Homeಕರ್ನಾಟಕಭೂಮಿ-ವಸತಿಗಾಗಿ ನವೆಂಬರ್ 26ರಂದು ಬೆಂಗಳೂರು ಚಲೋ

ಭೂಮಿ-ವಸತಿಗಾಗಿ ನವೆಂಬರ್ 26ರಂದು ಬೆಂಗಳೂರು ಚಲೋ

- Advertisement -
- Advertisement -

‘ಉಳುವವರಿಗೆ ಭೂಮಿ’ ನಿನಾದದೊಂದಿಗೆ ಸ್ವತಂತ್ರಗೊಂಡ ಭಾರತದಲ್ಲಿ 79 ವರ್ಷಗಳಾದರೂ ಸ್ವತಂತ್ರ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿರುವ ಕೋಟ್ಯಾಂತರ ಬಡ ಕುಟುಂಬಗಳಿಗೆ ತುಂಡು ಭೂಮಿ ಇಲ್ಲವಾಗಿದೆ. ಉಳುಮೆಗೆ ಮಾತ್ರವಲ್ಲ ನೆತ್ತಿಯ ಮೇಲೊಂದು ಸೂರೂ ಇಲ್ಲವಾಗಿದೆ. ಸತ್ತ ಮೇಲೂ ಹೂಳಲು ಪರದಾಡುವ ಪರಿಸ್ಥಿತಿ ಇದೆ. ಭೂಮಿಯೆಲ್ಲಾ ಬಲಾಡ್ಯರ, ಕಂಪನಿಗಳ ಕೈಯಲ್ಲಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹೇಳಿದೆ. ಬಡವರಿಗೆ ಸರ್ಕಾರ ಭೂಮಿ ಮಂಡೂರಾತಿ ಮಾಡಿ ಒನ್ ಟೈಮ್ ಸೆಟಲ್ಮೆಂಟ್ ಮಾಡಿಕೊಡಬೇಕು ಎಂದು ಆಗ್ರಹಿಸಿ ನವೆಂಬರ್ 26ರಂದು ಬೆಂಗಳೂರು ಚಲೋ ಹೋರಾಟಕ್ಕೆ ಕರೆ ನೀಡಿದ್ದಾರೆ. 

ರಾಜ್ಯದ ದುಡಿಯುವ ಜನರಿಗೆ ಅದರಲ್ಲೂ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿಯ ಹಕ್ಕುಪತ್ರ ನೀಡಲು ಭೂಮಿ ಮಂಜೂರಾತಿ ಸಮಿತಿಗಳನ್ನು ಸರ್ಕಾರ ರಚಿಸಿದ್ದರೂ ಕಾಲಕಾಲಕ್ಕೆ ಸರಿಯಾಗಿ ಸಭೆಗಳಾಗದೆ, ಮಂಜೂರಾತಿಯೂ ಆಗುತ್ತಿಲ್ಲ. ಮಂಜೂರಾತಿಗೆ ಹತ್ತಾರು ಕಾನೂನುಗಳ ವಿಘ್ನಗಳನ್ನು ಮುಂದೆ ಮಾಡಲಾಗುತ್ತಿದೆ. ವಸತಿ ರಹಿತರ ವಿಚಾರಕ್ಕೆ ಸರ್ಕಾರದ ಸರಿಯಾದ ಯೋಜನೆ ಮತ್ತು ಆದ್ಯತೆ ಇಲ್ಲದಿರುವುದರಿಂದ ಕುಟುಂಬಗಳು ಬೆಳೆದಂತೆ ವಾಸಕ್ಕೆ ಜಾಗ ಸಾಕಾಗದೇ ಕುಟುಂಬದೊಳಗೇ ಆಂತರಿಕ ಕಲಹವಾಗಿ ಮಾರ್ಪಾಡಾಗುತ್ತಿದೆ. 

ಇನ್ನು ಅರಣ್ಯದ ಹೆಸರಿನಲ್ಲಿರುವ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರ ಕಥೆ ಬೇರೆಯೇ ಇದೆ. ಅರಣ್ಯ ಅಧಿಕಾರಿಗಳಂತೂ ಆರಣ್ಯ ವಾಸಿಗಳಿಗೆ, ಸಾಗುವಳಿ ಮಾಡುವ ಜನರಿಗೆ ಪೀಡಕರಾಗಿದ್ದಾರೆ. ತಲೆ-ತಲಾಂತರಗಳಿಂದ ಆರಣ್ಯವಾಸಿಗಳಾಗಿ ಜೀವನ ಕಟ್ಟಿಕೊಂಡು ಅರಣ್ಯವನ್ನೂ ಕಾಪಾಡುತ್ತಾ ಬದುಕಿದವರಿಗೆ ನೆಲೆಗೊಂದು ಹಕ್ಕುಪತ್ರ, ಬದುಕಿಗೊಂದಿಷ್ಟು ತುಂಡು ಭೂಮಿಯ ಹಕ್ಕನ್ನು ನಿರಾಕರಿಸಲಾಗುತ್ತಿದೆ. ಕಳೆದ 60-50 ವರ್ಷಗಳಿಂದಲೂ ಸಾಗುವಳಿ ಮಾಡುತ್ತಾ, ಅರ್ಜಿ ಸಲ್ಲಿಸಿದ್ದರೂ ಭೂಮಿ ಮಂಜೂರಾತಿ ನೀಡದೆ ಈಗ ನಗರ ಮಿತಿಯ ನೆಪದಲ್ಲಿ ಲಕ್ಷಾಂತರ ಸಂಖ್ಯೆಯ ಭೂರಹಿತರು ಭೂಮಿಯಿಂದ ವಂಚನೆಗೊಳಗಾಗುತ್ತಿದ್ದಾರೆ. ಇದು ಬಡವರ ಪಾಲಿಗೆ

ಮುಗಿಯದ ಗೋಳಿನ ಕಥೆಗಳ ದೊಡ್ಡ ಸರಮಾಲೆಯೇ ಆಗಿದೆಯಾದರೂ ಸರ್ಕಾರಗಳು ಇದನ್ನು ಸರಿಪಡಿಸುವ, ಬಡವರಿಗೆ ನ್ಯಾಯ ಕೊಡಿಸುವ ವಿಚಾರಕ್ಕೆ ಕೈಹಾಕದೆ ಕಾಲ ತಳ್ಳುತ್ತಲೇ ಇದ್ದಾರೆ. ಬಡವರು ಇನ್ನೆಷ್ಟು ವರ್ಷಗಳ ಕಾಲ ಕಾಯಬೇಕು? ಎಂದು ಪ್ರಶ್ನಿಸಿದ್ದಾರೆ. 

ರಾಜ್ಯದಲ್ಲಿ ಹಲವು ರೀತಿಯ ಹೆಸರಿನಲ್ಲಿ ಭೂಮಿಗಳಿವೆ. ಸರ್ಕಾರಿ, ಗೋಮಾಳ (ಗಾಯರಾಣ), ಹುಲ್ಲುಬನಿ, ಖರಾಬ್, ಖಾರೀಜ್ ಖಾತಾ, ಸೊಪ್ಪಿನ ಬೆಟ್ಟ, ಹರಳು ಪ್ರದೇಶ, ಗುಡ್ಡ ಪ್ರದೇಶ, ಕಲ್ಲು ಪ್ರದೇಶ, ಸೇಂದಿವನ, ಅನಾಧೀನ, ಕಾವಲು, ಅಮೃತ ಮಹಲ್ ಕಾವಲು, ಬಾಣೆ, ಪೈಸಾರಿ, ಅರಣ್ಯ, ಸಾಮಾಜಿಕ ಅರಣ್ಯ, ಲ್ಯಾಂಡ್ ಬ್ಯಾಂಕ್ ಇನ್ನಿತರೆ ಹೆಸರಿನಲ್ಲಿರುವ ಈ ಎಲ್ಲಾ ಭೂಮಿಗಳಿಗೆ ಇವುಗಳ ಉಪಯೋಗದ ಬಗ್ಗೆ ಅದರದೇ ಆದ ಕಾನೂನುಗಳನ್ನು ರೂಪಿಸಲಾಗಿದೆ. ಈಗಿನ ಸರ್ಕಾರದ ಪ್ರಕಾರ ಮೇಲಿನ ಯಾವ ಭೂಮಿಗಳನ್ನೂ ಫಾರಂ ನಂ. 50-53-57ರಲ್ಲಿ ಸಲ್ಲಿಸಿರುವ ಅರ್ಜಿದಾರರಿಗೆ ಮಂಜೂರಾತಿ ಮಾಡಲು ಅವಕಾಶವಿಲ್ಲ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರಕಾರ ತಾನು ಬಡವರ ಪರ, ಸಂವಿಧಾನ ಪರ ಎಂದು ಸಾಬೀತು ಪಡಿಸಲು, ಈಗಿರುವ ಕಂದಾಯ ಕಾಯ್ದೆಗೆ ತಿದ್ದುಪಡಿ ತಂದು ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರಾತಿ ನೀಡಬೇಕು. 

5-6 ದಶಕಗಳ ಕಾಲದಿಂದಲೂ ಇರುವ ಸಮಸ್ಯೆಯಿಂದಾಗಿ ರೈತರು ಅಲೆದಲೆದು ಸವಕಳಿಯಾಗಿದ್ದಾರೆ. ಇನ್ನು ಮುಂದೆ ಅರ್ಜಿ ಹಿಡಿದು ಪುನಃ ಅಲೆಸುವುದೆಂದರೆ ಜನರನ್ನು ಹಿಂಸೆಗೆ ಗುರಿಪಡಿಸಿದಂತಾಗುತ್ತದೆ. ಆದ್ದರಿಂದ ಸರಕಾರ ಬಡವರಿಗಾಗಿ ‘ಒನ್ ಟೈಮ್ ಸೆಟಲೆಂಟ್’ ಎಂಬ ತೀರ್ಮಾನ ಕೈಗೊಂಡು, ಭೂಮಂಜೂರಾತಿ ನೀಡಲು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ಆಗ್ರಹಿಸುತ್ತದೆ.

ಹೋರಾಟ ಸರಕಾರ ಭೂಮಿ-ಮತ್ತು ವಸತಿ ವಿಚಾರಕ್ಕೆ ಗಟ್ಟಿಯಾದ ತೀರ್ಮಾನವನ್ನು ಮಾಡಲೇಬೇಕೆಂದು ಒತ್ತಾಯಿಸಿ ನಾಡಿನ ರೈತ-ದಲಿತ-ಕಾರ್ಮಿಕ-ಮಹಿಳೆ-ವಿದ್ಯಾರ್ಥಿ ಯುವಜನ ಮತ್ತಿತರೆ ಸಮುದಾಯಗಳ ಐಕ್ಯ ವೇದಿಕೆಯಾದ ‘ಸಂಯುಕ್ತ ಕರ್ನಾಟಕ’ ನೇತೃತ್ವದಲ್ಲಿ ಇದೇ ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಲಿದೆ. ಈ ಸಂಬಂಧ ನವೆಂಬರ್ 21ರಂದು ಬೆಂಗಳೂರಿನ ಪ್ರಸ್ ಕ್ಲಬ್ ನಲ್ಲಿ ಪ್ರತಿಕಾಗೋಷ್ಠಿ ನಡೆಸಿದ ಹೋರಾಟಗಾರರು ಬೆಂಗಳೂರು ಚಲೋ ಪ್ರತಿಭಟನೆಗೆ ಕರೆ ನೀಡಿದ್ದಾರೆ. 

ಪತ್ರಿಕಾಗೋಷ್ಠಿಯಲ್ಲಿ ಸಿರಿಮನೆ ನಾಗರಾಜ್, ಕುಮಾರ್ ಸಮತಳ, ಕೆ. ಮರಿಯಪ್ಪ ಸೇರಿದಂತೆ ಹಲವು ಹೋರಾಟಗಾರರು ಭಾಗಿಯಾಗಿದ್ದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...