Homeಕರ್ನಾಟಕಬೆಂಗಳೂರು: ಇನ್ನು ಮುಂದೆ ರಸ್ತೆ ಬದಿ ಪಾರ್ಕಿಂಗ್‌‌‌ಗೆ ಶುಲ್ಕ!

ಬೆಂಗಳೂರು: ಇನ್ನು ಮುಂದೆ ರಸ್ತೆ ಬದಿ ಪಾರ್ಕಿಂಗ್‌‌‌ಗೆ ಶುಲ್ಕ!

- Advertisement -
- Advertisement -

ಬೆಂಗಳೂರಿನಲ್ಲಿ ಪಾವತಿ ಪಾರ್ಕಿಂಗ್‌‌‌ ಅನ್ನು ಪರಿಚಯಿಸಲು ಟೆಂಡರ್‌ಗಳನ್ನು ಆಹ್ವಾನಿಸಲು ಬೃಹತ್‌‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಿದ್ಧವಾಗಿದೆ. 2021ರ ಫೆಬ್ರವರಿ 2 ರಂದು ರಾಜ್ಯ ಸರ್ಕಾರವು ಅನುಮೋದಿಸಿದ ಪಾರ್ಕಿಂಗ್ ನೀತಿಯ ಅಡಿಯಲ್ಲಿ, ನಗರವನ್ನು ಉಚಿತ ಪಾರ್ಕಿಂಗ್‌ನಿಂದ ಪಾವತಿಸಿದ ಪಾರ್ಕಿಂಗ್‌ ನಗರವಾಗಿ ರೂಪಿಸಲು ಹೊರಟಿದೆ. ಈ ಮೂಲಕ ವೈಯಕ್ತಿಕ ವಾಹನಗಳ ಬಳಕೆಯನ್ನು ಪರೋಕ್ಷವಾಗಿ ನಿರುತ್ಸಾಹಗೊಳಿಸುವ ಜವಾಬ್ದಾರಿಯನ್ನು ಬಿಬಿಎಂಪಿಗೆ ವಹಿಸಲಾಗಿದೆ.

ನಗರ ಭೂ ಸಾರಿಗೆ ನಿರ್ದೇಶನಾಲಯವು (DULT) ವಿವರವಾದ ಅಧ್ಯಯನದ ನಂತರ ಸಿದ್ಧಪಡಿಸಿದ ಮತ್ತು ಎಲ್ಲಾ ಎಂಟು ವಲಯಗಳಲ್ಲಿ ಜಾರಿಗೊಳಿಸುವ ಯೋಜನೆಯೊಂದಿಗೆ ಕನಿಷ್ಠ 188 ಕೋಟಿ ರೂ.ಗಳ ವಾರ್ಷಿಕ ಆದಾಯವನ್ನು ಗಳಿಸುವ ಉದ್ದೇಶವನ್ನು ಬಿಬಿಎಂಪಿ ಸಂಸ್ಥೆ ಹೊಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

DULT ನ ಅಧಿಕಾರಿಗಳು ದ್ವಿಚಕ್ರ ಮತ್ತು ನಾಲ್ಕು ಚಕ್ರಗಳ ಜೊತೆಗೆ, ಸೈಕಲ್‌ಗಳು, ಲೋಡ್-ಅನ್‌ಲೋಡಿಂಗ್ ಮತ್ತು ಆಟೋ ಸ್ಟ್ಯಾಂಡ್‌ಗಳಿಗೆ ಅನ್ವಯವಾಗುವ ಸ್ಥಳದಲ್ಲಿ ಪಾರ್ಕಿಂಗ್ ಸ್ಥಳವನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ ಬಿಬಿಎಂಪಿ

ಒಂದು ಅಥವಾ ಎರಡು ದಿನಗಳಲ್ಲಿ ಟೆಂಡರ್‌ಗಳು ಬಿಡ್ಡಿಂಗ್‌ಗೆ ಲಭ್ಯವಿರುತ್ತವೆ ಎಂದು ಬಿಬಿಎಂಪಿ ಮುಖ್ಯ ಇಂಜಿನಿಯರ್‌ ಬಿ.ಎಸ್. ಪ್ರಹ್ಲಾದ್ ಹೇಳಿದ್ದಾರೆ. ರಸ್ತೆಗಳನ್ನು ಮೂರು ವಿಭಾಗಗಳಾಗಿ ವಿಂಗಡಿಸಿದ ನಂತರ ಪಾರ್ಕಿಂಗ್ ಶುಲ್ಕವನ್ನು ನಿರ್ಧರಿಸಲಾಗಿದೆ ಎಂದು ಟ್ರಾಫಿಕ್ ಎಂಜಿನಿಯರಿಂಗ್ ಸೆಲ್ (ಟಿಇಸಿ) ಅಧಿಕಾರಿಗಳು ತಿಳಿಸಿದ್ದಾರೆ.

“ಭೂಮಿಯ ಮಾರುಕಟ್ಟೆ ಮೌಲ್ಯ ಮತ್ತು ಕ್ಯಾರೇಜ್‌ ವೇ ಅಗಲದ ಆಧಾರದ ಮೇಲೆ ರಸ್ತೆಗಳನ್ನು ಎ, ಬಿ ಮತ್ತು ಸಿ ಎಂದು ವರ್ಗೀಕರಿಸಲಾಗಿದೆ. ಸ್ಥಳದ ಲಭ್ಯತೆಯ ಆಧಾರದ ಮೇಲೆ ಪ್ರತಿಯೊಂದು ವಲಯಗಳಲ್ಲಿ ಪಾರ್ಕಿಂಗ್ ಸ್ಥಳವನ್ನು ಗುರುತಿಸಲಾಗಿದೆ” ಎಂದು ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ (TEC) ) ಹೆಚ್.ಎನ್. ಜಯಸಿಂಹ ಹೇಳಿದ್ದಾರೆ.

ಬೆಳಿಗ್ಗೆ 7 ರಿಂದ ರಾತ್ರಿ 10 ರವರೆಗೆ ದಿನಕ್ಕೆ 12 ರಿಂದ 15 ಗಂಟೆಗಳ ಕಾಲ ಪಾವತಿ ಪಾರ್ಕಿಂಗ್ ಜಾರಿಯಲ್ಲಿರುತ್ತದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಇದನ್ನೂ ಓದಿ: ರಾಜಕಾಲುವೆ ಒತ್ತುವರಿ: ಘಟಾನುಘಟಿ ಸಂಸ್ಥೆಗಳ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ

“ಪಾರ್ಕಿಂಗ್ ಶುಲ್ಕ ಮತ್ತು ವಾಹನ ನಿಲುಗಡೆ ಅವಧಿಯ ಕುರಿತು ಚರ್ಚೆ ಅಂತಿಮ ಹಂತದಲ್ಲಿದೆ. ತಾತ್ಕಾಲಿಕವಾಗಿ ‘ಎ ವರ್ಗ’ದ ಪಾರ್ಕಿಂಗ್ ಸ್ಥಳವನ್ನು ದ್ವಿಚಕ್ರ ವಾಹನಗಳಿಗೆ ರೂ 15/ಗಂಟೆಗೆ ಮತ್ತು ನಾಲ್ಕು-ಚಕ್ರ ವಾಹನಗಳಿಗೆ ರೂ 30/ಗಂಟೆ ವೆಚ್ಚವಾಗಲಿದೆ” ಎಂದು ಅವರು ಹೇಳಿದ್ದಾರೆ.

“‘ಬಿ ವರ್ಗ’ ಜಾಗದಲ್ಲಿ ಪಾರ್ಕಿಂಗ್ ದ್ವಿಚಕ್ರ ವಾಹನಗಳಿಗೆ ರೂ 10/ಗಂಟೆಗೆ ಮತ್ತು ಕಾರುಗಳಿಗೆ 20 ರೂ. ವೆಚ್ಚವಾಗಲಿದೆ. ‘ಸಿ ವರ್ಗ’ದ ಪಾರ್ಕಿಂಗ್ ಜಾಗವೂ ಅಗ್ಗದಲ್ಲಿ ಲಭ್ಯವಾಗಲಿದ್ದು, ಬೈಕ್ ಮತ್ತು ಕಾರ್ ಮಾಲೀಕರು ಕ್ರಮವಾಗಿ 5 ರೂ. ಮತ್ತು 10ರೂ. ಪ್ರತಿ ಗಂಟೆಗೆ ಪಾವತಿಸಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಹೊರ ವಲಯದಲ್ಲಿ ಅಗ್ಗ

ಯಲಹಂಕ, ಬೊಮ್ಮನಹಳ್ಳಿ, ರಾಜರಾಜೇಶ್ವರಿ ನಗರ ಮತ್ತು ದಾಸರಹಳ್ಳಿಯಂತಹ ವಲಯಗಳಲ್ಲಿ, ಹೆಚ್ಚಿನ ರಸ್ತೆಗಳು ಎ ವರ್ಗಕ್ಕೆ ಬರದ ಕಾರಣ ಪಾರ್ಕಿಂಗ್ ಶುಲ್ಕವು ಮಧ್ಯಮವಾಗಿರುತ್ತದೆ. ಆದರೆ, ನಗರದ ಪ್ರಮುಖ ಪ್ರದೇಶಗಳು ಮತ್ತು ದಟ್ಟಣೆಯ ಕಾರಿಡಾರ್‌ಗಳಲ್ಲಿ ಈ ವೆಚ್ಚವು ಹೆಚ್ಚಾಗಿರುತ್ತದೆ.

ಇದನ್ನೂ ಓದಿ: ಬಿಬಿಎಂಪಿ ಚುನಾವಣೆಯಲ್ಲಿ ಮೀಸಲಾತಿಯ ಬಗ್ಗೆ..

ಬಿಬಿಎಂಪಿಯು ಪೂರ್ವ ವಲಯದಿಂದ ಕನಿಷ್ಠ 62 ಕೋಟಿ ರೂ. ಪಾರ್ಕಿಂಗ್ ಆದಾಯವನ್ನು ಗಳಿಸುವ ನಿರೀಕ್ಷೆಯನ್ನು ಹೊಂದಿದೆ. ನಂತರದ ಸ್ಥಾನದಲ್ಲಿ ದಕ್ಷಿಣ (50 ಕೋಟಿ) ಮತ್ತು ಪಶ್ಚಿಮ (ರೂ. 20.71 ಕೋಟಿ) ವಲಯಗಳು ಇವೆ. ರಾಜರಾಜೇಶ್ವರಿನಗರದಿಂದ (5 ಕೋಟಿ ರೂ.) ಕನಿಷ್ಠ ಮೊತ್ತವನ್ನು ಅಧಿಕಾರಿಗಳು ನಿರೀಕ್ಷಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ರೀ ಸ್ವಾಮೀ, ನಿಮ್ಗೆ ಜನರಿಂದ ದುಡ್ಡು ಹೇಗೆ ಕಸಿಯಬೇಕು ಅಂತಾ ಗೊತ್ತೇ ವಿನಃ, ಅವರಿಗೆ ಏನು ಅನುಕೂಲ ಕೊಡಬೇಕು ಅನ್ನೋ ಕನಿಷ್ಠ ಮಟ್ಟದ ಆಲೋಚನೆ ಕೂಡ ನಿಮ್ಗೆ ಬರೊಲ್ವೆ,, ಒಂದೂ ರೋಡ್ ಸರೀ ಇಲ್ಲಾ, ಫ್ಲೈ ಓವರ್ ಯಾವುದೂ ನೆಟ್ಟಗೆ ಮಾಡಿಲ್ಲ, ಜಾಯಿಂಟ್ ಗಳಲ್ಲಿ ಗ್ಯಾಪ್ ಜಾಸ್ತಿ ಇದೆ, ಗಾಡಿಗಳು ಜಂಪ್ ಆಗೀ ಆಗೀ, ನಮ್ಮ ಗಾಡಿ ಹಾಳಗಿದಲ್ದೆ, ನಮ್ಮ ಸೊಂಟಾನೂ ಮುರಿದು ಬೀಳುತ್ತೆ, ಮೋರಿಗಳನ್ನೆಲ್ಲಾ unsceintific ಆಗೀ ಕಾಂಕ್ರೀಟ್ ಮಾಡೀ, ಮಳೆ ನೀರು ಭೂಮಿಯಲ್ಲಿ ಒಂದು ಚೂರೂ ಇಂಗಿ ಕೊಳ್ಳದೆ ಎಲ್ಲಾ ನೀರೂ ರಾಜಾ ಕಾಲುವೆಗೆ ಹರಿದು, ಮುಂಚಿನ ಹಾಗೆ ಭೂಮಿಯ ಒಳಗೆ ನೀರು ಹೋಗದ ಹಾಗೆ ಮಾಡಿ ಅಂತರ್ಜಲವನ್ನು ಪೂರ್ತಿ ಕಡಿಮೆ ಮಾಡಿ, ಬರಡು ಭೂಮಿ ಮಾಡಿದ್ದೀರಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...