Homeಕರ್ನಾಟಕಬೆಂಗಳೂರು: ಇನ್ನು ಮುಂದೆ ರಸ್ತೆ ಬದಿ ಪಾರ್ಕಿಂಗ್‌‌‌ಗೆ ಶುಲ್ಕ!

ಬೆಂಗಳೂರು: ಇನ್ನು ಮುಂದೆ ರಸ್ತೆ ಬದಿ ಪಾರ್ಕಿಂಗ್‌‌‌ಗೆ ಶುಲ್ಕ!

- Advertisement -
- Advertisement -

ಬೆಂಗಳೂರಿನಲ್ಲಿ ಪಾವತಿ ಪಾರ್ಕಿಂಗ್‌‌‌ ಅನ್ನು ಪರಿಚಯಿಸಲು ಟೆಂಡರ್‌ಗಳನ್ನು ಆಹ್ವಾನಿಸಲು ಬೃಹತ್‌‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಿದ್ಧವಾಗಿದೆ. 2021ರ ಫೆಬ್ರವರಿ 2 ರಂದು ರಾಜ್ಯ ಸರ್ಕಾರವು ಅನುಮೋದಿಸಿದ ಪಾರ್ಕಿಂಗ್ ನೀತಿಯ ಅಡಿಯಲ್ಲಿ, ನಗರವನ್ನು ಉಚಿತ ಪಾರ್ಕಿಂಗ್‌ನಿಂದ ಪಾವತಿಸಿದ ಪಾರ್ಕಿಂಗ್‌ ನಗರವಾಗಿ ರೂಪಿಸಲು ಹೊರಟಿದೆ. ಈ ಮೂಲಕ ವೈಯಕ್ತಿಕ ವಾಹನಗಳ ಬಳಕೆಯನ್ನು ಪರೋಕ್ಷವಾಗಿ ನಿರುತ್ಸಾಹಗೊಳಿಸುವ ಜವಾಬ್ದಾರಿಯನ್ನು ಬಿಬಿಎಂಪಿಗೆ ವಹಿಸಲಾಗಿದೆ.

ನಗರ ಭೂ ಸಾರಿಗೆ ನಿರ್ದೇಶನಾಲಯವು (DULT) ವಿವರವಾದ ಅಧ್ಯಯನದ ನಂತರ ಸಿದ್ಧಪಡಿಸಿದ ಮತ್ತು ಎಲ್ಲಾ ಎಂಟು ವಲಯಗಳಲ್ಲಿ ಜಾರಿಗೊಳಿಸುವ ಯೋಜನೆಯೊಂದಿಗೆ ಕನಿಷ್ಠ 188 ಕೋಟಿ ರೂ.ಗಳ ವಾರ್ಷಿಕ ಆದಾಯವನ್ನು ಗಳಿಸುವ ಉದ್ದೇಶವನ್ನು ಬಿಬಿಎಂಪಿ ಸಂಸ್ಥೆ ಹೊಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

DULT ನ ಅಧಿಕಾರಿಗಳು ದ್ವಿಚಕ್ರ ಮತ್ತು ನಾಲ್ಕು ಚಕ್ರಗಳ ಜೊತೆಗೆ, ಸೈಕಲ್‌ಗಳು, ಲೋಡ್-ಅನ್‌ಲೋಡಿಂಗ್ ಮತ್ತು ಆಟೋ ಸ್ಟ್ಯಾಂಡ್‌ಗಳಿಗೆ ಅನ್ವಯವಾಗುವ ಸ್ಥಳದಲ್ಲಿ ಪಾರ್ಕಿಂಗ್ ಸ್ಥಳವನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ ಬಿಬಿಎಂಪಿ

ಒಂದು ಅಥವಾ ಎರಡು ದಿನಗಳಲ್ಲಿ ಟೆಂಡರ್‌ಗಳು ಬಿಡ್ಡಿಂಗ್‌ಗೆ ಲಭ್ಯವಿರುತ್ತವೆ ಎಂದು ಬಿಬಿಎಂಪಿ ಮುಖ್ಯ ಇಂಜಿನಿಯರ್‌ ಬಿ.ಎಸ್. ಪ್ರಹ್ಲಾದ್ ಹೇಳಿದ್ದಾರೆ. ರಸ್ತೆಗಳನ್ನು ಮೂರು ವಿಭಾಗಗಳಾಗಿ ವಿಂಗಡಿಸಿದ ನಂತರ ಪಾರ್ಕಿಂಗ್ ಶುಲ್ಕವನ್ನು ನಿರ್ಧರಿಸಲಾಗಿದೆ ಎಂದು ಟ್ರಾಫಿಕ್ ಎಂಜಿನಿಯರಿಂಗ್ ಸೆಲ್ (ಟಿಇಸಿ) ಅಧಿಕಾರಿಗಳು ತಿಳಿಸಿದ್ದಾರೆ.

“ಭೂಮಿಯ ಮಾರುಕಟ್ಟೆ ಮೌಲ್ಯ ಮತ್ತು ಕ್ಯಾರೇಜ್‌ ವೇ ಅಗಲದ ಆಧಾರದ ಮೇಲೆ ರಸ್ತೆಗಳನ್ನು ಎ, ಬಿ ಮತ್ತು ಸಿ ಎಂದು ವರ್ಗೀಕರಿಸಲಾಗಿದೆ. ಸ್ಥಳದ ಲಭ್ಯತೆಯ ಆಧಾರದ ಮೇಲೆ ಪ್ರತಿಯೊಂದು ವಲಯಗಳಲ್ಲಿ ಪಾರ್ಕಿಂಗ್ ಸ್ಥಳವನ್ನು ಗುರುತಿಸಲಾಗಿದೆ” ಎಂದು ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ (TEC) ) ಹೆಚ್.ಎನ್. ಜಯಸಿಂಹ ಹೇಳಿದ್ದಾರೆ.

ಬೆಳಿಗ್ಗೆ 7 ರಿಂದ ರಾತ್ರಿ 10 ರವರೆಗೆ ದಿನಕ್ಕೆ 12 ರಿಂದ 15 ಗಂಟೆಗಳ ಕಾಲ ಪಾವತಿ ಪಾರ್ಕಿಂಗ್ ಜಾರಿಯಲ್ಲಿರುತ್ತದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಇದನ್ನೂ ಓದಿ: ರಾಜಕಾಲುವೆ ಒತ್ತುವರಿ: ಘಟಾನುಘಟಿ ಸಂಸ್ಥೆಗಳ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ

“ಪಾರ್ಕಿಂಗ್ ಶುಲ್ಕ ಮತ್ತು ವಾಹನ ನಿಲುಗಡೆ ಅವಧಿಯ ಕುರಿತು ಚರ್ಚೆ ಅಂತಿಮ ಹಂತದಲ್ಲಿದೆ. ತಾತ್ಕಾಲಿಕವಾಗಿ ‘ಎ ವರ್ಗ’ದ ಪಾರ್ಕಿಂಗ್ ಸ್ಥಳವನ್ನು ದ್ವಿಚಕ್ರ ವಾಹನಗಳಿಗೆ ರೂ 15/ಗಂಟೆಗೆ ಮತ್ತು ನಾಲ್ಕು-ಚಕ್ರ ವಾಹನಗಳಿಗೆ ರೂ 30/ಗಂಟೆ ವೆಚ್ಚವಾಗಲಿದೆ” ಎಂದು ಅವರು ಹೇಳಿದ್ದಾರೆ.

“‘ಬಿ ವರ್ಗ’ ಜಾಗದಲ್ಲಿ ಪಾರ್ಕಿಂಗ್ ದ್ವಿಚಕ್ರ ವಾಹನಗಳಿಗೆ ರೂ 10/ಗಂಟೆಗೆ ಮತ್ತು ಕಾರುಗಳಿಗೆ 20 ರೂ. ವೆಚ್ಚವಾಗಲಿದೆ. ‘ಸಿ ವರ್ಗ’ದ ಪಾರ್ಕಿಂಗ್ ಜಾಗವೂ ಅಗ್ಗದಲ್ಲಿ ಲಭ್ಯವಾಗಲಿದ್ದು, ಬೈಕ್ ಮತ್ತು ಕಾರ್ ಮಾಲೀಕರು ಕ್ರಮವಾಗಿ 5 ರೂ. ಮತ್ತು 10ರೂ. ಪ್ರತಿ ಗಂಟೆಗೆ ಪಾವತಿಸಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಹೊರ ವಲಯದಲ್ಲಿ ಅಗ್ಗ

ಯಲಹಂಕ, ಬೊಮ್ಮನಹಳ್ಳಿ, ರಾಜರಾಜೇಶ್ವರಿ ನಗರ ಮತ್ತು ದಾಸರಹಳ್ಳಿಯಂತಹ ವಲಯಗಳಲ್ಲಿ, ಹೆಚ್ಚಿನ ರಸ್ತೆಗಳು ಎ ವರ್ಗಕ್ಕೆ ಬರದ ಕಾರಣ ಪಾರ್ಕಿಂಗ್ ಶುಲ್ಕವು ಮಧ್ಯಮವಾಗಿರುತ್ತದೆ. ಆದರೆ, ನಗರದ ಪ್ರಮುಖ ಪ್ರದೇಶಗಳು ಮತ್ತು ದಟ್ಟಣೆಯ ಕಾರಿಡಾರ್‌ಗಳಲ್ಲಿ ಈ ವೆಚ್ಚವು ಹೆಚ್ಚಾಗಿರುತ್ತದೆ.

ಇದನ್ನೂ ಓದಿ: ಬಿಬಿಎಂಪಿ ಚುನಾವಣೆಯಲ್ಲಿ ಮೀಸಲಾತಿಯ ಬಗ್ಗೆ..

ಬಿಬಿಎಂಪಿಯು ಪೂರ್ವ ವಲಯದಿಂದ ಕನಿಷ್ಠ 62 ಕೋಟಿ ರೂ. ಪಾರ್ಕಿಂಗ್ ಆದಾಯವನ್ನು ಗಳಿಸುವ ನಿರೀಕ್ಷೆಯನ್ನು ಹೊಂದಿದೆ. ನಂತರದ ಸ್ಥಾನದಲ್ಲಿ ದಕ್ಷಿಣ (50 ಕೋಟಿ) ಮತ್ತು ಪಶ್ಚಿಮ (ರೂ. 20.71 ಕೋಟಿ) ವಲಯಗಳು ಇವೆ. ರಾಜರಾಜೇಶ್ವರಿನಗರದಿಂದ (5 ಕೋಟಿ ರೂ.) ಕನಿಷ್ಠ ಮೊತ್ತವನ್ನು ಅಧಿಕಾರಿಗಳು ನಿರೀಕ್ಷಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ರೀ ಸ್ವಾಮೀ, ನಿಮ್ಗೆ ಜನರಿಂದ ದುಡ್ಡು ಹೇಗೆ ಕಸಿಯಬೇಕು ಅಂತಾ ಗೊತ್ತೇ ವಿನಃ, ಅವರಿಗೆ ಏನು ಅನುಕೂಲ ಕೊಡಬೇಕು ಅನ್ನೋ ಕನಿಷ್ಠ ಮಟ್ಟದ ಆಲೋಚನೆ ಕೂಡ ನಿಮ್ಗೆ ಬರೊಲ್ವೆ,, ಒಂದೂ ರೋಡ್ ಸರೀ ಇಲ್ಲಾ, ಫ್ಲೈ ಓವರ್ ಯಾವುದೂ ನೆಟ್ಟಗೆ ಮಾಡಿಲ್ಲ, ಜಾಯಿಂಟ್ ಗಳಲ್ಲಿ ಗ್ಯಾಪ್ ಜಾಸ್ತಿ ಇದೆ, ಗಾಡಿಗಳು ಜಂಪ್ ಆಗೀ ಆಗೀ, ನಮ್ಮ ಗಾಡಿ ಹಾಳಗಿದಲ್ದೆ, ನಮ್ಮ ಸೊಂಟಾನೂ ಮುರಿದು ಬೀಳುತ್ತೆ, ಮೋರಿಗಳನ್ನೆಲ್ಲಾ unsceintific ಆಗೀ ಕಾಂಕ್ರೀಟ್ ಮಾಡೀ, ಮಳೆ ನೀರು ಭೂಮಿಯಲ್ಲಿ ಒಂದು ಚೂರೂ ಇಂಗಿ ಕೊಳ್ಳದೆ ಎಲ್ಲಾ ನೀರೂ ರಾಜಾ ಕಾಲುವೆಗೆ ಹರಿದು, ಮುಂಚಿನ ಹಾಗೆ ಭೂಮಿಯ ಒಳಗೆ ನೀರು ಹೋಗದ ಹಾಗೆ ಮಾಡಿ ಅಂತರ್ಜಲವನ್ನು ಪೂರ್ತಿ ಕಡಿಮೆ ಮಾಡಿ, ಬರಡು ಭೂಮಿ ಮಾಡಿದ್ದೀರಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...