Homeಕರ್ನಾಟಕಬೆಂಗಳೂರು ಪ್ರವಾಹ | ಸ್ಥಳಾಂತರಕ್ಕೆ ನಿರಾಕರಿಸಿದ 20 ಮನೆಯ ಬಾಗಿಲು ಒಡೆದು ತೆರವುಗೊಳಿಸಲು ಡಿಸಿಎಂ ಸೂಚನೆ

ಬೆಂಗಳೂರು ಪ್ರವಾಹ | ಸ್ಥಳಾಂತರಕ್ಕೆ ನಿರಾಕರಿಸಿದ 20 ಮನೆಯ ಬಾಗಿಲು ಒಡೆದು ತೆರವುಗೊಳಿಸಲು ಡಿಸಿಎಂ ಸೂಚನೆ

- Advertisement -
- Advertisement -

ಬೆಂಗಳೂರಿನ ಭಾರಿ ಮಳೆಗೆ ಜಲಾವೃತಗೊಂಡಿರುವ ನಗರದ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್‌ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರವಾಹವಿದ್ದರೂ ಅಪಾರ್ಟ್‌ಮೆಂಟ್‌ಗೆ ಬೀಗ ಹಾಕಿ ಮನೆಯೊಳಗೆ ಇರುವವರನ್ನು ಬಾಗಿಲು ಒಡೆದು ಅವರನ್ನು ಅಲ್ಲಿಂದ ತೆರವುಗೊಳಿಸುವಂತೆ ಆದೇಶಿಸಿದ್ದಾರೆ. ಸ್ಥಳಾಂತರಕ್ಕೆ ನಿರಾಕರಿಸಿದ

ಭಾರಿ ಮಳೆಯ ಕಾರಣಕ್ಕೆ ಪ್ರವಾಹ ಇದ್ದರೂ ಅಪಾರ್ಟ್‌ಮೆಂಟ್‌ನಲ್ಲಿ ಸುಮಾರು 20 ಫ್ಲ್ಯಾಟ್‌ಗಳ ಮಾಲೀಕರು ಒಳಗೆ ಬೀಗ ಜಡಿದು ತೆರವಿಗೆ ನಿರಾಕರಿಸಿದ್ದರಿಂದ ಬಾಗಿಲು ಒಡೆದು ಒಳನುಗ್ಗುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಡಿಸಿಎಂ ಸೂಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, “95%ದಷ್ಟು ತೆರವು ಕಾರ್ಯ ಪೂರ್ಣಗೊಂಡಿದ್ದು, 5%ದಷ್ಟು ಮಾತ್ರ ಬಾಕಿ ಇದೆ. 603 ಫ್ಲಾಟ್‌ಗಳಲ್ಲಿ ಸಾವಿರಾರು ಜನರು ವಾಸಿಸುತ್ತಿದ್ದಾರೆ. ಅವರಲ್ಲಿ ಹೆಚ್ಚಿನವರು ಕೇಂದ್ರ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಗಳಾಗಿವೆ. ಹೆಚ್ಚಿನವರನ್ನು ಸ್ಥಳಾಂತರಿಸಲಾಗಿದೆ” ಎಂದು ಅವರು ಹೇಳಿದ್ದಾರೆ. ಸ್ಥಳಾಂತರಕ್ಕೆ ನಿರಾಕರಿಸಿದ

ಅಪಾರ್ಟ್‌ಮೆಂಟ್‌ನ ಆಡಳಿತದೊಂದಿಗೆ ಮಾತುಕತೆ ನಡೆಸಿ ತುರ್ತು ಕಾರ್ಯಾಚರಣೆಗಾಗಿ ಬಿಬಿಎಂಪಿ ಅಪಾರ್ಟ್ಮೆಂಟ್ ಅನ್ನು ಸ್ವಾಧೀನಪಡಿಸಿಕೊಂಡಿದೆ ಎಂದು ಅವರು ಹೇಳಿದ್ದಾರೆ.

“ನೀರು, ವಿದ್ಯುತ್ ಮತ್ತು ಆಹಾರ ಇಲ್ಲದೆ, ಮನೆಯೊಳಗೆ ಬೀಗ ಹಾಕಿಕೊಂಡಿರುವ ಸುಮಾರು 20 ಫ್ಲ್ಯಾಟ್ ಇವೆ. ಅದರಲ್ಲಿರುವ ಜನರ ಆರೋಗ್ಯಕ್ಕೆ ಅಪಾಯ ಇರುವುದರಿಂದ ಒಕ್ಕಲಿಗರ ಸಂಘ ಮತ್ತು ಪೊಲೀಸರ ನೆರವು ಪಡೆದು ಬಾಗಿಲು ಒಡೆದು ಅವರನ್ನು ರಕ್ಷಿಸಲು ಬಿಬಿಎಂಪಿಗೆ ಆದೇಶ ನೀಡಲಾಗಿದೆ’’ ಎಂದು ಶಿವಕುಮಾರ್ ಹೇಳಿದ್ದಾರೆ.

ನಿವಾಸಿಗಳು ತಮ್ಮ ಮನೆಗಳೊಂದಿಗೆ ಇರುವ ಭಾವನಾತ್ಮಕ ಸಂಬಂಧದ ಕಾರಣಕ್ಕೆ ಅದರಿಂದ ಹೊರಗೆ ಬರಲು ನಿರಾಕರಿಸಿರಬಹುದು, ಆದರೆ ಅವರ ಸುರಕ್ಷತೆಯೂ ನಮಗೆ ಮುಖ್ಯ ಎಂದು ಅವರು ಹೇಳಿದ್ದಾರೆ. ಅವರನ್ನು ಒಂದು ವಾರದವರೆಗೆ ಹತ್ತಿರದ ಹೋಟೆಲ್‌ಗಳಲ್ಲಿ ಇರಿಸಲಾಗುವುದು ಮತ್ತು ಪರಿಸ್ಥಿತಿ ಸಹಜವಾದ ನಂತರ ಅವರನ್ನು ತಮ್ಮ ಮನೆಗಳಿಗೆ ಹಿಂತಿರುಗುವಂತೆ ಕೇಳಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.

ಇದೇ ವೇಳೆ ಅವರು, ಪ್ರವಾಹದ ಮೂಲವನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಈ ಪ್ರದೇಶವು ಮೊದಲು ಜೌಗು ಪ್ರದೇಶವಾಗಿತ್ತು ಮತ್ತು ಹತ್ತಿರದ ಕೆರೆಯ ಬಫರ್ ವಲಯವಾಗಿತ್ತು. ಅಗತ್ಯ ಕ್ರಮ ಕೈಗೊಂಡು ಪ್ರವಾಹಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು. ಯಾವುದೇ ಪ್ರಾಣ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಡಿಸಿಎಂ ಹೇಳಿದ್ದಾರೆ.

ಎನ್‌ಡಿಎಂಎಫ್‌ನೊಂದಿಗೆ ಮಳೆನೀರು ಚರಂಡಿಗಳನ್ನು ಸಂಪೂರ್ಣವಾಗಿ ಮರುವಿನ್ಯಾಸಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು, ಇದಕ್ಕಾಗಿ ವಿಶ್ವಬ್ಯಾಂಕ್‌ನಿಂದ ಹಣವನ್ನು ಕೋರಲಾಗುವುದು ಎಂದು ಅವರು ಒತ್ತಿ ಹೇಳಿದ್ದಾರೆ.

ಈ ಮರುವಿನ್ಯಾಸವನ್ನು ನಗರದಾದ್ಯಂತ ದೊಡ್ಡ ಪ್ರಮಾಣದಲ್ಲಿ ಮಾಡಗುವುದು ಎಂದ ಅವರು, “ನಾವು ಕೆರೆಗಳನ್ನು ಪುನಃಸ್ಥಾಪಿಸುತ್ತೇವೆ ಮತ್ತು ಅಡೆತಡೆಗಳನ್ನು ತೆಗೆದುಹಾಕುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: “ನಿಮಗೆ ಮದ್ರಸಾ ಮೇಲೆ ಮಾತ್ರ ಏಕೆ ಕಣ್ಣು”? ಮಕ್ಕಳ ಹಕ್ಕುಗಳ ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

“ನಿಮಗೆ ಮದ್ರಸಾ ಮೇಲೆ ಮಾತ್ರ ಏಕೆ ಕಣ್ಣು”? ಮಕ್ಕಳ ಹಕ್ಕುಗಳ ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...