Homeಕರ್ನಾಟಕಬೆಂಗಳೂರು: ಎಪ್ರಿಲ್‌ 21ರಂದು ಕೋಡಿಹಳ್ಳಿ ಚಂದ್ರಶೇಖರ್‌‌‌ ನೇತೃತ್ವದಲ್ಲಿ ಬೃಹತ್‌ ರೈತ ಸಮಾವೇಶ; ಕೇಜ್ರಿವಾಲ್‌ ಉಪಸ್ಥಿತಿ

ಬೆಂಗಳೂರು: ಎಪ್ರಿಲ್‌ 21ರಂದು ಕೋಡಿಹಳ್ಳಿ ಚಂದ್ರಶೇಖರ್‌‌‌ ನೇತೃತ್ವದಲ್ಲಿ ಬೃಹತ್‌ ರೈತ ಸಮಾವೇಶ; ಕೇಜ್ರಿವಾಲ್‌ ಉಪಸ್ಥಿತಿ

ಸಮಾವೇಶದಲ್ಲಿ ಆಮ್‌ ಆದ್ಮಿ ಪಾರ್ಟಿ ಸೇರಲಿರುವ ಕೋಡಿಹಳ್ಳಿ ಚಂದ್ರಶೇಖರ್‌?

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರವರು ಏಪ್ರಿಲ್‌ 21ರಂದು ಬೆಂಗಳೂರಿಗೆ ಆಗಮಿಸಲಿದ್ದು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದಲ್ಲಿ ನಡೆಯಲಿರುವ ಬೃಹತ್‌ ರೈತ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿಯ ಕರ್ನಾಟಕ ಸಮಿತಿ ಸೋಮವಾರ ಹೇಳಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, “ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ಸಮಾವೇಶ ಆರಂಭವಾಗಲಿದೆ. ದೆಹಲಿ ಮಾದರಿಯಿಂದ ಪ್ರೇರಣೆ ಹೊಂದಿರುವ ರಾಜ್ಯ ರೈತ ಸಂಘವು ಸಿಎಂ ಕೇಜ್ರಿವಾಲ್‌ರವರಿಗೆ ವಿಶೇಷ ಆಹ್ವಾನ ನೀಡಿದ್ದು, ಅವರು ಆಗಮಿಸಿ ರೈತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾಡಿನ ಸುಮಾರು 50 ಸಾವಿರ ರೈತರು ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಿದ್ದಾರೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ದಿನವಾಗಲಿದೆ” ಎಂದು ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ಪರ್ಸೆಂಟೇಜ್‌ ಫೈಲ್ಸ್‌: ದಿಂಗಾಲೇಶ್ವರ ಸ್ವಾಮೀಜಿಯವರನ್ನು ‘ಊಸರವಳ್ಳಿ’ ಎಂದ ಬಿ.ಸಿ.ಪಾಟೀಲ್

“ಜನಸಾಮಾನ್ಯರ ಕುಂದುಕೊರತೆಗಳನ್ನು ಅರಿತುಕೊಂಡು ಬದಲಾವಣೆ ತರುತ್ತಿರುವ ಏಕೈಕ ಪಕ್ಷವೆಂದರೆ ಆಮ್‌ ಆದ್ಮಿ ಪಾರ್ಟಿ. ಪ್ರಾಮಾಣಿಕ ವ್ಯಕ್ತಿಗಳು ರಾಜಕಾರಣಕ್ಕೆ ಬಂದರೆ ಜನಪರ ಕೆಲಸಗಳನ್ನು ದೊಡ್ಡ ಮಟ್ಟದಲ್ಲಿ ಮಾಡಬಹುದು, ಭ್ರಷ್ಟಾಚಾರವಿಲ್ಲದ ಆಡಳಿತ ನೀಡಬಹುದು ಎಂಬುದನ್ನು ದೆಹಲಿಯ ಕೇಜ್ರಿವಾಲ್‌ ನೇತೃತ್ವದ ಸರ್ಕಾರ ಕಳೆದ ಏಳು ವರ್ಷಗಳಲ್ಲಿ ತೋರಿಸಿಕೊಟ್ಟಿದೆ” ಎಂದು ಅವರು ಹೇಳಿದ್ದಾರೆ.

“ತೆರಿಗೆ ಹಣವು ಕಳ್ಳ ರಾಜಕಾರಣಿಗಳ ಜೇಬು ಸೇರುವುದನ್ನು ತಪ್ಪಿಸಿ, ಅಲ್ಲಿನ ಆರೋಗ್ಯ, ಶಿಕ್ಷಣ, ನೀರು, ವಿದ್ಯುತ್ ಮುಂತಾದ ಮೂಲಸೌಕರ್ಯ ನೀಡುವುದಕ್ಕೆ ಬಳಸಲಾಗಿದೆ” ಎಂದು ಪೃಥ್ವಿ ರೆಡ್ಡಿ ತಿಳಿಸಿದ್ದಾರೆ.

“ಕಳೆದ 75 ವರ್ಷಗಳಲ್ಲಿ ಕರ್ನಾಟಕದ ರೈತರು ಮೂರೂ ಪಕ್ಷಗಳಿಗೆ ಮತ ನೀಡಿ ಗೆಲ್ಲಿಸಿ ಕಳಿಸಿದರು. ಮೂರೂ ಪಕ್ಷಗಳಲ್ಲಿ ಯಾರೂ ರೈತನ ಬವಣೆ ಅರ್ಥ ಮಾಡಿಕೊಳ್ಳಲಿಲ್ಲ. ಎಲ್ಲರಿಂದ ಅನ್ಯಾಯ ಎದುರಿಸಿ ತಾವೇ ರಾಜಕಾರಣಕ್ಕಿಳಿಯಲು ರೈತರು ತೀರ್ಮಾನಿಸಿದ್ದಾರೆ. ಅವರ ಮುಂದಿರುವ ಎಲ್ಲಾ ಆಯ್ಕೆಗಳನ್ನು ಪರಿಶೀಲಿಸಿ, ಆಮ್ ಆದ್ಮಿ ಪಾರ್ಟಿಯೊಂದೇ ತಮಗೆ ನ್ಯಾಯ ದೊರಕಿಸಿಕೊಡಲು ಸಾಧ್ಯ ಎಂಬ ತೀರ್ಮಾನಕ್ಕೆ ರೈತರು ಬಂದಿದ್ದಾರೆ” ಎಂದು ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ಪರ್ಸೆಂಟೇಜ್‌ ಫೈಲ್ಸ್‌: ಗೋವಿನ ಮೇವಿನಲ್ಲೂ ಕಮಿಷನ್‌; ಮಠಕ್ಕೆ ನೀಡಿದ ಅನುದಾನದಲ್ಲೂ ಕಮಿಷನ್‌!

“ಇತ್ತೀಚೆಗೆ ನಡೆದ ಪಂಜಾಬ್ ಚುನಾವಣೆಯಲ್ಲಿ 117 ಸ್ಥಾನಗಳ ಪೈಕಿ 92 ಸ್ಥಾನಗಳಲ್ಲಿ ಎಎಪಿ ಗೆದ್ದಿದೆ. ಇದರಲ್ಲಿ 82 ಜನರು ಇದೇ ಮೊದಲ ಬಾರಿಗೆ ಚುನಾವಣೆ ಎದುರಿಸಿದವರು. ಬೇರೆ ಪಕ್ಷದವರ ರೀತಿ ಎಎಪಿ ವ್ಯಕ್ತಿಯ ಬ್ಯಾಂಕ್ ಬ್ಯಾಲೆನ್ಸ್ ನೋಡುವುದಿಲ್ಲ. ಬದಲಾಗಿ, ಆತನ ಸಾಮಾಜಿಕ ಕಾಳಜಿ ಹಾಗೂ ಮತದಾರರ ಬಗ್ಗೆ ಇರುವ ಕಳಕಳಿಯನ್ನು ನೋಡುತ್ತದೆ. ಸಾಮಾನ್ಯರನ್ನು ನಾಯಕರನ್ನಾಗಿ ಮಾಡುವ ಎಎಪಿಯನ್ನು ಜನಸಾಮಾನ್ಯರು ಬಳಸಿಕೊಳ್ಳಬೇಕು” ಎಂದು ಇತ್ತೀಚೆಗೆ ಆಮ್‌‌ ಆದ್ಮಿ ಪಾರ್ಟಿ ಸೇರಿದ ಮಾಜಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದ್ದಾರೆ.

ಆಮ್‌ ಆದ್ಮಿ ಪಕ್ಷ ಸೇರಲಿರುವ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌?

ಬೃಹತ್‌ ರೈತ ಸಮಾವೇಶದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಅವರು ತಮ್ಮ ಸಾವಿರಾರು ರೈತರೊಂದಿಗೆ ಆಮ್‌ ಆದ್ಮಿ ಪಾರ್ಟಿ ಸೇರಲಿದ್ದಾರೆ ಎಂದು ಪಕ್ಷದ ಮೂಲಗಳು ನಾನುಗೌರಿ.ಕಾಂಗೆ ಹೇಳಿದೆ.

ಈ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯೆ ನೀಡಿರುವ ಕೋಡಿಹಳ್ಳಿ ಚಂದ್ರಶೇಖರ್‌ ಅವರು ಇದನ್ನು ನಿರಾಕರಿಸಿದ್ದಾರೆ. “ಆಮ್‌ ಆದ್ಮಿ ಪಕ್ಷವನ್ನು ಸೇರುತ್ತಿಲ್ಲ. ಆದರೆ ಪಕ್ಷವೂ ಈಗ ಅನಿವಾರ್ಯ ಆಗಿರುವುದರಿಂದ ಅವರಿಗೆ ಬೆಂಬಲ ನೀಡುತ್ತಿದ್ದೇನೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...