Homeಕರ್ನಾಟಕಬೆಂಗಳೂರಿಗರಿಗೆ ಆಘಾತ: ಆಸ್ತಿ ತೆರಿಗೆ ಎರಡು ಪಟ್ಟು ಏರಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

ಬೆಂಗಳೂರಿಗರಿಗೆ ಆಘಾತ: ಆಸ್ತಿ ತೆರಿಗೆ ಎರಡು ಪಟ್ಟು ಏರಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

- Advertisement -
- Advertisement -

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಬೆಂಗಳೂರಿನಲ್ಲಿ ಆಸ್ತಿ ಹೊಂದಿರುವವರಿಗೆ ದಿಢೀರ್ ಆಘಾತ ನೀಡಿದ್ದು, ಆಸ್ತಿ ತೆರಿಗೆ ಹಣವನ್ನು ಎರಡು ಪಟ್ಟು ಏರಿಸಿದೆ. ಈ ನಿಯಮದಿಂದ ನಗರದಲ್ಲಿ ವಾಸಿಸುವ ಕನಿಷ್ಟ 1 ಲಕ್ಷ ಜನರಿಗೆ ಭಾರೀ ಹೊರೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಭಿವೃದ್ಧಿ ಪ್ರಾಧಿಕಾರದ ಈ ನಿಯಮ ಈಗಷ್ಟೇ ಕೊರೊನಾ ಲಾಕ್​ಡೌನ್ ಪರಿಸ್ಥಿತಿಯಿಂದ ಸುಧಾರಿಸಿಕೊಳ್ಳುತ್ತಿದ್ದ ಬೆಂಗಳೂರಿಗರಿಗೆ ದೊಡ್ಡ ಆಘಾತ ನೀಡಿದೆ ಎನ್ನಲಾಗುತ್ತಿದೆ. ಹೆಚ್ಚುವರಿ ನಿರ್ವಹಣಾ ಶುಲ್ಕಗಳು ಏಕರೂಪದ್ದಾಗಿದ್ದರೂ, ಬಿಡಿಎ ನಿಯಮದಂತೆ ಸೈಟ್​ಗಳ ವಿನ್ಯಾಸಗಳು ಬದಲಾದಂತೆ ಆಸ್ತಿ ತೆರಿಗೆಯೂ ಬದಲಾಗುತ್ತದೆ. ಇದು ನಿವೇಶನ ಹೊಂದಿರುವ ಮಾಲೀಕರ ಮೇಲೆ ಆರ್ಥಿಕವಾಗಿ ಪರಿಣಾಮ ಬೀರಲಿದೆ.

ಉದಾಹರಣೆಗೆ, ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲಿ ಆಸ್ತಿ ಹೊಂದಿದ್ದವರು 2020ರಲ್ಲಿ 838 ರೂ. ಹಣವನ್ನು ಆಸ್ತಿ ತೆರಿಗೆ ರೂಪದಲ್ಲಿ ಪಾವತಿ ಮಾಡುತ್ತಿದ್ದರು. ಈಗ ಅದೇ ಆಸ್ತಿಗೆ ಈಗ 3233 ರೂ.ಗಳನ್ನು ಆಸ್ತಿ ತೆರಿಗೆ  ಪಾವತಿ ಮಾಡಬೇಕಿದೆ. ಇದು ಕನಿಷ್ಟ ಶೇ.286ರಷ್ಟು ಅಧಿಕ ಎಂದು ಅಂದಾಜಿಸಲಾಗಿದೆ. ಅಂಜನಾಪುರ ಲೇಔಟ್​ನಲ್ಲಿ 40 ಅಡಿ x 60 ಅಡಿ ಸೈಟ್ ಮಾಲೀಕರು ಕಳೆದ ವರ್ಷದವರೆಗೆ 3,616 ರೂ. ತೆರಿಗೆ ಪಾವತಿ ಮಾಡುತ್ತಿದ್ದರು, ಅದರ ಪ್ರಮಾಣ ಈಗ 6,016 ರೂಪಾಯಿಗೆ ಏರಿಕೆ ಮಾಡಲಾಗಿದೆ.

ಇದನ್ನೂ ಓದಿ: ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ ಚೇತನ್

ಬೆಂಗಳೂರಿನ ಅನೇಕ ಲೇಔಟ್​ಗಳಲ್ಲಿ ಬಿಬಿಎಂಪಿ ಮತ್ತು ಬಿಡಿಎ ಇಲಾಳೆಗಳು ಸರಿಯಾದ ರಸ್ತೆ, ಫುಟ್​ಪಾತ್, ಪೈಪ್​ಲೈನ್​ಗಳು, ನೈಮರ್ಲ್ಯ ಸುಧಾರಣೆ ಮತ್ತು ಪಾರ್ಕ್​ಗಳನ್ನೇ ನಿರ್ಮಿಸಿಲ್ಲ. ಕುಡಿಯುವ ನೀರಿನಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ. ಇಂತಹ ಸಮಯದಲ್ಲಿ ತೆರಿಗೆಯನ್ನು ಈ ಪ್ರಮಾಣದಲ್ಲಿ ಏರಿಸಿರುವುದು, ನಿರ್ವಹಣಾ ಶುಲ್ಕವನ್ನು ಹೆಚ್ಚಿಸಿರುವುದು ಅನೇಕ ಸೈಟ್ ಮಾಲೀಕರ ಅಸಮಾಧಾನಕ್ಕೆ ಕಾರಣವಾಗಿದೆ.

ಬಿಡಿಎ, ಬಿಬಿಎಂಪಿ ಸೇರಿದಂತೆ ಇತರೆ ಸಾರ್ವಜನಿಕ ಸಂಸ್ಥೆಗಳ ನಿಯಮದಂತೆ ಶೇ.15ರ ವರೆಗೆ ಮಾತ್ರ ಶುಲ್ಕವನ್ನು ಏರಿಸುವ ಹಕ್ಕನ್ನು ಹೊಂದಿವೆ. ಹೀಗಾಗಿ ಸೈಟ್ ಮಾಲೀಕರು ಬಿಡಿಎ ರೇರಾ ಮತ್ತು ರಾಜ್ಯ ಸರ್ಕಾರಕ್ಕೆ ದೂರು ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಕೊರೊನಾ ಲಾಕ್​ಡೌನ್‌ನ ನಿರ್ಬಂಧಗಳನ್ನು​ ತೆಗೆಯಲಾಗುತ್ತಿದ್ದು, ಜನ ಜೀವನ, ವ್ಯಾಪಾರ-ವಹಿವಾಟು ಸಹಜ ಸ್ಥಿತಿಗೆ ಮರಳುತ್ತಿದೆ.

ಈಗಷ್ಟೇ ಎಚ್ಚೆತ್ತುಕೊಳ್ಳುತ್ತಿರುವ ಜನ ಜೀವನದ ಮೇಲೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಆಸ್ತಿ ತೆರಿಗೆಯನ್ನು ದ್ವಿಪಟ್ಟು ಹೆಚ್ಚು ಮಾಡಿರುವುದು ಆಸ್ತಿ ಮಾಲೀಕರ ಪಾಲಿಗೆ ಮತ್ತಷ್ಟು ಹೊರೆಯಾಗಿ ಪರಿಣಮಿಸಿದೆ ಎನ್ನಲಾಗುತ್ತಿದೆ. ಈ ಕುರಿತು ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೋ ಮುಂದಿನ ದಿನಗಳಲ್ಲಿ ತಿಳಿಯಲಿದೆ.


ಇದನ್ನೂ ಓದಿ: ಸಿಂಧನೂರು: ಒಕ್ಕೂಟ ಸರ್ಕಾರದ ವಿರುದ್ದ ‘ರೈತಪರ ಹೋರಾಟ ಸಮಿತಿ’ಯಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...