Homeಕರ್ನಾಟಕಬೆಂಗಳೂರಿಗರಿಗೆ ಆಘಾತ: ಆಸ್ತಿ ತೆರಿಗೆ ಎರಡು ಪಟ್ಟು ಏರಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

ಬೆಂಗಳೂರಿಗರಿಗೆ ಆಘಾತ: ಆಸ್ತಿ ತೆರಿಗೆ ಎರಡು ಪಟ್ಟು ಏರಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

- Advertisement -
- Advertisement -

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಬೆಂಗಳೂರಿನಲ್ಲಿ ಆಸ್ತಿ ಹೊಂದಿರುವವರಿಗೆ ದಿಢೀರ್ ಆಘಾತ ನೀಡಿದ್ದು, ಆಸ್ತಿ ತೆರಿಗೆ ಹಣವನ್ನು ಎರಡು ಪಟ್ಟು ಏರಿಸಿದೆ. ಈ ನಿಯಮದಿಂದ ನಗರದಲ್ಲಿ ವಾಸಿಸುವ ಕನಿಷ್ಟ 1 ಲಕ್ಷ ಜನರಿಗೆ ಭಾರೀ ಹೊರೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಭಿವೃದ್ಧಿ ಪ್ರಾಧಿಕಾರದ ಈ ನಿಯಮ ಈಗಷ್ಟೇ ಕೊರೊನಾ ಲಾಕ್​ಡೌನ್ ಪರಿಸ್ಥಿತಿಯಿಂದ ಸುಧಾರಿಸಿಕೊಳ್ಳುತ್ತಿದ್ದ ಬೆಂಗಳೂರಿಗರಿಗೆ ದೊಡ್ಡ ಆಘಾತ ನೀಡಿದೆ ಎನ್ನಲಾಗುತ್ತಿದೆ. ಹೆಚ್ಚುವರಿ ನಿರ್ವಹಣಾ ಶುಲ್ಕಗಳು ಏಕರೂಪದ್ದಾಗಿದ್ದರೂ, ಬಿಡಿಎ ನಿಯಮದಂತೆ ಸೈಟ್​ಗಳ ವಿನ್ಯಾಸಗಳು ಬದಲಾದಂತೆ ಆಸ್ತಿ ತೆರಿಗೆಯೂ ಬದಲಾಗುತ್ತದೆ. ಇದು ನಿವೇಶನ ಹೊಂದಿರುವ ಮಾಲೀಕರ ಮೇಲೆ ಆರ್ಥಿಕವಾಗಿ ಪರಿಣಾಮ ಬೀರಲಿದೆ.

ಉದಾಹರಣೆಗೆ, ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲಿ ಆಸ್ತಿ ಹೊಂದಿದ್ದವರು 2020ರಲ್ಲಿ 838 ರೂ. ಹಣವನ್ನು ಆಸ್ತಿ ತೆರಿಗೆ ರೂಪದಲ್ಲಿ ಪಾವತಿ ಮಾಡುತ್ತಿದ್ದರು. ಈಗ ಅದೇ ಆಸ್ತಿಗೆ ಈಗ 3233 ರೂ.ಗಳನ್ನು ಆಸ್ತಿ ತೆರಿಗೆ  ಪಾವತಿ ಮಾಡಬೇಕಿದೆ. ಇದು ಕನಿಷ್ಟ ಶೇ.286ರಷ್ಟು ಅಧಿಕ ಎಂದು ಅಂದಾಜಿಸಲಾಗಿದೆ. ಅಂಜನಾಪುರ ಲೇಔಟ್​ನಲ್ಲಿ 40 ಅಡಿ x 60 ಅಡಿ ಸೈಟ್ ಮಾಲೀಕರು ಕಳೆದ ವರ್ಷದವರೆಗೆ 3,616 ರೂ. ತೆರಿಗೆ ಪಾವತಿ ಮಾಡುತ್ತಿದ್ದರು, ಅದರ ಪ್ರಮಾಣ ಈಗ 6,016 ರೂಪಾಯಿಗೆ ಏರಿಕೆ ಮಾಡಲಾಗಿದೆ.

ಇದನ್ನೂ ಓದಿ: ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ ಚೇತನ್

ಬೆಂಗಳೂರಿನ ಅನೇಕ ಲೇಔಟ್​ಗಳಲ್ಲಿ ಬಿಬಿಎಂಪಿ ಮತ್ತು ಬಿಡಿಎ ಇಲಾಳೆಗಳು ಸರಿಯಾದ ರಸ್ತೆ, ಫುಟ್​ಪಾತ್, ಪೈಪ್​ಲೈನ್​ಗಳು, ನೈಮರ್ಲ್ಯ ಸುಧಾರಣೆ ಮತ್ತು ಪಾರ್ಕ್​ಗಳನ್ನೇ ನಿರ್ಮಿಸಿಲ್ಲ. ಕುಡಿಯುವ ನೀರಿನಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ. ಇಂತಹ ಸಮಯದಲ್ಲಿ ತೆರಿಗೆಯನ್ನು ಈ ಪ್ರಮಾಣದಲ್ಲಿ ಏರಿಸಿರುವುದು, ನಿರ್ವಹಣಾ ಶುಲ್ಕವನ್ನು ಹೆಚ್ಚಿಸಿರುವುದು ಅನೇಕ ಸೈಟ್ ಮಾಲೀಕರ ಅಸಮಾಧಾನಕ್ಕೆ ಕಾರಣವಾಗಿದೆ.

ಬಿಡಿಎ, ಬಿಬಿಎಂಪಿ ಸೇರಿದಂತೆ ಇತರೆ ಸಾರ್ವಜನಿಕ ಸಂಸ್ಥೆಗಳ ನಿಯಮದಂತೆ ಶೇ.15ರ ವರೆಗೆ ಮಾತ್ರ ಶುಲ್ಕವನ್ನು ಏರಿಸುವ ಹಕ್ಕನ್ನು ಹೊಂದಿವೆ. ಹೀಗಾಗಿ ಸೈಟ್ ಮಾಲೀಕರು ಬಿಡಿಎ ರೇರಾ ಮತ್ತು ರಾಜ್ಯ ಸರ್ಕಾರಕ್ಕೆ ದೂರು ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಕೊರೊನಾ ಲಾಕ್​ಡೌನ್‌ನ ನಿರ್ಬಂಧಗಳನ್ನು​ ತೆಗೆಯಲಾಗುತ್ತಿದ್ದು, ಜನ ಜೀವನ, ವ್ಯಾಪಾರ-ವಹಿವಾಟು ಸಹಜ ಸ್ಥಿತಿಗೆ ಮರಳುತ್ತಿದೆ.

ಈಗಷ್ಟೇ ಎಚ್ಚೆತ್ತುಕೊಳ್ಳುತ್ತಿರುವ ಜನ ಜೀವನದ ಮೇಲೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಆಸ್ತಿ ತೆರಿಗೆಯನ್ನು ದ್ವಿಪಟ್ಟು ಹೆಚ್ಚು ಮಾಡಿರುವುದು ಆಸ್ತಿ ಮಾಲೀಕರ ಪಾಲಿಗೆ ಮತ್ತಷ್ಟು ಹೊರೆಯಾಗಿ ಪರಿಣಮಿಸಿದೆ ಎನ್ನಲಾಗುತ್ತಿದೆ. ಈ ಕುರಿತು ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೋ ಮುಂದಿನ ದಿನಗಳಲ್ಲಿ ತಿಳಿಯಲಿದೆ.


ಇದನ್ನೂ ಓದಿ: ಸಿಂಧನೂರು: ಒಕ್ಕೂಟ ಸರ್ಕಾರದ ವಿರುದ್ದ ‘ರೈತಪರ ಹೋರಾಟ ಸಮಿತಿ’ಯಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...