Homeಕರ್ನಾಟಕಭೂಮಿ-ವಸತಿಗಾಗಿ ನವೆಂಬರ್ 26ರಂದು ಬೆಂಗಳೂರು ಚಲೋ

ಭೂಮಿ-ವಸತಿಗಾಗಿ ನವೆಂಬರ್ 26ರಂದು ಬೆಂಗಳೂರು ಚಲೋ

- Advertisement -
- Advertisement -

‘ಉಳುವವರಿಗೆ ಭೂಮಿ’ ನಿನಾದದೊಂದಿಗೆ ಸ್ವತಂತ್ರಗೊಂಡ ಭಾರತದಲ್ಲಿ 79 ವರ್ಷಗಳಾದರೂ ಸ್ವತಂತ್ರ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿರುವ ಕೋಟ್ಯಾಂತರ ಬಡ ಕುಟುಂಬಗಳಿಗೆ ತುಂಡು ಭೂಮಿ ಇಲ್ಲವಾಗಿದೆ. ಉಳುಮೆಗೆ ಮಾತ್ರವಲ್ಲ ನೆತ್ತಿಯ ಮೇಲೊಂದು ಸೂರೂ ಇಲ್ಲವಾಗಿದೆ. ಸತ್ತ ಮೇಲೂ ಹೂಳಲು ಪರದಾಡುವ ಪರಿಸ್ಥಿತಿ ಇದೆ. ಭೂಮಿಯೆಲ್ಲಾ ಬಲಾಡ್ಯರ, ಕಂಪನಿಗಳ ಕೈಯಲ್ಲಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹೇಳಿದೆ. ಬಡವರಿಗೆ ಸರ್ಕಾರ ಭೂಮಿ ಮಂಡೂರಾತಿ ಮಾಡಿ ಒನ್ ಟೈಮ್ ಸೆಟಲ್ಮೆಂಟ್ ಮಾಡಿಕೊಡಬೇಕು ಎಂದು ಆಗ್ರಹಿಸಿ ನವೆಂಬರ್ 26ರಂದು ಬೆಂಗಳೂರು ಚಲೋ ಹೋರಾಟಕ್ಕೆ ಕರೆ ನೀಡಿದ್ದಾರೆ. 

ರಾಜ್ಯದ ದುಡಿಯುವ ಜನರಿಗೆ ಅದರಲ್ಲೂ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿಯ ಹಕ್ಕುಪತ್ರ ನೀಡಲು ಭೂಮಿ ಮಂಜೂರಾತಿ ಸಮಿತಿಗಳನ್ನು ಸರ್ಕಾರ ರಚಿಸಿದ್ದರೂ ಕಾಲಕಾಲಕ್ಕೆ ಸರಿಯಾಗಿ ಸಭೆಗಳಾಗದೆ, ಮಂಜೂರಾತಿಯೂ ಆಗುತ್ತಿಲ್ಲ. ಮಂಜೂರಾತಿಗೆ ಹತ್ತಾರು ಕಾನೂನುಗಳ ವಿಘ್ನಗಳನ್ನು ಮುಂದೆ ಮಾಡಲಾಗುತ್ತಿದೆ. ವಸತಿ ರಹಿತರ ವಿಚಾರಕ್ಕೆ ಸರ್ಕಾರದ ಸರಿಯಾದ ಯೋಜನೆ ಮತ್ತು ಆದ್ಯತೆ ಇಲ್ಲದಿರುವುದರಿಂದ ಕುಟುಂಬಗಳು ಬೆಳೆದಂತೆ ವಾಸಕ್ಕೆ ಜಾಗ ಸಾಕಾಗದೇ ಕುಟುಂಬದೊಳಗೇ ಆಂತರಿಕ ಕಲಹವಾಗಿ ಮಾರ್ಪಾಡಾಗುತ್ತಿದೆ. 

ಇನ್ನು ಅರಣ್ಯದ ಹೆಸರಿನಲ್ಲಿರುವ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರ ಕಥೆ ಬೇರೆಯೇ ಇದೆ. ಅರಣ್ಯ ಅಧಿಕಾರಿಗಳಂತೂ ಆರಣ್ಯ ವಾಸಿಗಳಿಗೆ, ಸಾಗುವಳಿ ಮಾಡುವ ಜನರಿಗೆ ಪೀಡಕರಾಗಿದ್ದಾರೆ. ತಲೆ-ತಲಾಂತರಗಳಿಂದ ಆರಣ್ಯವಾಸಿಗಳಾಗಿ ಜೀವನ ಕಟ್ಟಿಕೊಂಡು ಅರಣ್ಯವನ್ನೂ ಕಾಪಾಡುತ್ತಾ ಬದುಕಿದವರಿಗೆ ನೆಲೆಗೊಂದು ಹಕ್ಕುಪತ್ರ, ಬದುಕಿಗೊಂದಿಷ್ಟು ತುಂಡು ಭೂಮಿಯ ಹಕ್ಕನ್ನು ನಿರಾಕರಿಸಲಾಗುತ್ತಿದೆ. ಕಳೆದ 60-50 ವರ್ಷಗಳಿಂದಲೂ ಸಾಗುವಳಿ ಮಾಡುತ್ತಾ, ಅರ್ಜಿ ಸಲ್ಲಿಸಿದ್ದರೂ ಭೂಮಿ ಮಂಜೂರಾತಿ ನೀಡದೆ ಈಗ ನಗರ ಮಿತಿಯ ನೆಪದಲ್ಲಿ ಲಕ್ಷಾಂತರ ಸಂಖ್ಯೆಯ ಭೂರಹಿತರು ಭೂಮಿಯಿಂದ ವಂಚನೆಗೊಳಗಾಗುತ್ತಿದ್ದಾರೆ. ಇದು ಬಡವರ ಪಾಲಿಗೆ

ಮುಗಿಯದ ಗೋಳಿನ ಕಥೆಗಳ ದೊಡ್ಡ ಸರಮಾಲೆಯೇ ಆಗಿದೆಯಾದರೂ ಸರ್ಕಾರಗಳು ಇದನ್ನು ಸರಿಪಡಿಸುವ, ಬಡವರಿಗೆ ನ್ಯಾಯ ಕೊಡಿಸುವ ವಿಚಾರಕ್ಕೆ ಕೈಹಾಕದೆ ಕಾಲ ತಳ್ಳುತ್ತಲೇ ಇದ್ದಾರೆ. ಬಡವರು ಇನ್ನೆಷ್ಟು ವರ್ಷಗಳ ಕಾಲ ಕಾಯಬೇಕು? ಎಂದು ಪ್ರಶ್ನಿಸಿದ್ದಾರೆ. 

ರಾಜ್ಯದಲ್ಲಿ ಹಲವು ರೀತಿಯ ಹೆಸರಿನಲ್ಲಿ ಭೂಮಿಗಳಿವೆ. ಸರ್ಕಾರಿ, ಗೋಮಾಳ (ಗಾಯರಾಣ), ಹುಲ್ಲುಬನಿ, ಖರಾಬ್, ಖಾರೀಜ್ ಖಾತಾ, ಸೊಪ್ಪಿನ ಬೆಟ್ಟ, ಹರಳು ಪ್ರದೇಶ, ಗುಡ್ಡ ಪ್ರದೇಶ, ಕಲ್ಲು ಪ್ರದೇಶ, ಸೇಂದಿವನ, ಅನಾಧೀನ, ಕಾವಲು, ಅಮೃತ ಮಹಲ್ ಕಾವಲು, ಬಾಣೆ, ಪೈಸಾರಿ, ಅರಣ್ಯ, ಸಾಮಾಜಿಕ ಅರಣ್ಯ, ಲ್ಯಾಂಡ್ ಬ್ಯಾಂಕ್ ಇನ್ನಿತರೆ ಹೆಸರಿನಲ್ಲಿರುವ ಈ ಎಲ್ಲಾ ಭೂಮಿಗಳಿಗೆ ಇವುಗಳ ಉಪಯೋಗದ ಬಗ್ಗೆ ಅದರದೇ ಆದ ಕಾನೂನುಗಳನ್ನು ರೂಪಿಸಲಾಗಿದೆ. ಈಗಿನ ಸರ್ಕಾರದ ಪ್ರಕಾರ ಮೇಲಿನ ಯಾವ ಭೂಮಿಗಳನ್ನೂ ಫಾರಂ ನಂ. 50-53-57ರಲ್ಲಿ ಸಲ್ಲಿಸಿರುವ ಅರ್ಜಿದಾರರಿಗೆ ಮಂಜೂರಾತಿ ಮಾಡಲು ಅವಕಾಶವಿಲ್ಲ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರಕಾರ ತಾನು ಬಡವರ ಪರ, ಸಂವಿಧಾನ ಪರ ಎಂದು ಸಾಬೀತು ಪಡಿಸಲು, ಈಗಿರುವ ಕಂದಾಯ ಕಾಯ್ದೆಗೆ ತಿದ್ದುಪಡಿ ತಂದು ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರಾತಿ ನೀಡಬೇಕು. 

5-6 ದಶಕಗಳ ಕಾಲದಿಂದಲೂ ಇರುವ ಸಮಸ್ಯೆಯಿಂದಾಗಿ ರೈತರು ಅಲೆದಲೆದು ಸವಕಳಿಯಾಗಿದ್ದಾರೆ. ಇನ್ನು ಮುಂದೆ ಅರ್ಜಿ ಹಿಡಿದು ಪುನಃ ಅಲೆಸುವುದೆಂದರೆ ಜನರನ್ನು ಹಿಂಸೆಗೆ ಗುರಿಪಡಿಸಿದಂತಾಗುತ್ತದೆ. ಆದ್ದರಿಂದ ಸರಕಾರ ಬಡವರಿಗಾಗಿ ‘ಒನ್ ಟೈಮ್ ಸೆಟಲೆಂಟ್’ ಎಂಬ ತೀರ್ಮಾನ ಕೈಗೊಂಡು, ಭೂಮಂಜೂರಾತಿ ನೀಡಲು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ಆಗ್ರಹಿಸುತ್ತದೆ.

ಹೋರಾಟ ಸರಕಾರ ಭೂಮಿ-ಮತ್ತು ವಸತಿ ವಿಚಾರಕ್ಕೆ ಗಟ್ಟಿಯಾದ ತೀರ್ಮಾನವನ್ನು ಮಾಡಲೇಬೇಕೆಂದು ಒತ್ತಾಯಿಸಿ ನಾಡಿನ ರೈತ-ದಲಿತ-ಕಾರ್ಮಿಕ-ಮಹಿಳೆ-ವಿದ್ಯಾರ್ಥಿ ಯುವಜನ ಮತ್ತಿತರೆ ಸಮುದಾಯಗಳ ಐಕ್ಯ ವೇದಿಕೆಯಾದ ‘ಸಂಯುಕ್ತ ಕರ್ನಾಟಕ’ ನೇತೃತ್ವದಲ್ಲಿ ಇದೇ ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಲಿದೆ. ಈ ಸಂಬಂಧ ನವೆಂಬರ್ 21ರಂದು ಬೆಂಗಳೂರಿನ ಪ್ರಸ್ ಕ್ಲಬ್ ನಲ್ಲಿ ಪ್ರತಿಕಾಗೋಷ್ಠಿ ನಡೆಸಿದ ಹೋರಾಟಗಾರರು ಬೆಂಗಳೂರು ಚಲೋ ಪ್ರತಿಭಟನೆಗೆ ಕರೆ ನೀಡಿದ್ದಾರೆ. 

ಪತ್ರಿಕಾಗೋಷ್ಠಿಯಲ್ಲಿ ಸಿರಿಮನೆ ನಾಗರಾಜ್, ಕುಮಾರ್ ಸಮತಳ, ಕೆ. ಮರಿಯಪ್ಪ ಸೇರಿದಂತೆ ಹಲವು ಹೋರಾಟಗಾರರು ಭಾಗಿಯಾಗಿದ್ದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...