Homeಕರ್ನಾಟಕಬೆಂಗಳೂರು: ಇನ್ನು ಮುಂದೆ ರಸ್ತೆ ಬದಿ ಪಾರ್ಕಿಂಗ್‌‌‌ಗೆ ಶುಲ್ಕ!

ಬೆಂಗಳೂರು: ಇನ್ನು ಮುಂದೆ ರಸ್ತೆ ಬದಿ ಪಾರ್ಕಿಂಗ್‌‌‌ಗೆ ಶುಲ್ಕ!

- Advertisement -
- Advertisement -

ಬೆಂಗಳೂರಿನಲ್ಲಿ ಪಾವತಿ ಪಾರ್ಕಿಂಗ್‌‌‌ ಅನ್ನು ಪರಿಚಯಿಸಲು ಟೆಂಡರ್‌ಗಳನ್ನು ಆಹ್ವಾನಿಸಲು ಬೃಹತ್‌‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಿದ್ಧವಾಗಿದೆ. 2021ರ ಫೆಬ್ರವರಿ 2 ರಂದು ರಾಜ್ಯ ಸರ್ಕಾರವು ಅನುಮೋದಿಸಿದ ಪಾರ್ಕಿಂಗ್ ನೀತಿಯ ಅಡಿಯಲ್ಲಿ, ನಗರವನ್ನು ಉಚಿತ ಪಾರ್ಕಿಂಗ್‌ನಿಂದ ಪಾವತಿಸಿದ ಪಾರ್ಕಿಂಗ್‌ ನಗರವಾಗಿ ರೂಪಿಸಲು ಹೊರಟಿದೆ. ಈ ಮೂಲಕ ವೈಯಕ್ತಿಕ ವಾಹನಗಳ ಬಳಕೆಯನ್ನು ಪರೋಕ್ಷವಾಗಿ ನಿರುತ್ಸಾಹಗೊಳಿಸುವ ಜವಾಬ್ದಾರಿಯನ್ನು ಬಿಬಿಎಂಪಿಗೆ ವಹಿಸಲಾಗಿದೆ.

ನಗರ ಭೂ ಸಾರಿಗೆ ನಿರ್ದೇಶನಾಲಯವು (DULT) ವಿವರವಾದ ಅಧ್ಯಯನದ ನಂತರ ಸಿದ್ಧಪಡಿಸಿದ ಮತ್ತು ಎಲ್ಲಾ ಎಂಟು ವಲಯಗಳಲ್ಲಿ ಜಾರಿಗೊಳಿಸುವ ಯೋಜನೆಯೊಂದಿಗೆ ಕನಿಷ್ಠ 188 ಕೋಟಿ ರೂ.ಗಳ ವಾರ್ಷಿಕ ಆದಾಯವನ್ನು ಗಳಿಸುವ ಉದ್ದೇಶವನ್ನು ಬಿಬಿಎಂಪಿ ಸಂಸ್ಥೆ ಹೊಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

DULT ನ ಅಧಿಕಾರಿಗಳು ದ್ವಿಚಕ್ರ ಮತ್ತು ನಾಲ್ಕು ಚಕ್ರಗಳ ಜೊತೆಗೆ, ಸೈಕಲ್‌ಗಳು, ಲೋಡ್-ಅನ್‌ಲೋಡಿಂಗ್ ಮತ್ತು ಆಟೋ ಸ್ಟ್ಯಾಂಡ್‌ಗಳಿಗೆ ಅನ್ವಯವಾಗುವ ಸ್ಥಳದಲ್ಲಿ ಪಾರ್ಕಿಂಗ್ ಸ್ಥಳವನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ ಬಿಬಿಎಂಪಿ

ಒಂದು ಅಥವಾ ಎರಡು ದಿನಗಳಲ್ಲಿ ಟೆಂಡರ್‌ಗಳು ಬಿಡ್ಡಿಂಗ್‌ಗೆ ಲಭ್ಯವಿರುತ್ತವೆ ಎಂದು ಬಿಬಿಎಂಪಿ ಮುಖ್ಯ ಇಂಜಿನಿಯರ್‌ ಬಿ.ಎಸ್. ಪ್ರಹ್ಲಾದ್ ಹೇಳಿದ್ದಾರೆ. ರಸ್ತೆಗಳನ್ನು ಮೂರು ವಿಭಾಗಗಳಾಗಿ ವಿಂಗಡಿಸಿದ ನಂತರ ಪಾರ್ಕಿಂಗ್ ಶುಲ್ಕವನ್ನು ನಿರ್ಧರಿಸಲಾಗಿದೆ ಎಂದು ಟ್ರಾಫಿಕ್ ಎಂಜಿನಿಯರಿಂಗ್ ಸೆಲ್ (ಟಿಇಸಿ) ಅಧಿಕಾರಿಗಳು ತಿಳಿಸಿದ್ದಾರೆ.

“ಭೂಮಿಯ ಮಾರುಕಟ್ಟೆ ಮೌಲ್ಯ ಮತ್ತು ಕ್ಯಾರೇಜ್‌ ವೇ ಅಗಲದ ಆಧಾರದ ಮೇಲೆ ರಸ್ತೆಗಳನ್ನು ಎ, ಬಿ ಮತ್ತು ಸಿ ಎಂದು ವರ್ಗೀಕರಿಸಲಾಗಿದೆ. ಸ್ಥಳದ ಲಭ್ಯತೆಯ ಆಧಾರದ ಮೇಲೆ ಪ್ರತಿಯೊಂದು ವಲಯಗಳಲ್ಲಿ ಪಾರ್ಕಿಂಗ್ ಸ್ಥಳವನ್ನು ಗುರುತಿಸಲಾಗಿದೆ” ಎಂದು ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ (TEC) ) ಹೆಚ್.ಎನ್. ಜಯಸಿಂಹ ಹೇಳಿದ್ದಾರೆ.

ಬೆಳಿಗ್ಗೆ 7 ರಿಂದ ರಾತ್ರಿ 10 ರವರೆಗೆ ದಿನಕ್ಕೆ 12 ರಿಂದ 15 ಗಂಟೆಗಳ ಕಾಲ ಪಾವತಿ ಪಾರ್ಕಿಂಗ್ ಜಾರಿಯಲ್ಲಿರುತ್ತದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಇದನ್ನೂ ಓದಿ: ರಾಜಕಾಲುವೆ ಒತ್ತುವರಿ: ಘಟಾನುಘಟಿ ಸಂಸ್ಥೆಗಳ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ

“ಪಾರ್ಕಿಂಗ್ ಶುಲ್ಕ ಮತ್ತು ವಾಹನ ನಿಲುಗಡೆ ಅವಧಿಯ ಕುರಿತು ಚರ್ಚೆ ಅಂತಿಮ ಹಂತದಲ್ಲಿದೆ. ತಾತ್ಕಾಲಿಕವಾಗಿ ‘ಎ ವರ್ಗ’ದ ಪಾರ್ಕಿಂಗ್ ಸ್ಥಳವನ್ನು ದ್ವಿಚಕ್ರ ವಾಹನಗಳಿಗೆ ರೂ 15/ಗಂಟೆಗೆ ಮತ್ತು ನಾಲ್ಕು-ಚಕ್ರ ವಾಹನಗಳಿಗೆ ರೂ 30/ಗಂಟೆ ವೆಚ್ಚವಾಗಲಿದೆ” ಎಂದು ಅವರು ಹೇಳಿದ್ದಾರೆ.

“‘ಬಿ ವರ್ಗ’ ಜಾಗದಲ್ಲಿ ಪಾರ್ಕಿಂಗ್ ದ್ವಿಚಕ್ರ ವಾಹನಗಳಿಗೆ ರೂ 10/ಗಂಟೆಗೆ ಮತ್ತು ಕಾರುಗಳಿಗೆ 20 ರೂ. ವೆಚ್ಚವಾಗಲಿದೆ. ‘ಸಿ ವರ್ಗ’ದ ಪಾರ್ಕಿಂಗ್ ಜಾಗವೂ ಅಗ್ಗದಲ್ಲಿ ಲಭ್ಯವಾಗಲಿದ್ದು, ಬೈಕ್ ಮತ್ತು ಕಾರ್ ಮಾಲೀಕರು ಕ್ರಮವಾಗಿ 5 ರೂ. ಮತ್ತು 10ರೂ. ಪ್ರತಿ ಗಂಟೆಗೆ ಪಾವತಿಸಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಹೊರ ವಲಯದಲ್ಲಿ ಅಗ್ಗ

ಯಲಹಂಕ, ಬೊಮ್ಮನಹಳ್ಳಿ, ರಾಜರಾಜೇಶ್ವರಿ ನಗರ ಮತ್ತು ದಾಸರಹಳ್ಳಿಯಂತಹ ವಲಯಗಳಲ್ಲಿ, ಹೆಚ್ಚಿನ ರಸ್ತೆಗಳು ಎ ವರ್ಗಕ್ಕೆ ಬರದ ಕಾರಣ ಪಾರ್ಕಿಂಗ್ ಶುಲ್ಕವು ಮಧ್ಯಮವಾಗಿರುತ್ತದೆ. ಆದರೆ, ನಗರದ ಪ್ರಮುಖ ಪ್ರದೇಶಗಳು ಮತ್ತು ದಟ್ಟಣೆಯ ಕಾರಿಡಾರ್‌ಗಳಲ್ಲಿ ಈ ವೆಚ್ಚವು ಹೆಚ್ಚಾಗಿರುತ್ತದೆ.

ಇದನ್ನೂ ಓದಿ: ಬಿಬಿಎಂಪಿ ಚುನಾವಣೆಯಲ್ಲಿ ಮೀಸಲಾತಿಯ ಬಗ್ಗೆ..

ಬಿಬಿಎಂಪಿಯು ಪೂರ್ವ ವಲಯದಿಂದ ಕನಿಷ್ಠ 62 ಕೋಟಿ ರೂ. ಪಾರ್ಕಿಂಗ್ ಆದಾಯವನ್ನು ಗಳಿಸುವ ನಿರೀಕ್ಷೆಯನ್ನು ಹೊಂದಿದೆ. ನಂತರದ ಸ್ಥಾನದಲ್ಲಿ ದಕ್ಷಿಣ (50 ಕೋಟಿ) ಮತ್ತು ಪಶ್ಚಿಮ (ರೂ. 20.71 ಕೋಟಿ) ವಲಯಗಳು ಇವೆ. ರಾಜರಾಜೇಶ್ವರಿನಗರದಿಂದ (5 ಕೋಟಿ ರೂ.) ಕನಿಷ್ಠ ಮೊತ್ತವನ್ನು ಅಧಿಕಾರಿಗಳು ನಿರೀಕ್ಷಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ರೀ ಸ್ವಾಮೀ, ನಿಮ್ಗೆ ಜನರಿಂದ ದುಡ್ಡು ಹೇಗೆ ಕಸಿಯಬೇಕು ಅಂತಾ ಗೊತ್ತೇ ವಿನಃ, ಅವರಿಗೆ ಏನು ಅನುಕೂಲ ಕೊಡಬೇಕು ಅನ್ನೋ ಕನಿಷ್ಠ ಮಟ್ಟದ ಆಲೋಚನೆ ಕೂಡ ನಿಮ್ಗೆ ಬರೊಲ್ವೆ,, ಒಂದೂ ರೋಡ್ ಸರೀ ಇಲ್ಲಾ, ಫ್ಲೈ ಓವರ್ ಯಾವುದೂ ನೆಟ್ಟಗೆ ಮಾಡಿಲ್ಲ, ಜಾಯಿಂಟ್ ಗಳಲ್ಲಿ ಗ್ಯಾಪ್ ಜಾಸ್ತಿ ಇದೆ, ಗಾಡಿಗಳು ಜಂಪ್ ಆಗೀ ಆಗೀ, ನಮ್ಮ ಗಾಡಿ ಹಾಳಗಿದಲ್ದೆ, ನಮ್ಮ ಸೊಂಟಾನೂ ಮುರಿದು ಬೀಳುತ್ತೆ, ಮೋರಿಗಳನ್ನೆಲ್ಲಾ unsceintific ಆಗೀ ಕಾಂಕ್ರೀಟ್ ಮಾಡೀ, ಮಳೆ ನೀರು ಭೂಮಿಯಲ್ಲಿ ಒಂದು ಚೂರೂ ಇಂಗಿ ಕೊಳ್ಳದೆ ಎಲ್ಲಾ ನೀರೂ ರಾಜಾ ಕಾಲುವೆಗೆ ಹರಿದು, ಮುಂಚಿನ ಹಾಗೆ ಭೂಮಿಯ ಒಳಗೆ ನೀರು ಹೋಗದ ಹಾಗೆ ಮಾಡಿ ಅಂತರ್ಜಲವನ್ನು ಪೂರ್ತಿ ಕಡಿಮೆ ಮಾಡಿ, ಬರಡು ಭೂಮಿ ಮಾಡಿದ್ದೀರಿ

LEAVE A REPLY

Please enter your comment!
Please enter your name here

- Advertisment -

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2)...

ದೆಹಲಿ ನ್ಯಾಯಾಲಯದಿಂದ ತಕ್ಷಣ ಬಿಡುಗಡೆ ಆದೇಶ: ತಿಹಾರ್ ಜೈಲಿನಿಂದ ಹೊರಬಂದ 14 ಜೆಎನ್‌ಯು ವಿದ್ಯಾರ್ಥಿಗಳು 

ಫೆಬ್ರವರಿ 26 ರಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಪ್ರತಿಭಟನೆಯ ಸಂದರ್ಭದಲ್ಲಿ ಬಂಧಿಸಲ್ಪಟ್ಟಿದ್ದ ಹದಿನಾಲ್ಕು ವಿದ್ಯಾರ್ಥಿ ನಾಯಕರನ್ನು ದೆಹಲಿ ನ್ಯಾಯಾಲಯವು ಭಾನುವಾರ ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದ ನಂತರ, 14...