Homeಮುಖಪುಟಬೆಂಗಳೂರು| ಕಾರ್ಖಾನೆ ಬಸ್‌ ಹರಿದು ಗಾರ್ಮೆಂಟ್ ಉದ್ಯೋಗಿ ಸಾವು; ಪರಿಹಾರ ಕೊಡಲ್ಲ ಎಂದ 'ಗೋಲ್ಡನ್ ಸೀಮ್ಸ್'...

ಬೆಂಗಳೂರು| ಕಾರ್ಖಾನೆ ಬಸ್‌ ಹರಿದು ಗಾರ್ಮೆಂಟ್ ಉದ್ಯೋಗಿ ಸಾವು; ಪರಿಹಾರ ಕೊಡಲ್ಲ ಎಂದ ‘ಗೋಲ್ಡನ್ ಸೀಮ್ಸ್’ ಕಂಪನಿ

- Advertisement -
- Advertisement -

ಕಾರ್ಖಾನೆ ಆವರಣದಲ್ಲಿಯೇ ಗಾರ್ಮೆಂಟ್ ಉದ್ಯೋಗಿ ಮಹಿಳೆಯ ಮೇಲೆ, ಅದೇ ಕಂಪನಿಯ ಬಸ್‌ ಹರಿದಿದೆ. ಪರಿಣಾಮ, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಾಕಳಿಯಲ್ಲಿ ನಡೆದಿದೆ.

ಕಾರ್ಖಾನೆಯ ನಿರ್ಲಕ್ಷ್ಯ ಮತ್ತು ಚಾಲಕನ ಅಜಾಗರೂಕತೆಯಿಂದಲೇ ದುರ್ಘಟನೆ ನಡೆದಿದೆ ಎಂದು ಗಾರ್ಮೆಂಟ್‌ ಉದ್ಯೋಗಿಗಳು ಆರೋಪಿಸಿದ್ದಾರೆ. ಆದರೆ, ಪರಿಹಾರ ನೀಡಲು ಗಾರ್ಮೆಂಟ್‌ ಆಡಳಿತ ಮಂಡಳಿ ನಿರಕಾರಿಸಿದೆ ಎಂದು ವರದಿಯಾಗಿದೆ.

ಮಾಕಳಿಯ ‘ಗೋಲ್ಡನ್ ಸೀಮ್ಸ್’ ಗಾರ್ಮೆಂಟ್‌ ಆವರಣದಲ್ಲಿ ಮಂಗಳವಾರ ಬೆಳಗ್ಗೆ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಅದೇ ಕಾರ್ಖಾನೆಯ ಉದ್ಯೋಗಿ ನಳಿನ ಎಂದು ಗುರುತಿಸಲಾಗಿದೆ. ಅವರು ನಾಲ್ಕು ವರ್ಷಗಳಿಂದ ‘ಗೋಲ್ಡನ್ ಸೀಮ್ಸ್’ ಗಾರ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಎಂದಿನಂತೆ ನಳಿನ ಅವರು ಮಂಗಳವಾರ ಬೆಳಗ್ಗೆ ಕಾರ್ಖಾನೆಯ ಬಸ್‌ನಲ್ಲಿಯೇ ಕೆಲಸಕ್ಕಾಗಿ ಗಾರ್ಮೆಂಟ್‌ಗೆ ಬಂದಿದ್ದಾರೆ. ಕಾರ್ಖಾನೆ ಆವರಣದಲ್ಲಿ ಬಸ್‌ ಇಳಿದು, ಕಾರ್ಖಾನೆ ಒಳಗೆ ನಡೆದುಕೊಂಡು ಹೋಗುತ್ತಿದ್ದಾಗ ಚಾಲಕನ ಅಜಾಗರೂಕತೆಯಿಂದ ಬಸ್ ಆಕೆಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ, ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗಾರ್ಮೆಂಟ್‌ ಉದ್ಯೋಗಿಗಳು ಮೃತ ಮಹಿಳೆಯ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಆದರೆ, ಗಾರ್ಮೆಂಟ್‌ ಆಡಳಿತವು ಪರಿಹಾರ ನೀಡಲು ನಿರಾಕರಿಸಿದೆ ಎಂದು ಆರೋಪಿಸಲಾಗಿದೆ.

ಘಟನೆ ಮತ್ತು ಗಾರ್ಮೆಂಟ್‌ಗಳ ಧೋರಣೆ ಬಗ್ಗೆ ಮಾತನಾಡಿದ ಗಾರ್ಮೆಂಟ್ ಉದ್ಯೋಗಿ ರಾಜು, “ರಾಜ್ಯದ ಗಾರ್ಮೆಂಟ್‌ಗಳಲ್ಲಿ ಇಂತಹ ಘಟನೆಗಳು ನಡೆಯುತ್ತಲೇ ಇವೆ. ಗಾರ್ಮೆಂಟ್‌ಗಳು ತಮ್ಮ ಲಾಭಕ್ಕೊಸ್ಕರ ಕಡಿಮೆ ವೇತನ ದುಡಿಸಿಕೊಳ್ಳಲು ಗ್ರಾಮೀಣ ಭಾಗದಿಂದ ಮಹಿಳೆಯರನ್ನು ಕರೆತರುತ್ತಾರೆ. ಕಾರ್ಮಿಕರನ್ನು ಕರೆತರಲು ಉತ್ತಮ ಸ್ಥಿತಿಯಲ್ಲಿರುವ ಬಸ್‌ಗಳನ್ನೂ ಬಳಸುವುದಿಲ್ಲ. ಕಳಪೆ ಬಸ್‌ಗಳನ್ನು ಒದಗಿಸಿ ಕಾರ್ಮಿಕರನ್ನು ಸಾವಿಗೆ ದವಡೆಗೆ ದೂಡುತ್ತಿದ್ದಾರೆ. ಆ ಬಸ್‌ಗಳನ್ನು ಚಾಲಕರು ಮದ್ಯಪಾನ ಮಾಡಿ ಚಲಾಯಿಸುತ್ತಾರೆ. ಇದರಿಂದಾಗಿ ಹಲವಾರು ಅಪಘಾತಗಳು ನಡೆದು, ಕಾರ್ಮಿಕರು ಜೀವ ಕಳೆದುಕೊಂಡಿರುವ ಉದಾಹರಣೆಗಳಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕಾರ್ಖಾನೆಗಳ ಬೇಜವಾಬ್ದಾರಿಯಿಂದಲೇ ಇಂತಹ ಘಟನೆಗಳು ನಡೆಯುತ್ತಿವೆ. ಕಾರ್ಮಿಕರ ಸುರಕ್ಷತೆಯ ಬಗ್ಗೆ ಆಡಳಿತ ಮಂಡಳಿಗೆ ಯಾವುದೇ ಕಾಳಜಿ ಇಲ್ಲ. ಇಂತಹ ಘಟನೆಗಳಿಗೆ ಕಾರ್ಖಾನೆಗಳ ಮಾಲೀಕರೇ ನೇರ ಜಬಾಬ್ದಾರರು” ಎಂದು ಆರೋಪಿಸಿದ್ದಾರೆ.

“ಮೃತ ಕಾರ್ಮಿಕ ಮಹಿಳೆಯ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು. ಕಳಪೆ ಬಸ್‌ಗಳನ್ನು ಬಿಟ್ಟು, ಸುಸ್ಥಿತಿಯಲ್ಲಿರುವ ಬಸ್‌ಗಳನ್ನು ಒದಗಿಸಬೇಕು. ಸಾರಿಗೆ ಇಲಾಖೆ, ಕಾರ್ಮಿಕ ಇಲಾಖೆ ಕೂಡಲೇ ಮಧ್ಯಪ್ರವೇಶಿಸಿ ಗಾರ್ಮೆಂಟ್ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಗಮನ ಹರಿಸಬೇಕು. ಸಮಸ್ಯೆಗಳನ್ನು ಪರಿಹರಿಸಬೇಕು. ಕಾರ್ಮಿಕರನ್ನು ಶೋಷಿಸುತ್ತಿರುವ ಗಾರ್ಮೆಂಟ್‌ಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಕರ್ನಾಟಕ ಸ್ಟೇಟ್ ಗಾರ್ಮೆಂಟ್ ಅಂಡ್ ಟೆಕ್ಸ್ಟೈಲ್ ವರ್ಕರ್ಸ್ ಯೂನಿಯನ್ ಹಾಗೂ ಯುನೈಟೆಡ್ ಯೂನಿಯನ್ ಆಫ್ ಗಾರ್ಮೆಂಟ್ ವರ್ಕರ್ಸ್ ಸಂಘಟನೆಗಳು ಆಗ್ರಹಿಸಿವೆ.

ಇದನ್ನೂ ಓದಿ; 25 ವರ್ಷಗಳಿಂದ ಹಿಮಾಚಲ ವೃದ್ಧಾಶ್ರಮದಲ್ಲಿ ವಾಸ; ಕನ್ನಡಿಗ ಐಪಿಎಸ್ ಅಧಿಕಾರಿಯಿಂದ ಕುಟುಂಬ ಸೇರಿದ ಸಾಕಮ್ಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...