Homeಕರ್ನಾಟಕಬೆಂಗಳೂರಿಗರಿಗೆ ಆಘಾತ: ಆಸ್ತಿ ತೆರಿಗೆ ಎರಡು ಪಟ್ಟು ಏರಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

ಬೆಂಗಳೂರಿಗರಿಗೆ ಆಘಾತ: ಆಸ್ತಿ ತೆರಿಗೆ ಎರಡು ಪಟ್ಟು ಏರಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

- Advertisement -
- Advertisement -

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಬೆಂಗಳೂರಿನಲ್ಲಿ ಆಸ್ತಿ ಹೊಂದಿರುವವರಿಗೆ ದಿಢೀರ್ ಆಘಾತ ನೀಡಿದ್ದು, ಆಸ್ತಿ ತೆರಿಗೆ ಹಣವನ್ನು ಎರಡು ಪಟ್ಟು ಏರಿಸಿದೆ. ಈ ನಿಯಮದಿಂದ ನಗರದಲ್ಲಿ ವಾಸಿಸುವ ಕನಿಷ್ಟ 1 ಲಕ್ಷ ಜನರಿಗೆ ಭಾರೀ ಹೊರೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಭಿವೃದ್ಧಿ ಪ್ರಾಧಿಕಾರದ ಈ ನಿಯಮ ಈಗಷ್ಟೇ ಕೊರೊನಾ ಲಾಕ್​ಡೌನ್ ಪರಿಸ್ಥಿತಿಯಿಂದ ಸುಧಾರಿಸಿಕೊಳ್ಳುತ್ತಿದ್ದ ಬೆಂಗಳೂರಿಗರಿಗೆ ದೊಡ್ಡ ಆಘಾತ ನೀಡಿದೆ ಎನ್ನಲಾಗುತ್ತಿದೆ. ಹೆಚ್ಚುವರಿ ನಿರ್ವಹಣಾ ಶುಲ್ಕಗಳು ಏಕರೂಪದ್ದಾಗಿದ್ದರೂ, ಬಿಡಿಎ ನಿಯಮದಂತೆ ಸೈಟ್​ಗಳ ವಿನ್ಯಾಸಗಳು ಬದಲಾದಂತೆ ಆಸ್ತಿ ತೆರಿಗೆಯೂ ಬದಲಾಗುತ್ತದೆ. ಇದು ನಿವೇಶನ ಹೊಂದಿರುವ ಮಾಲೀಕರ ಮೇಲೆ ಆರ್ಥಿಕವಾಗಿ ಪರಿಣಾಮ ಬೀರಲಿದೆ.

ಉದಾಹರಣೆಗೆ, ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲಿ ಆಸ್ತಿ ಹೊಂದಿದ್ದವರು 2020ರಲ್ಲಿ 838 ರೂ. ಹಣವನ್ನು ಆಸ್ತಿ ತೆರಿಗೆ ರೂಪದಲ್ಲಿ ಪಾವತಿ ಮಾಡುತ್ತಿದ್ದರು. ಈಗ ಅದೇ ಆಸ್ತಿಗೆ ಈಗ 3233 ರೂ.ಗಳನ್ನು ಆಸ್ತಿ ತೆರಿಗೆ  ಪಾವತಿ ಮಾಡಬೇಕಿದೆ. ಇದು ಕನಿಷ್ಟ ಶೇ.286ರಷ್ಟು ಅಧಿಕ ಎಂದು ಅಂದಾಜಿಸಲಾಗಿದೆ. ಅಂಜನಾಪುರ ಲೇಔಟ್​ನಲ್ಲಿ 40 ಅಡಿ x 60 ಅಡಿ ಸೈಟ್ ಮಾಲೀಕರು ಕಳೆದ ವರ್ಷದವರೆಗೆ 3,616 ರೂ. ತೆರಿಗೆ ಪಾವತಿ ಮಾಡುತ್ತಿದ್ದರು, ಅದರ ಪ್ರಮಾಣ ಈಗ 6,016 ರೂಪಾಯಿಗೆ ಏರಿಕೆ ಮಾಡಲಾಗಿದೆ.

ಇದನ್ನೂ ಓದಿ: ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ ಚೇತನ್

ಬೆಂಗಳೂರಿನ ಅನೇಕ ಲೇಔಟ್​ಗಳಲ್ಲಿ ಬಿಬಿಎಂಪಿ ಮತ್ತು ಬಿಡಿಎ ಇಲಾಳೆಗಳು ಸರಿಯಾದ ರಸ್ತೆ, ಫುಟ್​ಪಾತ್, ಪೈಪ್​ಲೈನ್​ಗಳು, ನೈಮರ್ಲ್ಯ ಸುಧಾರಣೆ ಮತ್ತು ಪಾರ್ಕ್​ಗಳನ್ನೇ ನಿರ್ಮಿಸಿಲ್ಲ. ಕುಡಿಯುವ ನೀರಿನಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ. ಇಂತಹ ಸಮಯದಲ್ಲಿ ತೆರಿಗೆಯನ್ನು ಈ ಪ್ರಮಾಣದಲ್ಲಿ ಏರಿಸಿರುವುದು, ನಿರ್ವಹಣಾ ಶುಲ್ಕವನ್ನು ಹೆಚ್ಚಿಸಿರುವುದು ಅನೇಕ ಸೈಟ್ ಮಾಲೀಕರ ಅಸಮಾಧಾನಕ್ಕೆ ಕಾರಣವಾಗಿದೆ.

ಬಿಡಿಎ, ಬಿಬಿಎಂಪಿ ಸೇರಿದಂತೆ ಇತರೆ ಸಾರ್ವಜನಿಕ ಸಂಸ್ಥೆಗಳ ನಿಯಮದಂತೆ ಶೇ.15ರ ವರೆಗೆ ಮಾತ್ರ ಶುಲ್ಕವನ್ನು ಏರಿಸುವ ಹಕ್ಕನ್ನು ಹೊಂದಿವೆ. ಹೀಗಾಗಿ ಸೈಟ್ ಮಾಲೀಕರು ಬಿಡಿಎ ರೇರಾ ಮತ್ತು ರಾಜ್ಯ ಸರ್ಕಾರಕ್ಕೆ ದೂರು ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಕೊರೊನಾ ಲಾಕ್​ಡೌನ್‌ನ ನಿರ್ಬಂಧಗಳನ್ನು​ ತೆಗೆಯಲಾಗುತ್ತಿದ್ದು, ಜನ ಜೀವನ, ವ್ಯಾಪಾರ-ವಹಿವಾಟು ಸಹಜ ಸ್ಥಿತಿಗೆ ಮರಳುತ್ತಿದೆ.

ಈಗಷ್ಟೇ ಎಚ್ಚೆತ್ತುಕೊಳ್ಳುತ್ತಿರುವ ಜನ ಜೀವನದ ಮೇಲೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಆಸ್ತಿ ತೆರಿಗೆಯನ್ನು ದ್ವಿಪಟ್ಟು ಹೆಚ್ಚು ಮಾಡಿರುವುದು ಆಸ್ತಿ ಮಾಲೀಕರ ಪಾಲಿಗೆ ಮತ್ತಷ್ಟು ಹೊರೆಯಾಗಿ ಪರಿಣಮಿಸಿದೆ ಎನ್ನಲಾಗುತ್ತಿದೆ. ಈ ಕುರಿತು ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೋ ಮುಂದಿನ ದಿನಗಳಲ್ಲಿ ತಿಳಿಯಲಿದೆ.


ಇದನ್ನೂ ಓದಿ: ಸಿಂಧನೂರು: ಒಕ್ಕೂಟ ಸರ್ಕಾರದ ವಿರುದ್ದ ‘ರೈತಪರ ಹೋರಾಟ ಸಮಿತಿ’ಯಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...