Homeಕರ್ನಾಟಕಬೆಂಗಳೂರು ಪ್ರವಾಹ | ಸ್ಥಳಾಂತರಕ್ಕೆ ನಿರಾಕರಿಸಿದ 20 ಮನೆಯ ಬಾಗಿಲು ಒಡೆದು ತೆರವುಗೊಳಿಸಲು ಡಿಸಿಎಂ ಸೂಚನೆ

ಬೆಂಗಳೂರು ಪ್ರವಾಹ | ಸ್ಥಳಾಂತರಕ್ಕೆ ನಿರಾಕರಿಸಿದ 20 ಮನೆಯ ಬಾಗಿಲು ಒಡೆದು ತೆರವುಗೊಳಿಸಲು ಡಿಸಿಎಂ ಸೂಚನೆ

- Advertisement -
- Advertisement -

ಬೆಂಗಳೂರಿನ ಭಾರಿ ಮಳೆಗೆ ಜಲಾವೃತಗೊಂಡಿರುವ ನಗರದ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್‌ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರವಾಹವಿದ್ದರೂ ಅಪಾರ್ಟ್‌ಮೆಂಟ್‌ಗೆ ಬೀಗ ಹಾಕಿ ಮನೆಯೊಳಗೆ ಇರುವವರನ್ನು ಬಾಗಿಲು ಒಡೆದು ಅವರನ್ನು ಅಲ್ಲಿಂದ ತೆರವುಗೊಳಿಸುವಂತೆ ಆದೇಶಿಸಿದ್ದಾರೆ. ಸ್ಥಳಾಂತರಕ್ಕೆ ನಿರಾಕರಿಸಿದ

ಭಾರಿ ಮಳೆಯ ಕಾರಣಕ್ಕೆ ಪ್ರವಾಹ ಇದ್ದರೂ ಅಪಾರ್ಟ್‌ಮೆಂಟ್‌ನಲ್ಲಿ ಸುಮಾರು 20 ಫ್ಲ್ಯಾಟ್‌ಗಳ ಮಾಲೀಕರು ಒಳಗೆ ಬೀಗ ಜಡಿದು ತೆರವಿಗೆ ನಿರಾಕರಿಸಿದ್ದರಿಂದ ಬಾಗಿಲು ಒಡೆದು ಒಳನುಗ್ಗುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಡಿಸಿಎಂ ಸೂಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, “95%ದಷ್ಟು ತೆರವು ಕಾರ್ಯ ಪೂರ್ಣಗೊಂಡಿದ್ದು, 5%ದಷ್ಟು ಮಾತ್ರ ಬಾಕಿ ಇದೆ. 603 ಫ್ಲಾಟ್‌ಗಳಲ್ಲಿ ಸಾವಿರಾರು ಜನರು ವಾಸಿಸುತ್ತಿದ್ದಾರೆ. ಅವರಲ್ಲಿ ಹೆಚ್ಚಿನವರು ಕೇಂದ್ರ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಗಳಾಗಿವೆ. ಹೆಚ್ಚಿನವರನ್ನು ಸ್ಥಳಾಂತರಿಸಲಾಗಿದೆ” ಎಂದು ಅವರು ಹೇಳಿದ್ದಾರೆ. ಸ್ಥಳಾಂತರಕ್ಕೆ ನಿರಾಕರಿಸಿದ

ಅಪಾರ್ಟ್‌ಮೆಂಟ್‌ನ ಆಡಳಿತದೊಂದಿಗೆ ಮಾತುಕತೆ ನಡೆಸಿ ತುರ್ತು ಕಾರ್ಯಾಚರಣೆಗಾಗಿ ಬಿಬಿಎಂಪಿ ಅಪಾರ್ಟ್ಮೆಂಟ್ ಅನ್ನು ಸ್ವಾಧೀನಪಡಿಸಿಕೊಂಡಿದೆ ಎಂದು ಅವರು ಹೇಳಿದ್ದಾರೆ.

“ನೀರು, ವಿದ್ಯುತ್ ಮತ್ತು ಆಹಾರ ಇಲ್ಲದೆ, ಮನೆಯೊಳಗೆ ಬೀಗ ಹಾಕಿಕೊಂಡಿರುವ ಸುಮಾರು 20 ಫ್ಲ್ಯಾಟ್ ಇವೆ. ಅದರಲ್ಲಿರುವ ಜನರ ಆರೋಗ್ಯಕ್ಕೆ ಅಪಾಯ ಇರುವುದರಿಂದ ಒಕ್ಕಲಿಗರ ಸಂಘ ಮತ್ತು ಪೊಲೀಸರ ನೆರವು ಪಡೆದು ಬಾಗಿಲು ಒಡೆದು ಅವರನ್ನು ರಕ್ಷಿಸಲು ಬಿಬಿಎಂಪಿಗೆ ಆದೇಶ ನೀಡಲಾಗಿದೆ’’ ಎಂದು ಶಿವಕುಮಾರ್ ಹೇಳಿದ್ದಾರೆ.

ನಿವಾಸಿಗಳು ತಮ್ಮ ಮನೆಗಳೊಂದಿಗೆ ಇರುವ ಭಾವನಾತ್ಮಕ ಸಂಬಂಧದ ಕಾರಣಕ್ಕೆ ಅದರಿಂದ ಹೊರಗೆ ಬರಲು ನಿರಾಕರಿಸಿರಬಹುದು, ಆದರೆ ಅವರ ಸುರಕ್ಷತೆಯೂ ನಮಗೆ ಮುಖ್ಯ ಎಂದು ಅವರು ಹೇಳಿದ್ದಾರೆ. ಅವರನ್ನು ಒಂದು ವಾರದವರೆಗೆ ಹತ್ತಿರದ ಹೋಟೆಲ್‌ಗಳಲ್ಲಿ ಇರಿಸಲಾಗುವುದು ಮತ್ತು ಪರಿಸ್ಥಿತಿ ಸಹಜವಾದ ನಂತರ ಅವರನ್ನು ತಮ್ಮ ಮನೆಗಳಿಗೆ ಹಿಂತಿರುಗುವಂತೆ ಕೇಳಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.

ಇದೇ ವೇಳೆ ಅವರು, ಪ್ರವಾಹದ ಮೂಲವನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಈ ಪ್ರದೇಶವು ಮೊದಲು ಜೌಗು ಪ್ರದೇಶವಾಗಿತ್ತು ಮತ್ತು ಹತ್ತಿರದ ಕೆರೆಯ ಬಫರ್ ವಲಯವಾಗಿತ್ತು. ಅಗತ್ಯ ಕ್ರಮ ಕೈಗೊಂಡು ಪ್ರವಾಹಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು. ಯಾವುದೇ ಪ್ರಾಣ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಡಿಸಿಎಂ ಹೇಳಿದ್ದಾರೆ.

ಎನ್‌ಡಿಎಂಎಫ್‌ನೊಂದಿಗೆ ಮಳೆನೀರು ಚರಂಡಿಗಳನ್ನು ಸಂಪೂರ್ಣವಾಗಿ ಮರುವಿನ್ಯಾಸಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು, ಇದಕ್ಕಾಗಿ ವಿಶ್ವಬ್ಯಾಂಕ್‌ನಿಂದ ಹಣವನ್ನು ಕೋರಲಾಗುವುದು ಎಂದು ಅವರು ಒತ್ತಿ ಹೇಳಿದ್ದಾರೆ.

ಈ ಮರುವಿನ್ಯಾಸವನ್ನು ನಗರದಾದ್ಯಂತ ದೊಡ್ಡ ಪ್ರಮಾಣದಲ್ಲಿ ಮಾಡಗುವುದು ಎಂದ ಅವರು, “ನಾವು ಕೆರೆಗಳನ್ನು ಪುನಃಸ್ಥಾಪಿಸುತ್ತೇವೆ ಮತ್ತು ಅಡೆತಡೆಗಳನ್ನು ತೆಗೆದುಹಾಕುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: “ನಿಮಗೆ ಮದ್ರಸಾ ಮೇಲೆ ಮಾತ್ರ ಏಕೆ ಕಣ್ಣು”? ಮಕ್ಕಳ ಹಕ್ಕುಗಳ ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

“ನಿಮಗೆ ಮದ್ರಸಾ ಮೇಲೆ ಮಾತ್ರ ಏಕೆ ಕಣ್ಣು”? ಮಕ್ಕಳ ಹಕ್ಕುಗಳ ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...