸ್ (63 ಅಂಕ), ಯುಪಿ ಯೋಧ (60 ಅಂಕ), ತಮಿಳು ತಲೈವಾಸ್ (56 ಅಂಕ), ದಬಾಂಗ್ ಡೆಲ್ಲಿ (54 ಅಂಕ), ಯು ಮುಂಬಾ (50 ಅಂಕ), ಬೆಂಗಾಲ್ ವಾರಿಯರ್ಸ್ (49 ಅಂಕ) ಪಟ್ನಾ ಪೈರೇಟ್ಸ್ (48 ಅಂಕ) ಮತ್ತು ಹರ್ಯಾಣ ಸ್ಟೀಲರ್ಸ್ (46 ಅಂಕ) ಸೇರಿ ಒಟ್ಟು 8 ತಂಡಗಳು ಸೆಣಸಾಟ ನಡೆಸುತ್ತಿವೆ. ಕೆಲವು ತಂಡಗಳಿಗೆ ಇನ್ನೂ 4 ಪಂದ್ಯಗಳಿದ್ದು ಎಲ್ಲವನ್ನು ಗೆದ್ದವರು ಪ್ಲೇ ಆಫ್ ಪ್ರವೇಶಿಸಬಹುದಾಗಿದೆ. ಆದರೆ 41 ಅಂಕ ಗಳಿಸಿರುವ ಗುಜರಾತ್ ಜೈಂಟ್ಸ್ ಮತ್ತು 15 ಅಂಕ ಗಳಿಸಿರುವ ತೆಲುಗು ಟೈಟನ್ಸ್ ಮಾತ್ರ ಪ್ಲೇ ಆಪ್‌ ರೇಸ್‌ನಿಂದ ಹೊರಬಿದ್ದಿವೆ.

ಡಿಸೆಂಬರ್ 13ರಂದು 2 ಎಲಿಮಿನೇಟರ್ ಪಂದ್ಯಗಳು ನಡೆಯುತ್ತವೆ. ಒಂದು ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೂರು ಮತ್ತು ಆರನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸಿದರೆ ಮತ್ತೊಂದು ಪಂದ್ಯದಲ್ಲಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸುತ್ತವೆ. ಗೆದ್ದವರು ಸೆಮಿಫೈನಲ್ ಪ್ರವೇಶಿಸುತ್ತಾರೆ. ಸೋತವರು ಮನೆಗೆ ನಡೆಯುತ್ತಾರೆ.

ಡಿಸೆಂಬರ್ 15ರಂದು ಎರಡು ಸೆಮಿಫೈನಲ್ ಪಂದ್ಯಗಳು ನಡೆದರೆ, ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದನ್ನೂ ಓದಿ: ಮತ್ತೆ ಸಂಜು ಸ್ಯಾಮ್ಸನ್ ಕೈಬಿಟ್ಟಿದ್ದಕ್ಕೆ ಅಭಿಮಾನಿಗಳ ಆಕ್ರೋಶ: ಸಂಸದ ಶಶಿ ತರೂರ್ ಸಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...