Homeಕರ್ನಾಟಕಬೆಂಗಳೂರು: ಇನ್ನು ಮುಂದೆ ರಸ್ತೆ ಬದಿ ಪಾರ್ಕಿಂಗ್‌‌‌ಗೆ ಶುಲ್ಕ!

ಬೆಂಗಳೂರು: ಇನ್ನು ಮುಂದೆ ರಸ್ತೆ ಬದಿ ಪಾರ್ಕಿಂಗ್‌‌‌ಗೆ ಶುಲ್ಕ!

- Advertisement -
- Advertisement -

ಬೆಂಗಳೂರಿನಲ್ಲಿ ಪಾವತಿ ಪಾರ್ಕಿಂಗ್‌‌‌ ಅನ್ನು ಪರಿಚಯಿಸಲು ಟೆಂಡರ್‌ಗಳನ್ನು ಆಹ್ವಾನಿಸಲು ಬೃಹತ್‌‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಿದ್ಧವಾಗಿದೆ. 2021ರ ಫೆಬ್ರವರಿ 2 ರಂದು ರಾಜ್ಯ ಸರ್ಕಾರವು ಅನುಮೋದಿಸಿದ ಪಾರ್ಕಿಂಗ್ ನೀತಿಯ ಅಡಿಯಲ್ಲಿ, ನಗರವನ್ನು ಉಚಿತ ಪಾರ್ಕಿಂಗ್‌ನಿಂದ ಪಾವತಿಸಿದ ಪಾರ್ಕಿಂಗ್‌ ನಗರವಾಗಿ ರೂಪಿಸಲು ಹೊರಟಿದೆ. ಈ ಮೂಲಕ ವೈಯಕ್ತಿಕ ವಾಹನಗಳ ಬಳಕೆಯನ್ನು ಪರೋಕ್ಷವಾಗಿ ನಿರುತ್ಸಾಹಗೊಳಿಸುವ ಜವಾಬ್ದಾರಿಯನ್ನು ಬಿಬಿಎಂಪಿಗೆ ವಹಿಸಲಾಗಿದೆ.

ನಗರ ಭೂ ಸಾರಿಗೆ ನಿರ್ದೇಶನಾಲಯವು (DULT) ವಿವರವಾದ ಅಧ್ಯಯನದ ನಂತರ ಸಿದ್ಧಪಡಿಸಿದ ಮತ್ತು ಎಲ್ಲಾ ಎಂಟು ವಲಯಗಳಲ್ಲಿ ಜಾರಿಗೊಳಿಸುವ ಯೋಜನೆಯೊಂದಿಗೆ ಕನಿಷ್ಠ 188 ಕೋಟಿ ರೂ.ಗಳ ವಾರ್ಷಿಕ ಆದಾಯವನ್ನು ಗಳಿಸುವ ಉದ್ದೇಶವನ್ನು ಬಿಬಿಎಂಪಿ ಸಂಸ್ಥೆ ಹೊಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

DULT ನ ಅಧಿಕಾರಿಗಳು ದ್ವಿಚಕ್ರ ಮತ್ತು ನಾಲ್ಕು ಚಕ್ರಗಳ ಜೊತೆಗೆ, ಸೈಕಲ್‌ಗಳು, ಲೋಡ್-ಅನ್‌ಲೋಡಿಂಗ್ ಮತ್ತು ಆಟೋ ಸ್ಟ್ಯಾಂಡ್‌ಗಳಿಗೆ ಅನ್ವಯವಾಗುವ ಸ್ಥಳದಲ್ಲಿ ಪಾರ್ಕಿಂಗ್ ಸ್ಥಳವನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ ಬಿಬಿಎಂಪಿ

ಒಂದು ಅಥವಾ ಎರಡು ದಿನಗಳಲ್ಲಿ ಟೆಂಡರ್‌ಗಳು ಬಿಡ್ಡಿಂಗ್‌ಗೆ ಲಭ್ಯವಿರುತ್ತವೆ ಎಂದು ಬಿಬಿಎಂಪಿ ಮುಖ್ಯ ಇಂಜಿನಿಯರ್‌ ಬಿ.ಎಸ್. ಪ್ರಹ್ಲಾದ್ ಹೇಳಿದ್ದಾರೆ. ರಸ್ತೆಗಳನ್ನು ಮೂರು ವಿಭಾಗಗಳಾಗಿ ವಿಂಗಡಿಸಿದ ನಂತರ ಪಾರ್ಕಿಂಗ್ ಶುಲ್ಕವನ್ನು ನಿರ್ಧರಿಸಲಾಗಿದೆ ಎಂದು ಟ್ರಾಫಿಕ್ ಎಂಜಿನಿಯರಿಂಗ್ ಸೆಲ್ (ಟಿಇಸಿ) ಅಧಿಕಾರಿಗಳು ತಿಳಿಸಿದ್ದಾರೆ.

“ಭೂಮಿಯ ಮಾರುಕಟ್ಟೆ ಮೌಲ್ಯ ಮತ್ತು ಕ್ಯಾರೇಜ್‌ ವೇ ಅಗಲದ ಆಧಾರದ ಮೇಲೆ ರಸ್ತೆಗಳನ್ನು ಎ, ಬಿ ಮತ್ತು ಸಿ ಎಂದು ವರ್ಗೀಕರಿಸಲಾಗಿದೆ. ಸ್ಥಳದ ಲಭ್ಯತೆಯ ಆಧಾರದ ಮೇಲೆ ಪ್ರತಿಯೊಂದು ವಲಯಗಳಲ್ಲಿ ಪಾರ್ಕಿಂಗ್ ಸ್ಥಳವನ್ನು ಗುರುತಿಸಲಾಗಿದೆ” ಎಂದು ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ (TEC) ) ಹೆಚ್.ಎನ್. ಜಯಸಿಂಹ ಹೇಳಿದ್ದಾರೆ.

ಬೆಳಿಗ್ಗೆ 7 ರಿಂದ ರಾತ್ರಿ 10 ರವರೆಗೆ ದಿನಕ್ಕೆ 12 ರಿಂದ 15 ಗಂಟೆಗಳ ಕಾಲ ಪಾವತಿ ಪಾರ್ಕಿಂಗ್ ಜಾರಿಯಲ್ಲಿರುತ್ತದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಇದನ್ನೂ ಓದಿ: ರಾಜಕಾಲುವೆ ಒತ್ತುವರಿ: ಘಟಾನುಘಟಿ ಸಂಸ್ಥೆಗಳ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ

“ಪಾರ್ಕಿಂಗ್ ಶುಲ್ಕ ಮತ್ತು ವಾಹನ ನಿಲುಗಡೆ ಅವಧಿಯ ಕುರಿತು ಚರ್ಚೆ ಅಂತಿಮ ಹಂತದಲ್ಲಿದೆ. ತಾತ್ಕಾಲಿಕವಾಗಿ ‘ಎ ವರ್ಗ’ದ ಪಾರ್ಕಿಂಗ್ ಸ್ಥಳವನ್ನು ದ್ವಿಚಕ್ರ ವಾಹನಗಳಿಗೆ ರೂ 15/ಗಂಟೆಗೆ ಮತ್ತು ನಾಲ್ಕು-ಚಕ್ರ ವಾಹನಗಳಿಗೆ ರೂ 30/ಗಂಟೆ ವೆಚ್ಚವಾಗಲಿದೆ” ಎಂದು ಅವರು ಹೇಳಿದ್ದಾರೆ.

“‘ಬಿ ವರ್ಗ’ ಜಾಗದಲ್ಲಿ ಪಾರ್ಕಿಂಗ್ ದ್ವಿಚಕ್ರ ವಾಹನಗಳಿಗೆ ರೂ 10/ಗಂಟೆಗೆ ಮತ್ತು ಕಾರುಗಳಿಗೆ 20 ರೂ. ವೆಚ್ಚವಾಗಲಿದೆ. ‘ಸಿ ವರ್ಗ’ದ ಪಾರ್ಕಿಂಗ್ ಜಾಗವೂ ಅಗ್ಗದಲ್ಲಿ ಲಭ್ಯವಾಗಲಿದ್ದು, ಬೈಕ್ ಮತ್ತು ಕಾರ್ ಮಾಲೀಕರು ಕ್ರಮವಾಗಿ 5 ರೂ. ಮತ್ತು 10ರೂ. ಪ್ರತಿ ಗಂಟೆಗೆ ಪಾವತಿಸಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಹೊರ ವಲಯದಲ್ಲಿ ಅಗ್ಗ

ಯಲಹಂಕ, ಬೊಮ್ಮನಹಳ್ಳಿ, ರಾಜರಾಜೇಶ್ವರಿ ನಗರ ಮತ್ತು ದಾಸರಹಳ್ಳಿಯಂತಹ ವಲಯಗಳಲ್ಲಿ, ಹೆಚ್ಚಿನ ರಸ್ತೆಗಳು ಎ ವರ್ಗಕ್ಕೆ ಬರದ ಕಾರಣ ಪಾರ್ಕಿಂಗ್ ಶುಲ್ಕವು ಮಧ್ಯಮವಾಗಿರುತ್ತದೆ. ಆದರೆ, ನಗರದ ಪ್ರಮುಖ ಪ್ರದೇಶಗಳು ಮತ್ತು ದಟ್ಟಣೆಯ ಕಾರಿಡಾರ್‌ಗಳಲ್ಲಿ ಈ ವೆಚ್ಚವು ಹೆಚ್ಚಾಗಿರುತ್ತದೆ.

ಇದನ್ನೂ ಓದಿ: ಬಿಬಿಎಂಪಿ ಚುನಾವಣೆಯಲ್ಲಿ ಮೀಸಲಾತಿಯ ಬಗ್ಗೆ..

ಬಿಬಿಎಂಪಿಯು ಪೂರ್ವ ವಲಯದಿಂದ ಕನಿಷ್ಠ 62 ಕೋಟಿ ರೂ. ಪಾರ್ಕಿಂಗ್ ಆದಾಯವನ್ನು ಗಳಿಸುವ ನಿರೀಕ್ಷೆಯನ್ನು ಹೊಂದಿದೆ. ನಂತರದ ಸ್ಥಾನದಲ್ಲಿ ದಕ್ಷಿಣ (50 ಕೋಟಿ) ಮತ್ತು ಪಶ್ಚಿಮ (ರೂ. 20.71 ಕೋಟಿ) ವಲಯಗಳು ಇವೆ. ರಾಜರಾಜೇಶ್ವರಿನಗರದಿಂದ (5 ಕೋಟಿ ರೂ.) ಕನಿಷ್ಠ ಮೊತ್ತವನ್ನು ಅಧಿಕಾರಿಗಳು ನಿರೀಕ್ಷಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ರೀ ಸ್ವಾಮೀ, ನಿಮ್ಗೆ ಜನರಿಂದ ದುಡ್ಡು ಹೇಗೆ ಕಸಿಯಬೇಕು ಅಂತಾ ಗೊತ್ತೇ ವಿನಃ, ಅವರಿಗೆ ಏನು ಅನುಕೂಲ ಕೊಡಬೇಕು ಅನ್ನೋ ಕನಿಷ್ಠ ಮಟ್ಟದ ಆಲೋಚನೆ ಕೂಡ ನಿಮ್ಗೆ ಬರೊಲ್ವೆ,, ಒಂದೂ ರೋಡ್ ಸರೀ ಇಲ್ಲಾ, ಫ್ಲೈ ಓವರ್ ಯಾವುದೂ ನೆಟ್ಟಗೆ ಮಾಡಿಲ್ಲ, ಜಾಯಿಂಟ್ ಗಳಲ್ಲಿ ಗ್ಯಾಪ್ ಜಾಸ್ತಿ ಇದೆ, ಗಾಡಿಗಳು ಜಂಪ್ ಆಗೀ ಆಗೀ, ನಮ್ಮ ಗಾಡಿ ಹಾಳಗಿದಲ್ದೆ, ನಮ್ಮ ಸೊಂಟಾನೂ ಮುರಿದು ಬೀಳುತ್ತೆ, ಮೋರಿಗಳನ್ನೆಲ್ಲಾ unsceintific ಆಗೀ ಕಾಂಕ್ರೀಟ್ ಮಾಡೀ, ಮಳೆ ನೀರು ಭೂಮಿಯಲ್ಲಿ ಒಂದು ಚೂರೂ ಇಂಗಿ ಕೊಳ್ಳದೆ ಎಲ್ಲಾ ನೀರೂ ರಾಜಾ ಕಾಲುವೆಗೆ ಹರಿದು, ಮುಂಚಿನ ಹಾಗೆ ಭೂಮಿಯ ಒಳಗೆ ನೀರು ಹೋಗದ ಹಾಗೆ ಮಾಡಿ ಅಂತರ್ಜಲವನ್ನು ಪೂರ್ತಿ ಕಡಿಮೆ ಮಾಡಿ, ಬರಡು ಭೂಮಿ ಮಾಡಿದ್ದೀರಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...