HomeUncategorized'ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ'ಯಿಂದ ಬಸ್ ಪ್ರಯಾಣ ದರ ಏರಿಕೆಗೆ ವಿರೋಧ

‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ಯಿಂದ ಬಸ್ ಪ್ರಯಾಣ ದರ ಏರಿಕೆಗೆ ವಿರೋಧ

- Advertisement -
- Advertisement -

ರಾಜ್ಯ ಸರ್ಕಾರ ಉದ್ದೇಶಿಸಿರುವ ಬಸ್ ಪ್ರಯಾಣ ದರ ಏರಿಕೆಯನ್ನು ‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ ವಿರೊಧಿಸಿದ್ದು, ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದೆ. “ಆದಾಯ ಪಾರ್ಕಿಂಗ್ ಶುಲ್ಕ ಮತ್ತು ದಟ್ಟಣೆ ತೆರಿಗೆಯಂತಹ ಉಪಾಯಗಳನ್ನು ಸರ್ಕಾರ ಪರಿಗಣಿಸಬೇಕು ಎಂದು ಹೇಳಿರುವ ವೇದಿಕೆಯು, “ಟನಲ್ ರಸ್ತೆ ಮತ್ತು ಸಿಗ್ನಲ್ ಮುಕ್ತ ಕಾರಿಡಾರ್‌ಗಳಂತಹ ಯೋಜನೆಗಳನ್ನು ಸರ್ಕಾರ ಕೈಬಿಡಬೇಕು ಮತ್ತು ಬಸ್ ವ್ಯವಸ್ಥೆಯನ್ನು ಬಲಪಡಿಸಲು ಆ ಹಣವನ್ನು ಬಳಸಬೇಕು” ಎಂದು ಭಾನುವಾರ ಹೇಳಿದೆ. ಬೆಂಗಳೂರು ಬಸ್ ಪ್ರಯಾಣಿಕರ

ರಾಜ್ಯ ಸರ್ಕಾರ ಬಸ್ ದರ ಹೆಚ್ಚಳ ಮಾಡಿರೋದು ನ್ಯಾಯಯುತವಾಗಿಲ್ಲ ಎಂದು ಹೇಳಿರುವ ವೇದಿಕೆಯು, ಬಸ್ ದರ ಹೆಚ್ಚಿಸುವುದರಿಂದ ಸರ್ಕಾರವು ಜನರನ್ನು ಬಸ್ ಸೇವೆಯಿಂದ ದೂರ ತಳ್ಳುತಿದೆ, ದುಡಿಯುವ ವರ್ಗದ ಬಸ್ ಪ್ರಯಾಣಿಕರಿಗೆ, ಈ ಬಸ್ ದರದಿಂದ ಹೊಡೆತ ಬೀಳುತ್ತದೆ ಹಾಗೂ ಅವರಿಗೆ ಇದನ್ನು ಬರಿಸುವುದು ಕಷ್ಟವಾಗುತ್ತದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಹುಪಾಲು ಕಾರ್ಮಿಕ ವರ್ಗದವರಿಗೆ ಬಸ್ಸು ನಗರ ಸಂಚಾರದ ಜೀವನಾಡಿಯಾಗಿದೆ. ಸಾರ್ವಜನಿಕ ಸಾರಿಗೆಯನ್ನು ಬಳಸುತ್ತಿರುವುದಕ್ಕಾಗಿ ಅವರಿಗೆ ಈ ರೀತಿ ದರ ಏರಿಸಿ ದಂಡ ವಿಧಿಸುವುದು ಅನ್ಯಾಯವಾಗಿದೆ ಎಂದು ವೇದಿಕೆಯು ಹೇಳಿದೆ. ಬೆಂಗಳೂರಿನ ಸಂಚಾರ ಸಮಸ್ಯೆಗೆ ಆರಾಮದಾಯಕ, ಕೈಗೆಟುಕುವ ದರವುಳ್ಳ ಸಾರ್ವಜನಿಕ ಸಾರಿಗೆಯೇ ಪರಿಹಾರ ಎಂದಿರುವ ಬಸ್ ಪ್ರಯಾಣಿಕರ ವೇದಿಕೆ, ಇದರಿಂದ ಪರಿಸರಕ್ಕೂ ಒಳ್ಳೆಯದಾಗುತ್ತದೆ ಎಂದು ಹೇಳಿದೆ.ಬೆಂಗಳೂರು ಬಸ್ ಪ್ರಯಾಣಿಕರ

“ದ್ವಿಚಕ್ರವಾಹನ ಉಳ್ಳ ಬಸ್ ಪ್ರಯಾಣಿಕರು, ಬಸ್ ಅನ್ನು ಬಿಟ್ಟು ಮತ್ತೆ ದ್ವಿಚಕ್ರ ವಾಹನ ಉಪಯೋಗಿಸುವುದು ಪ್ರಾರಂಭಿಸುತ್ತಾರೋ ಎಂಬ ಆತಂಕ ಇದೆ. ಹೆಚ್ಚು ಶುಲ್ಕ ಕೊಟ್ಟು ಐರಾವತ ಹಾಗು ಎಸಿ ವೋಲ್ವೋ ಬಸ್ ಗಳಲ್ಲಿ ಪ್ರಯಾಣಿಸುವ ಗ್ರಾಹಕರು ದರ ಏರಿಕೆಯಿಂದ ಈ ಸೌಲತ್ತನ್ನು ಉಪಯೋಗಿಸುವುದು ನಿಲ್ಲಿಸಬಹುದು ಎಂದು ಸಹ ನಮಗೆ ಆತಂಕವಿದೆ” ಎಂದು ವೇದಿಕೆ ಹೇಳಿದ್ದು, ಸಾರಿಗೆ ನಿಗಮದ ಆದಾಯ ಹೆಚ್ಚಿಸಲು , ಸರ್ಕಾರ ಬೇರೆ ಮಾರ್ಗೋಪಾಯಗಳನ್ನು ಅನುಸರಿಸಬೇಕೆಂದು ಮನವಿ ಮಾಡಿದೆ.

ಜೊತೆಗೆ ಬಸ್ ಸಾರಿಗೆ ಸಂಸ್ಥೆಗಳು ಆದಾಯ ಹೆಚ್ಚಿಸಲು ಕೆಲವು ವಿಧಾನಗಳನ್ನು ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಸರ್ಕಾರಕ್ಕೆ ಸೂಚಿಸಿದೆ.
1. ಎಲ್ಲ ರಸ್ತೆಗಳಲ್ಲೂ ಪಾರ್ಕಿಂಗ್ ಶುಲ್ಕ ಸಂಗ್ರಹಿಸಿ.
2. ಗರಿಷ್ಟ ಸಂಚಾರ ಸಮಯದಲ್ಲಿ ಖಾಸಗಿ ವಾಹನಗಳಿಂದ ದಟ್ಟಣೆ ಶುಲ್ಕ ( congestion tax) ಸಂಗ್ರಹಿಸಿ.
3. ಕಂಪನಿಗಳಿಗೆ ತಮ್ಮ ನೌಕರರ ಖಾಸಗಿ ಸಂಚಾರದ ಆದರದ ಮೇಲೆ ಟ್ರಾಫಿಕ್ ಸೆಸ್ಸ್ ವಿಧಿಸಿ, ಎಂಬ ಮೂರು ವಿಧಾನಗಳನ್ನು ಸೂಚಿಸಿದೆ.

ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಹಕ್ಕೊತ್ತಾಯ

1. ಸರ್ಕಾರ ಬಸ್ ದರ ಏರಿಕೆಯನ್ನು ಹಿಂಪಡಿಯಬೇಕು.
2. ಟನಲ್ ರೋಡ್ ಫ್ಲೈಓವರ್ ಮತ್ತು ಮುಂತಾದ ಯೋಜನೆಗಳು, ಎಲ್ಲೂ ಸಹ ವಾಹನ ದಟ್ಟಣೆಯನ್ನು ನಿಲ್ಲಿಸಿಲ್ಲ, ಸಂಚಾರದ ಸಮಸ್ಯೆ ಪರಿಹರಿಸಿಲ್ಲ. ಹಾಗಾಗಿ ಸರ್ಕಾರ ಈ ಯೋಜನೆಗಳನ್ನು ಕೈ ಬಿಡಬೇಕು. ಈ ಯೋಜನೆಗಳಿಗೆ ಸುರಿಯುವ ಬಂಡವಾಳವನ್ನ ಬಸ್ ಸೇವೆ ಬಲಪಡಿಸಲು ಉಪಯೋಗಿಸಬಹುದು.
3. ಬೆಂಗಳೂರಿನ ಸಂಚಾರ ಸಮಸ್ಯೆಗೆ ಪರಿಹಾರವೆಂದರೆ ಹೆಚ್ಚು ಬಸ್‌ಗಳು ಹಾಗೂ ಬಸ್ ಆದ್ಯತೆ ಲೇನ್ ( bus-lanes). ಹಾಗಾಗಿ ಸರ್ಕಾರ ಇದಕ್ಕೆ ಆಧ್ಯತೆ ನೀಡಬೇಕು.
4. ಸರ್ಕಾರ ಬಸ್ ಸೇವೆಯ ಸಾಮರ್ಥ್ಯ ಮತ್ತು ವ್ಯಾಪ್ತಿಯನ್ನು ಹೆಚ್ಚಿಸಬೇಕು.
5. ನಗರಗಳಲ್ಲಿ ಕಾರ್ ಉಪಯೋಗಿಸುವುದನ್ನು ಸರ್ಕಾರ ನಿರುತ್ಸಾಹಗೊಳಿಸಬೇಕು – ಕಾರುಗಳ ಮೇಲೆ ಪಾರ್ಕಿಂಗ್ ಶುಲ್ಕ , ದಟ್ಟಣೆ ಶುಲ್ಕ , ಟ್ರಾಫಿಕ್ ಸೆಸ್ ಅನ್ನು ವಿಧಿಸಬೇಕು. ಸಾರ್ವಜನಿಕ ಸಂಚಾರವನ್ನು ಉಪಯೋಗಿಸಲು ಪ್ರೋತ್ಸಾಹಿಸಬೇಕು, ಹಾಗಾಗಿ ಬಸ್ ದರ ಕಮ್ಮಿ ಅಥವಾ ಉಚಿತ ಮಾಡಬೇಕು.

ಇದನ್ನೂಓದಿ:  ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...