Homeಕರ್ನಾಟಕಬೆಂಗಳೂರಿಗರಿಗೆ ಆಘಾತ: ಆಸ್ತಿ ತೆರಿಗೆ ಎರಡು ಪಟ್ಟು ಏರಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

ಬೆಂಗಳೂರಿಗರಿಗೆ ಆಘಾತ: ಆಸ್ತಿ ತೆರಿಗೆ ಎರಡು ಪಟ್ಟು ಏರಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

- Advertisement -
- Advertisement -

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಬೆಂಗಳೂರಿನಲ್ಲಿ ಆಸ್ತಿ ಹೊಂದಿರುವವರಿಗೆ ದಿಢೀರ್ ಆಘಾತ ನೀಡಿದ್ದು, ಆಸ್ತಿ ತೆರಿಗೆ ಹಣವನ್ನು ಎರಡು ಪಟ್ಟು ಏರಿಸಿದೆ. ಈ ನಿಯಮದಿಂದ ನಗರದಲ್ಲಿ ವಾಸಿಸುವ ಕನಿಷ್ಟ 1 ಲಕ್ಷ ಜನರಿಗೆ ಭಾರೀ ಹೊರೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಭಿವೃದ್ಧಿ ಪ್ರಾಧಿಕಾರದ ಈ ನಿಯಮ ಈಗಷ್ಟೇ ಕೊರೊನಾ ಲಾಕ್​ಡೌನ್ ಪರಿಸ್ಥಿತಿಯಿಂದ ಸುಧಾರಿಸಿಕೊಳ್ಳುತ್ತಿದ್ದ ಬೆಂಗಳೂರಿಗರಿಗೆ ದೊಡ್ಡ ಆಘಾತ ನೀಡಿದೆ ಎನ್ನಲಾಗುತ್ತಿದೆ. ಹೆಚ್ಚುವರಿ ನಿರ್ವಹಣಾ ಶುಲ್ಕಗಳು ಏಕರೂಪದ್ದಾಗಿದ್ದರೂ, ಬಿಡಿಎ ನಿಯಮದಂತೆ ಸೈಟ್​ಗಳ ವಿನ್ಯಾಸಗಳು ಬದಲಾದಂತೆ ಆಸ್ತಿ ತೆರಿಗೆಯೂ ಬದಲಾಗುತ್ತದೆ. ಇದು ನಿವೇಶನ ಹೊಂದಿರುವ ಮಾಲೀಕರ ಮೇಲೆ ಆರ್ಥಿಕವಾಗಿ ಪರಿಣಾಮ ಬೀರಲಿದೆ.

ಉದಾಹರಣೆಗೆ, ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲಿ ಆಸ್ತಿ ಹೊಂದಿದ್ದವರು 2020ರಲ್ಲಿ 838 ರೂ. ಹಣವನ್ನು ಆಸ್ತಿ ತೆರಿಗೆ ರೂಪದಲ್ಲಿ ಪಾವತಿ ಮಾಡುತ್ತಿದ್ದರು. ಈಗ ಅದೇ ಆಸ್ತಿಗೆ ಈಗ 3233 ರೂ.ಗಳನ್ನು ಆಸ್ತಿ ತೆರಿಗೆ  ಪಾವತಿ ಮಾಡಬೇಕಿದೆ. ಇದು ಕನಿಷ್ಟ ಶೇ.286ರಷ್ಟು ಅಧಿಕ ಎಂದು ಅಂದಾಜಿಸಲಾಗಿದೆ. ಅಂಜನಾಪುರ ಲೇಔಟ್​ನಲ್ಲಿ 40 ಅಡಿ x 60 ಅಡಿ ಸೈಟ್ ಮಾಲೀಕರು ಕಳೆದ ವರ್ಷದವರೆಗೆ 3,616 ರೂ. ತೆರಿಗೆ ಪಾವತಿ ಮಾಡುತ್ತಿದ್ದರು, ಅದರ ಪ್ರಮಾಣ ಈಗ 6,016 ರೂಪಾಯಿಗೆ ಏರಿಕೆ ಮಾಡಲಾಗಿದೆ.

ಇದನ್ನೂ ಓದಿ: ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ ಚೇತನ್

ಬೆಂಗಳೂರಿನ ಅನೇಕ ಲೇಔಟ್​ಗಳಲ್ಲಿ ಬಿಬಿಎಂಪಿ ಮತ್ತು ಬಿಡಿಎ ಇಲಾಳೆಗಳು ಸರಿಯಾದ ರಸ್ತೆ, ಫುಟ್​ಪಾತ್, ಪೈಪ್​ಲೈನ್​ಗಳು, ನೈಮರ್ಲ್ಯ ಸುಧಾರಣೆ ಮತ್ತು ಪಾರ್ಕ್​ಗಳನ್ನೇ ನಿರ್ಮಿಸಿಲ್ಲ. ಕುಡಿಯುವ ನೀರಿನಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ. ಇಂತಹ ಸಮಯದಲ್ಲಿ ತೆರಿಗೆಯನ್ನು ಈ ಪ್ರಮಾಣದಲ್ಲಿ ಏರಿಸಿರುವುದು, ನಿರ್ವಹಣಾ ಶುಲ್ಕವನ್ನು ಹೆಚ್ಚಿಸಿರುವುದು ಅನೇಕ ಸೈಟ್ ಮಾಲೀಕರ ಅಸಮಾಧಾನಕ್ಕೆ ಕಾರಣವಾಗಿದೆ.

ಬಿಡಿಎ, ಬಿಬಿಎಂಪಿ ಸೇರಿದಂತೆ ಇತರೆ ಸಾರ್ವಜನಿಕ ಸಂಸ್ಥೆಗಳ ನಿಯಮದಂತೆ ಶೇ.15ರ ವರೆಗೆ ಮಾತ್ರ ಶುಲ್ಕವನ್ನು ಏರಿಸುವ ಹಕ್ಕನ್ನು ಹೊಂದಿವೆ. ಹೀಗಾಗಿ ಸೈಟ್ ಮಾಲೀಕರು ಬಿಡಿಎ ರೇರಾ ಮತ್ತು ರಾಜ್ಯ ಸರ್ಕಾರಕ್ಕೆ ದೂರು ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಕೊರೊನಾ ಲಾಕ್​ಡೌನ್‌ನ ನಿರ್ಬಂಧಗಳನ್ನು​ ತೆಗೆಯಲಾಗುತ್ತಿದ್ದು, ಜನ ಜೀವನ, ವ್ಯಾಪಾರ-ವಹಿವಾಟು ಸಹಜ ಸ್ಥಿತಿಗೆ ಮರಳುತ್ತಿದೆ.

ಈಗಷ್ಟೇ ಎಚ್ಚೆತ್ತುಕೊಳ್ಳುತ್ತಿರುವ ಜನ ಜೀವನದ ಮೇಲೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಆಸ್ತಿ ತೆರಿಗೆಯನ್ನು ದ್ವಿಪಟ್ಟು ಹೆಚ್ಚು ಮಾಡಿರುವುದು ಆಸ್ತಿ ಮಾಲೀಕರ ಪಾಲಿಗೆ ಮತ್ತಷ್ಟು ಹೊರೆಯಾಗಿ ಪರಿಣಮಿಸಿದೆ ಎನ್ನಲಾಗುತ್ತಿದೆ. ಈ ಕುರಿತು ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೋ ಮುಂದಿನ ದಿನಗಳಲ್ಲಿ ತಿಳಿಯಲಿದೆ.


ಇದನ್ನೂ ಓದಿ: ಸಿಂಧನೂರು: ಒಕ್ಕೂಟ ಸರ್ಕಾರದ ವಿರುದ್ದ ‘ರೈತಪರ ಹೋರಾಟ ಸಮಿತಿ’ಯಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...