Homeಕರ್ನಾಟಕಭೂಮಿ-ವಸತಿಗಾಗಿ ನವೆಂಬರ್ 26ರಂದು ಬೆಂಗಳೂರು ಚಲೋ

ಭೂಮಿ-ವಸತಿಗಾಗಿ ನವೆಂಬರ್ 26ರಂದು ಬೆಂಗಳೂರು ಚಲೋ

- Advertisement -
- Advertisement -

‘ಉಳುವವರಿಗೆ ಭೂಮಿ’ ನಿನಾದದೊಂದಿಗೆ ಸ್ವತಂತ್ರಗೊಂಡ ಭಾರತದಲ್ಲಿ 79 ವರ್ಷಗಳಾದರೂ ಸ್ವತಂತ್ರ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿರುವ ಕೋಟ್ಯಾಂತರ ಬಡ ಕುಟುಂಬಗಳಿಗೆ ತುಂಡು ಭೂಮಿ ಇಲ್ಲವಾಗಿದೆ. ಉಳುಮೆಗೆ ಮಾತ್ರವಲ್ಲ ನೆತ್ತಿಯ ಮೇಲೊಂದು ಸೂರೂ ಇಲ್ಲವಾಗಿದೆ. ಸತ್ತ ಮೇಲೂ ಹೂಳಲು ಪರದಾಡುವ ಪರಿಸ್ಥಿತಿ ಇದೆ. ಭೂಮಿಯೆಲ್ಲಾ ಬಲಾಡ್ಯರ, ಕಂಪನಿಗಳ ಕೈಯಲ್ಲಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹೇಳಿದೆ. ಬಡವರಿಗೆ ಸರ್ಕಾರ ಭೂಮಿ ಮಂಡೂರಾತಿ ಮಾಡಿ ಒನ್ ಟೈಮ್ ಸೆಟಲ್ಮೆಂಟ್ ಮಾಡಿಕೊಡಬೇಕು ಎಂದು ಆಗ್ರಹಿಸಿ ನವೆಂಬರ್ 26ರಂದು ಬೆಂಗಳೂರು ಚಲೋ ಹೋರಾಟಕ್ಕೆ ಕರೆ ನೀಡಿದ್ದಾರೆ. 

ರಾಜ್ಯದ ದುಡಿಯುವ ಜನರಿಗೆ ಅದರಲ್ಲೂ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿಯ ಹಕ್ಕುಪತ್ರ ನೀಡಲು ಭೂಮಿ ಮಂಜೂರಾತಿ ಸಮಿತಿಗಳನ್ನು ಸರ್ಕಾರ ರಚಿಸಿದ್ದರೂ ಕಾಲಕಾಲಕ್ಕೆ ಸರಿಯಾಗಿ ಸಭೆಗಳಾಗದೆ, ಮಂಜೂರಾತಿಯೂ ಆಗುತ್ತಿಲ್ಲ. ಮಂಜೂರಾತಿಗೆ ಹತ್ತಾರು ಕಾನೂನುಗಳ ವಿಘ್ನಗಳನ್ನು ಮುಂದೆ ಮಾಡಲಾಗುತ್ತಿದೆ. ವಸತಿ ರಹಿತರ ವಿಚಾರಕ್ಕೆ ಸರ್ಕಾರದ ಸರಿಯಾದ ಯೋಜನೆ ಮತ್ತು ಆದ್ಯತೆ ಇಲ್ಲದಿರುವುದರಿಂದ ಕುಟುಂಬಗಳು ಬೆಳೆದಂತೆ ವಾಸಕ್ಕೆ ಜಾಗ ಸಾಕಾಗದೇ ಕುಟುಂಬದೊಳಗೇ ಆಂತರಿಕ ಕಲಹವಾಗಿ ಮಾರ್ಪಾಡಾಗುತ್ತಿದೆ. 

ಇನ್ನು ಅರಣ್ಯದ ಹೆಸರಿನಲ್ಲಿರುವ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರ ಕಥೆ ಬೇರೆಯೇ ಇದೆ. ಅರಣ್ಯ ಅಧಿಕಾರಿಗಳಂತೂ ಆರಣ್ಯ ವಾಸಿಗಳಿಗೆ, ಸಾಗುವಳಿ ಮಾಡುವ ಜನರಿಗೆ ಪೀಡಕರಾಗಿದ್ದಾರೆ. ತಲೆ-ತಲಾಂತರಗಳಿಂದ ಆರಣ್ಯವಾಸಿಗಳಾಗಿ ಜೀವನ ಕಟ್ಟಿಕೊಂಡು ಅರಣ್ಯವನ್ನೂ ಕಾಪಾಡುತ್ತಾ ಬದುಕಿದವರಿಗೆ ನೆಲೆಗೊಂದು ಹಕ್ಕುಪತ್ರ, ಬದುಕಿಗೊಂದಿಷ್ಟು ತುಂಡು ಭೂಮಿಯ ಹಕ್ಕನ್ನು ನಿರಾಕರಿಸಲಾಗುತ್ತಿದೆ. ಕಳೆದ 60-50 ವರ್ಷಗಳಿಂದಲೂ ಸಾಗುವಳಿ ಮಾಡುತ್ತಾ, ಅರ್ಜಿ ಸಲ್ಲಿಸಿದ್ದರೂ ಭೂಮಿ ಮಂಜೂರಾತಿ ನೀಡದೆ ಈಗ ನಗರ ಮಿತಿಯ ನೆಪದಲ್ಲಿ ಲಕ್ಷಾಂತರ ಸಂಖ್ಯೆಯ ಭೂರಹಿತರು ಭೂಮಿಯಿಂದ ವಂಚನೆಗೊಳಗಾಗುತ್ತಿದ್ದಾರೆ. ಇದು ಬಡವರ ಪಾಲಿಗೆ

ಮುಗಿಯದ ಗೋಳಿನ ಕಥೆಗಳ ದೊಡ್ಡ ಸರಮಾಲೆಯೇ ಆಗಿದೆಯಾದರೂ ಸರ್ಕಾರಗಳು ಇದನ್ನು ಸರಿಪಡಿಸುವ, ಬಡವರಿಗೆ ನ್ಯಾಯ ಕೊಡಿಸುವ ವಿಚಾರಕ್ಕೆ ಕೈಹಾಕದೆ ಕಾಲ ತಳ್ಳುತ್ತಲೇ ಇದ್ದಾರೆ. ಬಡವರು ಇನ್ನೆಷ್ಟು ವರ್ಷಗಳ ಕಾಲ ಕಾಯಬೇಕು? ಎಂದು ಪ್ರಶ್ನಿಸಿದ್ದಾರೆ. 

ರಾಜ್ಯದಲ್ಲಿ ಹಲವು ರೀತಿಯ ಹೆಸರಿನಲ್ಲಿ ಭೂಮಿಗಳಿವೆ. ಸರ್ಕಾರಿ, ಗೋಮಾಳ (ಗಾಯರಾಣ), ಹುಲ್ಲುಬನಿ, ಖರಾಬ್, ಖಾರೀಜ್ ಖಾತಾ, ಸೊಪ್ಪಿನ ಬೆಟ್ಟ, ಹರಳು ಪ್ರದೇಶ, ಗುಡ್ಡ ಪ್ರದೇಶ, ಕಲ್ಲು ಪ್ರದೇಶ, ಸೇಂದಿವನ, ಅನಾಧೀನ, ಕಾವಲು, ಅಮೃತ ಮಹಲ್ ಕಾವಲು, ಬಾಣೆ, ಪೈಸಾರಿ, ಅರಣ್ಯ, ಸಾಮಾಜಿಕ ಅರಣ್ಯ, ಲ್ಯಾಂಡ್ ಬ್ಯಾಂಕ್ ಇನ್ನಿತರೆ ಹೆಸರಿನಲ್ಲಿರುವ ಈ ಎಲ್ಲಾ ಭೂಮಿಗಳಿಗೆ ಇವುಗಳ ಉಪಯೋಗದ ಬಗ್ಗೆ ಅದರದೇ ಆದ ಕಾನೂನುಗಳನ್ನು ರೂಪಿಸಲಾಗಿದೆ. ಈಗಿನ ಸರ್ಕಾರದ ಪ್ರಕಾರ ಮೇಲಿನ ಯಾವ ಭೂಮಿಗಳನ್ನೂ ಫಾರಂ ನಂ. 50-53-57ರಲ್ಲಿ ಸಲ್ಲಿಸಿರುವ ಅರ್ಜಿದಾರರಿಗೆ ಮಂಜೂರಾತಿ ಮಾಡಲು ಅವಕಾಶವಿಲ್ಲ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರಕಾರ ತಾನು ಬಡವರ ಪರ, ಸಂವಿಧಾನ ಪರ ಎಂದು ಸಾಬೀತು ಪಡಿಸಲು, ಈಗಿರುವ ಕಂದಾಯ ಕಾಯ್ದೆಗೆ ತಿದ್ದುಪಡಿ ತಂದು ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರಾತಿ ನೀಡಬೇಕು. 

5-6 ದಶಕಗಳ ಕಾಲದಿಂದಲೂ ಇರುವ ಸಮಸ್ಯೆಯಿಂದಾಗಿ ರೈತರು ಅಲೆದಲೆದು ಸವಕಳಿಯಾಗಿದ್ದಾರೆ. ಇನ್ನು ಮುಂದೆ ಅರ್ಜಿ ಹಿಡಿದು ಪುನಃ ಅಲೆಸುವುದೆಂದರೆ ಜನರನ್ನು ಹಿಂಸೆಗೆ ಗುರಿಪಡಿಸಿದಂತಾಗುತ್ತದೆ. ಆದ್ದರಿಂದ ಸರಕಾರ ಬಡವರಿಗಾಗಿ ‘ಒನ್ ಟೈಮ್ ಸೆಟಲೆಂಟ್’ ಎಂಬ ತೀರ್ಮಾನ ಕೈಗೊಂಡು, ಭೂಮಂಜೂರಾತಿ ನೀಡಲು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ಆಗ್ರಹಿಸುತ್ತದೆ.

ಹೋರಾಟ ಸರಕಾರ ಭೂಮಿ-ಮತ್ತು ವಸತಿ ವಿಚಾರಕ್ಕೆ ಗಟ್ಟಿಯಾದ ತೀರ್ಮಾನವನ್ನು ಮಾಡಲೇಬೇಕೆಂದು ಒತ್ತಾಯಿಸಿ ನಾಡಿನ ರೈತ-ದಲಿತ-ಕಾರ್ಮಿಕ-ಮಹಿಳೆ-ವಿದ್ಯಾರ್ಥಿ ಯುವಜನ ಮತ್ತಿತರೆ ಸಮುದಾಯಗಳ ಐಕ್ಯ ವೇದಿಕೆಯಾದ ‘ಸಂಯುಕ್ತ ಕರ್ನಾಟಕ’ ನೇತೃತ್ವದಲ್ಲಿ ಇದೇ ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಲಿದೆ. ಈ ಸಂಬಂಧ ನವೆಂಬರ್ 21ರಂದು ಬೆಂಗಳೂರಿನ ಪ್ರಸ್ ಕ್ಲಬ್ ನಲ್ಲಿ ಪ್ರತಿಕಾಗೋಷ್ಠಿ ನಡೆಸಿದ ಹೋರಾಟಗಾರರು ಬೆಂಗಳೂರು ಚಲೋ ಪ್ರತಿಭಟನೆಗೆ ಕರೆ ನೀಡಿದ್ದಾರೆ. 

ಪತ್ರಿಕಾಗೋಷ್ಠಿಯಲ್ಲಿ ಸಿರಿಮನೆ ನಾಗರಾಜ್, ಕುಮಾರ್ ಸಮತಳ, ಕೆ. ಮರಿಯಪ್ಪ ಸೇರಿದಂತೆ ಹಲವು ಹೋರಾಟಗಾರರು ಭಾಗಿಯಾಗಿದ್ದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...