HomeUncategorized'ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ'ಯಿಂದ ಬಸ್ ಪ್ರಯಾಣ ದರ ಏರಿಕೆಗೆ ವಿರೋಧ

‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ಯಿಂದ ಬಸ್ ಪ್ರಯಾಣ ದರ ಏರಿಕೆಗೆ ವಿರೋಧ

- Advertisement -
- Advertisement -

ರಾಜ್ಯ ಸರ್ಕಾರ ಉದ್ದೇಶಿಸಿರುವ ಬಸ್ ಪ್ರಯಾಣ ದರ ಏರಿಕೆಯನ್ನು ‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ ವಿರೊಧಿಸಿದ್ದು, ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದೆ. “ಆದಾಯ ಪಾರ್ಕಿಂಗ್ ಶುಲ್ಕ ಮತ್ತು ದಟ್ಟಣೆ ತೆರಿಗೆಯಂತಹ ಉಪಾಯಗಳನ್ನು ಸರ್ಕಾರ ಪರಿಗಣಿಸಬೇಕು ಎಂದು ಹೇಳಿರುವ ವೇದಿಕೆಯು, “ಟನಲ್ ರಸ್ತೆ ಮತ್ತು ಸಿಗ್ನಲ್ ಮುಕ್ತ ಕಾರಿಡಾರ್‌ಗಳಂತಹ ಯೋಜನೆಗಳನ್ನು ಸರ್ಕಾರ ಕೈಬಿಡಬೇಕು ಮತ್ತು ಬಸ್ ವ್ಯವಸ್ಥೆಯನ್ನು ಬಲಪಡಿಸಲು ಆ ಹಣವನ್ನು ಬಳಸಬೇಕು” ಎಂದು ಭಾನುವಾರ ಹೇಳಿದೆ. ಬೆಂಗಳೂರು ಬಸ್ ಪ್ರಯಾಣಿಕರ

ರಾಜ್ಯ ಸರ್ಕಾರ ಬಸ್ ದರ ಹೆಚ್ಚಳ ಮಾಡಿರೋದು ನ್ಯಾಯಯುತವಾಗಿಲ್ಲ ಎಂದು ಹೇಳಿರುವ ವೇದಿಕೆಯು, ಬಸ್ ದರ ಹೆಚ್ಚಿಸುವುದರಿಂದ ಸರ್ಕಾರವು ಜನರನ್ನು ಬಸ್ ಸೇವೆಯಿಂದ ದೂರ ತಳ್ಳುತಿದೆ, ದುಡಿಯುವ ವರ್ಗದ ಬಸ್ ಪ್ರಯಾಣಿಕರಿಗೆ, ಈ ಬಸ್ ದರದಿಂದ ಹೊಡೆತ ಬೀಳುತ್ತದೆ ಹಾಗೂ ಅವರಿಗೆ ಇದನ್ನು ಬರಿಸುವುದು ಕಷ್ಟವಾಗುತ್ತದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಹುಪಾಲು ಕಾರ್ಮಿಕ ವರ್ಗದವರಿಗೆ ಬಸ್ಸು ನಗರ ಸಂಚಾರದ ಜೀವನಾಡಿಯಾಗಿದೆ. ಸಾರ್ವಜನಿಕ ಸಾರಿಗೆಯನ್ನು ಬಳಸುತ್ತಿರುವುದಕ್ಕಾಗಿ ಅವರಿಗೆ ಈ ರೀತಿ ದರ ಏರಿಸಿ ದಂಡ ವಿಧಿಸುವುದು ಅನ್ಯಾಯವಾಗಿದೆ ಎಂದು ವೇದಿಕೆಯು ಹೇಳಿದೆ. ಬೆಂಗಳೂರಿನ ಸಂಚಾರ ಸಮಸ್ಯೆಗೆ ಆರಾಮದಾಯಕ, ಕೈಗೆಟುಕುವ ದರವುಳ್ಳ ಸಾರ್ವಜನಿಕ ಸಾರಿಗೆಯೇ ಪರಿಹಾರ ಎಂದಿರುವ ಬಸ್ ಪ್ರಯಾಣಿಕರ ವೇದಿಕೆ, ಇದರಿಂದ ಪರಿಸರಕ್ಕೂ ಒಳ್ಳೆಯದಾಗುತ್ತದೆ ಎಂದು ಹೇಳಿದೆ.ಬೆಂಗಳೂರು ಬಸ್ ಪ್ರಯಾಣಿಕರ

“ದ್ವಿಚಕ್ರವಾಹನ ಉಳ್ಳ ಬಸ್ ಪ್ರಯಾಣಿಕರು, ಬಸ್ ಅನ್ನು ಬಿಟ್ಟು ಮತ್ತೆ ದ್ವಿಚಕ್ರ ವಾಹನ ಉಪಯೋಗಿಸುವುದು ಪ್ರಾರಂಭಿಸುತ್ತಾರೋ ಎಂಬ ಆತಂಕ ಇದೆ. ಹೆಚ್ಚು ಶುಲ್ಕ ಕೊಟ್ಟು ಐರಾವತ ಹಾಗು ಎಸಿ ವೋಲ್ವೋ ಬಸ್ ಗಳಲ್ಲಿ ಪ್ರಯಾಣಿಸುವ ಗ್ರಾಹಕರು ದರ ಏರಿಕೆಯಿಂದ ಈ ಸೌಲತ್ತನ್ನು ಉಪಯೋಗಿಸುವುದು ನಿಲ್ಲಿಸಬಹುದು ಎಂದು ಸಹ ನಮಗೆ ಆತಂಕವಿದೆ” ಎಂದು ವೇದಿಕೆ ಹೇಳಿದ್ದು, ಸಾರಿಗೆ ನಿಗಮದ ಆದಾಯ ಹೆಚ್ಚಿಸಲು , ಸರ್ಕಾರ ಬೇರೆ ಮಾರ್ಗೋಪಾಯಗಳನ್ನು ಅನುಸರಿಸಬೇಕೆಂದು ಮನವಿ ಮಾಡಿದೆ.

ಜೊತೆಗೆ ಬಸ್ ಸಾರಿಗೆ ಸಂಸ್ಥೆಗಳು ಆದಾಯ ಹೆಚ್ಚಿಸಲು ಕೆಲವು ವಿಧಾನಗಳನ್ನು ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಸರ್ಕಾರಕ್ಕೆ ಸೂಚಿಸಿದೆ.
1. ಎಲ್ಲ ರಸ್ತೆಗಳಲ್ಲೂ ಪಾರ್ಕಿಂಗ್ ಶುಲ್ಕ ಸಂಗ್ರಹಿಸಿ.
2. ಗರಿಷ್ಟ ಸಂಚಾರ ಸಮಯದಲ್ಲಿ ಖಾಸಗಿ ವಾಹನಗಳಿಂದ ದಟ್ಟಣೆ ಶುಲ್ಕ ( congestion tax) ಸಂಗ್ರಹಿಸಿ.
3. ಕಂಪನಿಗಳಿಗೆ ತಮ್ಮ ನೌಕರರ ಖಾಸಗಿ ಸಂಚಾರದ ಆದರದ ಮೇಲೆ ಟ್ರಾಫಿಕ್ ಸೆಸ್ಸ್ ವಿಧಿಸಿ, ಎಂಬ ಮೂರು ವಿಧಾನಗಳನ್ನು ಸೂಚಿಸಿದೆ.

ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಹಕ್ಕೊತ್ತಾಯ

1. ಸರ್ಕಾರ ಬಸ್ ದರ ಏರಿಕೆಯನ್ನು ಹಿಂಪಡಿಯಬೇಕು.
2. ಟನಲ್ ರೋಡ್ ಫ್ಲೈಓವರ್ ಮತ್ತು ಮುಂತಾದ ಯೋಜನೆಗಳು, ಎಲ್ಲೂ ಸಹ ವಾಹನ ದಟ್ಟಣೆಯನ್ನು ನಿಲ್ಲಿಸಿಲ್ಲ, ಸಂಚಾರದ ಸಮಸ್ಯೆ ಪರಿಹರಿಸಿಲ್ಲ. ಹಾಗಾಗಿ ಸರ್ಕಾರ ಈ ಯೋಜನೆಗಳನ್ನು ಕೈ ಬಿಡಬೇಕು. ಈ ಯೋಜನೆಗಳಿಗೆ ಸುರಿಯುವ ಬಂಡವಾಳವನ್ನ ಬಸ್ ಸೇವೆ ಬಲಪಡಿಸಲು ಉಪಯೋಗಿಸಬಹುದು.
3. ಬೆಂಗಳೂರಿನ ಸಂಚಾರ ಸಮಸ್ಯೆಗೆ ಪರಿಹಾರವೆಂದರೆ ಹೆಚ್ಚು ಬಸ್‌ಗಳು ಹಾಗೂ ಬಸ್ ಆದ್ಯತೆ ಲೇನ್ ( bus-lanes). ಹಾಗಾಗಿ ಸರ್ಕಾರ ಇದಕ್ಕೆ ಆಧ್ಯತೆ ನೀಡಬೇಕು.
4. ಸರ್ಕಾರ ಬಸ್ ಸೇವೆಯ ಸಾಮರ್ಥ್ಯ ಮತ್ತು ವ್ಯಾಪ್ತಿಯನ್ನು ಹೆಚ್ಚಿಸಬೇಕು.
5. ನಗರಗಳಲ್ಲಿ ಕಾರ್ ಉಪಯೋಗಿಸುವುದನ್ನು ಸರ್ಕಾರ ನಿರುತ್ಸಾಹಗೊಳಿಸಬೇಕು – ಕಾರುಗಳ ಮೇಲೆ ಪಾರ್ಕಿಂಗ್ ಶುಲ್ಕ , ದಟ್ಟಣೆ ಶುಲ್ಕ , ಟ್ರಾಫಿಕ್ ಸೆಸ್ ಅನ್ನು ವಿಧಿಸಬೇಕು. ಸಾರ್ವಜನಿಕ ಸಂಚಾರವನ್ನು ಉಪಯೋಗಿಸಲು ಪ್ರೋತ್ಸಾಹಿಸಬೇಕು, ಹಾಗಾಗಿ ಬಸ್ ದರ ಕಮ್ಮಿ ಅಥವಾ ಉಚಿತ ಮಾಡಬೇಕು.

ಇದನ್ನೂಓದಿ:  ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...