Homeಕರ್ನಾಟಕಬೆಂಗಳೂರಿಗರಿಗೆ ಆಘಾತ: ಆಸ್ತಿ ತೆರಿಗೆ ಎರಡು ಪಟ್ಟು ಏರಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

ಬೆಂಗಳೂರಿಗರಿಗೆ ಆಘಾತ: ಆಸ್ತಿ ತೆರಿಗೆ ಎರಡು ಪಟ್ಟು ಏರಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

- Advertisement -
- Advertisement -

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಬೆಂಗಳೂರಿನಲ್ಲಿ ಆಸ್ತಿ ಹೊಂದಿರುವವರಿಗೆ ದಿಢೀರ್ ಆಘಾತ ನೀಡಿದ್ದು, ಆಸ್ತಿ ತೆರಿಗೆ ಹಣವನ್ನು ಎರಡು ಪಟ್ಟು ಏರಿಸಿದೆ. ಈ ನಿಯಮದಿಂದ ನಗರದಲ್ಲಿ ವಾಸಿಸುವ ಕನಿಷ್ಟ 1 ಲಕ್ಷ ಜನರಿಗೆ ಭಾರೀ ಹೊರೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಭಿವೃದ್ಧಿ ಪ್ರಾಧಿಕಾರದ ಈ ನಿಯಮ ಈಗಷ್ಟೇ ಕೊರೊನಾ ಲಾಕ್​ಡೌನ್ ಪರಿಸ್ಥಿತಿಯಿಂದ ಸುಧಾರಿಸಿಕೊಳ್ಳುತ್ತಿದ್ದ ಬೆಂಗಳೂರಿಗರಿಗೆ ದೊಡ್ಡ ಆಘಾತ ನೀಡಿದೆ ಎನ್ನಲಾಗುತ್ತಿದೆ. ಹೆಚ್ಚುವರಿ ನಿರ್ವಹಣಾ ಶುಲ್ಕಗಳು ಏಕರೂಪದ್ದಾಗಿದ್ದರೂ, ಬಿಡಿಎ ನಿಯಮದಂತೆ ಸೈಟ್​ಗಳ ವಿನ್ಯಾಸಗಳು ಬದಲಾದಂತೆ ಆಸ್ತಿ ತೆರಿಗೆಯೂ ಬದಲಾಗುತ್ತದೆ. ಇದು ನಿವೇಶನ ಹೊಂದಿರುವ ಮಾಲೀಕರ ಮೇಲೆ ಆರ್ಥಿಕವಾಗಿ ಪರಿಣಾಮ ಬೀರಲಿದೆ.

ಉದಾಹರಣೆಗೆ, ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲಿ ಆಸ್ತಿ ಹೊಂದಿದ್ದವರು 2020ರಲ್ಲಿ 838 ರೂ. ಹಣವನ್ನು ಆಸ್ತಿ ತೆರಿಗೆ ರೂಪದಲ್ಲಿ ಪಾವತಿ ಮಾಡುತ್ತಿದ್ದರು. ಈಗ ಅದೇ ಆಸ್ತಿಗೆ ಈಗ 3233 ರೂ.ಗಳನ್ನು ಆಸ್ತಿ ತೆರಿಗೆ  ಪಾವತಿ ಮಾಡಬೇಕಿದೆ. ಇದು ಕನಿಷ್ಟ ಶೇ.286ರಷ್ಟು ಅಧಿಕ ಎಂದು ಅಂದಾಜಿಸಲಾಗಿದೆ. ಅಂಜನಾಪುರ ಲೇಔಟ್​ನಲ್ಲಿ 40 ಅಡಿ x 60 ಅಡಿ ಸೈಟ್ ಮಾಲೀಕರು ಕಳೆದ ವರ್ಷದವರೆಗೆ 3,616 ರೂ. ತೆರಿಗೆ ಪಾವತಿ ಮಾಡುತ್ತಿದ್ದರು, ಅದರ ಪ್ರಮಾಣ ಈಗ 6,016 ರೂಪಾಯಿಗೆ ಏರಿಕೆ ಮಾಡಲಾಗಿದೆ.

ಇದನ್ನೂ ಓದಿ: ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ ಚೇತನ್

ಬೆಂಗಳೂರಿನ ಅನೇಕ ಲೇಔಟ್​ಗಳಲ್ಲಿ ಬಿಬಿಎಂಪಿ ಮತ್ತು ಬಿಡಿಎ ಇಲಾಳೆಗಳು ಸರಿಯಾದ ರಸ್ತೆ, ಫುಟ್​ಪಾತ್, ಪೈಪ್​ಲೈನ್​ಗಳು, ನೈಮರ್ಲ್ಯ ಸುಧಾರಣೆ ಮತ್ತು ಪಾರ್ಕ್​ಗಳನ್ನೇ ನಿರ್ಮಿಸಿಲ್ಲ. ಕುಡಿಯುವ ನೀರಿನಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ. ಇಂತಹ ಸಮಯದಲ್ಲಿ ತೆರಿಗೆಯನ್ನು ಈ ಪ್ರಮಾಣದಲ್ಲಿ ಏರಿಸಿರುವುದು, ನಿರ್ವಹಣಾ ಶುಲ್ಕವನ್ನು ಹೆಚ್ಚಿಸಿರುವುದು ಅನೇಕ ಸೈಟ್ ಮಾಲೀಕರ ಅಸಮಾಧಾನಕ್ಕೆ ಕಾರಣವಾಗಿದೆ.

ಬಿಡಿಎ, ಬಿಬಿಎಂಪಿ ಸೇರಿದಂತೆ ಇತರೆ ಸಾರ್ವಜನಿಕ ಸಂಸ್ಥೆಗಳ ನಿಯಮದಂತೆ ಶೇ.15ರ ವರೆಗೆ ಮಾತ್ರ ಶುಲ್ಕವನ್ನು ಏರಿಸುವ ಹಕ್ಕನ್ನು ಹೊಂದಿವೆ. ಹೀಗಾಗಿ ಸೈಟ್ ಮಾಲೀಕರು ಬಿಡಿಎ ರೇರಾ ಮತ್ತು ರಾಜ್ಯ ಸರ್ಕಾರಕ್ಕೆ ದೂರು ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಕೊರೊನಾ ಲಾಕ್​ಡೌನ್‌ನ ನಿರ್ಬಂಧಗಳನ್ನು​ ತೆಗೆಯಲಾಗುತ್ತಿದ್ದು, ಜನ ಜೀವನ, ವ್ಯಾಪಾರ-ವಹಿವಾಟು ಸಹಜ ಸ್ಥಿತಿಗೆ ಮರಳುತ್ತಿದೆ.

ಈಗಷ್ಟೇ ಎಚ್ಚೆತ್ತುಕೊಳ್ಳುತ್ತಿರುವ ಜನ ಜೀವನದ ಮೇಲೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಆಸ್ತಿ ತೆರಿಗೆಯನ್ನು ದ್ವಿಪಟ್ಟು ಹೆಚ್ಚು ಮಾಡಿರುವುದು ಆಸ್ತಿ ಮಾಲೀಕರ ಪಾಲಿಗೆ ಮತ್ತಷ್ಟು ಹೊರೆಯಾಗಿ ಪರಿಣಮಿಸಿದೆ ಎನ್ನಲಾಗುತ್ತಿದೆ. ಈ ಕುರಿತು ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೋ ಮುಂದಿನ ದಿನಗಳಲ್ಲಿ ತಿಳಿಯಲಿದೆ.


ಇದನ್ನೂ ಓದಿ: ಸಿಂಧನೂರು: ಒಕ್ಕೂಟ ಸರ್ಕಾರದ ವಿರುದ್ದ ‘ರೈತಪರ ಹೋರಾಟ ಸಮಿತಿ’ಯಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...