HomeUncategorized'ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ'ಯಿಂದ ಬಸ್ ಪ್ರಯಾಣ ದರ ಏರಿಕೆಗೆ ವಿರೋಧ

‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ಯಿಂದ ಬಸ್ ಪ್ರಯಾಣ ದರ ಏರಿಕೆಗೆ ವಿರೋಧ

- Advertisement -
- Advertisement -

ರಾಜ್ಯ ಸರ್ಕಾರ ಉದ್ದೇಶಿಸಿರುವ ಬಸ್ ಪ್ರಯಾಣ ದರ ಏರಿಕೆಯನ್ನು ‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ ವಿರೊಧಿಸಿದ್ದು, ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದೆ. “ಆದಾಯ ಪಾರ್ಕಿಂಗ್ ಶುಲ್ಕ ಮತ್ತು ದಟ್ಟಣೆ ತೆರಿಗೆಯಂತಹ ಉಪಾಯಗಳನ್ನು ಸರ್ಕಾರ ಪರಿಗಣಿಸಬೇಕು ಎಂದು ಹೇಳಿರುವ ವೇದಿಕೆಯು, “ಟನಲ್ ರಸ್ತೆ ಮತ್ತು ಸಿಗ್ನಲ್ ಮುಕ್ತ ಕಾರಿಡಾರ್‌ಗಳಂತಹ ಯೋಜನೆಗಳನ್ನು ಸರ್ಕಾರ ಕೈಬಿಡಬೇಕು ಮತ್ತು ಬಸ್ ವ್ಯವಸ್ಥೆಯನ್ನು ಬಲಪಡಿಸಲು ಆ ಹಣವನ್ನು ಬಳಸಬೇಕು” ಎಂದು ಭಾನುವಾರ ಹೇಳಿದೆ. ಬೆಂಗಳೂರು ಬಸ್ ಪ್ರಯಾಣಿಕರ

ರಾಜ್ಯ ಸರ್ಕಾರ ಬಸ್ ದರ ಹೆಚ್ಚಳ ಮಾಡಿರೋದು ನ್ಯಾಯಯುತವಾಗಿಲ್ಲ ಎಂದು ಹೇಳಿರುವ ವೇದಿಕೆಯು, ಬಸ್ ದರ ಹೆಚ್ಚಿಸುವುದರಿಂದ ಸರ್ಕಾರವು ಜನರನ್ನು ಬಸ್ ಸೇವೆಯಿಂದ ದೂರ ತಳ್ಳುತಿದೆ, ದುಡಿಯುವ ವರ್ಗದ ಬಸ್ ಪ್ರಯಾಣಿಕರಿಗೆ, ಈ ಬಸ್ ದರದಿಂದ ಹೊಡೆತ ಬೀಳುತ್ತದೆ ಹಾಗೂ ಅವರಿಗೆ ಇದನ್ನು ಬರಿಸುವುದು ಕಷ್ಟವಾಗುತ್ತದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಹುಪಾಲು ಕಾರ್ಮಿಕ ವರ್ಗದವರಿಗೆ ಬಸ್ಸು ನಗರ ಸಂಚಾರದ ಜೀವನಾಡಿಯಾಗಿದೆ. ಸಾರ್ವಜನಿಕ ಸಾರಿಗೆಯನ್ನು ಬಳಸುತ್ತಿರುವುದಕ್ಕಾಗಿ ಅವರಿಗೆ ಈ ರೀತಿ ದರ ಏರಿಸಿ ದಂಡ ವಿಧಿಸುವುದು ಅನ್ಯಾಯವಾಗಿದೆ ಎಂದು ವೇದಿಕೆಯು ಹೇಳಿದೆ. ಬೆಂಗಳೂರಿನ ಸಂಚಾರ ಸಮಸ್ಯೆಗೆ ಆರಾಮದಾಯಕ, ಕೈಗೆಟುಕುವ ದರವುಳ್ಳ ಸಾರ್ವಜನಿಕ ಸಾರಿಗೆಯೇ ಪರಿಹಾರ ಎಂದಿರುವ ಬಸ್ ಪ್ರಯಾಣಿಕರ ವೇದಿಕೆ, ಇದರಿಂದ ಪರಿಸರಕ್ಕೂ ಒಳ್ಳೆಯದಾಗುತ್ತದೆ ಎಂದು ಹೇಳಿದೆ.ಬೆಂಗಳೂರು ಬಸ್ ಪ್ರಯಾಣಿಕರ

“ದ್ವಿಚಕ್ರವಾಹನ ಉಳ್ಳ ಬಸ್ ಪ್ರಯಾಣಿಕರು, ಬಸ್ ಅನ್ನು ಬಿಟ್ಟು ಮತ್ತೆ ದ್ವಿಚಕ್ರ ವಾಹನ ಉಪಯೋಗಿಸುವುದು ಪ್ರಾರಂಭಿಸುತ್ತಾರೋ ಎಂಬ ಆತಂಕ ಇದೆ. ಹೆಚ್ಚು ಶುಲ್ಕ ಕೊಟ್ಟು ಐರಾವತ ಹಾಗು ಎಸಿ ವೋಲ್ವೋ ಬಸ್ ಗಳಲ್ಲಿ ಪ್ರಯಾಣಿಸುವ ಗ್ರಾಹಕರು ದರ ಏರಿಕೆಯಿಂದ ಈ ಸೌಲತ್ತನ್ನು ಉಪಯೋಗಿಸುವುದು ನಿಲ್ಲಿಸಬಹುದು ಎಂದು ಸಹ ನಮಗೆ ಆತಂಕವಿದೆ” ಎಂದು ವೇದಿಕೆ ಹೇಳಿದ್ದು, ಸಾರಿಗೆ ನಿಗಮದ ಆದಾಯ ಹೆಚ್ಚಿಸಲು , ಸರ್ಕಾರ ಬೇರೆ ಮಾರ್ಗೋಪಾಯಗಳನ್ನು ಅನುಸರಿಸಬೇಕೆಂದು ಮನವಿ ಮಾಡಿದೆ.

ಜೊತೆಗೆ ಬಸ್ ಸಾರಿಗೆ ಸಂಸ್ಥೆಗಳು ಆದಾಯ ಹೆಚ್ಚಿಸಲು ಕೆಲವು ವಿಧಾನಗಳನ್ನು ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಸರ್ಕಾರಕ್ಕೆ ಸೂಚಿಸಿದೆ.
1. ಎಲ್ಲ ರಸ್ತೆಗಳಲ್ಲೂ ಪಾರ್ಕಿಂಗ್ ಶುಲ್ಕ ಸಂಗ್ರಹಿಸಿ.
2. ಗರಿಷ್ಟ ಸಂಚಾರ ಸಮಯದಲ್ಲಿ ಖಾಸಗಿ ವಾಹನಗಳಿಂದ ದಟ್ಟಣೆ ಶುಲ್ಕ ( congestion tax) ಸಂಗ್ರಹಿಸಿ.
3. ಕಂಪನಿಗಳಿಗೆ ತಮ್ಮ ನೌಕರರ ಖಾಸಗಿ ಸಂಚಾರದ ಆದರದ ಮೇಲೆ ಟ್ರಾಫಿಕ್ ಸೆಸ್ಸ್ ವಿಧಿಸಿ, ಎಂಬ ಮೂರು ವಿಧಾನಗಳನ್ನು ಸೂಚಿಸಿದೆ.

ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಹಕ್ಕೊತ್ತಾಯ

1. ಸರ್ಕಾರ ಬಸ್ ದರ ಏರಿಕೆಯನ್ನು ಹಿಂಪಡಿಯಬೇಕು.
2. ಟನಲ್ ರೋಡ್ ಫ್ಲೈಓವರ್ ಮತ್ತು ಮುಂತಾದ ಯೋಜನೆಗಳು, ಎಲ್ಲೂ ಸಹ ವಾಹನ ದಟ್ಟಣೆಯನ್ನು ನಿಲ್ಲಿಸಿಲ್ಲ, ಸಂಚಾರದ ಸಮಸ್ಯೆ ಪರಿಹರಿಸಿಲ್ಲ. ಹಾಗಾಗಿ ಸರ್ಕಾರ ಈ ಯೋಜನೆಗಳನ್ನು ಕೈ ಬಿಡಬೇಕು. ಈ ಯೋಜನೆಗಳಿಗೆ ಸುರಿಯುವ ಬಂಡವಾಳವನ್ನ ಬಸ್ ಸೇವೆ ಬಲಪಡಿಸಲು ಉಪಯೋಗಿಸಬಹುದು.
3. ಬೆಂಗಳೂರಿನ ಸಂಚಾರ ಸಮಸ್ಯೆಗೆ ಪರಿಹಾರವೆಂದರೆ ಹೆಚ್ಚು ಬಸ್‌ಗಳು ಹಾಗೂ ಬಸ್ ಆದ್ಯತೆ ಲೇನ್ ( bus-lanes). ಹಾಗಾಗಿ ಸರ್ಕಾರ ಇದಕ್ಕೆ ಆಧ್ಯತೆ ನೀಡಬೇಕು.
4. ಸರ್ಕಾರ ಬಸ್ ಸೇವೆಯ ಸಾಮರ್ಥ್ಯ ಮತ್ತು ವ್ಯಾಪ್ತಿಯನ್ನು ಹೆಚ್ಚಿಸಬೇಕು.
5. ನಗರಗಳಲ್ಲಿ ಕಾರ್ ಉಪಯೋಗಿಸುವುದನ್ನು ಸರ್ಕಾರ ನಿರುತ್ಸಾಹಗೊಳಿಸಬೇಕು – ಕಾರುಗಳ ಮೇಲೆ ಪಾರ್ಕಿಂಗ್ ಶುಲ್ಕ , ದಟ್ಟಣೆ ಶುಲ್ಕ , ಟ್ರಾಫಿಕ್ ಸೆಸ್ ಅನ್ನು ವಿಧಿಸಬೇಕು. ಸಾರ್ವಜನಿಕ ಸಂಚಾರವನ್ನು ಉಪಯೋಗಿಸಲು ಪ್ರೋತ್ಸಾಹಿಸಬೇಕು, ಹಾಗಾಗಿ ಬಸ್ ದರ ಕಮ್ಮಿ ಅಥವಾ ಉಚಿತ ಮಾಡಬೇಕು.

ಇದನ್ನೂಓದಿ:  ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...