Homeಕರ್ನಾಟಕಬೆಂಗಳೂರು: ಇನ್ನು ಮುಂದೆ ರಸ್ತೆ ಬದಿ ಪಾರ್ಕಿಂಗ್‌‌‌ಗೆ ಶುಲ್ಕ!

ಬೆಂಗಳೂರು: ಇನ್ನು ಮುಂದೆ ರಸ್ತೆ ಬದಿ ಪಾರ್ಕಿಂಗ್‌‌‌ಗೆ ಶುಲ್ಕ!

- Advertisement -
- Advertisement -

ಬೆಂಗಳೂರಿನಲ್ಲಿ ಪಾವತಿ ಪಾರ್ಕಿಂಗ್‌‌‌ ಅನ್ನು ಪರಿಚಯಿಸಲು ಟೆಂಡರ್‌ಗಳನ್ನು ಆಹ್ವಾನಿಸಲು ಬೃಹತ್‌‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಿದ್ಧವಾಗಿದೆ. 2021ರ ಫೆಬ್ರವರಿ 2 ರಂದು ರಾಜ್ಯ ಸರ್ಕಾರವು ಅನುಮೋದಿಸಿದ ಪಾರ್ಕಿಂಗ್ ನೀತಿಯ ಅಡಿಯಲ್ಲಿ, ನಗರವನ್ನು ಉಚಿತ ಪಾರ್ಕಿಂಗ್‌ನಿಂದ ಪಾವತಿಸಿದ ಪಾರ್ಕಿಂಗ್‌ ನಗರವಾಗಿ ರೂಪಿಸಲು ಹೊರಟಿದೆ. ಈ ಮೂಲಕ ವೈಯಕ್ತಿಕ ವಾಹನಗಳ ಬಳಕೆಯನ್ನು ಪರೋಕ್ಷವಾಗಿ ನಿರುತ್ಸಾಹಗೊಳಿಸುವ ಜವಾಬ್ದಾರಿಯನ್ನು ಬಿಬಿಎಂಪಿಗೆ ವಹಿಸಲಾಗಿದೆ.

ನಗರ ಭೂ ಸಾರಿಗೆ ನಿರ್ದೇಶನಾಲಯವು (DULT) ವಿವರವಾದ ಅಧ್ಯಯನದ ನಂತರ ಸಿದ್ಧಪಡಿಸಿದ ಮತ್ತು ಎಲ್ಲಾ ಎಂಟು ವಲಯಗಳಲ್ಲಿ ಜಾರಿಗೊಳಿಸುವ ಯೋಜನೆಯೊಂದಿಗೆ ಕನಿಷ್ಠ 188 ಕೋಟಿ ರೂ.ಗಳ ವಾರ್ಷಿಕ ಆದಾಯವನ್ನು ಗಳಿಸುವ ಉದ್ದೇಶವನ್ನು ಬಿಬಿಎಂಪಿ ಸಂಸ್ಥೆ ಹೊಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

DULT ನ ಅಧಿಕಾರಿಗಳು ದ್ವಿಚಕ್ರ ಮತ್ತು ನಾಲ್ಕು ಚಕ್ರಗಳ ಜೊತೆಗೆ, ಸೈಕಲ್‌ಗಳು, ಲೋಡ್-ಅನ್‌ಲೋಡಿಂಗ್ ಮತ್ತು ಆಟೋ ಸ್ಟ್ಯಾಂಡ್‌ಗಳಿಗೆ ಅನ್ವಯವಾಗುವ ಸ್ಥಳದಲ್ಲಿ ಪಾರ್ಕಿಂಗ್ ಸ್ಥಳವನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ ಬಿಬಿಎಂಪಿ

ಒಂದು ಅಥವಾ ಎರಡು ದಿನಗಳಲ್ಲಿ ಟೆಂಡರ್‌ಗಳು ಬಿಡ್ಡಿಂಗ್‌ಗೆ ಲಭ್ಯವಿರುತ್ತವೆ ಎಂದು ಬಿಬಿಎಂಪಿ ಮುಖ್ಯ ಇಂಜಿನಿಯರ್‌ ಬಿ.ಎಸ್. ಪ್ರಹ್ಲಾದ್ ಹೇಳಿದ್ದಾರೆ. ರಸ್ತೆಗಳನ್ನು ಮೂರು ವಿಭಾಗಗಳಾಗಿ ವಿಂಗಡಿಸಿದ ನಂತರ ಪಾರ್ಕಿಂಗ್ ಶುಲ್ಕವನ್ನು ನಿರ್ಧರಿಸಲಾಗಿದೆ ಎಂದು ಟ್ರಾಫಿಕ್ ಎಂಜಿನಿಯರಿಂಗ್ ಸೆಲ್ (ಟಿಇಸಿ) ಅಧಿಕಾರಿಗಳು ತಿಳಿಸಿದ್ದಾರೆ.

“ಭೂಮಿಯ ಮಾರುಕಟ್ಟೆ ಮೌಲ್ಯ ಮತ್ತು ಕ್ಯಾರೇಜ್‌ ವೇ ಅಗಲದ ಆಧಾರದ ಮೇಲೆ ರಸ್ತೆಗಳನ್ನು ಎ, ಬಿ ಮತ್ತು ಸಿ ಎಂದು ವರ್ಗೀಕರಿಸಲಾಗಿದೆ. ಸ್ಥಳದ ಲಭ್ಯತೆಯ ಆಧಾರದ ಮೇಲೆ ಪ್ರತಿಯೊಂದು ವಲಯಗಳಲ್ಲಿ ಪಾರ್ಕಿಂಗ್ ಸ್ಥಳವನ್ನು ಗುರುತಿಸಲಾಗಿದೆ” ಎಂದು ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ (TEC) ) ಹೆಚ್.ಎನ್. ಜಯಸಿಂಹ ಹೇಳಿದ್ದಾರೆ.

ಬೆಳಿಗ್ಗೆ 7 ರಿಂದ ರಾತ್ರಿ 10 ರವರೆಗೆ ದಿನಕ್ಕೆ 12 ರಿಂದ 15 ಗಂಟೆಗಳ ಕಾಲ ಪಾವತಿ ಪಾರ್ಕಿಂಗ್ ಜಾರಿಯಲ್ಲಿರುತ್ತದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಇದನ್ನೂ ಓದಿ: ರಾಜಕಾಲುವೆ ಒತ್ತುವರಿ: ಘಟಾನುಘಟಿ ಸಂಸ್ಥೆಗಳ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ

“ಪಾರ್ಕಿಂಗ್ ಶುಲ್ಕ ಮತ್ತು ವಾಹನ ನಿಲುಗಡೆ ಅವಧಿಯ ಕುರಿತು ಚರ್ಚೆ ಅಂತಿಮ ಹಂತದಲ್ಲಿದೆ. ತಾತ್ಕಾಲಿಕವಾಗಿ ‘ಎ ವರ್ಗ’ದ ಪಾರ್ಕಿಂಗ್ ಸ್ಥಳವನ್ನು ದ್ವಿಚಕ್ರ ವಾಹನಗಳಿಗೆ ರೂ 15/ಗಂಟೆಗೆ ಮತ್ತು ನಾಲ್ಕು-ಚಕ್ರ ವಾಹನಗಳಿಗೆ ರೂ 30/ಗಂಟೆ ವೆಚ್ಚವಾಗಲಿದೆ” ಎಂದು ಅವರು ಹೇಳಿದ್ದಾರೆ.

“‘ಬಿ ವರ್ಗ’ ಜಾಗದಲ್ಲಿ ಪಾರ್ಕಿಂಗ್ ದ್ವಿಚಕ್ರ ವಾಹನಗಳಿಗೆ ರೂ 10/ಗಂಟೆಗೆ ಮತ್ತು ಕಾರುಗಳಿಗೆ 20 ರೂ. ವೆಚ್ಚವಾಗಲಿದೆ. ‘ಸಿ ವರ್ಗ’ದ ಪಾರ್ಕಿಂಗ್ ಜಾಗವೂ ಅಗ್ಗದಲ್ಲಿ ಲಭ್ಯವಾಗಲಿದ್ದು, ಬೈಕ್ ಮತ್ತು ಕಾರ್ ಮಾಲೀಕರು ಕ್ರಮವಾಗಿ 5 ರೂ. ಮತ್ತು 10ರೂ. ಪ್ರತಿ ಗಂಟೆಗೆ ಪಾವತಿಸಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಹೊರ ವಲಯದಲ್ಲಿ ಅಗ್ಗ

ಯಲಹಂಕ, ಬೊಮ್ಮನಹಳ್ಳಿ, ರಾಜರಾಜೇಶ್ವರಿ ನಗರ ಮತ್ತು ದಾಸರಹಳ್ಳಿಯಂತಹ ವಲಯಗಳಲ್ಲಿ, ಹೆಚ್ಚಿನ ರಸ್ತೆಗಳು ಎ ವರ್ಗಕ್ಕೆ ಬರದ ಕಾರಣ ಪಾರ್ಕಿಂಗ್ ಶುಲ್ಕವು ಮಧ್ಯಮವಾಗಿರುತ್ತದೆ. ಆದರೆ, ನಗರದ ಪ್ರಮುಖ ಪ್ರದೇಶಗಳು ಮತ್ತು ದಟ್ಟಣೆಯ ಕಾರಿಡಾರ್‌ಗಳಲ್ಲಿ ಈ ವೆಚ್ಚವು ಹೆಚ್ಚಾಗಿರುತ್ತದೆ.

ಇದನ್ನೂ ಓದಿ: ಬಿಬಿಎಂಪಿ ಚುನಾವಣೆಯಲ್ಲಿ ಮೀಸಲಾತಿಯ ಬಗ್ಗೆ..

ಬಿಬಿಎಂಪಿಯು ಪೂರ್ವ ವಲಯದಿಂದ ಕನಿಷ್ಠ 62 ಕೋಟಿ ರೂ. ಪಾರ್ಕಿಂಗ್ ಆದಾಯವನ್ನು ಗಳಿಸುವ ನಿರೀಕ್ಷೆಯನ್ನು ಹೊಂದಿದೆ. ನಂತರದ ಸ್ಥಾನದಲ್ಲಿ ದಕ್ಷಿಣ (50 ಕೋಟಿ) ಮತ್ತು ಪಶ್ಚಿಮ (ರೂ. 20.71 ಕೋಟಿ) ವಲಯಗಳು ಇವೆ. ರಾಜರಾಜೇಶ್ವರಿನಗರದಿಂದ (5 ಕೋಟಿ ರೂ.) ಕನಿಷ್ಠ ಮೊತ್ತವನ್ನು ಅಧಿಕಾರಿಗಳು ನಿರೀಕ್ಷಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ರೀ ಸ್ವಾಮೀ, ನಿಮ್ಗೆ ಜನರಿಂದ ದುಡ್ಡು ಹೇಗೆ ಕಸಿಯಬೇಕು ಅಂತಾ ಗೊತ್ತೇ ವಿನಃ, ಅವರಿಗೆ ಏನು ಅನುಕೂಲ ಕೊಡಬೇಕು ಅನ್ನೋ ಕನಿಷ್ಠ ಮಟ್ಟದ ಆಲೋಚನೆ ಕೂಡ ನಿಮ್ಗೆ ಬರೊಲ್ವೆ,, ಒಂದೂ ರೋಡ್ ಸರೀ ಇಲ್ಲಾ, ಫ್ಲೈ ಓವರ್ ಯಾವುದೂ ನೆಟ್ಟಗೆ ಮಾಡಿಲ್ಲ, ಜಾಯಿಂಟ್ ಗಳಲ್ಲಿ ಗ್ಯಾಪ್ ಜಾಸ್ತಿ ಇದೆ, ಗಾಡಿಗಳು ಜಂಪ್ ಆಗೀ ಆಗೀ, ನಮ್ಮ ಗಾಡಿ ಹಾಳಗಿದಲ್ದೆ, ನಮ್ಮ ಸೊಂಟಾನೂ ಮುರಿದು ಬೀಳುತ್ತೆ, ಮೋರಿಗಳನ್ನೆಲ್ಲಾ unsceintific ಆಗೀ ಕಾಂಕ್ರೀಟ್ ಮಾಡೀ, ಮಳೆ ನೀರು ಭೂಮಿಯಲ್ಲಿ ಒಂದು ಚೂರೂ ಇಂಗಿ ಕೊಳ್ಳದೆ ಎಲ್ಲಾ ನೀರೂ ರಾಜಾ ಕಾಲುವೆಗೆ ಹರಿದು, ಮುಂಚಿನ ಹಾಗೆ ಭೂಮಿಯ ಒಳಗೆ ನೀರು ಹೋಗದ ಹಾಗೆ ಮಾಡಿ ಅಂತರ್ಜಲವನ್ನು ಪೂರ್ತಿ ಕಡಿಮೆ ಮಾಡಿ, ಬರಡು ಭೂಮಿ ಮಾಡಿದ್ದೀರಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...