Homeಕರ್ನಾಟಕಬೆಂಗಳೂರಿಗರಿಗೆ ಆಘಾತ: ಆಸ್ತಿ ತೆರಿಗೆ ಎರಡು ಪಟ್ಟು ಏರಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

ಬೆಂಗಳೂರಿಗರಿಗೆ ಆಘಾತ: ಆಸ್ತಿ ತೆರಿಗೆ ಎರಡು ಪಟ್ಟು ಏರಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

- Advertisement -
- Advertisement -

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಬೆಂಗಳೂರಿನಲ್ಲಿ ಆಸ್ತಿ ಹೊಂದಿರುವವರಿಗೆ ದಿಢೀರ್ ಆಘಾತ ನೀಡಿದ್ದು, ಆಸ್ತಿ ತೆರಿಗೆ ಹಣವನ್ನು ಎರಡು ಪಟ್ಟು ಏರಿಸಿದೆ. ಈ ನಿಯಮದಿಂದ ನಗರದಲ್ಲಿ ವಾಸಿಸುವ ಕನಿಷ್ಟ 1 ಲಕ್ಷ ಜನರಿಗೆ ಭಾರೀ ಹೊರೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಭಿವೃದ್ಧಿ ಪ್ರಾಧಿಕಾರದ ಈ ನಿಯಮ ಈಗಷ್ಟೇ ಕೊರೊನಾ ಲಾಕ್​ಡೌನ್ ಪರಿಸ್ಥಿತಿಯಿಂದ ಸುಧಾರಿಸಿಕೊಳ್ಳುತ್ತಿದ್ದ ಬೆಂಗಳೂರಿಗರಿಗೆ ದೊಡ್ಡ ಆಘಾತ ನೀಡಿದೆ ಎನ್ನಲಾಗುತ್ತಿದೆ. ಹೆಚ್ಚುವರಿ ನಿರ್ವಹಣಾ ಶುಲ್ಕಗಳು ಏಕರೂಪದ್ದಾಗಿದ್ದರೂ, ಬಿಡಿಎ ನಿಯಮದಂತೆ ಸೈಟ್​ಗಳ ವಿನ್ಯಾಸಗಳು ಬದಲಾದಂತೆ ಆಸ್ತಿ ತೆರಿಗೆಯೂ ಬದಲಾಗುತ್ತದೆ. ಇದು ನಿವೇಶನ ಹೊಂದಿರುವ ಮಾಲೀಕರ ಮೇಲೆ ಆರ್ಥಿಕವಾಗಿ ಪರಿಣಾಮ ಬೀರಲಿದೆ.

ಉದಾಹರಣೆಗೆ, ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲಿ ಆಸ್ತಿ ಹೊಂದಿದ್ದವರು 2020ರಲ್ಲಿ 838 ರೂ. ಹಣವನ್ನು ಆಸ್ತಿ ತೆರಿಗೆ ರೂಪದಲ್ಲಿ ಪಾವತಿ ಮಾಡುತ್ತಿದ್ದರು. ಈಗ ಅದೇ ಆಸ್ತಿಗೆ ಈಗ 3233 ರೂ.ಗಳನ್ನು ಆಸ್ತಿ ತೆರಿಗೆ  ಪಾವತಿ ಮಾಡಬೇಕಿದೆ. ಇದು ಕನಿಷ್ಟ ಶೇ.286ರಷ್ಟು ಅಧಿಕ ಎಂದು ಅಂದಾಜಿಸಲಾಗಿದೆ. ಅಂಜನಾಪುರ ಲೇಔಟ್​ನಲ್ಲಿ 40 ಅಡಿ x 60 ಅಡಿ ಸೈಟ್ ಮಾಲೀಕರು ಕಳೆದ ವರ್ಷದವರೆಗೆ 3,616 ರೂ. ತೆರಿಗೆ ಪಾವತಿ ಮಾಡುತ್ತಿದ್ದರು, ಅದರ ಪ್ರಮಾಣ ಈಗ 6,016 ರೂಪಾಯಿಗೆ ಏರಿಕೆ ಮಾಡಲಾಗಿದೆ.

ಇದನ್ನೂ ಓದಿ: ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ ಚೇತನ್

ಬೆಂಗಳೂರಿನ ಅನೇಕ ಲೇಔಟ್​ಗಳಲ್ಲಿ ಬಿಬಿಎಂಪಿ ಮತ್ತು ಬಿಡಿಎ ಇಲಾಳೆಗಳು ಸರಿಯಾದ ರಸ್ತೆ, ಫುಟ್​ಪಾತ್, ಪೈಪ್​ಲೈನ್​ಗಳು, ನೈಮರ್ಲ್ಯ ಸುಧಾರಣೆ ಮತ್ತು ಪಾರ್ಕ್​ಗಳನ್ನೇ ನಿರ್ಮಿಸಿಲ್ಲ. ಕುಡಿಯುವ ನೀರಿನಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ. ಇಂತಹ ಸಮಯದಲ್ಲಿ ತೆರಿಗೆಯನ್ನು ಈ ಪ್ರಮಾಣದಲ್ಲಿ ಏರಿಸಿರುವುದು, ನಿರ್ವಹಣಾ ಶುಲ್ಕವನ್ನು ಹೆಚ್ಚಿಸಿರುವುದು ಅನೇಕ ಸೈಟ್ ಮಾಲೀಕರ ಅಸಮಾಧಾನಕ್ಕೆ ಕಾರಣವಾಗಿದೆ.

ಬಿಡಿಎ, ಬಿಬಿಎಂಪಿ ಸೇರಿದಂತೆ ಇತರೆ ಸಾರ್ವಜನಿಕ ಸಂಸ್ಥೆಗಳ ನಿಯಮದಂತೆ ಶೇ.15ರ ವರೆಗೆ ಮಾತ್ರ ಶುಲ್ಕವನ್ನು ಏರಿಸುವ ಹಕ್ಕನ್ನು ಹೊಂದಿವೆ. ಹೀಗಾಗಿ ಸೈಟ್ ಮಾಲೀಕರು ಬಿಡಿಎ ರೇರಾ ಮತ್ತು ರಾಜ್ಯ ಸರ್ಕಾರಕ್ಕೆ ದೂರು ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಕೊರೊನಾ ಲಾಕ್​ಡೌನ್‌ನ ನಿರ್ಬಂಧಗಳನ್ನು​ ತೆಗೆಯಲಾಗುತ್ತಿದ್ದು, ಜನ ಜೀವನ, ವ್ಯಾಪಾರ-ವಹಿವಾಟು ಸಹಜ ಸ್ಥಿತಿಗೆ ಮರಳುತ್ತಿದೆ.

ಈಗಷ್ಟೇ ಎಚ್ಚೆತ್ತುಕೊಳ್ಳುತ್ತಿರುವ ಜನ ಜೀವನದ ಮೇಲೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಆಸ್ತಿ ತೆರಿಗೆಯನ್ನು ದ್ವಿಪಟ್ಟು ಹೆಚ್ಚು ಮಾಡಿರುವುದು ಆಸ್ತಿ ಮಾಲೀಕರ ಪಾಲಿಗೆ ಮತ್ತಷ್ಟು ಹೊರೆಯಾಗಿ ಪರಿಣಮಿಸಿದೆ ಎನ್ನಲಾಗುತ್ತಿದೆ. ಈ ಕುರಿತು ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೋ ಮುಂದಿನ ದಿನಗಳಲ್ಲಿ ತಿಳಿಯಲಿದೆ.


ಇದನ್ನೂ ಓದಿ: ಸಿಂಧನೂರು: ಒಕ್ಕೂಟ ಸರ್ಕಾರದ ವಿರುದ್ದ ‘ರೈತಪರ ಹೋರಾಟ ಸಮಿತಿ’ಯಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...