Homeಕರ್ನಾಟಕಬೆಂಗಳೂರು | ನಗರದಲ್ಲಿ 12 ಗಂಟೆಯೊಳಗೆ ಮೂರು ಕೊಲೆಗಳು!

ಬೆಂಗಳೂರು | ನಗರದಲ್ಲಿ 12 ಗಂಟೆಯೊಳಗೆ ಮೂರು ಕೊಲೆಗಳು!

- Advertisement -
- Advertisement -

ಬೆಂಗಳೂರಿನಲ್ಲಿ ಕಳೆದ 12 ಗಂಟೆಯೊಳಗೆ ಮೂರು ಕೊಲೆಗಳು ವರದಿಯಾಗಿವೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ನಗರದ ಈಶಾನ್ಯ ಭಾಗದಲ್ಲಿ ಲಾಜಿಸ್ಟಿಕ್ಸ್ ಸಂಸ್ಥೆಯೊಂದರಲ್ಲಿ ಕ್ಲೀನರ್‌ಗಳಾಗಿ ಕೆಲಸ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕಡಿದು ಕೊಲೆ ಮಾಡಲಾಗಿದ್ದು, ಹೊಂಗಸಂದ್ರದಲ್ಲಿ ಮಹಿಳೆಯೊಬ್ಬರನ್ನು ಆಕೆಯ ಮಗನೆ ಹತ್ಯೆಗೈದಿರುವ ಘಟನೆ ಸಂಭವಿಸಿದೆ. ಬೆಂಗಳೂರು

ಶನಿವಾರ ಬೆಳಗ್ಗೆ ಸಹೋದ್ಯೋಗಿಯೊಬ್ಬರು ಅವರು ಕೆಲಸ ಮಾಡುತ್ತಿದ್ದ ಶೆಡ್‌ಗೆ ಪ್ರವೇಶಿಸಿದಾಗ ಕ್ರಮವಾಗಿ ರಾಮನಗರ ಮತ್ತು ಮಂಡ್ಯ ಮೂಲದ ನಾಗೇಶ್ (52) ಮತ್ತು ಮಂಜು ಗೌಡ (44) ಅವರ ಶವಗಳು ಪತ್ತೆಯಾಗಿವೆ. ಕೊಲೆಗೀಡಾ ವ್ಯಕ್ತಿಗಳಿಬ್ಬರಿಗೆ ಗಟ್ಟಿಯಾದ ವಸ್ತುವಿನಿಂದ ತಲೆಗೆ ಮಾರಣಾಂತಿಕ ಗಾಯ ಮಾಡಲಾಗಿದ್ದು, ತೀವ್ರ ರಕ್ತಶ್ರಾವದ ಕಾರಣಕ್ಕೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ಬಾಗಲೂರು ಸಮೀಪದ ಸಿಂಗಹಳ್ಳಿಯಲ್ಲಿರುವ ಲಾಜಿಸ್ಟಿಕ್ ಕಂಪನಿಯಲ್ಲಿ ನಾಲ್ಕು ವರ್ಷಗಳಿಂದ ಉದ್ಯೋಗಿಯಾಗಿದ್ದರು. ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇವರಿಬ್ಬರ ಜೊತೆ ಶೆಡ್ ಹಂಚಿಕೊಂಡಿದ್ದ ಸಹೋದ್ಯೋಗಿ ಸುರೇಶ್ ಪ್ರಮುಖ ಶಂಕಿತ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಶುಕ್ರವಾರ ರಾತ್ರಿ ಮೂವರು ಸಹೋದ್ಯೋಗಿಗಳು ಮದ್ಯಪಾನ ಮಾಡಲು ಜಮಾಯಿಸಿದ್ದಾಗ ಘಟನೆ ನಡೆದಿರಬಹುದು ಎಂದು ಪೊಲೀಸರು ಹೇಳಿದ್ದಾರೆ. ರಾತ್ರಿ 11.30 ರ ಸುಮಾರಿಗೆ ಸುರೇಶ್ ಸ್ಥಳದಿಂದ ಪರಾರಿಯಾಗುವ ಮೊದಲು ನಾಗೇಶ್ ಮತ್ತು ಮಂಜು ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ.

ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 103 (ಕೊಲೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಆರೋಪಿ ಸುರೇಶ್‌ ಹುಡುಕಾಟಕ್ಕಾಗಿ ತಂಡವನ್ನು ರಚಿಸಿದ್ದಾರೆ ಎಂದು ವರದಿ ಹೇಳಿದೆ.

ಎರಡನೇ ಘಟನೆಯಲ್ಲಿ, ತಮಿಳುನಾಡು ಮೂಲದ ಜಯಮ್ಮ ಶುಕ್ರವಾರ ಸಂಜೆ ಆಕೆಯ ಹಿರಿಯ ಮಗ ಉಮೇಶ್ (33) ಅವರನ್ನು ಭೇಟಿ ಮಾಡಿದ ನಂತರ ಅವರ ಮನೆಯಲ್ಲಿ ಕೊಲೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉಮೇಶ್ ತಮ್ಮ ತಾಯಿಯ ಜೊತೆಯಲ್ಲಿ ಪದೇ ಪದೇ ಜಗಳವಾಡುತ್ತಿದ್ದ ಕಾರಣ ಜಯಮ್ಮ ಕಿರಿಯ ಮಗನೊಂದಿಗೆ ಹೊಂಗಸಂದ್ರಕ್ಕೆ ತೆರಳಿದ್ದರು.

ಮಹಿಳೆಯು ಇದ್ದ ಮನೆಯ ಓನರ್‌ ಜಯಮ್ಮ ಅವರ ದೇಹವನ್ನು ಪತ್ತೆ ಮಾಡಿದ್ದು, ಈ ವೇಳೆ ಮೃತದೇಹದಲ್ಲಿ ಕತ್ತು ಹಿಸುಕಿರುವುದು ಅಥವಾ ಉಸಿರುಗಟ್ಟಿಸುವಿಕೆಯ ಗುರುತುಗಳನ್ನು ಹೊಂದಿದ್ದು, ಹಾಗಾಗಿ ಅವರು ಪೋಲೀಸರಿಗೆ ತಿಳಿಸಿದ್ದಾರೆ. ಅವರ ಮೃತದೇಹವನ್ನು ಸಹ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ತನ್ನ ತಾಯಿ ಇದ್ದ ಹೊಸ ಮನೆಯ ಜಾಡು ಹಿಡಿದು ಆರೋಪಿ ಉಮೇಶ್ ಅಲ್ಲಿಗೆ ತೆರಳಿದ್ದು, ಅಲ್ಲಿ ಅವರೊಂದಿಗೆ ಹಣದ ವಿಚಾರವಾಗಿ ಆಕೆಯನ್ನು ಕೊಲೆ ಮಾಡಿರಬಹುದು ಎಂದು ಪೊಲೀಸರು ನಂಬಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಆಸ್ತಿಯನ್ನು ಮಾರಾಟ ಮಾಡಿದರೂ ಅದರಿಂದ ಬಂದ ಹಣವನ್ನು ಅವರು ಅವರಿಗೆ ನೀಡಿರಲಿಲ್ಲ ಎಂದು ವರದಿಯಾಗಿದೆ. ಘಟನೆಯ ಸಮಯದಲ್ಲಿ, ಆಕೆಯ ಕಿರಿಯ ಮಗ, ಕೆಎಸ್ಆರ್ಟಿಸಿ ಬಸ್ ಚಾಲಕನು ಆನೇಕಲ್ನಲ್ಲಿ ಕರ್ತವ್ಯದಲ್ಲಿದ್ದರು ಎನ್ನಲಾಗಿದೆ.

ಬೊಮ್ಮನಹಳ್ಳಿ ಪೊಲೀಸರು ಬಿಎನ್‌ಎಸ್ ಸೆಕ್ಷನ್ 103 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಶಂಕಿತನನ್ನು ಗುರುತಿಸಲಾಗಿದೆ ಮತ್ತು ಶೀಘ್ರದಲ್ಲೇ ಆತನನ್ನು ಬಂಧಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ NEET ಆಕಾಂಕ್ಷಿಯನ್ನು ಒತ್ತೆಯಾಳಾಗಿ ಇರಿಸಿ ಅತ್ಯಾಚಾರ; ಇಬ್ಬರು ಶಿಕ್ಷಕರ ಬಂಧನ

ಅಪ್ರಾಪ್ತ NEET ಆಕಾಂಕ್ಷಿಯನ್ನು ಒತ್ತೆಯಾಳಾಗಿ ಇರಿಸಿ ಅತ್ಯಾಚಾರ; ಇಬ್ಬರು ಶಿಕ್ಷಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...