HomeUncategorized'ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ'ಯಿಂದ ಬಸ್ ಪ್ರಯಾಣ ದರ ಏರಿಕೆಗೆ ವಿರೋಧ

‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ಯಿಂದ ಬಸ್ ಪ್ರಯಾಣ ದರ ಏರಿಕೆಗೆ ವಿರೋಧ

- Advertisement -
- Advertisement -

ರಾಜ್ಯ ಸರ್ಕಾರ ಉದ್ದೇಶಿಸಿರುವ ಬಸ್ ಪ್ರಯಾಣ ದರ ಏರಿಕೆಯನ್ನು ‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ ವಿರೊಧಿಸಿದ್ದು, ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದೆ. “ಆದಾಯ ಪಾರ್ಕಿಂಗ್ ಶುಲ್ಕ ಮತ್ತು ದಟ್ಟಣೆ ತೆರಿಗೆಯಂತಹ ಉಪಾಯಗಳನ್ನು ಸರ್ಕಾರ ಪರಿಗಣಿಸಬೇಕು ಎಂದು ಹೇಳಿರುವ ವೇದಿಕೆಯು, “ಟನಲ್ ರಸ್ತೆ ಮತ್ತು ಸಿಗ್ನಲ್ ಮುಕ್ತ ಕಾರಿಡಾರ್‌ಗಳಂತಹ ಯೋಜನೆಗಳನ್ನು ಸರ್ಕಾರ ಕೈಬಿಡಬೇಕು ಮತ್ತು ಬಸ್ ವ್ಯವಸ್ಥೆಯನ್ನು ಬಲಪಡಿಸಲು ಆ ಹಣವನ್ನು ಬಳಸಬೇಕು” ಎಂದು ಭಾನುವಾರ ಹೇಳಿದೆ. ಬೆಂಗಳೂರು ಬಸ್ ಪ್ರಯಾಣಿಕರ

ರಾಜ್ಯ ಸರ್ಕಾರ ಬಸ್ ದರ ಹೆಚ್ಚಳ ಮಾಡಿರೋದು ನ್ಯಾಯಯುತವಾಗಿಲ್ಲ ಎಂದು ಹೇಳಿರುವ ವೇದಿಕೆಯು, ಬಸ್ ದರ ಹೆಚ್ಚಿಸುವುದರಿಂದ ಸರ್ಕಾರವು ಜನರನ್ನು ಬಸ್ ಸೇವೆಯಿಂದ ದೂರ ತಳ್ಳುತಿದೆ, ದುಡಿಯುವ ವರ್ಗದ ಬಸ್ ಪ್ರಯಾಣಿಕರಿಗೆ, ಈ ಬಸ್ ದರದಿಂದ ಹೊಡೆತ ಬೀಳುತ್ತದೆ ಹಾಗೂ ಅವರಿಗೆ ಇದನ್ನು ಬರಿಸುವುದು ಕಷ್ಟವಾಗುತ್ತದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಹುಪಾಲು ಕಾರ್ಮಿಕ ವರ್ಗದವರಿಗೆ ಬಸ್ಸು ನಗರ ಸಂಚಾರದ ಜೀವನಾಡಿಯಾಗಿದೆ. ಸಾರ್ವಜನಿಕ ಸಾರಿಗೆಯನ್ನು ಬಳಸುತ್ತಿರುವುದಕ್ಕಾಗಿ ಅವರಿಗೆ ಈ ರೀತಿ ದರ ಏರಿಸಿ ದಂಡ ವಿಧಿಸುವುದು ಅನ್ಯಾಯವಾಗಿದೆ ಎಂದು ವೇದಿಕೆಯು ಹೇಳಿದೆ. ಬೆಂಗಳೂರಿನ ಸಂಚಾರ ಸಮಸ್ಯೆಗೆ ಆರಾಮದಾಯಕ, ಕೈಗೆಟುಕುವ ದರವುಳ್ಳ ಸಾರ್ವಜನಿಕ ಸಾರಿಗೆಯೇ ಪರಿಹಾರ ಎಂದಿರುವ ಬಸ್ ಪ್ರಯಾಣಿಕರ ವೇದಿಕೆ, ಇದರಿಂದ ಪರಿಸರಕ್ಕೂ ಒಳ್ಳೆಯದಾಗುತ್ತದೆ ಎಂದು ಹೇಳಿದೆ.ಬೆಂಗಳೂರು ಬಸ್ ಪ್ರಯಾಣಿಕರ

“ದ್ವಿಚಕ್ರವಾಹನ ಉಳ್ಳ ಬಸ್ ಪ್ರಯಾಣಿಕರು, ಬಸ್ ಅನ್ನು ಬಿಟ್ಟು ಮತ್ತೆ ದ್ವಿಚಕ್ರ ವಾಹನ ಉಪಯೋಗಿಸುವುದು ಪ್ರಾರಂಭಿಸುತ್ತಾರೋ ಎಂಬ ಆತಂಕ ಇದೆ. ಹೆಚ್ಚು ಶುಲ್ಕ ಕೊಟ್ಟು ಐರಾವತ ಹಾಗು ಎಸಿ ವೋಲ್ವೋ ಬಸ್ ಗಳಲ್ಲಿ ಪ್ರಯಾಣಿಸುವ ಗ್ರಾಹಕರು ದರ ಏರಿಕೆಯಿಂದ ಈ ಸೌಲತ್ತನ್ನು ಉಪಯೋಗಿಸುವುದು ನಿಲ್ಲಿಸಬಹುದು ಎಂದು ಸಹ ನಮಗೆ ಆತಂಕವಿದೆ” ಎಂದು ವೇದಿಕೆ ಹೇಳಿದ್ದು, ಸಾರಿಗೆ ನಿಗಮದ ಆದಾಯ ಹೆಚ್ಚಿಸಲು , ಸರ್ಕಾರ ಬೇರೆ ಮಾರ್ಗೋಪಾಯಗಳನ್ನು ಅನುಸರಿಸಬೇಕೆಂದು ಮನವಿ ಮಾಡಿದೆ.

ಜೊತೆಗೆ ಬಸ್ ಸಾರಿಗೆ ಸಂಸ್ಥೆಗಳು ಆದಾಯ ಹೆಚ್ಚಿಸಲು ಕೆಲವು ವಿಧಾನಗಳನ್ನು ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಸರ್ಕಾರಕ್ಕೆ ಸೂಚಿಸಿದೆ.
1. ಎಲ್ಲ ರಸ್ತೆಗಳಲ್ಲೂ ಪಾರ್ಕಿಂಗ್ ಶುಲ್ಕ ಸಂಗ್ರಹಿಸಿ.
2. ಗರಿಷ್ಟ ಸಂಚಾರ ಸಮಯದಲ್ಲಿ ಖಾಸಗಿ ವಾಹನಗಳಿಂದ ದಟ್ಟಣೆ ಶುಲ್ಕ ( congestion tax) ಸಂಗ್ರಹಿಸಿ.
3. ಕಂಪನಿಗಳಿಗೆ ತಮ್ಮ ನೌಕರರ ಖಾಸಗಿ ಸಂಚಾರದ ಆದರದ ಮೇಲೆ ಟ್ರಾಫಿಕ್ ಸೆಸ್ಸ್ ವಿಧಿಸಿ, ಎಂಬ ಮೂರು ವಿಧಾನಗಳನ್ನು ಸೂಚಿಸಿದೆ.

ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಹಕ್ಕೊತ್ತಾಯ

1. ಸರ್ಕಾರ ಬಸ್ ದರ ಏರಿಕೆಯನ್ನು ಹಿಂಪಡಿಯಬೇಕು.
2. ಟನಲ್ ರೋಡ್ ಫ್ಲೈಓವರ್ ಮತ್ತು ಮುಂತಾದ ಯೋಜನೆಗಳು, ಎಲ್ಲೂ ಸಹ ವಾಹನ ದಟ್ಟಣೆಯನ್ನು ನಿಲ್ಲಿಸಿಲ್ಲ, ಸಂಚಾರದ ಸಮಸ್ಯೆ ಪರಿಹರಿಸಿಲ್ಲ. ಹಾಗಾಗಿ ಸರ್ಕಾರ ಈ ಯೋಜನೆಗಳನ್ನು ಕೈ ಬಿಡಬೇಕು. ಈ ಯೋಜನೆಗಳಿಗೆ ಸುರಿಯುವ ಬಂಡವಾಳವನ್ನ ಬಸ್ ಸೇವೆ ಬಲಪಡಿಸಲು ಉಪಯೋಗಿಸಬಹುದು.
3. ಬೆಂಗಳೂರಿನ ಸಂಚಾರ ಸಮಸ್ಯೆಗೆ ಪರಿಹಾರವೆಂದರೆ ಹೆಚ್ಚು ಬಸ್‌ಗಳು ಹಾಗೂ ಬಸ್ ಆದ್ಯತೆ ಲೇನ್ ( bus-lanes). ಹಾಗಾಗಿ ಸರ್ಕಾರ ಇದಕ್ಕೆ ಆಧ್ಯತೆ ನೀಡಬೇಕು.
4. ಸರ್ಕಾರ ಬಸ್ ಸೇವೆಯ ಸಾಮರ್ಥ್ಯ ಮತ್ತು ವ್ಯಾಪ್ತಿಯನ್ನು ಹೆಚ್ಚಿಸಬೇಕು.
5. ನಗರಗಳಲ್ಲಿ ಕಾರ್ ಉಪಯೋಗಿಸುವುದನ್ನು ಸರ್ಕಾರ ನಿರುತ್ಸಾಹಗೊಳಿಸಬೇಕು – ಕಾರುಗಳ ಮೇಲೆ ಪಾರ್ಕಿಂಗ್ ಶುಲ್ಕ , ದಟ್ಟಣೆ ಶುಲ್ಕ , ಟ್ರಾಫಿಕ್ ಸೆಸ್ ಅನ್ನು ವಿಧಿಸಬೇಕು. ಸಾರ್ವಜನಿಕ ಸಂಚಾರವನ್ನು ಉಪಯೋಗಿಸಲು ಪ್ರೋತ್ಸಾಹಿಸಬೇಕು, ಹಾಗಾಗಿ ಬಸ್ ದರ ಕಮ್ಮಿ ಅಥವಾ ಉಚಿತ ಮಾಡಬೇಕು.

ಇದನ್ನೂಓದಿ:  ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...