HomeUncategorized'ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ'ಯಿಂದ ಬಸ್ ಪ್ರಯಾಣ ದರ ಏರಿಕೆಗೆ ವಿರೋಧ

‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ಯಿಂದ ಬಸ್ ಪ್ರಯಾಣ ದರ ಏರಿಕೆಗೆ ವಿರೋಧ

- Advertisement -
- Advertisement -

ರಾಜ್ಯ ಸರ್ಕಾರ ಉದ್ದೇಶಿಸಿರುವ ಬಸ್ ಪ್ರಯಾಣ ದರ ಏರಿಕೆಯನ್ನು ‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ ವಿರೊಧಿಸಿದ್ದು, ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದೆ. “ಆದಾಯ ಪಾರ್ಕಿಂಗ್ ಶುಲ್ಕ ಮತ್ತು ದಟ್ಟಣೆ ತೆರಿಗೆಯಂತಹ ಉಪಾಯಗಳನ್ನು ಸರ್ಕಾರ ಪರಿಗಣಿಸಬೇಕು ಎಂದು ಹೇಳಿರುವ ವೇದಿಕೆಯು, “ಟನಲ್ ರಸ್ತೆ ಮತ್ತು ಸಿಗ್ನಲ್ ಮುಕ್ತ ಕಾರಿಡಾರ್‌ಗಳಂತಹ ಯೋಜನೆಗಳನ್ನು ಸರ್ಕಾರ ಕೈಬಿಡಬೇಕು ಮತ್ತು ಬಸ್ ವ್ಯವಸ್ಥೆಯನ್ನು ಬಲಪಡಿಸಲು ಆ ಹಣವನ್ನು ಬಳಸಬೇಕು” ಎಂದು ಭಾನುವಾರ ಹೇಳಿದೆ. ಬೆಂಗಳೂರು ಬಸ್ ಪ್ರಯಾಣಿಕರ

ರಾಜ್ಯ ಸರ್ಕಾರ ಬಸ್ ದರ ಹೆಚ್ಚಳ ಮಾಡಿರೋದು ನ್ಯಾಯಯುತವಾಗಿಲ್ಲ ಎಂದು ಹೇಳಿರುವ ವೇದಿಕೆಯು, ಬಸ್ ದರ ಹೆಚ್ಚಿಸುವುದರಿಂದ ಸರ್ಕಾರವು ಜನರನ್ನು ಬಸ್ ಸೇವೆಯಿಂದ ದೂರ ತಳ್ಳುತಿದೆ, ದುಡಿಯುವ ವರ್ಗದ ಬಸ್ ಪ್ರಯಾಣಿಕರಿಗೆ, ಈ ಬಸ್ ದರದಿಂದ ಹೊಡೆತ ಬೀಳುತ್ತದೆ ಹಾಗೂ ಅವರಿಗೆ ಇದನ್ನು ಬರಿಸುವುದು ಕಷ್ಟವಾಗುತ್ತದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಹುಪಾಲು ಕಾರ್ಮಿಕ ವರ್ಗದವರಿಗೆ ಬಸ್ಸು ನಗರ ಸಂಚಾರದ ಜೀವನಾಡಿಯಾಗಿದೆ. ಸಾರ್ವಜನಿಕ ಸಾರಿಗೆಯನ್ನು ಬಳಸುತ್ತಿರುವುದಕ್ಕಾಗಿ ಅವರಿಗೆ ಈ ರೀತಿ ದರ ಏರಿಸಿ ದಂಡ ವಿಧಿಸುವುದು ಅನ್ಯಾಯವಾಗಿದೆ ಎಂದು ವೇದಿಕೆಯು ಹೇಳಿದೆ. ಬೆಂಗಳೂರಿನ ಸಂಚಾರ ಸಮಸ್ಯೆಗೆ ಆರಾಮದಾಯಕ, ಕೈಗೆಟುಕುವ ದರವುಳ್ಳ ಸಾರ್ವಜನಿಕ ಸಾರಿಗೆಯೇ ಪರಿಹಾರ ಎಂದಿರುವ ಬಸ್ ಪ್ರಯಾಣಿಕರ ವೇದಿಕೆ, ಇದರಿಂದ ಪರಿಸರಕ್ಕೂ ಒಳ್ಳೆಯದಾಗುತ್ತದೆ ಎಂದು ಹೇಳಿದೆ.ಬೆಂಗಳೂರು ಬಸ್ ಪ್ರಯಾಣಿಕರ

“ದ್ವಿಚಕ್ರವಾಹನ ಉಳ್ಳ ಬಸ್ ಪ್ರಯಾಣಿಕರು, ಬಸ್ ಅನ್ನು ಬಿಟ್ಟು ಮತ್ತೆ ದ್ವಿಚಕ್ರ ವಾಹನ ಉಪಯೋಗಿಸುವುದು ಪ್ರಾರಂಭಿಸುತ್ತಾರೋ ಎಂಬ ಆತಂಕ ಇದೆ. ಹೆಚ್ಚು ಶುಲ್ಕ ಕೊಟ್ಟು ಐರಾವತ ಹಾಗು ಎಸಿ ವೋಲ್ವೋ ಬಸ್ ಗಳಲ್ಲಿ ಪ್ರಯಾಣಿಸುವ ಗ್ರಾಹಕರು ದರ ಏರಿಕೆಯಿಂದ ಈ ಸೌಲತ್ತನ್ನು ಉಪಯೋಗಿಸುವುದು ನಿಲ್ಲಿಸಬಹುದು ಎಂದು ಸಹ ನಮಗೆ ಆತಂಕವಿದೆ” ಎಂದು ವೇದಿಕೆ ಹೇಳಿದ್ದು, ಸಾರಿಗೆ ನಿಗಮದ ಆದಾಯ ಹೆಚ್ಚಿಸಲು , ಸರ್ಕಾರ ಬೇರೆ ಮಾರ್ಗೋಪಾಯಗಳನ್ನು ಅನುಸರಿಸಬೇಕೆಂದು ಮನವಿ ಮಾಡಿದೆ.

ಜೊತೆಗೆ ಬಸ್ ಸಾರಿಗೆ ಸಂಸ್ಥೆಗಳು ಆದಾಯ ಹೆಚ್ಚಿಸಲು ಕೆಲವು ವಿಧಾನಗಳನ್ನು ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಸರ್ಕಾರಕ್ಕೆ ಸೂಚಿಸಿದೆ.
1. ಎಲ್ಲ ರಸ್ತೆಗಳಲ್ಲೂ ಪಾರ್ಕಿಂಗ್ ಶುಲ್ಕ ಸಂಗ್ರಹಿಸಿ.
2. ಗರಿಷ್ಟ ಸಂಚಾರ ಸಮಯದಲ್ಲಿ ಖಾಸಗಿ ವಾಹನಗಳಿಂದ ದಟ್ಟಣೆ ಶುಲ್ಕ ( congestion tax) ಸಂಗ್ರಹಿಸಿ.
3. ಕಂಪನಿಗಳಿಗೆ ತಮ್ಮ ನೌಕರರ ಖಾಸಗಿ ಸಂಚಾರದ ಆದರದ ಮೇಲೆ ಟ್ರಾಫಿಕ್ ಸೆಸ್ಸ್ ವಿಧಿಸಿ, ಎಂಬ ಮೂರು ವಿಧಾನಗಳನ್ನು ಸೂಚಿಸಿದೆ.

ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಹಕ್ಕೊತ್ತಾಯ

1. ಸರ್ಕಾರ ಬಸ್ ದರ ಏರಿಕೆಯನ್ನು ಹಿಂಪಡಿಯಬೇಕು.
2. ಟನಲ್ ರೋಡ್ ಫ್ಲೈಓವರ್ ಮತ್ತು ಮುಂತಾದ ಯೋಜನೆಗಳು, ಎಲ್ಲೂ ಸಹ ವಾಹನ ದಟ್ಟಣೆಯನ್ನು ನಿಲ್ಲಿಸಿಲ್ಲ, ಸಂಚಾರದ ಸಮಸ್ಯೆ ಪರಿಹರಿಸಿಲ್ಲ. ಹಾಗಾಗಿ ಸರ್ಕಾರ ಈ ಯೋಜನೆಗಳನ್ನು ಕೈ ಬಿಡಬೇಕು. ಈ ಯೋಜನೆಗಳಿಗೆ ಸುರಿಯುವ ಬಂಡವಾಳವನ್ನ ಬಸ್ ಸೇವೆ ಬಲಪಡಿಸಲು ಉಪಯೋಗಿಸಬಹುದು.
3. ಬೆಂಗಳೂರಿನ ಸಂಚಾರ ಸಮಸ್ಯೆಗೆ ಪರಿಹಾರವೆಂದರೆ ಹೆಚ್ಚು ಬಸ್‌ಗಳು ಹಾಗೂ ಬಸ್ ಆದ್ಯತೆ ಲೇನ್ ( bus-lanes). ಹಾಗಾಗಿ ಸರ್ಕಾರ ಇದಕ್ಕೆ ಆಧ್ಯತೆ ನೀಡಬೇಕು.
4. ಸರ್ಕಾರ ಬಸ್ ಸೇವೆಯ ಸಾಮರ್ಥ್ಯ ಮತ್ತು ವ್ಯಾಪ್ತಿಯನ್ನು ಹೆಚ್ಚಿಸಬೇಕು.
5. ನಗರಗಳಲ್ಲಿ ಕಾರ್ ಉಪಯೋಗಿಸುವುದನ್ನು ಸರ್ಕಾರ ನಿರುತ್ಸಾಹಗೊಳಿಸಬೇಕು – ಕಾರುಗಳ ಮೇಲೆ ಪಾರ್ಕಿಂಗ್ ಶುಲ್ಕ , ದಟ್ಟಣೆ ಶುಲ್ಕ , ಟ್ರಾಫಿಕ್ ಸೆಸ್ ಅನ್ನು ವಿಧಿಸಬೇಕು. ಸಾರ್ವಜನಿಕ ಸಂಚಾರವನ್ನು ಉಪಯೋಗಿಸಲು ಪ್ರೋತ್ಸಾಹಿಸಬೇಕು, ಹಾಗಾಗಿ ಬಸ್ ದರ ಕಮ್ಮಿ ಅಥವಾ ಉಚಿತ ಮಾಡಬೇಕು.

ಇದನ್ನೂಓದಿ:  ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...