HomeUncategorized'ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ'ಯಿಂದ ಬಸ್ ಪ್ರಯಾಣ ದರ ಏರಿಕೆಗೆ ವಿರೋಧ

‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ಯಿಂದ ಬಸ್ ಪ್ರಯಾಣ ದರ ಏರಿಕೆಗೆ ವಿರೋಧ

- Advertisement -
- Advertisement -

ರಾಜ್ಯ ಸರ್ಕಾರ ಉದ್ದೇಶಿಸಿರುವ ಬಸ್ ಪ್ರಯಾಣ ದರ ಏರಿಕೆಯನ್ನು ‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ ವಿರೊಧಿಸಿದ್ದು, ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದೆ. “ಆದಾಯ ಪಾರ್ಕಿಂಗ್ ಶುಲ್ಕ ಮತ್ತು ದಟ್ಟಣೆ ತೆರಿಗೆಯಂತಹ ಉಪಾಯಗಳನ್ನು ಸರ್ಕಾರ ಪರಿಗಣಿಸಬೇಕು ಎಂದು ಹೇಳಿರುವ ವೇದಿಕೆಯು, “ಟನಲ್ ರಸ್ತೆ ಮತ್ತು ಸಿಗ್ನಲ್ ಮುಕ್ತ ಕಾರಿಡಾರ್‌ಗಳಂತಹ ಯೋಜನೆಗಳನ್ನು ಸರ್ಕಾರ ಕೈಬಿಡಬೇಕು ಮತ್ತು ಬಸ್ ವ್ಯವಸ್ಥೆಯನ್ನು ಬಲಪಡಿಸಲು ಆ ಹಣವನ್ನು ಬಳಸಬೇಕು” ಎಂದು ಭಾನುವಾರ ಹೇಳಿದೆ. ಬೆಂಗಳೂರು ಬಸ್ ಪ್ರಯಾಣಿಕರ

ರಾಜ್ಯ ಸರ್ಕಾರ ಬಸ್ ದರ ಹೆಚ್ಚಳ ಮಾಡಿರೋದು ನ್ಯಾಯಯುತವಾಗಿಲ್ಲ ಎಂದು ಹೇಳಿರುವ ವೇದಿಕೆಯು, ಬಸ್ ದರ ಹೆಚ್ಚಿಸುವುದರಿಂದ ಸರ್ಕಾರವು ಜನರನ್ನು ಬಸ್ ಸೇವೆಯಿಂದ ದೂರ ತಳ್ಳುತಿದೆ, ದುಡಿಯುವ ವರ್ಗದ ಬಸ್ ಪ್ರಯಾಣಿಕರಿಗೆ, ಈ ಬಸ್ ದರದಿಂದ ಹೊಡೆತ ಬೀಳುತ್ತದೆ ಹಾಗೂ ಅವರಿಗೆ ಇದನ್ನು ಬರಿಸುವುದು ಕಷ್ಟವಾಗುತ್ತದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಹುಪಾಲು ಕಾರ್ಮಿಕ ವರ್ಗದವರಿಗೆ ಬಸ್ಸು ನಗರ ಸಂಚಾರದ ಜೀವನಾಡಿಯಾಗಿದೆ. ಸಾರ್ವಜನಿಕ ಸಾರಿಗೆಯನ್ನು ಬಳಸುತ್ತಿರುವುದಕ್ಕಾಗಿ ಅವರಿಗೆ ಈ ರೀತಿ ದರ ಏರಿಸಿ ದಂಡ ವಿಧಿಸುವುದು ಅನ್ಯಾಯವಾಗಿದೆ ಎಂದು ವೇದಿಕೆಯು ಹೇಳಿದೆ. ಬೆಂಗಳೂರಿನ ಸಂಚಾರ ಸಮಸ್ಯೆಗೆ ಆರಾಮದಾಯಕ, ಕೈಗೆಟುಕುವ ದರವುಳ್ಳ ಸಾರ್ವಜನಿಕ ಸಾರಿಗೆಯೇ ಪರಿಹಾರ ಎಂದಿರುವ ಬಸ್ ಪ್ರಯಾಣಿಕರ ವೇದಿಕೆ, ಇದರಿಂದ ಪರಿಸರಕ್ಕೂ ಒಳ್ಳೆಯದಾಗುತ್ತದೆ ಎಂದು ಹೇಳಿದೆ.ಬೆಂಗಳೂರು ಬಸ್ ಪ್ರಯಾಣಿಕರ

“ದ್ವಿಚಕ್ರವಾಹನ ಉಳ್ಳ ಬಸ್ ಪ್ರಯಾಣಿಕರು, ಬಸ್ ಅನ್ನು ಬಿಟ್ಟು ಮತ್ತೆ ದ್ವಿಚಕ್ರ ವಾಹನ ಉಪಯೋಗಿಸುವುದು ಪ್ರಾರಂಭಿಸುತ್ತಾರೋ ಎಂಬ ಆತಂಕ ಇದೆ. ಹೆಚ್ಚು ಶುಲ್ಕ ಕೊಟ್ಟು ಐರಾವತ ಹಾಗು ಎಸಿ ವೋಲ್ವೋ ಬಸ್ ಗಳಲ್ಲಿ ಪ್ರಯಾಣಿಸುವ ಗ್ರಾಹಕರು ದರ ಏರಿಕೆಯಿಂದ ಈ ಸೌಲತ್ತನ್ನು ಉಪಯೋಗಿಸುವುದು ನಿಲ್ಲಿಸಬಹುದು ಎಂದು ಸಹ ನಮಗೆ ಆತಂಕವಿದೆ” ಎಂದು ವೇದಿಕೆ ಹೇಳಿದ್ದು, ಸಾರಿಗೆ ನಿಗಮದ ಆದಾಯ ಹೆಚ್ಚಿಸಲು , ಸರ್ಕಾರ ಬೇರೆ ಮಾರ್ಗೋಪಾಯಗಳನ್ನು ಅನುಸರಿಸಬೇಕೆಂದು ಮನವಿ ಮಾಡಿದೆ.

ಜೊತೆಗೆ ಬಸ್ ಸಾರಿಗೆ ಸಂಸ್ಥೆಗಳು ಆದಾಯ ಹೆಚ್ಚಿಸಲು ಕೆಲವು ವಿಧಾನಗಳನ್ನು ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಸರ್ಕಾರಕ್ಕೆ ಸೂಚಿಸಿದೆ.
1. ಎಲ್ಲ ರಸ್ತೆಗಳಲ್ಲೂ ಪಾರ್ಕಿಂಗ್ ಶುಲ್ಕ ಸಂಗ್ರಹಿಸಿ.
2. ಗರಿಷ್ಟ ಸಂಚಾರ ಸಮಯದಲ್ಲಿ ಖಾಸಗಿ ವಾಹನಗಳಿಂದ ದಟ್ಟಣೆ ಶುಲ್ಕ ( congestion tax) ಸಂಗ್ರಹಿಸಿ.
3. ಕಂಪನಿಗಳಿಗೆ ತಮ್ಮ ನೌಕರರ ಖಾಸಗಿ ಸಂಚಾರದ ಆದರದ ಮೇಲೆ ಟ್ರಾಫಿಕ್ ಸೆಸ್ಸ್ ವಿಧಿಸಿ, ಎಂಬ ಮೂರು ವಿಧಾನಗಳನ್ನು ಸೂಚಿಸಿದೆ.

ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಹಕ್ಕೊತ್ತಾಯ

1. ಸರ್ಕಾರ ಬಸ್ ದರ ಏರಿಕೆಯನ್ನು ಹಿಂಪಡಿಯಬೇಕು.
2. ಟನಲ್ ರೋಡ್ ಫ್ಲೈಓವರ್ ಮತ್ತು ಮುಂತಾದ ಯೋಜನೆಗಳು, ಎಲ್ಲೂ ಸಹ ವಾಹನ ದಟ್ಟಣೆಯನ್ನು ನಿಲ್ಲಿಸಿಲ್ಲ, ಸಂಚಾರದ ಸಮಸ್ಯೆ ಪರಿಹರಿಸಿಲ್ಲ. ಹಾಗಾಗಿ ಸರ್ಕಾರ ಈ ಯೋಜನೆಗಳನ್ನು ಕೈ ಬಿಡಬೇಕು. ಈ ಯೋಜನೆಗಳಿಗೆ ಸುರಿಯುವ ಬಂಡವಾಳವನ್ನ ಬಸ್ ಸೇವೆ ಬಲಪಡಿಸಲು ಉಪಯೋಗಿಸಬಹುದು.
3. ಬೆಂಗಳೂರಿನ ಸಂಚಾರ ಸಮಸ್ಯೆಗೆ ಪರಿಹಾರವೆಂದರೆ ಹೆಚ್ಚು ಬಸ್‌ಗಳು ಹಾಗೂ ಬಸ್ ಆದ್ಯತೆ ಲೇನ್ ( bus-lanes). ಹಾಗಾಗಿ ಸರ್ಕಾರ ಇದಕ್ಕೆ ಆಧ್ಯತೆ ನೀಡಬೇಕು.
4. ಸರ್ಕಾರ ಬಸ್ ಸೇವೆಯ ಸಾಮರ್ಥ್ಯ ಮತ್ತು ವ್ಯಾಪ್ತಿಯನ್ನು ಹೆಚ್ಚಿಸಬೇಕು.
5. ನಗರಗಳಲ್ಲಿ ಕಾರ್ ಉಪಯೋಗಿಸುವುದನ್ನು ಸರ್ಕಾರ ನಿರುತ್ಸಾಹಗೊಳಿಸಬೇಕು – ಕಾರುಗಳ ಮೇಲೆ ಪಾರ್ಕಿಂಗ್ ಶುಲ್ಕ , ದಟ್ಟಣೆ ಶುಲ್ಕ , ಟ್ರಾಫಿಕ್ ಸೆಸ್ ಅನ್ನು ವಿಧಿಸಬೇಕು. ಸಾರ್ವಜನಿಕ ಸಂಚಾರವನ್ನು ಉಪಯೋಗಿಸಲು ಪ್ರೋತ್ಸಾಹಿಸಬೇಕು, ಹಾಗಾಗಿ ಬಸ್ ದರ ಕಮ್ಮಿ ಅಥವಾ ಉಚಿತ ಮಾಡಬೇಕು.

ಇದನ್ನೂಓದಿ:  ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...