Homeಸಿನಿಮಾಕ್ರೀಡೆಹೀನಾಯವಾಗಿ ಸೋತ ಬೆಂಗಳೂರು ಬುಲ್ಸ್: ಕ್ಷೀಣಿಸಿದ ನೇರ ಸೆಮಿಫೈನಲ್ ತಲುಪುವ ಸಾಧ್ಯತೆ

ಹೀನಾಯವಾಗಿ ಸೋತ ಬೆಂಗಳೂರು ಬುಲ್ಸ್: ಕ್ಷೀಣಿಸಿದ ನೇರ ಸೆಮಿಫೈನಲ್ ತಲುಪುವ ಸಾಧ್ಯತೆ

- Advertisement -
- Advertisement -

ಬುಧವಾರ ರಾತ್ರಿ ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡದ ಎದುರು 20 ಪಾಯಿಂಟ್‌ಗಳ ಅಂತರದಿಂದ ಬೆಂಗಳೂರು ಬುಲ್ಸ್ ತಂಡ ಹೀನಾಯ ಸೋಲು ಕಂಡಿತು. ಆ ಮೂಲಕ ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದು, ನೇರ ಸೆಮಿಫೈನಲ್ ತಲುಪುವುದು ಅವಕಾಶದಿಂದ ದೂರ ಸರಿಯುತ್ತಿದೆ.

ಈ ಹಿಂದೆ ಬೆಂಗಾಲ್ ವಾರಿಯರ್ಸ್ ಮತ್ತು ಪುಣೇರಿ ಪಲ್ಟಾನ್ ವಿರುದ್ಧ ಸೋತಿದ್ದ ಬೆಂಗಳೂರು ಬುಲ್ಸ್, ದಬಾಂಗ್ ಡೆಲ್ಲಿ ವಿರುದ್ಧ ಗೆದ್ದು ಎರಡನೇ ಸ್ಥಾನ ಪಡೆದಿತ್ತು. ಆದರೆ ಬುಧವಾರ ಎಲ್ಲಾ ಡಿಫೆಂಡರ್‌ಗಳು ವಿಫಲರಾದ ಕಾರಣ 25-45 ಅಂತರದಲ್ಲಿ ಸೋಲು ಕಂಡಿತು. ರೈಡಿಂಗ್‌ನಲ್ಲಿ ಭರತ್ ಸೂಪರ್ ಟೆನ್ ಗಳಿಸಿದರೂ ಸಹ ಡೆಫೆಂಡರ್‌ಗಳು ಕೈಚೆಲ್ಲಿ ಅಂಕಗಳು ಸೋರಿ ಹೋದವು. ಗೆದ್ದ ಜೈಪುರ್ ತಂಡ 69 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ ಅಷ್ಟೇ ಅಂಕ ಪಡೆದಿರುವ ಪುಣೇರಿ ಪಲ್ಟಾನ್ ಎರಡನೇ ಸ್ಥಾನಲ್ಲಿದೆ. ಈ ಎರಡೂ ತಂಡಗಳು ಗೆಲವಿನ ಲಯದಲ್ಲಿರುವ ಕಾರಣ ಇವು ಕೊನೆಯವರೆಗೂ ಅಂಕಪಟ್ಟಿಯಲ್ಲಿ ಮೊದಲು ಮತ್ತು ಎರಡನೇ ಸ್ಥಾನದಲ್ಲಿಯೇ ಉಳಿಯುವ ಸಾಧ್ಯತೆಯಿದ್ದು, ಒಂದಕ್ಕಿಂತ ಹೆಚ್ಚು ಪಂದ್ಯ ಸೋಲದಿದ್ದರೆ ನೇರವಾಗಿ ಸೆಮಿಫೈನಲ್ ತಲುಪುವ ಅವಕಾಶ ಹೊಂದಿವೆ.

ಪ್ರೊ ಕಬಡ್ಡಿಯ ಲೀಗ್‌ ಹಂತ ಡಬಲ್ ರೌಂಡ್ ರಾಬಿನ್ ಆಧಾರದಲ್ಲಿ ನಡೆಯುತ್ತದೆ. ಪ್ರತಿ ತಂಡಕ್ಕೂ 22 ಪಂದ್ಯಗಳು ಸಿಗುತ್ತವೆ. ಅಂಕಪಟ್ಟಿಯಲ್ಲಿ ಮೊದಲ ಆರು ಸ್ಥಾನ ಪಡೆದ ತಂಡಗಳು ಪ್ಲೇಆಫ್ ಪ್ರವೇಶಿಸಿದರೆ, ಉಳಿದ 6 ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಅದರಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ. ಉಳಿದ ನಾಲ್ಕು ತಂಡಗಳು ಪ್ಲೇ ಆಫ್‌ನಲ್ಲಿ ಕ್ವಾಲಿಫೈಯರ್ ಪಂದ್ಯ ಎದುರಿಸಿ ಗೆದ್ದ ತಂಡಗಳು ಮಾತ್ರ ಸೆಮಿಫೈನಲ್ ಪ್ರವೇಶಿಸುತ್ತವೆ. ಸೋತ ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಹಾಗಾಗಿ ಮೊದಲ ಎರಡು ಸ್ಥಾನ ಪಡೆಯುವುದು ಉತ್ತಮ. ಇಷ್ಟು ದಿನ ಮೊದಲು ಮತ್ತು ಎರಡನೇ ಸ್ಥಾನದಲ್ಲಿರುತ್ತಿದ್ದ ಬೆಂಗಳೂರು 3 ಸೋಲಿನೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದೆ.

ಇದುವರೆಗೆ ಆಡಿದ 19 ಪಂದ್ಯಗಳಲ್ಲಿ 11 ಗೆಲುವು, 7 ಸೋಲು ಮತ್ತು ಒಂದು ಟೈನೊಂದಿಗೆ 63 ಅಂಕ ಗಳಿಸಿರುವ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದೆ. ಇನ್ನೂ ಲೀಗ್ ಹಂತದಲ್ಲಿ ಮೂರು ಪಂದ್ಯಗಳು ಉಳಿದಿದ್ದು ಎರಡು ಪಂದ್ಯ ಗೆದ್ದರೆ ಸುಲಭವಾಗಿ ಪ್ಲೇ ಆಫ್‌ ಪ್ರವೇಶಿಸಲಿದೆ. ಒಂದು ವೇಳೆ ಮೂರಕ್ಕೆ ಮೂರನ್ನು ಸೋತರೆ ಅದು ಪ್ಲೇ ಪ್ರವೇಶಿಸುವುದು ಕಷ್ಟವಾಗುತ್ತದೆ. ಆಗ ಉಳಿದ ತಂಡಗಳು ಸೋಲನ್ನು ಬಯಸಬೇಕಾಗುತ್ತದೆ.

ಪ್ಲೆ ಆಫ್‌ ರೇಸ್‌ನಲ್ಲಿ 8 ತಂಡಗಳು

ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ಪುಣೇರಿ ಪಲ್ಟಾನ್ ಈಗಾಗಲೇ ಪ್ಲೇ ಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿವೆ. ಉಳಿದ ನಾಲ್ಕು ಸ್ಥಾನಗಳಿಗಾಗಿ ಬೆಂಗಳೂರು ಬುಲ್ಸ್ (63 ಅಂಕ), ಯುಪಿ ಯೋಧ (60 ಅಂಕ), ತಮಿಳು ತಲೈವಾಸ್ (56 ಅಂಕ), ದಬಾಂಗ್ ಡೆಲ್ಲಿ (54 ಅಂಕ), ಯು ಮುಂಬಾ (50 ಅಂಕ), ಬೆಂಗಾಲ್ ವಾರಿಯರ್ಸ್ (49 ಅಂಕ) ಪಟ್ನಾ ಪೈರೇಟ್ಸ್ (48 ಅಂಕ) ಮತ್ತು ಹರ್ಯಾಣ ಸ್ಟೀಲರ್ಸ್ (46 ಅಂಕ) ಸೇರಿ ಒಟ್ಟು 8 ತಂಡಗಳು ಸೆಣಸಾಟ ನಡೆಸುತ್ತಿವೆ. ಕೆಲವು ತಂಡಗಳಿಗೆ ಇನ್ನೂ 4 ಪಂದ್ಯಗಳಿದ್ದು ಎಲ್ಲವನ್ನು ಗೆದ್ದವರು ಪ್ಲೇ ಆಫ್ ಪ್ರವೇಶಿಸಬಹುದಾಗಿದೆ. ಆದರೆ 41 ಅಂಕ ಗಳಿಸಿರುವ ಗುಜರಾತ್ ಜೈಂಟ್ಸ್ ಮತ್ತು 15 ಅಂಕ ಗಳಿಸಿರುವ ತೆಲುಗು ಟೈಟನ್ಸ್ ಮಾತ್ರ ಪ್ಲೇ ಆಪ್‌ ರೇಸ್‌ನಿಂದ ಹೊರಬಿದ್ದಿವೆ.

ಡಿಸೆಂಬರ್ 13ರಂದು 2 ಎಲಿಮಿನೇಟರ್ ಪಂದ್ಯಗಳು ನಡೆಯುತ್ತವೆ. ಒಂದು ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೂರು ಮತ್ತು ಆರನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸಿದರೆ ಮತ್ತೊಂದು ಪಂದ್ಯದಲ್ಲಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸುತ್ತವೆ. ಗೆದ್ದವರು ಸೆಮಿಫೈನಲ್ ಪ್ರವೇಶಿಸುತ್ತಾರೆ. ಸೋತವರು ಮನೆಗೆ ನಡೆಯುತ್ತಾರೆ.

ಡಿಸೆಂಬರ್ 15ರಂದು ಎರಡು ಸೆಮಿಫೈನಲ್ ಪಂದ್ಯಗಳು ನಡೆದರೆ, ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದನ್ನೂ ಓದಿ: ಮತ್ತೆ ಸಂಜು ಸ್ಯಾಮ್ಸನ್ ಕೈಬಿಟ್ಟಿದ್ದಕ್ಕೆ ಅಭಿಮಾನಿಗಳ ಆಕ್ರೋಶ: ಸಂಸದ ಶಶಿ ತರೂರ್ ಸಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...