Homeಕರ್ನಾಟಕಬೆಂಗಳೂರಿಗರಿಗೆ ಆಘಾತ: ಆಸ್ತಿ ತೆರಿಗೆ ಎರಡು ಪಟ್ಟು ಏರಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

ಬೆಂಗಳೂರಿಗರಿಗೆ ಆಘಾತ: ಆಸ್ತಿ ತೆರಿಗೆ ಎರಡು ಪಟ್ಟು ಏರಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

- Advertisement -
- Advertisement -

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಬೆಂಗಳೂರಿನಲ್ಲಿ ಆಸ್ತಿ ಹೊಂದಿರುವವರಿಗೆ ದಿಢೀರ್ ಆಘಾತ ನೀಡಿದ್ದು, ಆಸ್ತಿ ತೆರಿಗೆ ಹಣವನ್ನು ಎರಡು ಪಟ್ಟು ಏರಿಸಿದೆ. ಈ ನಿಯಮದಿಂದ ನಗರದಲ್ಲಿ ವಾಸಿಸುವ ಕನಿಷ್ಟ 1 ಲಕ್ಷ ಜನರಿಗೆ ಭಾರೀ ಹೊರೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಭಿವೃದ್ಧಿ ಪ್ರಾಧಿಕಾರದ ಈ ನಿಯಮ ಈಗಷ್ಟೇ ಕೊರೊನಾ ಲಾಕ್​ಡೌನ್ ಪರಿಸ್ಥಿತಿಯಿಂದ ಸುಧಾರಿಸಿಕೊಳ್ಳುತ್ತಿದ್ದ ಬೆಂಗಳೂರಿಗರಿಗೆ ದೊಡ್ಡ ಆಘಾತ ನೀಡಿದೆ ಎನ್ನಲಾಗುತ್ತಿದೆ. ಹೆಚ್ಚುವರಿ ನಿರ್ವಹಣಾ ಶುಲ್ಕಗಳು ಏಕರೂಪದ್ದಾಗಿದ್ದರೂ, ಬಿಡಿಎ ನಿಯಮದಂತೆ ಸೈಟ್​ಗಳ ವಿನ್ಯಾಸಗಳು ಬದಲಾದಂತೆ ಆಸ್ತಿ ತೆರಿಗೆಯೂ ಬದಲಾಗುತ್ತದೆ. ಇದು ನಿವೇಶನ ಹೊಂದಿರುವ ಮಾಲೀಕರ ಮೇಲೆ ಆರ್ಥಿಕವಾಗಿ ಪರಿಣಾಮ ಬೀರಲಿದೆ.

ಉದಾಹರಣೆಗೆ, ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲಿ ಆಸ್ತಿ ಹೊಂದಿದ್ದವರು 2020ರಲ್ಲಿ 838 ರೂ. ಹಣವನ್ನು ಆಸ್ತಿ ತೆರಿಗೆ ರೂಪದಲ್ಲಿ ಪಾವತಿ ಮಾಡುತ್ತಿದ್ದರು. ಈಗ ಅದೇ ಆಸ್ತಿಗೆ ಈಗ 3233 ರೂ.ಗಳನ್ನು ಆಸ್ತಿ ತೆರಿಗೆ  ಪಾವತಿ ಮಾಡಬೇಕಿದೆ. ಇದು ಕನಿಷ್ಟ ಶೇ.286ರಷ್ಟು ಅಧಿಕ ಎಂದು ಅಂದಾಜಿಸಲಾಗಿದೆ. ಅಂಜನಾಪುರ ಲೇಔಟ್​ನಲ್ಲಿ 40 ಅಡಿ x 60 ಅಡಿ ಸೈಟ್ ಮಾಲೀಕರು ಕಳೆದ ವರ್ಷದವರೆಗೆ 3,616 ರೂ. ತೆರಿಗೆ ಪಾವತಿ ಮಾಡುತ್ತಿದ್ದರು, ಅದರ ಪ್ರಮಾಣ ಈಗ 6,016 ರೂಪಾಯಿಗೆ ಏರಿಕೆ ಮಾಡಲಾಗಿದೆ.

ಇದನ್ನೂ ಓದಿ: ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ ಚೇತನ್

ಬೆಂಗಳೂರಿನ ಅನೇಕ ಲೇಔಟ್​ಗಳಲ್ಲಿ ಬಿಬಿಎಂಪಿ ಮತ್ತು ಬಿಡಿಎ ಇಲಾಳೆಗಳು ಸರಿಯಾದ ರಸ್ತೆ, ಫುಟ್​ಪಾತ್, ಪೈಪ್​ಲೈನ್​ಗಳು, ನೈಮರ್ಲ್ಯ ಸುಧಾರಣೆ ಮತ್ತು ಪಾರ್ಕ್​ಗಳನ್ನೇ ನಿರ್ಮಿಸಿಲ್ಲ. ಕುಡಿಯುವ ನೀರಿನಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ. ಇಂತಹ ಸಮಯದಲ್ಲಿ ತೆರಿಗೆಯನ್ನು ಈ ಪ್ರಮಾಣದಲ್ಲಿ ಏರಿಸಿರುವುದು, ನಿರ್ವಹಣಾ ಶುಲ್ಕವನ್ನು ಹೆಚ್ಚಿಸಿರುವುದು ಅನೇಕ ಸೈಟ್ ಮಾಲೀಕರ ಅಸಮಾಧಾನಕ್ಕೆ ಕಾರಣವಾಗಿದೆ.

ಬಿಡಿಎ, ಬಿಬಿಎಂಪಿ ಸೇರಿದಂತೆ ಇತರೆ ಸಾರ್ವಜನಿಕ ಸಂಸ್ಥೆಗಳ ನಿಯಮದಂತೆ ಶೇ.15ರ ವರೆಗೆ ಮಾತ್ರ ಶುಲ್ಕವನ್ನು ಏರಿಸುವ ಹಕ್ಕನ್ನು ಹೊಂದಿವೆ. ಹೀಗಾಗಿ ಸೈಟ್ ಮಾಲೀಕರು ಬಿಡಿಎ ರೇರಾ ಮತ್ತು ರಾಜ್ಯ ಸರ್ಕಾರಕ್ಕೆ ದೂರು ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಕೊರೊನಾ ಲಾಕ್​ಡೌನ್‌ನ ನಿರ್ಬಂಧಗಳನ್ನು​ ತೆಗೆಯಲಾಗುತ್ತಿದ್ದು, ಜನ ಜೀವನ, ವ್ಯಾಪಾರ-ವಹಿವಾಟು ಸಹಜ ಸ್ಥಿತಿಗೆ ಮರಳುತ್ತಿದೆ.

ಈಗಷ್ಟೇ ಎಚ್ಚೆತ್ತುಕೊಳ್ಳುತ್ತಿರುವ ಜನ ಜೀವನದ ಮೇಲೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಆಸ್ತಿ ತೆರಿಗೆಯನ್ನು ದ್ವಿಪಟ್ಟು ಹೆಚ್ಚು ಮಾಡಿರುವುದು ಆಸ್ತಿ ಮಾಲೀಕರ ಪಾಲಿಗೆ ಮತ್ತಷ್ಟು ಹೊರೆಯಾಗಿ ಪರಿಣಮಿಸಿದೆ ಎನ್ನಲಾಗುತ್ತಿದೆ. ಈ ಕುರಿತು ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೋ ಮುಂದಿನ ದಿನಗಳಲ್ಲಿ ತಿಳಿಯಲಿದೆ.


ಇದನ್ನೂ ಓದಿ: ಸಿಂಧನೂರು: ಒಕ್ಕೂಟ ಸರ್ಕಾರದ ವಿರುದ್ದ ‘ರೈತಪರ ಹೋರಾಟ ಸಮಿತಿ’ಯಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...