Homeಕರ್ನಾಟಕಬೆಂಗಳೂರು: ಎಪ್ರಿಲ್‌ 21ರಂದು ಕೋಡಿಹಳ್ಳಿ ಚಂದ್ರಶೇಖರ್‌‌‌ ನೇತೃತ್ವದಲ್ಲಿ ಬೃಹತ್‌ ರೈತ ಸಮಾವೇಶ; ಕೇಜ್ರಿವಾಲ್‌ ಉಪಸ್ಥಿತಿ

ಬೆಂಗಳೂರು: ಎಪ್ರಿಲ್‌ 21ರಂದು ಕೋಡಿಹಳ್ಳಿ ಚಂದ್ರಶೇಖರ್‌‌‌ ನೇತೃತ್ವದಲ್ಲಿ ಬೃಹತ್‌ ರೈತ ಸಮಾವೇಶ; ಕೇಜ್ರಿವಾಲ್‌ ಉಪಸ್ಥಿತಿ

ಸಮಾವೇಶದಲ್ಲಿ ಆಮ್‌ ಆದ್ಮಿ ಪಾರ್ಟಿ ಸೇರಲಿರುವ ಕೋಡಿಹಳ್ಳಿ ಚಂದ್ರಶೇಖರ್‌?

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರವರು ಏಪ್ರಿಲ್‌ 21ರಂದು ಬೆಂಗಳೂರಿಗೆ ಆಗಮಿಸಲಿದ್ದು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದಲ್ಲಿ ನಡೆಯಲಿರುವ ಬೃಹತ್‌ ರೈತ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿಯ ಕರ್ನಾಟಕ ಸಮಿತಿ ಸೋಮವಾರ ಹೇಳಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, “ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ಸಮಾವೇಶ ಆರಂಭವಾಗಲಿದೆ. ದೆಹಲಿ ಮಾದರಿಯಿಂದ ಪ್ರೇರಣೆ ಹೊಂದಿರುವ ರಾಜ್ಯ ರೈತ ಸಂಘವು ಸಿಎಂ ಕೇಜ್ರಿವಾಲ್‌ರವರಿಗೆ ವಿಶೇಷ ಆಹ್ವಾನ ನೀಡಿದ್ದು, ಅವರು ಆಗಮಿಸಿ ರೈತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾಡಿನ ಸುಮಾರು 50 ಸಾವಿರ ರೈತರು ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಿದ್ದಾರೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ದಿನವಾಗಲಿದೆ” ಎಂದು ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ಪರ್ಸೆಂಟೇಜ್‌ ಫೈಲ್ಸ್‌: ದಿಂಗಾಲೇಶ್ವರ ಸ್ವಾಮೀಜಿಯವರನ್ನು ‘ಊಸರವಳ್ಳಿ’ ಎಂದ ಬಿ.ಸಿ.ಪಾಟೀಲ್

“ಜನಸಾಮಾನ್ಯರ ಕುಂದುಕೊರತೆಗಳನ್ನು ಅರಿತುಕೊಂಡು ಬದಲಾವಣೆ ತರುತ್ತಿರುವ ಏಕೈಕ ಪಕ್ಷವೆಂದರೆ ಆಮ್‌ ಆದ್ಮಿ ಪಾರ್ಟಿ. ಪ್ರಾಮಾಣಿಕ ವ್ಯಕ್ತಿಗಳು ರಾಜಕಾರಣಕ್ಕೆ ಬಂದರೆ ಜನಪರ ಕೆಲಸಗಳನ್ನು ದೊಡ್ಡ ಮಟ್ಟದಲ್ಲಿ ಮಾಡಬಹುದು, ಭ್ರಷ್ಟಾಚಾರವಿಲ್ಲದ ಆಡಳಿತ ನೀಡಬಹುದು ಎಂಬುದನ್ನು ದೆಹಲಿಯ ಕೇಜ್ರಿವಾಲ್‌ ನೇತೃತ್ವದ ಸರ್ಕಾರ ಕಳೆದ ಏಳು ವರ್ಷಗಳಲ್ಲಿ ತೋರಿಸಿಕೊಟ್ಟಿದೆ” ಎಂದು ಅವರು ಹೇಳಿದ್ದಾರೆ.

“ತೆರಿಗೆ ಹಣವು ಕಳ್ಳ ರಾಜಕಾರಣಿಗಳ ಜೇಬು ಸೇರುವುದನ್ನು ತಪ್ಪಿಸಿ, ಅಲ್ಲಿನ ಆರೋಗ್ಯ, ಶಿಕ್ಷಣ, ನೀರು, ವಿದ್ಯುತ್ ಮುಂತಾದ ಮೂಲಸೌಕರ್ಯ ನೀಡುವುದಕ್ಕೆ ಬಳಸಲಾಗಿದೆ” ಎಂದು ಪೃಥ್ವಿ ರೆಡ್ಡಿ ತಿಳಿಸಿದ್ದಾರೆ.

“ಕಳೆದ 75 ವರ್ಷಗಳಲ್ಲಿ ಕರ್ನಾಟಕದ ರೈತರು ಮೂರೂ ಪಕ್ಷಗಳಿಗೆ ಮತ ನೀಡಿ ಗೆಲ್ಲಿಸಿ ಕಳಿಸಿದರು. ಮೂರೂ ಪಕ್ಷಗಳಲ್ಲಿ ಯಾರೂ ರೈತನ ಬವಣೆ ಅರ್ಥ ಮಾಡಿಕೊಳ್ಳಲಿಲ್ಲ. ಎಲ್ಲರಿಂದ ಅನ್ಯಾಯ ಎದುರಿಸಿ ತಾವೇ ರಾಜಕಾರಣಕ್ಕಿಳಿಯಲು ರೈತರು ತೀರ್ಮಾನಿಸಿದ್ದಾರೆ. ಅವರ ಮುಂದಿರುವ ಎಲ್ಲಾ ಆಯ್ಕೆಗಳನ್ನು ಪರಿಶೀಲಿಸಿ, ಆಮ್ ಆದ್ಮಿ ಪಾರ್ಟಿಯೊಂದೇ ತಮಗೆ ನ್ಯಾಯ ದೊರಕಿಸಿಕೊಡಲು ಸಾಧ್ಯ ಎಂಬ ತೀರ್ಮಾನಕ್ಕೆ ರೈತರು ಬಂದಿದ್ದಾರೆ” ಎಂದು ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ಪರ್ಸೆಂಟೇಜ್‌ ಫೈಲ್ಸ್‌: ಗೋವಿನ ಮೇವಿನಲ್ಲೂ ಕಮಿಷನ್‌; ಮಠಕ್ಕೆ ನೀಡಿದ ಅನುದಾನದಲ್ಲೂ ಕಮಿಷನ್‌!

“ಇತ್ತೀಚೆಗೆ ನಡೆದ ಪಂಜಾಬ್ ಚುನಾವಣೆಯಲ್ಲಿ 117 ಸ್ಥಾನಗಳ ಪೈಕಿ 92 ಸ್ಥಾನಗಳಲ್ಲಿ ಎಎಪಿ ಗೆದ್ದಿದೆ. ಇದರಲ್ಲಿ 82 ಜನರು ಇದೇ ಮೊದಲ ಬಾರಿಗೆ ಚುನಾವಣೆ ಎದುರಿಸಿದವರು. ಬೇರೆ ಪಕ್ಷದವರ ರೀತಿ ಎಎಪಿ ವ್ಯಕ್ತಿಯ ಬ್ಯಾಂಕ್ ಬ್ಯಾಲೆನ್ಸ್ ನೋಡುವುದಿಲ್ಲ. ಬದಲಾಗಿ, ಆತನ ಸಾಮಾಜಿಕ ಕಾಳಜಿ ಹಾಗೂ ಮತದಾರರ ಬಗ್ಗೆ ಇರುವ ಕಳಕಳಿಯನ್ನು ನೋಡುತ್ತದೆ. ಸಾಮಾನ್ಯರನ್ನು ನಾಯಕರನ್ನಾಗಿ ಮಾಡುವ ಎಎಪಿಯನ್ನು ಜನಸಾಮಾನ್ಯರು ಬಳಸಿಕೊಳ್ಳಬೇಕು” ಎಂದು ಇತ್ತೀಚೆಗೆ ಆಮ್‌‌ ಆದ್ಮಿ ಪಾರ್ಟಿ ಸೇರಿದ ಮಾಜಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದ್ದಾರೆ.

ಆಮ್‌ ಆದ್ಮಿ ಪಕ್ಷ ಸೇರಲಿರುವ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌?

ಬೃಹತ್‌ ರೈತ ಸಮಾವೇಶದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಅವರು ತಮ್ಮ ಸಾವಿರಾರು ರೈತರೊಂದಿಗೆ ಆಮ್‌ ಆದ್ಮಿ ಪಾರ್ಟಿ ಸೇರಲಿದ್ದಾರೆ ಎಂದು ಪಕ್ಷದ ಮೂಲಗಳು ನಾನುಗೌರಿ.ಕಾಂಗೆ ಹೇಳಿದೆ.

ಈ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯೆ ನೀಡಿರುವ ಕೋಡಿಹಳ್ಳಿ ಚಂದ್ರಶೇಖರ್‌ ಅವರು ಇದನ್ನು ನಿರಾಕರಿಸಿದ್ದಾರೆ. “ಆಮ್‌ ಆದ್ಮಿ ಪಕ್ಷವನ್ನು ಸೇರುತ್ತಿಲ್ಲ. ಆದರೆ ಪಕ್ಷವೂ ಈಗ ಅನಿವಾರ್ಯ ಆಗಿರುವುದರಿಂದ ಅವರಿಗೆ ಬೆಂಬಲ ನೀಡುತ್ತಿದ್ದೇನೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...