Homeಕರ್ನಾಟಕಬೆಂಗಳೂರು: ಇನ್ನು ಮುಂದೆ ರಸ್ತೆ ಬದಿ ಪಾರ್ಕಿಂಗ್‌‌‌ಗೆ ಶುಲ್ಕ!

ಬೆಂಗಳೂರು: ಇನ್ನು ಮುಂದೆ ರಸ್ತೆ ಬದಿ ಪಾರ್ಕಿಂಗ್‌‌‌ಗೆ ಶುಲ್ಕ!

- Advertisement -
- Advertisement -

ಬೆಂಗಳೂರಿನಲ್ಲಿ ಪಾವತಿ ಪಾರ್ಕಿಂಗ್‌‌‌ ಅನ್ನು ಪರಿಚಯಿಸಲು ಟೆಂಡರ್‌ಗಳನ್ನು ಆಹ್ವಾನಿಸಲು ಬೃಹತ್‌‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಿದ್ಧವಾಗಿದೆ. 2021ರ ಫೆಬ್ರವರಿ 2 ರಂದು ರಾಜ್ಯ ಸರ್ಕಾರವು ಅನುಮೋದಿಸಿದ ಪಾರ್ಕಿಂಗ್ ನೀತಿಯ ಅಡಿಯಲ್ಲಿ, ನಗರವನ್ನು ಉಚಿತ ಪಾರ್ಕಿಂಗ್‌ನಿಂದ ಪಾವತಿಸಿದ ಪಾರ್ಕಿಂಗ್‌ ನಗರವಾಗಿ ರೂಪಿಸಲು ಹೊರಟಿದೆ. ಈ ಮೂಲಕ ವೈಯಕ್ತಿಕ ವಾಹನಗಳ ಬಳಕೆಯನ್ನು ಪರೋಕ್ಷವಾಗಿ ನಿರುತ್ಸಾಹಗೊಳಿಸುವ ಜವಾಬ್ದಾರಿಯನ್ನು ಬಿಬಿಎಂಪಿಗೆ ವಹಿಸಲಾಗಿದೆ.

ನಗರ ಭೂ ಸಾರಿಗೆ ನಿರ್ದೇಶನಾಲಯವು (DULT) ವಿವರವಾದ ಅಧ್ಯಯನದ ನಂತರ ಸಿದ್ಧಪಡಿಸಿದ ಮತ್ತು ಎಲ್ಲಾ ಎಂಟು ವಲಯಗಳಲ್ಲಿ ಜಾರಿಗೊಳಿಸುವ ಯೋಜನೆಯೊಂದಿಗೆ ಕನಿಷ್ಠ 188 ಕೋಟಿ ರೂ.ಗಳ ವಾರ್ಷಿಕ ಆದಾಯವನ್ನು ಗಳಿಸುವ ಉದ್ದೇಶವನ್ನು ಬಿಬಿಎಂಪಿ ಸಂಸ್ಥೆ ಹೊಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

DULT ನ ಅಧಿಕಾರಿಗಳು ದ್ವಿಚಕ್ರ ಮತ್ತು ನಾಲ್ಕು ಚಕ್ರಗಳ ಜೊತೆಗೆ, ಸೈಕಲ್‌ಗಳು, ಲೋಡ್-ಅನ್‌ಲೋಡಿಂಗ್ ಮತ್ತು ಆಟೋ ಸ್ಟ್ಯಾಂಡ್‌ಗಳಿಗೆ ಅನ್ವಯವಾಗುವ ಸ್ಥಳದಲ್ಲಿ ಪಾರ್ಕಿಂಗ್ ಸ್ಥಳವನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ ಬಿಬಿಎಂಪಿ

ಒಂದು ಅಥವಾ ಎರಡು ದಿನಗಳಲ್ಲಿ ಟೆಂಡರ್‌ಗಳು ಬಿಡ್ಡಿಂಗ್‌ಗೆ ಲಭ್ಯವಿರುತ್ತವೆ ಎಂದು ಬಿಬಿಎಂಪಿ ಮುಖ್ಯ ಇಂಜಿನಿಯರ್‌ ಬಿ.ಎಸ್. ಪ್ರಹ್ಲಾದ್ ಹೇಳಿದ್ದಾರೆ. ರಸ್ತೆಗಳನ್ನು ಮೂರು ವಿಭಾಗಗಳಾಗಿ ವಿಂಗಡಿಸಿದ ನಂತರ ಪಾರ್ಕಿಂಗ್ ಶುಲ್ಕವನ್ನು ನಿರ್ಧರಿಸಲಾಗಿದೆ ಎಂದು ಟ್ರಾಫಿಕ್ ಎಂಜಿನಿಯರಿಂಗ್ ಸೆಲ್ (ಟಿಇಸಿ) ಅಧಿಕಾರಿಗಳು ತಿಳಿಸಿದ್ದಾರೆ.

“ಭೂಮಿಯ ಮಾರುಕಟ್ಟೆ ಮೌಲ್ಯ ಮತ್ತು ಕ್ಯಾರೇಜ್‌ ವೇ ಅಗಲದ ಆಧಾರದ ಮೇಲೆ ರಸ್ತೆಗಳನ್ನು ಎ, ಬಿ ಮತ್ತು ಸಿ ಎಂದು ವರ್ಗೀಕರಿಸಲಾಗಿದೆ. ಸ್ಥಳದ ಲಭ್ಯತೆಯ ಆಧಾರದ ಮೇಲೆ ಪ್ರತಿಯೊಂದು ವಲಯಗಳಲ್ಲಿ ಪಾರ್ಕಿಂಗ್ ಸ್ಥಳವನ್ನು ಗುರುತಿಸಲಾಗಿದೆ” ಎಂದು ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ (TEC) ) ಹೆಚ್.ಎನ್. ಜಯಸಿಂಹ ಹೇಳಿದ್ದಾರೆ.

ಬೆಳಿಗ್ಗೆ 7 ರಿಂದ ರಾತ್ರಿ 10 ರವರೆಗೆ ದಿನಕ್ಕೆ 12 ರಿಂದ 15 ಗಂಟೆಗಳ ಕಾಲ ಪಾವತಿ ಪಾರ್ಕಿಂಗ್ ಜಾರಿಯಲ್ಲಿರುತ್ತದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಇದನ್ನೂ ಓದಿ: ರಾಜಕಾಲುವೆ ಒತ್ತುವರಿ: ಘಟಾನುಘಟಿ ಸಂಸ್ಥೆಗಳ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ

“ಪಾರ್ಕಿಂಗ್ ಶುಲ್ಕ ಮತ್ತು ವಾಹನ ನಿಲುಗಡೆ ಅವಧಿಯ ಕುರಿತು ಚರ್ಚೆ ಅಂತಿಮ ಹಂತದಲ್ಲಿದೆ. ತಾತ್ಕಾಲಿಕವಾಗಿ ‘ಎ ವರ್ಗ’ದ ಪಾರ್ಕಿಂಗ್ ಸ್ಥಳವನ್ನು ದ್ವಿಚಕ್ರ ವಾಹನಗಳಿಗೆ ರೂ 15/ಗಂಟೆಗೆ ಮತ್ತು ನಾಲ್ಕು-ಚಕ್ರ ವಾಹನಗಳಿಗೆ ರೂ 30/ಗಂಟೆ ವೆಚ್ಚವಾಗಲಿದೆ” ಎಂದು ಅವರು ಹೇಳಿದ್ದಾರೆ.

“‘ಬಿ ವರ್ಗ’ ಜಾಗದಲ್ಲಿ ಪಾರ್ಕಿಂಗ್ ದ್ವಿಚಕ್ರ ವಾಹನಗಳಿಗೆ ರೂ 10/ಗಂಟೆಗೆ ಮತ್ತು ಕಾರುಗಳಿಗೆ 20 ರೂ. ವೆಚ್ಚವಾಗಲಿದೆ. ‘ಸಿ ವರ್ಗ’ದ ಪಾರ್ಕಿಂಗ್ ಜಾಗವೂ ಅಗ್ಗದಲ್ಲಿ ಲಭ್ಯವಾಗಲಿದ್ದು, ಬೈಕ್ ಮತ್ತು ಕಾರ್ ಮಾಲೀಕರು ಕ್ರಮವಾಗಿ 5 ರೂ. ಮತ್ತು 10ರೂ. ಪ್ರತಿ ಗಂಟೆಗೆ ಪಾವತಿಸಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಹೊರ ವಲಯದಲ್ಲಿ ಅಗ್ಗ

ಯಲಹಂಕ, ಬೊಮ್ಮನಹಳ್ಳಿ, ರಾಜರಾಜೇಶ್ವರಿ ನಗರ ಮತ್ತು ದಾಸರಹಳ್ಳಿಯಂತಹ ವಲಯಗಳಲ್ಲಿ, ಹೆಚ್ಚಿನ ರಸ್ತೆಗಳು ಎ ವರ್ಗಕ್ಕೆ ಬರದ ಕಾರಣ ಪಾರ್ಕಿಂಗ್ ಶುಲ್ಕವು ಮಧ್ಯಮವಾಗಿರುತ್ತದೆ. ಆದರೆ, ನಗರದ ಪ್ರಮುಖ ಪ್ರದೇಶಗಳು ಮತ್ತು ದಟ್ಟಣೆಯ ಕಾರಿಡಾರ್‌ಗಳಲ್ಲಿ ಈ ವೆಚ್ಚವು ಹೆಚ್ಚಾಗಿರುತ್ತದೆ.

ಇದನ್ನೂ ಓದಿ: ಬಿಬಿಎಂಪಿ ಚುನಾವಣೆಯಲ್ಲಿ ಮೀಸಲಾತಿಯ ಬಗ್ಗೆ..

ಬಿಬಿಎಂಪಿಯು ಪೂರ್ವ ವಲಯದಿಂದ ಕನಿಷ್ಠ 62 ಕೋಟಿ ರೂ. ಪಾರ್ಕಿಂಗ್ ಆದಾಯವನ್ನು ಗಳಿಸುವ ನಿರೀಕ್ಷೆಯನ್ನು ಹೊಂದಿದೆ. ನಂತರದ ಸ್ಥಾನದಲ್ಲಿ ದಕ್ಷಿಣ (50 ಕೋಟಿ) ಮತ್ತು ಪಶ್ಚಿಮ (ರೂ. 20.71 ಕೋಟಿ) ವಲಯಗಳು ಇವೆ. ರಾಜರಾಜೇಶ್ವರಿನಗರದಿಂದ (5 ಕೋಟಿ ರೂ.) ಕನಿಷ್ಠ ಮೊತ್ತವನ್ನು ಅಧಿಕಾರಿಗಳು ನಿರೀಕ್ಷಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ರೀ ಸ್ವಾಮೀ, ನಿಮ್ಗೆ ಜನರಿಂದ ದುಡ್ಡು ಹೇಗೆ ಕಸಿಯಬೇಕು ಅಂತಾ ಗೊತ್ತೇ ವಿನಃ, ಅವರಿಗೆ ಏನು ಅನುಕೂಲ ಕೊಡಬೇಕು ಅನ್ನೋ ಕನಿಷ್ಠ ಮಟ್ಟದ ಆಲೋಚನೆ ಕೂಡ ನಿಮ್ಗೆ ಬರೊಲ್ವೆ,, ಒಂದೂ ರೋಡ್ ಸರೀ ಇಲ್ಲಾ, ಫ್ಲೈ ಓವರ್ ಯಾವುದೂ ನೆಟ್ಟಗೆ ಮಾಡಿಲ್ಲ, ಜಾಯಿಂಟ್ ಗಳಲ್ಲಿ ಗ್ಯಾಪ್ ಜಾಸ್ತಿ ಇದೆ, ಗಾಡಿಗಳು ಜಂಪ್ ಆಗೀ ಆಗೀ, ನಮ್ಮ ಗಾಡಿ ಹಾಳಗಿದಲ್ದೆ, ನಮ್ಮ ಸೊಂಟಾನೂ ಮುರಿದು ಬೀಳುತ್ತೆ, ಮೋರಿಗಳನ್ನೆಲ್ಲಾ unsceintific ಆಗೀ ಕಾಂಕ್ರೀಟ್ ಮಾಡೀ, ಮಳೆ ನೀರು ಭೂಮಿಯಲ್ಲಿ ಒಂದು ಚೂರೂ ಇಂಗಿ ಕೊಳ್ಳದೆ ಎಲ್ಲಾ ನೀರೂ ರಾಜಾ ಕಾಲುವೆಗೆ ಹರಿದು, ಮುಂಚಿನ ಹಾಗೆ ಭೂಮಿಯ ಒಳಗೆ ನೀರು ಹೋಗದ ಹಾಗೆ ಮಾಡಿ ಅಂತರ್ಜಲವನ್ನು ಪೂರ್ತಿ ಕಡಿಮೆ ಮಾಡಿ, ಬರಡು ಭೂಮಿ ಮಾಡಿದ್ದೀರಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....