Homeಕರ್ನಾಟಕಭೂಮಿ-ವಸತಿಗಾಗಿ ನವೆಂಬರ್ 26ರಂದು ಬೆಂಗಳೂರು ಚಲೋ

ಭೂಮಿ-ವಸತಿಗಾಗಿ ನವೆಂಬರ್ 26ರಂದು ಬೆಂಗಳೂರು ಚಲೋ

- Advertisement -
- Advertisement -

‘ಉಳುವವರಿಗೆ ಭೂಮಿ’ ನಿನಾದದೊಂದಿಗೆ ಸ್ವತಂತ್ರಗೊಂಡ ಭಾರತದಲ್ಲಿ 79 ವರ್ಷಗಳಾದರೂ ಸ್ವತಂತ್ರ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿರುವ ಕೋಟ್ಯಾಂತರ ಬಡ ಕುಟುಂಬಗಳಿಗೆ ತುಂಡು ಭೂಮಿ ಇಲ್ಲವಾಗಿದೆ. ಉಳುಮೆಗೆ ಮಾತ್ರವಲ್ಲ ನೆತ್ತಿಯ ಮೇಲೊಂದು ಸೂರೂ ಇಲ್ಲವಾಗಿದೆ. ಸತ್ತ ಮೇಲೂ ಹೂಳಲು ಪರದಾಡುವ ಪರಿಸ್ಥಿತಿ ಇದೆ. ಭೂಮಿಯೆಲ್ಲಾ ಬಲಾಡ್ಯರ, ಕಂಪನಿಗಳ ಕೈಯಲ್ಲಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹೇಳಿದೆ. ಬಡವರಿಗೆ ಸರ್ಕಾರ ಭೂಮಿ ಮಂಡೂರಾತಿ ಮಾಡಿ ಒನ್ ಟೈಮ್ ಸೆಟಲ್ಮೆಂಟ್ ಮಾಡಿಕೊಡಬೇಕು ಎಂದು ಆಗ್ರಹಿಸಿ ನವೆಂಬರ್ 26ರಂದು ಬೆಂಗಳೂರು ಚಲೋ ಹೋರಾಟಕ್ಕೆ ಕರೆ ನೀಡಿದ್ದಾರೆ. 

ರಾಜ್ಯದ ದುಡಿಯುವ ಜನರಿಗೆ ಅದರಲ್ಲೂ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿಯ ಹಕ್ಕುಪತ್ರ ನೀಡಲು ಭೂಮಿ ಮಂಜೂರಾತಿ ಸಮಿತಿಗಳನ್ನು ಸರ್ಕಾರ ರಚಿಸಿದ್ದರೂ ಕಾಲಕಾಲಕ್ಕೆ ಸರಿಯಾಗಿ ಸಭೆಗಳಾಗದೆ, ಮಂಜೂರಾತಿಯೂ ಆಗುತ್ತಿಲ್ಲ. ಮಂಜೂರಾತಿಗೆ ಹತ್ತಾರು ಕಾನೂನುಗಳ ವಿಘ್ನಗಳನ್ನು ಮುಂದೆ ಮಾಡಲಾಗುತ್ತಿದೆ. ವಸತಿ ರಹಿತರ ವಿಚಾರಕ್ಕೆ ಸರ್ಕಾರದ ಸರಿಯಾದ ಯೋಜನೆ ಮತ್ತು ಆದ್ಯತೆ ಇಲ್ಲದಿರುವುದರಿಂದ ಕುಟುಂಬಗಳು ಬೆಳೆದಂತೆ ವಾಸಕ್ಕೆ ಜಾಗ ಸಾಕಾಗದೇ ಕುಟುಂಬದೊಳಗೇ ಆಂತರಿಕ ಕಲಹವಾಗಿ ಮಾರ್ಪಾಡಾಗುತ್ತಿದೆ. 

ಇನ್ನು ಅರಣ್ಯದ ಹೆಸರಿನಲ್ಲಿರುವ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರ ಕಥೆ ಬೇರೆಯೇ ಇದೆ. ಅರಣ್ಯ ಅಧಿಕಾರಿಗಳಂತೂ ಆರಣ್ಯ ವಾಸಿಗಳಿಗೆ, ಸಾಗುವಳಿ ಮಾಡುವ ಜನರಿಗೆ ಪೀಡಕರಾಗಿದ್ದಾರೆ. ತಲೆ-ತಲಾಂತರಗಳಿಂದ ಆರಣ್ಯವಾಸಿಗಳಾಗಿ ಜೀವನ ಕಟ್ಟಿಕೊಂಡು ಅರಣ್ಯವನ್ನೂ ಕಾಪಾಡುತ್ತಾ ಬದುಕಿದವರಿಗೆ ನೆಲೆಗೊಂದು ಹಕ್ಕುಪತ್ರ, ಬದುಕಿಗೊಂದಿಷ್ಟು ತುಂಡು ಭೂಮಿಯ ಹಕ್ಕನ್ನು ನಿರಾಕರಿಸಲಾಗುತ್ತಿದೆ. ಕಳೆದ 60-50 ವರ್ಷಗಳಿಂದಲೂ ಸಾಗುವಳಿ ಮಾಡುತ್ತಾ, ಅರ್ಜಿ ಸಲ್ಲಿಸಿದ್ದರೂ ಭೂಮಿ ಮಂಜೂರಾತಿ ನೀಡದೆ ಈಗ ನಗರ ಮಿತಿಯ ನೆಪದಲ್ಲಿ ಲಕ್ಷಾಂತರ ಸಂಖ್ಯೆಯ ಭೂರಹಿತರು ಭೂಮಿಯಿಂದ ವಂಚನೆಗೊಳಗಾಗುತ್ತಿದ್ದಾರೆ. ಇದು ಬಡವರ ಪಾಲಿಗೆ

ಮುಗಿಯದ ಗೋಳಿನ ಕಥೆಗಳ ದೊಡ್ಡ ಸರಮಾಲೆಯೇ ಆಗಿದೆಯಾದರೂ ಸರ್ಕಾರಗಳು ಇದನ್ನು ಸರಿಪಡಿಸುವ, ಬಡವರಿಗೆ ನ್ಯಾಯ ಕೊಡಿಸುವ ವಿಚಾರಕ್ಕೆ ಕೈಹಾಕದೆ ಕಾಲ ತಳ್ಳುತ್ತಲೇ ಇದ್ದಾರೆ. ಬಡವರು ಇನ್ನೆಷ್ಟು ವರ್ಷಗಳ ಕಾಲ ಕಾಯಬೇಕು? ಎಂದು ಪ್ರಶ್ನಿಸಿದ್ದಾರೆ. 

ರಾಜ್ಯದಲ್ಲಿ ಹಲವು ರೀತಿಯ ಹೆಸರಿನಲ್ಲಿ ಭೂಮಿಗಳಿವೆ. ಸರ್ಕಾರಿ, ಗೋಮಾಳ (ಗಾಯರಾಣ), ಹುಲ್ಲುಬನಿ, ಖರಾಬ್, ಖಾರೀಜ್ ಖಾತಾ, ಸೊಪ್ಪಿನ ಬೆಟ್ಟ, ಹರಳು ಪ್ರದೇಶ, ಗುಡ್ಡ ಪ್ರದೇಶ, ಕಲ್ಲು ಪ್ರದೇಶ, ಸೇಂದಿವನ, ಅನಾಧೀನ, ಕಾವಲು, ಅಮೃತ ಮಹಲ್ ಕಾವಲು, ಬಾಣೆ, ಪೈಸಾರಿ, ಅರಣ್ಯ, ಸಾಮಾಜಿಕ ಅರಣ್ಯ, ಲ್ಯಾಂಡ್ ಬ್ಯಾಂಕ್ ಇನ್ನಿತರೆ ಹೆಸರಿನಲ್ಲಿರುವ ಈ ಎಲ್ಲಾ ಭೂಮಿಗಳಿಗೆ ಇವುಗಳ ಉಪಯೋಗದ ಬಗ್ಗೆ ಅದರದೇ ಆದ ಕಾನೂನುಗಳನ್ನು ರೂಪಿಸಲಾಗಿದೆ. ಈಗಿನ ಸರ್ಕಾರದ ಪ್ರಕಾರ ಮೇಲಿನ ಯಾವ ಭೂಮಿಗಳನ್ನೂ ಫಾರಂ ನಂ. 50-53-57ರಲ್ಲಿ ಸಲ್ಲಿಸಿರುವ ಅರ್ಜಿದಾರರಿಗೆ ಮಂಜೂರಾತಿ ಮಾಡಲು ಅವಕಾಶವಿಲ್ಲ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರಕಾರ ತಾನು ಬಡವರ ಪರ, ಸಂವಿಧಾನ ಪರ ಎಂದು ಸಾಬೀತು ಪಡಿಸಲು, ಈಗಿರುವ ಕಂದಾಯ ಕಾಯ್ದೆಗೆ ತಿದ್ದುಪಡಿ ತಂದು ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರಾತಿ ನೀಡಬೇಕು. 

5-6 ದಶಕಗಳ ಕಾಲದಿಂದಲೂ ಇರುವ ಸಮಸ್ಯೆಯಿಂದಾಗಿ ರೈತರು ಅಲೆದಲೆದು ಸವಕಳಿಯಾಗಿದ್ದಾರೆ. ಇನ್ನು ಮುಂದೆ ಅರ್ಜಿ ಹಿಡಿದು ಪುನಃ ಅಲೆಸುವುದೆಂದರೆ ಜನರನ್ನು ಹಿಂಸೆಗೆ ಗುರಿಪಡಿಸಿದಂತಾಗುತ್ತದೆ. ಆದ್ದರಿಂದ ಸರಕಾರ ಬಡವರಿಗಾಗಿ ‘ಒನ್ ಟೈಮ್ ಸೆಟಲೆಂಟ್’ ಎಂಬ ತೀರ್ಮಾನ ಕೈಗೊಂಡು, ಭೂಮಂಜೂರಾತಿ ನೀಡಲು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ಆಗ್ರಹಿಸುತ್ತದೆ.

ಹೋರಾಟ ಸರಕಾರ ಭೂಮಿ-ಮತ್ತು ವಸತಿ ವಿಚಾರಕ್ಕೆ ಗಟ್ಟಿಯಾದ ತೀರ್ಮಾನವನ್ನು ಮಾಡಲೇಬೇಕೆಂದು ಒತ್ತಾಯಿಸಿ ನಾಡಿನ ರೈತ-ದಲಿತ-ಕಾರ್ಮಿಕ-ಮಹಿಳೆ-ವಿದ್ಯಾರ್ಥಿ ಯುವಜನ ಮತ್ತಿತರೆ ಸಮುದಾಯಗಳ ಐಕ್ಯ ವೇದಿಕೆಯಾದ ‘ಸಂಯುಕ್ತ ಕರ್ನಾಟಕ’ ನೇತೃತ್ವದಲ್ಲಿ ಇದೇ ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಲಿದೆ. ಈ ಸಂಬಂಧ ನವೆಂಬರ್ 21ರಂದು ಬೆಂಗಳೂರಿನ ಪ್ರಸ್ ಕ್ಲಬ್ ನಲ್ಲಿ ಪ್ರತಿಕಾಗೋಷ್ಠಿ ನಡೆಸಿದ ಹೋರಾಟಗಾರರು ಬೆಂಗಳೂರು ಚಲೋ ಪ್ರತಿಭಟನೆಗೆ ಕರೆ ನೀಡಿದ್ದಾರೆ. 

ಪತ್ರಿಕಾಗೋಷ್ಠಿಯಲ್ಲಿ ಸಿರಿಮನೆ ನಾಗರಾಜ್, ಕುಮಾರ್ ಸಮತಳ, ಕೆ. ಮರಿಯಪ್ಪ ಸೇರಿದಂತೆ ಹಲವು ಹೋರಾಟಗಾರರು ಭಾಗಿಯಾಗಿದ್ದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...