Homeಕರ್ನಾಟಕಬೆಂಗಳೂರು: ಇನ್ನು ಮುಂದೆ ರಸ್ತೆ ಬದಿ ಪಾರ್ಕಿಂಗ್‌‌‌ಗೆ ಶುಲ್ಕ!

ಬೆಂಗಳೂರು: ಇನ್ನು ಮುಂದೆ ರಸ್ತೆ ಬದಿ ಪಾರ್ಕಿಂಗ್‌‌‌ಗೆ ಶುಲ್ಕ!

- Advertisement -
- Advertisement -

ಬೆಂಗಳೂರಿನಲ್ಲಿ ಪಾವತಿ ಪಾರ್ಕಿಂಗ್‌‌‌ ಅನ್ನು ಪರಿಚಯಿಸಲು ಟೆಂಡರ್‌ಗಳನ್ನು ಆಹ್ವಾನಿಸಲು ಬೃಹತ್‌‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಿದ್ಧವಾಗಿದೆ. 2021ರ ಫೆಬ್ರವರಿ 2 ರಂದು ರಾಜ್ಯ ಸರ್ಕಾರವು ಅನುಮೋದಿಸಿದ ಪಾರ್ಕಿಂಗ್ ನೀತಿಯ ಅಡಿಯಲ್ಲಿ, ನಗರವನ್ನು ಉಚಿತ ಪಾರ್ಕಿಂಗ್‌ನಿಂದ ಪಾವತಿಸಿದ ಪಾರ್ಕಿಂಗ್‌ ನಗರವಾಗಿ ರೂಪಿಸಲು ಹೊರಟಿದೆ. ಈ ಮೂಲಕ ವೈಯಕ್ತಿಕ ವಾಹನಗಳ ಬಳಕೆಯನ್ನು ಪರೋಕ್ಷವಾಗಿ ನಿರುತ್ಸಾಹಗೊಳಿಸುವ ಜವಾಬ್ದಾರಿಯನ್ನು ಬಿಬಿಎಂಪಿಗೆ ವಹಿಸಲಾಗಿದೆ.

ನಗರ ಭೂ ಸಾರಿಗೆ ನಿರ್ದೇಶನಾಲಯವು (DULT) ವಿವರವಾದ ಅಧ್ಯಯನದ ನಂತರ ಸಿದ್ಧಪಡಿಸಿದ ಮತ್ತು ಎಲ್ಲಾ ಎಂಟು ವಲಯಗಳಲ್ಲಿ ಜಾರಿಗೊಳಿಸುವ ಯೋಜನೆಯೊಂದಿಗೆ ಕನಿಷ್ಠ 188 ಕೋಟಿ ರೂ.ಗಳ ವಾರ್ಷಿಕ ಆದಾಯವನ್ನು ಗಳಿಸುವ ಉದ್ದೇಶವನ್ನು ಬಿಬಿಎಂಪಿ ಸಂಸ್ಥೆ ಹೊಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

DULT ನ ಅಧಿಕಾರಿಗಳು ದ್ವಿಚಕ್ರ ಮತ್ತು ನಾಲ್ಕು ಚಕ್ರಗಳ ಜೊತೆಗೆ, ಸೈಕಲ್‌ಗಳು, ಲೋಡ್-ಅನ್‌ಲೋಡಿಂಗ್ ಮತ್ತು ಆಟೋ ಸ್ಟ್ಯಾಂಡ್‌ಗಳಿಗೆ ಅನ್ವಯವಾಗುವ ಸ್ಥಳದಲ್ಲಿ ಪಾರ್ಕಿಂಗ್ ಸ್ಥಳವನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ ಬಿಬಿಎಂಪಿ

ಒಂದು ಅಥವಾ ಎರಡು ದಿನಗಳಲ್ಲಿ ಟೆಂಡರ್‌ಗಳು ಬಿಡ್ಡಿಂಗ್‌ಗೆ ಲಭ್ಯವಿರುತ್ತವೆ ಎಂದು ಬಿಬಿಎಂಪಿ ಮುಖ್ಯ ಇಂಜಿನಿಯರ್‌ ಬಿ.ಎಸ್. ಪ್ರಹ್ಲಾದ್ ಹೇಳಿದ್ದಾರೆ. ರಸ್ತೆಗಳನ್ನು ಮೂರು ವಿಭಾಗಗಳಾಗಿ ವಿಂಗಡಿಸಿದ ನಂತರ ಪಾರ್ಕಿಂಗ್ ಶುಲ್ಕವನ್ನು ನಿರ್ಧರಿಸಲಾಗಿದೆ ಎಂದು ಟ್ರಾಫಿಕ್ ಎಂಜಿನಿಯರಿಂಗ್ ಸೆಲ್ (ಟಿಇಸಿ) ಅಧಿಕಾರಿಗಳು ತಿಳಿಸಿದ್ದಾರೆ.

“ಭೂಮಿಯ ಮಾರುಕಟ್ಟೆ ಮೌಲ್ಯ ಮತ್ತು ಕ್ಯಾರೇಜ್‌ ವೇ ಅಗಲದ ಆಧಾರದ ಮೇಲೆ ರಸ್ತೆಗಳನ್ನು ಎ, ಬಿ ಮತ್ತು ಸಿ ಎಂದು ವರ್ಗೀಕರಿಸಲಾಗಿದೆ. ಸ್ಥಳದ ಲಭ್ಯತೆಯ ಆಧಾರದ ಮೇಲೆ ಪ್ರತಿಯೊಂದು ವಲಯಗಳಲ್ಲಿ ಪಾರ್ಕಿಂಗ್ ಸ್ಥಳವನ್ನು ಗುರುತಿಸಲಾಗಿದೆ” ಎಂದು ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ (TEC) ) ಹೆಚ್.ಎನ್. ಜಯಸಿಂಹ ಹೇಳಿದ್ದಾರೆ.

ಬೆಳಿಗ್ಗೆ 7 ರಿಂದ ರಾತ್ರಿ 10 ರವರೆಗೆ ದಿನಕ್ಕೆ 12 ರಿಂದ 15 ಗಂಟೆಗಳ ಕಾಲ ಪಾವತಿ ಪಾರ್ಕಿಂಗ್ ಜಾರಿಯಲ್ಲಿರುತ್ತದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಇದನ್ನೂ ಓದಿ: ರಾಜಕಾಲುವೆ ಒತ್ತುವರಿ: ಘಟಾನುಘಟಿ ಸಂಸ್ಥೆಗಳ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ

“ಪಾರ್ಕಿಂಗ್ ಶುಲ್ಕ ಮತ್ತು ವಾಹನ ನಿಲುಗಡೆ ಅವಧಿಯ ಕುರಿತು ಚರ್ಚೆ ಅಂತಿಮ ಹಂತದಲ್ಲಿದೆ. ತಾತ್ಕಾಲಿಕವಾಗಿ ‘ಎ ವರ್ಗ’ದ ಪಾರ್ಕಿಂಗ್ ಸ್ಥಳವನ್ನು ದ್ವಿಚಕ್ರ ವಾಹನಗಳಿಗೆ ರೂ 15/ಗಂಟೆಗೆ ಮತ್ತು ನಾಲ್ಕು-ಚಕ್ರ ವಾಹನಗಳಿಗೆ ರೂ 30/ಗಂಟೆ ವೆಚ್ಚವಾಗಲಿದೆ” ಎಂದು ಅವರು ಹೇಳಿದ್ದಾರೆ.

“‘ಬಿ ವರ್ಗ’ ಜಾಗದಲ್ಲಿ ಪಾರ್ಕಿಂಗ್ ದ್ವಿಚಕ್ರ ವಾಹನಗಳಿಗೆ ರೂ 10/ಗಂಟೆಗೆ ಮತ್ತು ಕಾರುಗಳಿಗೆ 20 ರೂ. ವೆಚ್ಚವಾಗಲಿದೆ. ‘ಸಿ ವರ್ಗ’ದ ಪಾರ್ಕಿಂಗ್ ಜಾಗವೂ ಅಗ್ಗದಲ್ಲಿ ಲಭ್ಯವಾಗಲಿದ್ದು, ಬೈಕ್ ಮತ್ತು ಕಾರ್ ಮಾಲೀಕರು ಕ್ರಮವಾಗಿ 5 ರೂ. ಮತ್ತು 10ರೂ. ಪ್ರತಿ ಗಂಟೆಗೆ ಪಾವತಿಸಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಹೊರ ವಲಯದಲ್ಲಿ ಅಗ್ಗ

ಯಲಹಂಕ, ಬೊಮ್ಮನಹಳ್ಳಿ, ರಾಜರಾಜೇಶ್ವರಿ ನಗರ ಮತ್ತು ದಾಸರಹಳ್ಳಿಯಂತಹ ವಲಯಗಳಲ್ಲಿ, ಹೆಚ್ಚಿನ ರಸ್ತೆಗಳು ಎ ವರ್ಗಕ್ಕೆ ಬರದ ಕಾರಣ ಪಾರ್ಕಿಂಗ್ ಶುಲ್ಕವು ಮಧ್ಯಮವಾಗಿರುತ್ತದೆ. ಆದರೆ, ನಗರದ ಪ್ರಮುಖ ಪ್ರದೇಶಗಳು ಮತ್ತು ದಟ್ಟಣೆಯ ಕಾರಿಡಾರ್‌ಗಳಲ್ಲಿ ಈ ವೆಚ್ಚವು ಹೆಚ್ಚಾಗಿರುತ್ತದೆ.

ಇದನ್ನೂ ಓದಿ: ಬಿಬಿಎಂಪಿ ಚುನಾವಣೆಯಲ್ಲಿ ಮೀಸಲಾತಿಯ ಬಗ್ಗೆ..

ಬಿಬಿಎಂಪಿಯು ಪೂರ್ವ ವಲಯದಿಂದ ಕನಿಷ್ಠ 62 ಕೋಟಿ ರೂ. ಪಾರ್ಕಿಂಗ್ ಆದಾಯವನ್ನು ಗಳಿಸುವ ನಿರೀಕ್ಷೆಯನ್ನು ಹೊಂದಿದೆ. ನಂತರದ ಸ್ಥಾನದಲ್ಲಿ ದಕ್ಷಿಣ (50 ಕೋಟಿ) ಮತ್ತು ಪಶ್ಚಿಮ (ರೂ. 20.71 ಕೋಟಿ) ವಲಯಗಳು ಇವೆ. ರಾಜರಾಜೇಶ್ವರಿನಗರದಿಂದ (5 ಕೋಟಿ ರೂ.) ಕನಿಷ್ಠ ಮೊತ್ತವನ್ನು ಅಧಿಕಾರಿಗಳು ನಿರೀಕ್ಷಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ರೀ ಸ್ವಾಮೀ, ನಿಮ್ಗೆ ಜನರಿಂದ ದುಡ್ಡು ಹೇಗೆ ಕಸಿಯಬೇಕು ಅಂತಾ ಗೊತ್ತೇ ವಿನಃ, ಅವರಿಗೆ ಏನು ಅನುಕೂಲ ಕೊಡಬೇಕು ಅನ್ನೋ ಕನಿಷ್ಠ ಮಟ್ಟದ ಆಲೋಚನೆ ಕೂಡ ನಿಮ್ಗೆ ಬರೊಲ್ವೆ,, ಒಂದೂ ರೋಡ್ ಸರೀ ಇಲ್ಲಾ, ಫ್ಲೈ ಓವರ್ ಯಾವುದೂ ನೆಟ್ಟಗೆ ಮಾಡಿಲ್ಲ, ಜಾಯಿಂಟ್ ಗಳಲ್ಲಿ ಗ್ಯಾಪ್ ಜಾಸ್ತಿ ಇದೆ, ಗಾಡಿಗಳು ಜಂಪ್ ಆಗೀ ಆಗೀ, ನಮ್ಮ ಗಾಡಿ ಹಾಳಗಿದಲ್ದೆ, ನಮ್ಮ ಸೊಂಟಾನೂ ಮುರಿದು ಬೀಳುತ್ತೆ, ಮೋರಿಗಳನ್ನೆಲ್ಲಾ unsceintific ಆಗೀ ಕಾಂಕ್ರೀಟ್ ಮಾಡೀ, ಮಳೆ ನೀರು ಭೂಮಿಯಲ್ಲಿ ಒಂದು ಚೂರೂ ಇಂಗಿ ಕೊಳ್ಳದೆ ಎಲ್ಲಾ ನೀರೂ ರಾಜಾ ಕಾಲುವೆಗೆ ಹರಿದು, ಮುಂಚಿನ ಹಾಗೆ ಭೂಮಿಯ ಒಳಗೆ ನೀರು ಹೋಗದ ಹಾಗೆ ಮಾಡಿ ಅಂತರ್ಜಲವನ್ನು ಪೂರ್ತಿ ಕಡಿಮೆ ಮಾಡಿ, ಬರಡು ಭೂಮಿ ಮಾಡಿದ್ದೀರಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...