Homeಕರ್ನಾಟಕಭೂಮಿ-ವಸತಿಗಾಗಿ ನವೆಂಬರ್ 26ರಂದು ಬೆಂಗಳೂರು ಚಲೋ

ಭೂಮಿ-ವಸತಿಗಾಗಿ ನವೆಂಬರ್ 26ರಂದು ಬೆಂಗಳೂರು ಚಲೋ

- Advertisement -
- Advertisement -

‘ಉಳುವವರಿಗೆ ಭೂಮಿ’ ನಿನಾದದೊಂದಿಗೆ ಸ್ವತಂತ್ರಗೊಂಡ ಭಾರತದಲ್ಲಿ 79 ವರ್ಷಗಳಾದರೂ ಸ್ವತಂತ್ರ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿರುವ ಕೋಟ್ಯಾಂತರ ಬಡ ಕುಟುಂಬಗಳಿಗೆ ತುಂಡು ಭೂಮಿ ಇಲ್ಲವಾಗಿದೆ. ಉಳುಮೆಗೆ ಮಾತ್ರವಲ್ಲ ನೆತ್ತಿಯ ಮೇಲೊಂದು ಸೂರೂ ಇಲ್ಲವಾಗಿದೆ. ಸತ್ತ ಮೇಲೂ ಹೂಳಲು ಪರದಾಡುವ ಪರಿಸ್ಥಿತಿ ಇದೆ. ಭೂಮಿಯೆಲ್ಲಾ ಬಲಾಡ್ಯರ, ಕಂಪನಿಗಳ ಕೈಯಲ್ಲಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹೇಳಿದೆ. ಬಡವರಿಗೆ ಸರ್ಕಾರ ಭೂಮಿ ಮಂಡೂರಾತಿ ಮಾಡಿ ಒನ್ ಟೈಮ್ ಸೆಟಲ್ಮೆಂಟ್ ಮಾಡಿಕೊಡಬೇಕು ಎಂದು ಆಗ್ರಹಿಸಿ ನವೆಂಬರ್ 26ರಂದು ಬೆಂಗಳೂರು ಚಲೋ ಹೋರಾಟಕ್ಕೆ ಕರೆ ನೀಡಿದ್ದಾರೆ. 

ರಾಜ್ಯದ ದುಡಿಯುವ ಜನರಿಗೆ ಅದರಲ್ಲೂ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿಯ ಹಕ್ಕುಪತ್ರ ನೀಡಲು ಭೂಮಿ ಮಂಜೂರಾತಿ ಸಮಿತಿಗಳನ್ನು ಸರ್ಕಾರ ರಚಿಸಿದ್ದರೂ ಕಾಲಕಾಲಕ್ಕೆ ಸರಿಯಾಗಿ ಸಭೆಗಳಾಗದೆ, ಮಂಜೂರಾತಿಯೂ ಆಗುತ್ತಿಲ್ಲ. ಮಂಜೂರಾತಿಗೆ ಹತ್ತಾರು ಕಾನೂನುಗಳ ವಿಘ್ನಗಳನ್ನು ಮುಂದೆ ಮಾಡಲಾಗುತ್ತಿದೆ. ವಸತಿ ರಹಿತರ ವಿಚಾರಕ್ಕೆ ಸರ್ಕಾರದ ಸರಿಯಾದ ಯೋಜನೆ ಮತ್ತು ಆದ್ಯತೆ ಇಲ್ಲದಿರುವುದರಿಂದ ಕುಟುಂಬಗಳು ಬೆಳೆದಂತೆ ವಾಸಕ್ಕೆ ಜಾಗ ಸಾಕಾಗದೇ ಕುಟುಂಬದೊಳಗೇ ಆಂತರಿಕ ಕಲಹವಾಗಿ ಮಾರ್ಪಾಡಾಗುತ್ತಿದೆ. 

ಇನ್ನು ಅರಣ್ಯದ ಹೆಸರಿನಲ್ಲಿರುವ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರ ಕಥೆ ಬೇರೆಯೇ ಇದೆ. ಅರಣ್ಯ ಅಧಿಕಾರಿಗಳಂತೂ ಆರಣ್ಯ ವಾಸಿಗಳಿಗೆ, ಸಾಗುವಳಿ ಮಾಡುವ ಜನರಿಗೆ ಪೀಡಕರಾಗಿದ್ದಾರೆ. ತಲೆ-ತಲಾಂತರಗಳಿಂದ ಆರಣ್ಯವಾಸಿಗಳಾಗಿ ಜೀವನ ಕಟ್ಟಿಕೊಂಡು ಅರಣ್ಯವನ್ನೂ ಕಾಪಾಡುತ್ತಾ ಬದುಕಿದವರಿಗೆ ನೆಲೆಗೊಂದು ಹಕ್ಕುಪತ್ರ, ಬದುಕಿಗೊಂದಿಷ್ಟು ತುಂಡು ಭೂಮಿಯ ಹಕ್ಕನ್ನು ನಿರಾಕರಿಸಲಾಗುತ್ತಿದೆ. ಕಳೆದ 60-50 ವರ್ಷಗಳಿಂದಲೂ ಸಾಗುವಳಿ ಮಾಡುತ್ತಾ, ಅರ್ಜಿ ಸಲ್ಲಿಸಿದ್ದರೂ ಭೂಮಿ ಮಂಜೂರಾತಿ ನೀಡದೆ ಈಗ ನಗರ ಮಿತಿಯ ನೆಪದಲ್ಲಿ ಲಕ್ಷಾಂತರ ಸಂಖ್ಯೆಯ ಭೂರಹಿತರು ಭೂಮಿಯಿಂದ ವಂಚನೆಗೊಳಗಾಗುತ್ತಿದ್ದಾರೆ. ಇದು ಬಡವರ ಪಾಲಿಗೆ

ಮುಗಿಯದ ಗೋಳಿನ ಕಥೆಗಳ ದೊಡ್ಡ ಸರಮಾಲೆಯೇ ಆಗಿದೆಯಾದರೂ ಸರ್ಕಾರಗಳು ಇದನ್ನು ಸರಿಪಡಿಸುವ, ಬಡವರಿಗೆ ನ್ಯಾಯ ಕೊಡಿಸುವ ವಿಚಾರಕ್ಕೆ ಕೈಹಾಕದೆ ಕಾಲ ತಳ್ಳುತ್ತಲೇ ಇದ್ದಾರೆ. ಬಡವರು ಇನ್ನೆಷ್ಟು ವರ್ಷಗಳ ಕಾಲ ಕಾಯಬೇಕು? ಎಂದು ಪ್ರಶ್ನಿಸಿದ್ದಾರೆ. 

ರಾಜ್ಯದಲ್ಲಿ ಹಲವು ರೀತಿಯ ಹೆಸರಿನಲ್ಲಿ ಭೂಮಿಗಳಿವೆ. ಸರ್ಕಾರಿ, ಗೋಮಾಳ (ಗಾಯರಾಣ), ಹುಲ್ಲುಬನಿ, ಖರಾಬ್, ಖಾರೀಜ್ ಖಾತಾ, ಸೊಪ್ಪಿನ ಬೆಟ್ಟ, ಹರಳು ಪ್ರದೇಶ, ಗುಡ್ಡ ಪ್ರದೇಶ, ಕಲ್ಲು ಪ್ರದೇಶ, ಸೇಂದಿವನ, ಅನಾಧೀನ, ಕಾವಲು, ಅಮೃತ ಮಹಲ್ ಕಾವಲು, ಬಾಣೆ, ಪೈಸಾರಿ, ಅರಣ್ಯ, ಸಾಮಾಜಿಕ ಅರಣ್ಯ, ಲ್ಯಾಂಡ್ ಬ್ಯಾಂಕ್ ಇನ್ನಿತರೆ ಹೆಸರಿನಲ್ಲಿರುವ ಈ ಎಲ್ಲಾ ಭೂಮಿಗಳಿಗೆ ಇವುಗಳ ಉಪಯೋಗದ ಬಗ್ಗೆ ಅದರದೇ ಆದ ಕಾನೂನುಗಳನ್ನು ರೂಪಿಸಲಾಗಿದೆ. ಈಗಿನ ಸರ್ಕಾರದ ಪ್ರಕಾರ ಮೇಲಿನ ಯಾವ ಭೂಮಿಗಳನ್ನೂ ಫಾರಂ ನಂ. 50-53-57ರಲ್ಲಿ ಸಲ್ಲಿಸಿರುವ ಅರ್ಜಿದಾರರಿಗೆ ಮಂಜೂರಾತಿ ಮಾಡಲು ಅವಕಾಶವಿಲ್ಲ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರಕಾರ ತಾನು ಬಡವರ ಪರ, ಸಂವಿಧಾನ ಪರ ಎಂದು ಸಾಬೀತು ಪಡಿಸಲು, ಈಗಿರುವ ಕಂದಾಯ ಕಾಯ್ದೆಗೆ ತಿದ್ದುಪಡಿ ತಂದು ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರಾತಿ ನೀಡಬೇಕು. 

5-6 ದಶಕಗಳ ಕಾಲದಿಂದಲೂ ಇರುವ ಸಮಸ್ಯೆಯಿಂದಾಗಿ ರೈತರು ಅಲೆದಲೆದು ಸವಕಳಿಯಾಗಿದ್ದಾರೆ. ಇನ್ನು ಮುಂದೆ ಅರ್ಜಿ ಹಿಡಿದು ಪುನಃ ಅಲೆಸುವುದೆಂದರೆ ಜನರನ್ನು ಹಿಂಸೆಗೆ ಗುರಿಪಡಿಸಿದಂತಾಗುತ್ತದೆ. ಆದ್ದರಿಂದ ಸರಕಾರ ಬಡವರಿಗಾಗಿ ‘ಒನ್ ಟೈಮ್ ಸೆಟಲೆಂಟ್’ ಎಂಬ ತೀರ್ಮಾನ ಕೈಗೊಂಡು, ಭೂಮಂಜೂರಾತಿ ನೀಡಲು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ಆಗ್ರಹಿಸುತ್ತದೆ.

ಹೋರಾಟ ಸರಕಾರ ಭೂಮಿ-ಮತ್ತು ವಸತಿ ವಿಚಾರಕ್ಕೆ ಗಟ್ಟಿಯಾದ ತೀರ್ಮಾನವನ್ನು ಮಾಡಲೇಬೇಕೆಂದು ಒತ್ತಾಯಿಸಿ ನಾಡಿನ ರೈತ-ದಲಿತ-ಕಾರ್ಮಿಕ-ಮಹಿಳೆ-ವಿದ್ಯಾರ್ಥಿ ಯುವಜನ ಮತ್ತಿತರೆ ಸಮುದಾಯಗಳ ಐಕ್ಯ ವೇದಿಕೆಯಾದ ‘ಸಂಯುಕ್ತ ಕರ್ನಾಟಕ’ ನೇತೃತ್ವದಲ್ಲಿ ಇದೇ ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಲಿದೆ. ಈ ಸಂಬಂಧ ನವೆಂಬರ್ 21ರಂದು ಬೆಂಗಳೂರಿನ ಪ್ರಸ್ ಕ್ಲಬ್ ನಲ್ಲಿ ಪ್ರತಿಕಾಗೋಷ್ಠಿ ನಡೆಸಿದ ಹೋರಾಟಗಾರರು ಬೆಂಗಳೂರು ಚಲೋ ಪ್ರತಿಭಟನೆಗೆ ಕರೆ ನೀಡಿದ್ದಾರೆ. 

ಪತ್ರಿಕಾಗೋಷ್ಠಿಯಲ್ಲಿ ಸಿರಿಮನೆ ನಾಗರಾಜ್, ಕುಮಾರ್ ಸಮತಳ, ಕೆ. ಮರಿಯಪ್ಪ ಸೇರಿದಂತೆ ಹಲವು ಹೋರಾಟಗಾರರು ಭಾಗಿಯಾಗಿದ್ದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೊಬ್ಬರು ಬಿಎಲ್‌ಒ ಆತ್ಮಹತ್ಯೆ : ಎಸ್‌ಐಆರ್ ಒತ್ತಡ ಆರೋಪ

ಗುಜರಾತ್‌ನ ಗಿರ್ ಸೋಮನಾಥ್ ಜಿಲ್ಲೆಯಲ್ಲಿ 40 ವರ್ಷದ ಶಿಕ್ಷಕ ಹಾಗೂ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಅರವಿಂದ ಮುಲ್ಜಿ ವಾಧೇರ್ ಎಂಬವರು ತಮ್ಮ ಹುಟ್ಟೂರು ದೇವ್ಲಿ ಗ್ರಾಮದಲ್ಲಿ ಶುಕ್ರವಾರ (ನವೆಂಬರ್ 21) ಆತ್ಮಹತ್ಯೆ...

ದುಬೈ ಏರ್‌ಶೋನಲ್ಲಿ ಭಾರತದ ತೇಜಸ್‌ ಯುದ್ಧವಿಮಾನ ಪತನ ; ಪೈಲಟ್‌ ಸಾವು

ದುಬೈ ಏರ್ ಶೋನಲ್ಲಿ ಭಾರತೀಯ ವಾಯುಪಡೆಯ ತೇಜಸ್ ಯುದ್ಧ ವಿಮಾನ ಪತನಗೊಂಡಿದೆ. ಶುಕ್ರವಾರ (ನವೆಂಬರ್ 21) ಸ್ಥಳೀಯ ಸಮಯ ಮಧ್ಯಾಹ್ನ 2:10ರ ಸುಮಾರಿಗೆ ದುರ್ಘಟನೆ ನಡೆದಿದೆ. ದೊಡ್ಡ ಜನಸಮೂಹದ ಮುಂದೆ ವೈಮಾನಿಕ ಪ್ರದರ್ಶನ ನೀಡುತ್ತಿದ್ದಾಗ...

ಎಲ್ಲ 140 ಮಂದಿ ಶಾಸಕರೂ ನನ್ನವರೇ, ಗುಂಪುಗಾರಿಕೆ ನನ್ನ ರಕ್ತದಲ್ಲಿಲ್ಲ: ಡಿ.ಕೆ. ಶಿವಕುಮಾರ್

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, 'ಎಲ್ಲ 140 ಮಂದಿ ಶಾಸಕರೂ ನನ್ನವರೇ. ಗುಂಪುಗಾರಿಕೆ ಮಾಡುವುದು ನನ್ನ ರಕ್ತದಲ್ಲಿಯೇ ಇಲ್ಲ'...

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ : 6 ಸಾವು

ಶುಕ್ರವಾರ (ನವೆಂಬರ್ 21) ಬೆಳಿಗ್ಗೆ ಬಾಂಗ್ಲಾದೇಶದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. 26 ಸೆಕೆಂಡುಗಳ ಕಾಲ ಕಂಪನ ಸಂಭವಿಸಿದ್ದು, ಪೂರ್ವ ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲೂ...

ರಾಜ್ಯಪಾಲರು ಮಸೂದೆಗಳನ್ನು ಅಂಗೀಕರಿಸಲು ಸಮಯ ಮಿತಿ ನಿಗದಿ ಮಾಡುವವರೆಗೆ ವಿಶ್ರಾಂತಿ ಪಡೆಯುವುದಿಲ್ಲ: ಸ್ಟಾಲಿನ್ 

ರಾಜ್ಯ ಶಾಸಕಾಂಗಗಳು ಅಂಗೀಕರಿಸಿದ ಮಸೂದೆಗಳನ್ನು ಅಂಗೀಕರಿಸಲು ರಾಜ್ಯಪಾಲರಿಗೆ ಸಮಯ ಮಿತಿಯನ್ನು ನಿಗದಿಪಡಿಸಲು ಸಂವಿಧಾನದ 200ನೇ ವಿಧಿಗೆ ತಿದ್ದುಪಡಿ ತರಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶುಕ್ರವಾರ ಆಗ್ರಹಿಸಿದ್ದಾರೆ.  ರಾಷ್ಟ್ರಪತಿಗಳ ಉಲ್ಲೇಖಕ್ಕೆ ಉತ್ತರಿಸುವಾಗ ಸುಪ್ರೀಂ ಕೋರ್ಟ್‌ನ...

ಕೊಲೆಯತ್ನ ಆರೋಪ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಬಂಧನ

ಕೊಲೆಯತ್ನ ಆರೋಪದ ಮೇಲೆ ಕಲಬುರಗಿಯ ಚಿತ್ತಾಪುರದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅನ್ನು ಅಫಜಲಪುರ ತಾಲೂಕಿನ ಶಿರವಾಳ ಸಮೀಪ ಗುರುವಾರ (ನವೆಂಬರ್ 20) ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವರದಿಯಾಗಿದೆ. ನಾಟಿ ಔಷಧಿ...

ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಹಲ್ಲೆ : ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ; ವರದಿ

ಮುಂಬೈ ಉಪನಗರ ರೈಲಿನಲ್ಲಿ ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಸಹ ಪ್ರಯಾಣಿಕರು ಹಲ್ಲೆ ನಡೆಸಿದ್ದು, ಇದರಿಂದ ಮನನೊಂದು ಕಲ್ಯಾಣ್ ಮೂಲದ 19 ವರ್ಷದ ಬಿಎಸ್ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಮುಳುಂದ್‌ನ ಕೇಳ್ಕರ್ ಕಾಲೇಜಿನ ವಿದ್ಯಾರ್ಥಿ...

ಟ್ರಂಪ್ ಬೆದರಿಕೆ ಬೆನ್ನಲ್ಲೇ ರಷ್ಯಾದಿಂದ ತೈಲ ಆಮದು ನಿಲ್ಲಿಸಿದ ರಿಲಯನ್ಸ್ ಇಂಡಸ್ಟ್ರೀಸ್

ಗುಜರಾತ್‌ನ ಜಾಮ್‌ನಗರದಲ್ಲಿರುವ ತನ್ನ ಸಂಸ್ಕರಣಾಗಾರಕ್ಕೆ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದನ್ನು ರಿಲಯನ್ಸ್ ಇಂಡಸ್ಟ್ರೀಸ್ ಗುರುವಾರದಿಂದ (ನವೆಂಬರ್ 20) ನಿಲ್ಲಿಸಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಕಂಪನಿಗಳ...

‘ನಾನು ಬೌದ್ಧಧರ್ಮವನ್ನು ಅನುಸರಿಸುತ್ತೇನೆ, ಆದರೆ ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’: ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ

ನಾನು ಬೌದ್ಧಧರ್ಮವನ್ನು ಅನುಸರಿಸುತ್ತೇನೆ, ಆದರೆ ನಾನು ನಿಜವಾಗಿಯೂ ಜಾತ್ಯತೀತ ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ತಮ್ಮ ವಿದಾಯ ಭಾಷಣದಲ್ಲಿ ಹೇಳಿದ್ದಾರೆ.  ಸುಪ್ರೀಂ ಕೋರ್ಟ್‌ನ ಕೋರ್ಟ್ ನಲ್ಲಿ,  ಸುಪ್ರೀಂ ಕೋರ್ಟ್ ಅಡ್ವೊಕೇಟ್ಸ್ ಆನ್...