Homeಕರ್ನಾಟಕಬೆಂಗಳೂರು | ನಗರದಲ್ಲಿ 12 ಗಂಟೆಯೊಳಗೆ ಮೂರು ಕೊಲೆಗಳು!

ಬೆಂಗಳೂರು | ನಗರದಲ್ಲಿ 12 ಗಂಟೆಯೊಳಗೆ ಮೂರು ಕೊಲೆಗಳು!

- Advertisement -
- Advertisement -

ಬೆಂಗಳೂರಿನಲ್ಲಿ ಕಳೆದ 12 ಗಂಟೆಯೊಳಗೆ ಮೂರು ಕೊಲೆಗಳು ವರದಿಯಾಗಿವೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ನಗರದ ಈಶಾನ್ಯ ಭಾಗದಲ್ಲಿ ಲಾಜಿಸ್ಟಿಕ್ಸ್ ಸಂಸ್ಥೆಯೊಂದರಲ್ಲಿ ಕ್ಲೀನರ್‌ಗಳಾಗಿ ಕೆಲಸ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕಡಿದು ಕೊಲೆ ಮಾಡಲಾಗಿದ್ದು, ಹೊಂಗಸಂದ್ರದಲ್ಲಿ ಮಹಿಳೆಯೊಬ್ಬರನ್ನು ಆಕೆಯ ಮಗನೆ ಹತ್ಯೆಗೈದಿರುವ ಘಟನೆ ಸಂಭವಿಸಿದೆ. ಬೆಂಗಳೂರು

ಶನಿವಾರ ಬೆಳಗ್ಗೆ ಸಹೋದ್ಯೋಗಿಯೊಬ್ಬರು ಅವರು ಕೆಲಸ ಮಾಡುತ್ತಿದ್ದ ಶೆಡ್‌ಗೆ ಪ್ರವೇಶಿಸಿದಾಗ ಕ್ರಮವಾಗಿ ರಾಮನಗರ ಮತ್ತು ಮಂಡ್ಯ ಮೂಲದ ನಾಗೇಶ್ (52) ಮತ್ತು ಮಂಜು ಗೌಡ (44) ಅವರ ಶವಗಳು ಪತ್ತೆಯಾಗಿವೆ. ಕೊಲೆಗೀಡಾ ವ್ಯಕ್ತಿಗಳಿಬ್ಬರಿಗೆ ಗಟ್ಟಿಯಾದ ವಸ್ತುವಿನಿಂದ ತಲೆಗೆ ಮಾರಣಾಂತಿಕ ಗಾಯ ಮಾಡಲಾಗಿದ್ದು, ತೀವ್ರ ರಕ್ತಶ್ರಾವದ ಕಾರಣಕ್ಕೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ಬಾಗಲೂರು ಸಮೀಪದ ಸಿಂಗಹಳ್ಳಿಯಲ್ಲಿರುವ ಲಾಜಿಸ್ಟಿಕ್ ಕಂಪನಿಯಲ್ಲಿ ನಾಲ್ಕು ವರ್ಷಗಳಿಂದ ಉದ್ಯೋಗಿಯಾಗಿದ್ದರು. ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇವರಿಬ್ಬರ ಜೊತೆ ಶೆಡ್ ಹಂಚಿಕೊಂಡಿದ್ದ ಸಹೋದ್ಯೋಗಿ ಸುರೇಶ್ ಪ್ರಮುಖ ಶಂಕಿತ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಶುಕ್ರವಾರ ರಾತ್ರಿ ಮೂವರು ಸಹೋದ್ಯೋಗಿಗಳು ಮದ್ಯಪಾನ ಮಾಡಲು ಜಮಾಯಿಸಿದ್ದಾಗ ಘಟನೆ ನಡೆದಿರಬಹುದು ಎಂದು ಪೊಲೀಸರು ಹೇಳಿದ್ದಾರೆ. ರಾತ್ರಿ 11.30 ರ ಸುಮಾರಿಗೆ ಸುರೇಶ್ ಸ್ಥಳದಿಂದ ಪರಾರಿಯಾಗುವ ಮೊದಲು ನಾಗೇಶ್ ಮತ್ತು ಮಂಜು ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ.

ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 103 (ಕೊಲೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಆರೋಪಿ ಸುರೇಶ್‌ ಹುಡುಕಾಟಕ್ಕಾಗಿ ತಂಡವನ್ನು ರಚಿಸಿದ್ದಾರೆ ಎಂದು ವರದಿ ಹೇಳಿದೆ.

ಎರಡನೇ ಘಟನೆಯಲ್ಲಿ, ತಮಿಳುನಾಡು ಮೂಲದ ಜಯಮ್ಮ ಶುಕ್ರವಾರ ಸಂಜೆ ಆಕೆಯ ಹಿರಿಯ ಮಗ ಉಮೇಶ್ (33) ಅವರನ್ನು ಭೇಟಿ ಮಾಡಿದ ನಂತರ ಅವರ ಮನೆಯಲ್ಲಿ ಕೊಲೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉಮೇಶ್ ತಮ್ಮ ತಾಯಿಯ ಜೊತೆಯಲ್ಲಿ ಪದೇ ಪದೇ ಜಗಳವಾಡುತ್ತಿದ್ದ ಕಾರಣ ಜಯಮ್ಮ ಕಿರಿಯ ಮಗನೊಂದಿಗೆ ಹೊಂಗಸಂದ್ರಕ್ಕೆ ತೆರಳಿದ್ದರು.

ಮಹಿಳೆಯು ಇದ್ದ ಮನೆಯ ಓನರ್‌ ಜಯಮ್ಮ ಅವರ ದೇಹವನ್ನು ಪತ್ತೆ ಮಾಡಿದ್ದು, ಈ ವೇಳೆ ಮೃತದೇಹದಲ್ಲಿ ಕತ್ತು ಹಿಸುಕಿರುವುದು ಅಥವಾ ಉಸಿರುಗಟ್ಟಿಸುವಿಕೆಯ ಗುರುತುಗಳನ್ನು ಹೊಂದಿದ್ದು, ಹಾಗಾಗಿ ಅವರು ಪೋಲೀಸರಿಗೆ ತಿಳಿಸಿದ್ದಾರೆ. ಅವರ ಮೃತದೇಹವನ್ನು ಸಹ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ತನ್ನ ತಾಯಿ ಇದ್ದ ಹೊಸ ಮನೆಯ ಜಾಡು ಹಿಡಿದು ಆರೋಪಿ ಉಮೇಶ್ ಅಲ್ಲಿಗೆ ತೆರಳಿದ್ದು, ಅಲ್ಲಿ ಅವರೊಂದಿಗೆ ಹಣದ ವಿಚಾರವಾಗಿ ಆಕೆಯನ್ನು ಕೊಲೆ ಮಾಡಿರಬಹುದು ಎಂದು ಪೊಲೀಸರು ನಂಬಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಆಸ್ತಿಯನ್ನು ಮಾರಾಟ ಮಾಡಿದರೂ ಅದರಿಂದ ಬಂದ ಹಣವನ್ನು ಅವರು ಅವರಿಗೆ ನೀಡಿರಲಿಲ್ಲ ಎಂದು ವರದಿಯಾಗಿದೆ. ಘಟನೆಯ ಸಮಯದಲ್ಲಿ, ಆಕೆಯ ಕಿರಿಯ ಮಗ, ಕೆಎಸ್ಆರ್ಟಿಸಿ ಬಸ್ ಚಾಲಕನು ಆನೇಕಲ್ನಲ್ಲಿ ಕರ್ತವ್ಯದಲ್ಲಿದ್ದರು ಎನ್ನಲಾಗಿದೆ.

ಬೊಮ್ಮನಹಳ್ಳಿ ಪೊಲೀಸರು ಬಿಎನ್‌ಎಸ್ ಸೆಕ್ಷನ್ 103 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಶಂಕಿತನನ್ನು ಗುರುತಿಸಲಾಗಿದೆ ಮತ್ತು ಶೀಘ್ರದಲ್ಲೇ ಆತನನ್ನು ಬಂಧಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ NEET ಆಕಾಂಕ್ಷಿಯನ್ನು ಒತ್ತೆಯಾಳಾಗಿ ಇರಿಸಿ ಅತ್ಯಾಚಾರ; ಇಬ್ಬರು ಶಿಕ್ಷಕರ ಬಂಧನ

ಅಪ್ರಾಪ್ತ NEET ಆಕಾಂಕ್ಷಿಯನ್ನು ಒತ್ತೆಯಾಳಾಗಿ ಇರಿಸಿ ಅತ್ಯಾಚಾರ; ಇಬ್ಬರು ಶಿಕ್ಷಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...