HomeUncategorized'ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ'ಯಿಂದ ಬಸ್ ಪ್ರಯಾಣ ದರ ಏರಿಕೆಗೆ ವಿರೋಧ

‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ಯಿಂದ ಬಸ್ ಪ್ರಯಾಣ ದರ ಏರಿಕೆಗೆ ವಿರೋಧ

- Advertisement -
- Advertisement -

ರಾಜ್ಯ ಸರ್ಕಾರ ಉದ್ದೇಶಿಸಿರುವ ಬಸ್ ಪ್ರಯಾಣ ದರ ಏರಿಕೆಯನ್ನು ‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ ವಿರೊಧಿಸಿದ್ದು, ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದೆ. “ಆದಾಯ ಪಾರ್ಕಿಂಗ್ ಶುಲ್ಕ ಮತ್ತು ದಟ್ಟಣೆ ತೆರಿಗೆಯಂತಹ ಉಪಾಯಗಳನ್ನು ಸರ್ಕಾರ ಪರಿಗಣಿಸಬೇಕು ಎಂದು ಹೇಳಿರುವ ವೇದಿಕೆಯು, “ಟನಲ್ ರಸ್ತೆ ಮತ್ತು ಸಿಗ್ನಲ್ ಮುಕ್ತ ಕಾರಿಡಾರ್‌ಗಳಂತಹ ಯೋಜನೆಗಳನ್ನು ಸರ್ಕಾರ ಕೈಬಿಡಬೇಕು ಮತ್ತು ಬಸ್ ವ್ಯವಸ್ಥೆಯನ್ನು ಬಲಪಡಿಸಲು ಆ ಹಣವನ್ನು ಬಳಸಬೇಕು” ಎಂದು ಭಾನುವಾರ ಹೇಳಿದೆ. ಬೆಂಗಳೂರು ಬಸ್ ಪ್ರಯಾಣಿಕರ

ರಾಜ್ಯ ಸರ್ಕಾರ ಬಸ್ ದರ ಹೆಚ್ಚಳ ಮಾಡಿರೋದು ನ್ಯಾಯಯುತವಾಗಿಲ್ಲ ಎಂದು ಹೇಳಿರುವ ವೇದಿಕೆಯು, ಬಸ್ ದರ ಹೆಚ್ಚಿಸುವುದರಿಂದ ಸರ್ಕಾರವು ಜನರನ್ನು ಬಸ್ ಸೇವೆಯಿಂದ ದೂರ ತಳ್ಳುತಿದೆ, ದುಡಿಯುವ ವರ್ಗದ ಬಸ್ ಪ್ರಯಾಣಿಕರಿಗೆ, ಈ ಬಸ್ ದರದಿಂದ ಹೊಡೆತ ಬೀಳುತ್ತದೆ ಹಾಗೂ ಅವರಿಗೆ ಇದನ್ನು ಬರಿಸುವುದು ಕಷ್ಟವಾಗುತ್ತದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಹುಪಾಲು ಕಾರ್ಮಿಕ ವರ್ಗದವರಿಗೆ ಬಸ್ಸು ನಗರ ಸಂಚಾರದ ಜೀವನಾಡಿಯಾಗಿದೆ. ಸಾರ್ವಜನಿಕ ಸಾರಿಗೆಯನ್ನು ಬಳಸುತ್ತಿರುವುದಕ್ಕಾಗಿ ಅವರಿಗೆ ಈ ರೀತಿ ದರ ಏರಿಸಿ ದಂಡ ವಿಧಿಸುವುದು ಅನ್ಯಾಯವಾಗಿದೆ ಎಂದು ವೇದಿಕೆಯು ಹೇಳಿದೆ. ಬೆಂಗಳೂರಿನ ಸಂಚಾರ ಸಮಸ್ಯೆಗೆ ಆರಾಮದಾಯಕ, ಕೈಗೆಟುಕುವ ದರವುಳ್ಳ ಸಾರ್ವಜನಿಕ ಸಾರಿಗೆಯೇ ಪರಿಹಾರ ಎಂದಿರುವ ಬಸ್ ಪ್ರಯಾಣಿಕರ ವೇದಿಕೆ, ಇದರಿಂದ ಪರಿಸರಕ್ಕೂ ಒಳ್ಳೆಯದಾಗುತ್ತದೆ ಎಂದು ಹೇಳಿದೆ.ಬೆಂಗಳೂರು ಬಸ್ ಪ್ರಯಾಣಿಕರ

“ದ್ವಿಚಕ್ರವಾಹನ ಉಳ್ಳ ಬಸ್ ಪ್ರಯಾಣಿಕರು, ಬಸ್ ಅನ್ನು ಬಿಟ್ಟು ಮತ್ತೆ ದ್ವಿಚಕ್ರ ವಾಹನ ಉಪಯೋಗಿಸುವುದು ಪ್ರಾರಂಭಿಸುತ್ತಾರೋ ಎಂಬ ಆತಂಕ ಇದೆ. ಹೆಚ್ಚು ಶುಲ್ಕ ಕೊಟ್ಟು ಐರಾವತ ಹಾಗು ಎಸಿ ವೋಲ್ವೋ ಬಸ್ ಗಳಲ್ಲಿ ಪ್ರಯಾಣಿಸುವ ಗ್ರಾಹಕರು ದರ ಏರಿಕೆಯಿಂದ ಈ ಸೌಲತ್ತನ್ನು ಉಪಯೋಗಿಸುವುದು ನಿಲ್ಲಿಸಬಹುದು ಎಂದು ಸಹ ನಮಗೆ ಆತಂಕವಿದೆ” ಎಂದು ವೇದಿಕೆ ಹೇಳಿದ್ದು, ಸಾರಿಗೆ ನಿಗಮದ ಆದಾಯ ಹೆಚ್ಚಿಸಲು , ಸರ್ಕಾರ ಬೇರೆ ಮಾರ್ಗೋಪಾಯಗಳನ್ನು ಅನುಸರಿಸಬೇಕೆಂದು ಮನವಿ ಮಾಡಿದೆ.

ಜೊತೆಗೆ ಬಸ್ ಸಾರಿಗೆ ಸಂಸ್ಥೆಗಳು ಆದಾಯ ಹೆಚ್ಚಿಸಲು ಕೆಲವು ವಿಧಾನಗಳನ್ನು ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಸರ್ಕಾರಕ್ಕೆ ಸೂಚಿಸಿದೆ.
1. ಎಲ್ಲ ರಸ್ತೆಗಳಲ್ಲೂ ಪಾರ್ಕಿಂಗ್ ಶುಲ್ಕ ಸಂಗ್ರಹಿಸಿ.
2. ಗರಿಷ್ಟ ಸಂಚಾರ ಸಮಯದಲ್ಲಿ ಖಾಸಗಿ ವಾಹನಗಳಿಂದ ದಟ್ಟಣೆ ಶುಲ್ಕ ( congestion tax) ಸಂಗ್ರಹಿಸಿ.
3. ಕಂಪನಿಗಳಿಗೆ ತಮ್ಮ ನೌಕರರ ಖಾಸಗಿ ಸಂಚಾರದ ಆದರದ ಮೇಲೆ ಟ್ರಾಫಿಕ್ ಸೆಸ್ಸ್ ವಿಧಿಸಿ, ಎಂಬ ಮೂರು ವಿಧಾನಗಳನ್ನು ಸೂಚಿಸಿದೆ.

ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಹಕ್ಕೊತ್ತಾಯ

1. ಸರ್ಕಾರ ಬಸ್ ದರ ಏರಿಕೆಯನ್ನು ಹಿಂಪಡಿಯಬೇಕು.
2. ಟನಲ್ ರೋಡ್ ಫ್ಲೈಓವರ್ ಮತ್ತು ಮುಂತಾದ ಯೋಜನೆಗಳು, ಎಲ್ಲೂ ಸಹ ವಾಹನ ದಟ್ಟಣೆಯನ್ನು ನಿಲ್ಲಿಸಿಲ್ಲ, ಸಂಚಾರದ ಸಮಸ್ಯೆ ಪರಿಹರಿಸಿಲ್ಲ. ಹಾಗಾಗಿ ಸರ್ಕಾರ ಈ ಯೋಜನೆಗಳನ್ನು ಕೈ ಬಿಡಬೇಕು. ಈ ಯೋಜನೆಗಳಿಗೆ ಸುರಿಯುವ ಬಂಡವಾಳವನ್ನ ಬಸ್ ಸೇವೆ ಬಲಪಡಿಸಲು ಉಪಯೋಗಿಸಬಹುದು.
3. ಬೆಂಗಳೂರಿನ ಸಂಚಾರ ಸಮಸ್ಯೆಗೆ ಪರಿಹಾರವೆಂದರೆ ಹೆಚ್ಚು ಬಸ್‌ಗಳು ಹಾಗೂ ಬಸ್ ಆದ್ಯತೆ ಲೇನ್ ( bus-lanes). ಹಾಗಾಗಿ ಸರ್ಕಾರ ಇದಕ್ಕೆ ಆಧ್ಯತೆ ನೀಡಬೇಕು.
4. ಸರ್ಕಾರ ಬಸ್ ಸೇವೆಯ ಸಾಮರ್ಥ್ಯ ಮತ್ತು ವ್ಯಾಪ್ತಿಯನ್ನು ಹೆಚ್ಚಿಸಬೇಕು.
5. ನಗರಗಳಲ್ಲಿ ಕಾರ್ ಉಪಯೋಗಿಸುವುದನ್ನು ಸರ್ಕಾರ ನಿರುತ್ಸಾಹಗೊಳಿಸಬೇಕು – ಕಾರುಗಳ ಮೇಲೆ ಪಾರ್ಕಿಂಗ್ ಶುಲ್ಕ , ದಟ್ಟಣೆ ಶುಲ್ಕ , ಟ್ರಾಫಿಕ್ ಸೆಸ್ ಅನ್ನು ವಿಧಿಸಬೇಕು. ಸಾರ್ವಜನಿಕ ಸಂಚಾರವನ್ನು ಉಪಯೋಗಿಸಲು ಪ್ರೋತ್ಸಾಹಿಸಬೇಕು, ಹಾಗಾಗಿ ಬಸ್ ದರ ಕಮ್ಮಿ ಅಥವಾ ಉಚಿತ ಮಾಡಬೇಕು.

ಇದನ್ನೂಓದಿ:  ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...