Homeಕರ್ನಾಟಕಬೆಂಗಳೂರು: ಎಪ್ರಿಲ್‌ 21ರಂದು ಕೋಡಿಹಳ್ಳಿ ಚಂದ್ರಶೇಖರ್‌‌‌ ನೇತೃತ್ವದಲ್ಲಿ ಬೃಹತ್‌ ರೈತ ಸಮಾವೇಶ; ಕೇಜ್ರಿವಾಲ್‌ ಉಪಸ್ಥಿತಿ

ಬೆಂಗಳೂರು: ಎಪ್ರಿಲ್‌ 21ರಂದು ಕೋಡಿಹಳ್ಳಿ ಚಂದ್ರಶೇಖರ್‌‌‌ ನೇತೃತ್ವದಲ್ಲಿ ಬೃಹತ್‌ ರೈತ ಸಮಾವೇಶ; ಕೇಜ್ರಿವಾಲ್‌ ಉಪಸ್ಥಿತಿ

ಸಮಾವೇಶದಲ್ಲಿ ಆಮ್‌ ಆದ್ಮಿ ಪಾರ್ಟಿ ಸೇರಲಿರುವ ಕೋಡಿಹಳ್ಳಿ ಚಂದ್ರಶೇಖರ್‌?

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರವರು ಏಪ್ರಿಲ್‌ 21ರಂದು ಬೆಂಗಳೂರಿಗೆ ಆಗಮಿಸಲಿದ್ದು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದಲ್ಲಿ ನಡೆಯಲಿರುವ ಬೃಹತ್‌ ರೈತ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿಯ ಕರ್ನಾಟಕ ಸಮಿತಿ ಸೋಮವಾರ ಹೇಳಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, “ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ಸಮಾವೇಶ ಆರಂಭವಾಗಲಿದೆ. ದೆಹಲಿ ಮಾದರಿಯಿಂದ ಪ್ರೇರಣೆ ಹೊಂದಿರುವ ರಾಜ್ಯ ರೈತ ಸಂಘವು ಸಿಎಂ ಕೇಜ್ರಿವಾಲ್‌ರವರಿಗೆ ವಿಶೇಷ ಆಹ್ವಾನ ನೀಡಿದ್ದು, ಅವರು ಆಗಮಿಸಿ ರೈತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾಡಿನ ಸುಮಾರು 50 ಸಾವಿರ ರೈತರು ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಿದ್ದಾರೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ದಿನವಾಗಲಿದೆ” ಎಂದು ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ಪರ್ಸೆಂಟೇಜ್‌ ಫೈಲ್ಸ್‌: ದಿಂಗಾಲೇಶ್ವರ ಸ್ವಾಮೀಜಿಯವರನ್ನು ‘ಊಸರವಳ್ಳಿ’ ಎಂದ ಬಿ.ಸಿ.ಪಾಟೀಲ್

“ಜನಸಾಮಾನ್ಯರ ಕುಂದುಕೊರತೆಗಳನ್ನು ಅರಿತುಕೊಂಡು ಬದಲಾವಣೆ ತರುತ್ತಿರುವ ಏಕೈಕ ಪಕ್ಷವೆಂದರೆ ಆಮ್‌ ಆದ್ಮಿ ಪಾರ್ಟಿ. ಪ್ರಾಮಾಣಿಕ ವ್ಯಕ್ತಿಗಳು ರಾಜಕಾರಣಕ್ಕೆ ಬಂದರೆ ಜನಪರ ಕೆಲಸಗಳನ್ನು ದೊಡ್ಡ ಮಟ್ಟದಲ್ಲಿ ಮಾಡಬಹುದು, ಭ್ರಷ್ಟಾಚಾರವಿಲ್ಲದ ಆಡಳಿತ ನೀಡಬಹುದು ಎಂಬುದನ್ನು ದೆಹಲಿಯ ಕೇಜ್ರಿವಾಲ್‌ ನೇತೃತ್ವದ ಸರ್ಕಾರ ಕಳೆದ ಏಳು ವರ್ಷಗಳಲ್ಲಿ ತೋರಿಸಿಕೊಟ್ಟಿದೆ” ಎಂದು ಅವರು ಹೇಳಿದ್ದಾರೆ.

“ತೆರಿಗೆ ಹಣವು ಕಳ್ಳ ರಾಜಕಾರಣಿಗಳ ಜೇಬು ಸೇರುವುದನ್ನು ತಪ್ಪಿಸಿ, ಅಲ್ಲಿನ ಆರೋಗ್ಯ, ಶಿಕ್ಷಣ, ನೀರು, ವಿದ್ಯುತ್ ಮುಂತಾದ ಮೂಲಸೌಕರ್ಯ ನೀಡುವುದಕ್ಕೆ ಬಳಸಲಾಗಿದೆ” ಎಂದು ಪೃಥ್ವಿ ರೆಡ್ಡಿ ತಿಳಿಸಿದ್ದಾರೆ.

“ಕಳೆದ 75 ವರ್ಷಗಳಲ್ಲಿ ಕರ್ನಾಟಕದ ರೈತರು ಮೂರೂ ಪಕ್ಷಗಳಿಗೆ ಮತ ನೀಡಿ ಗೆಲ್ಲಿಸಿ ಕಳಿಸಿದರು. ಮೂರೂ ಪಕ್ಷಗಳಲ್ಲಿ ಯಾರೂ ರೈತನ ಬವಣೆ ಅರ್ಥ ಮಾಡಿಕೊಳ್ಳಲಿಲ್ಲ. ಎಲ್ಲರಿಂದ ಅನ್ಯಾಯ ಎದುರಿಸಿ ತಾವೇ ರಾಜಕಾರಣಕ್ಕಿಳಿಯಲು ರೈತರು ತೀರ್ಮಾನಿಸಿದ್ದಾರೆ. ಅವರ ಮುಂದಿರುವ ಎಲ್ಲಾ ಆಯ್ಕೆಗಳನ್ನು ಪರಿಶೀಲಿಸಿ, ಆಮ್ ಆದ್ಮಿ ಪಾರ್ಟಿಯೊಂದೇ ತಮಗೆ ನ್ಯಾಯ ದೊರಕಿಸಿಕೊಡಲು ಸಾಧ್ಯ ಎಂಬ ತೀರ್ಮಾನಕ್ಕೆ ರೈತರು ಬಂದಿದ್ದಾರೆ” ಎಂದು ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ಪರ್ಸೆಂಟೇಜ್‌ ಫೈಲ್ಸ್‌: ಗೋವಿನ ಮೇವಿನಲ್ಲೂ ಕಮಿಷನ್‌; ಮಠಕ್ಕೆ ನೀಡಿದ ಅನುದಾನದಲ್ಲೂ ಕಮಿಷನ್‌!

“ಇತ್ತೀಚೆಗೆ ನಡೆದ ಪಂಜಾಬ್ ಚುನಾವಣೆಯಲ್ಲಿ 117 ಸ್ಥಾನಗಳ ಪೈಕಿ 92 ಸ್ಥಾನಗಳಲ್ಲಿ ಎಎಪಿ ಗೆದ್ದಿದೆ. ಇದರಲ್ಲಿ 82 ಜನರು ಇದೇ ಮೊದಲ ಬಾರಿಗೆ ಚುನಾವಣೆ ಎದುರಿಸಿದವರು. ಬೇರೆ ಪಕ್ಷದವರ ರೀತಿ ಎಎಪಿ ವ್ಯಕ್ತಿಯ ಬ್ಯಾಂಕ್ ಬ್ಯಾಲೆನ್ಸ್ ನೋಡುವುದಿಲ್ಲ. ಬದಲಾಗಿ, ಆತನ ಸಾಮಾಜಿಕ ಕಾಳಜಿ ಹಾಗೂ ಮತದಾರರ ಬಗ್ಗೆ ಇರುವ ಕಳಕಳಿಯನ್ನು ನೋಡುತ್ತದೆ. ಸಾಮಾನ್ಯರನ್ನು ನಾಯಕರನ್ನಾಗಿ ಮಾಡುವ ಎಎಪಿಯನ್ನು ಜನಸಾಮಾನ್ಯರು ಬಳಸಿಕೊಳ್ಳಬೇಕು” ಎಂದು ಇತ್ತೀಚೆಗೆ ಆಮ್‌‌ ಆದ್ಮಿ ಪಾರ್ಟಿ ಸೇರಿದ ಮಾಜಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದ್ದಾರೆ.

ಆಮ್‌ ಆದ್ಮಿ ಪಕ್ಷ ಸೇರಲಿರುವ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌?

ಬೃಹತ್‌ ರೈತ ಸಮಾವೇಶದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಅವರು ತಮ್ಮ ಸಾವಿರಾರು ರೈತರೊಂದಿಗೆ ಆಮ್‌ ಆದ್ಮಿ ಪಾರ್ಟಿ ಸೇರಲಿದ್ದಾರೆ ಎಂದು ಪಕ್ಷದ ಮೂಲಗಳು ನಾನುಗೌರಿ.ಕಾಂಗೆ ಹೇಳಿದೆ.

ಈ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯೆ ನೀಡಿರುವ ಕೋಡಿಹಳ್ಳಿ ಚಂದ್ರಶೇಖರ್‌ ಅವರು ಇದನ್ನು ನಿರಾಕರಿಸಿದ್ದಾರೆ. “ಆಮ್‌ ಆದ್ಮಿ ಪಕ್ಷವನ್ನು ಸೇರುತ್ತಿಲ್ಲ. ಆದರೆ ಪಕ್ಷವೂ ಈಗ ಅನಿವಾರ್ಯ ಆಗಿರುವುದರಿಂದ ಅವರಿಗೆ ಬೆಂಬಲ ನೀಡುತ್ತಿದ್ದೇನೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...