Homeಕರ್ನಾಟಕಬೆಂಗಳೂರು: ಎಪ್ರಿಲ್‌ 21ರಂದು ಕೋಡಿಹಳ್ಳಿ ಚಂದ್ರಶೇಖರ್‌‌‌ ನೇತೃತ್ವದಲ್ಲಿ ಬೃಹತ್‌ ರೈತ ಸಮಾವೇಶ; ಕೇಜ್ರಿವಾಲ್‌ ಉಪಸ್ಥಿತಿ

ಬೆಂಗಳೂರು: ಎಪ್ರಿಲ್‌ 21ರಂದು ಕೋಡಿಹಳ್ಳಿ ಚಂದ್ರಶೇಖರ್‌‌‌ ನೇತೃತ್ವದಲ್ಲಿ ಬೃಹತ್‌ ರೈತ ಸಮಾವೇಶ; ಕೇಜ್ರಿವಾಲ್‌ ಉಪಸ್ಥಿತಿ

ಸಮಾವೇಶದಲ್ಲಿ ಆಮ್‌ ಆದ್ಮಿ ಪಾರ್ಟಿ ಸೇರಲಿರುವ ಕೋಡಿಹಳ್ಳಿ ಚಂದ್ರಶೇಖರ್‌?

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರವರು ಏಪ್ರಿಲ್‌ 21ರಂದು ಬೆಂಗಳೂರಿಗೆ ಆಗಮಿಸಲಿದ್ದು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದಲ್ಲಿ ನಡೆಯಲಿರುವ ಬೃಹತ್‌ ರೈತ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿಯ ಕರ್ನಾಟಕ ಸಮಿತಿ ಸೋಮವಾರ ಹೇಳಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, “ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ಸಮಾವೇಶ ಆರಂಭವಾಗಲಿದೆ. ದೆಹಲಿ ಮಾದರಿಯಿಂದ ಪ್ರೇರಣೆ ಹೊಂದಿರುವ ರಾಜ್ಯ ರೈತ ಸಂಘವು ಸಿಎಂ ಕೇಜ್ರಿವಾಲ್‌ರವರಿಗೆ ವಿಶೇಷ ಆಹ್ವಾನ ನೀಡಿದ್ದು, ಅವರು ಆಗಮಿಸಿ ರೈತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾಡಿನ ಸುಮಾರು 50 ಸಾವಿರ ರೈತರು ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಿದ್ದಾರೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ದಿನವಾಗಲಿದೆ” ಎಂದು ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ಪರ್ಸೆಂಟೇಜ್‌ ಫೈಲ್ಸ್‌: ದಿಂಗಾಲೇಶ್ವರ ಸ್ವಾಮೀಜಿಯವರನ್ನು ‘ಊಸರವಳ್ಳಿ’ ಎಂದ ಬಿ.ಸಿ.ಪಾಟೀಲ್

“ಜನಸಾಮಾನ್ಯರ ಕುಂದುಕೊರತೆಗಳನ್ನು ಅರಿತುಕೊಂಡು ಬದಲಾವಣೆ ತರುತ್ತಿರುವ ಏಕೈಕ ಪಕ್ಷವೆಂದರೆ ಆಮ್‌ ಆದ್ಮಿ ಪಾರ್ಟಿ. ಪ್ರಾಮಾಣಿಕ ವ್ಯಕ್ತಿಗಳು ರಾಜಕಾರಣಕ್ಕೆ ಬಂದರೆ ಜನಪರ ಕೆಲಸಗಳನ್ನು ದೊಡ್ಡ ಮಟ್ಟದಲ್ಲಿ ಮಾಡಬಹುದು, ಭ್ರಷ್ಟಾಚಾರವಿಲ್ಲದ ಆಡಳಿತ ನೀಡಬಹುದು ಎಂಬುದನ್ನು ದೆಹಲಿಯ ಕೇಜ್ರಿವಾಲ್‌ ನೇತೃತ್ವದ ಸರ್ಕಾರ ಕಳೆದ ಏಳು ವರ್ಷಗಳಲ್ಲಿ ತೋರಿಸಿಕೊಟ್ಟಿದೆ” ಎಂದು ಅವರು ಹೇಳಿದ್ದಾರೆ.

“ತೆರಿಗೆ ಹಣವು ಕಳ್ಳ ರಾಜಕಾರಣಿಗಳ ಜೇಬು ಸೇರುವುದನ್ನು ತಪ್ಪಿಸಿ, ಅಲ್ಲಿನ ಆರೋಗ್ಯ, ಶಿಕ್ಷಣ, ನೀರು, ವಿದ್ಯುತ್ ಮುಂತಾದ ಮೂಲಸೌಕರ್ಯ ನೀಡುವುದಕ್ಕೆ ಬಳಸಲಾಗಿದೆ” ಎಂದು ಪೃಥ್ವಿ ರೆಡ್ಡಿ ತಿಳಿಸಿದ್ದಾರೆ.

“ಕಳೆದ 75 ವರ್ಷಗಳಲ್ಲಿ ಕರ್ನಾಟಕದ ರೈತರು ಮೂರೂ ಪಕ್ಷಗಳಿಗೆ ಮತ ನೀಡಿ ಗೆಲ್ಲಿಸಿ ಕಳಿಸಿದರು. ಮೂರೂ ಪಕ್ಷಗಳಲ್ಲಿ ಯಾರೂ ರೈತನ ಬವಣೆ ಅರ್ಥ ಮಾಡಿಕೊಳ್ಳಲಿಲ್ಲ. ಎಲ್ಲರಿಂದ ಅನ್ಯಾಯ ಎದುರಿಸಿ ತಾವೇ ರಾಜಕಾರಣಕ್ಕಿಳಿಯಲು ರೈತರು ತೀರ್ಮಾನಿಸಿದ್ದಾರೆ. ಅವರ ಮುಂದಿರುವ ಎಲ್ಲಾ ಆಯ್ಕೆಗಳನ್ನು ಪರಿಶೀಲಿಸಿ, ಆಮ್ ಆದ್ಮಿ ಪಾರ್ಟಿಯೊಂದೇ ತಮಗೆ ನ್ಯಾಯ ದೊರಕಿಸಿಕೊಡಲು ಸಾಧ್ಯ ಎಂಬ ತೀರ್ಮಾನಕ್ಕೆ ರೈತರು ಬಂದಿದ್ದಾರೆ” ಎಂದು ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ಪರ್ಸೆಂಟೇಜ್‌ ಫೈಲ್ಸ್‌: ಗೋವಿನ ಮೇವಿನಲ್ಲೂ ಕಮಿಷನ್‌; ಮಠಕ್ಕೆ ನೀಡಿದ ಅನುದಾನದಲ್ಲೂ ಕಮಿಷನ್‌!

“ಇತ್ತೀಚೆಗೆ ನಡೆದ ಪಂಜಾಬ್ ಚುನಾವಣೆಯಲ್ಲಿ 117 ಸ್ಥಾನಗಳ ಪೈಕಿ 92 ಸ್ಥಾನಗಳಲ್ಲಿ ಎಎಪಿ ಗೆದ್ದಿದೆ. ಇದರಲ್ಲಿ 82 ಜನರು ಇದೇ ಮೊದಲ ಬಾರಿಗೆ ಚುನಾವಣೆ ಎದುರಿಸಿದವರು. ಬೇರೆ ಪಕ್ಷದವರ ರೀತಿ ಎಎಪಿ ವ್ಯಕ್ತಿಯ ಬ್ಯಾಂಕ್ ಬ್ಯಾಲೆನ್ಸ್ ನೋಡುವುದಿಲ್ಲ. ಬದಲಾಗಿ, ಆತನ ಸಾಮಾಜಿಕ ಕಾಳಜಿ ಹಾಗೂ ಮತದಾರರ ಬಗ್ಗೆ ಇರುವ ಕಳಕಳಿಯನ್ನು ನೋಡುತ್ತದೆ. ಸಾಮಾನ್ಯರನ್ನು ನಾಯಕರನ್ನಾಗಿ ಮಾಡುವ ಎಎಪಿಯನ್ನು ಜನಸಾಮಾನ್ಯರು ಬಳಸಿಕೊಳ್ಳಬೇಕು” ಎಂದು ಇತ್ತೀಚೆಗೆ ಆಮ್‌‌ ಆದ್ಮಿ ಪಾರ್ಟಿ ಸೇರಿದ ಮಾಜಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದ್ದಾರೆ.

ಆಮ್‌ ಆದ್ಮಿ ಪಕ್ಷ ಸೇರಲಿರುವ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌?

ಬೃಹತ್‌ ರೈತ ಸಮಾವೇಶದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಅವರು ತಮ್ಮ ಸಾವಿರಾರು ರೈತರೊಂದಿಗೆ ಆಮ್‌ ಆದ್ಮಿ ಪಾರ್ಟಿ ಸೇರಲಿದ್ದಾರೆ ಎಂದು ಪಕ್ಷದ ಮೂಲಗಳು ನಾನುಗೌರಿ.ಕಾಂಗೆ ಹೇಳಿದೆ.

ಈ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯೆ ನೀಡಿರುವ ಕೋಡಿಹಳ್ಳಿ ಚಂದ್ರಶೇಖರ್‌ ಅವರು ಇದನ್ನು ನಿರಾಕರಿಸಿದ್ದಾರೆ. “ಆಮ್‌ ಆದ್ಮಿ ಪಕ್ಷವನ್ನು ಸೇರುತ್ತಿಲ್ಲ. ಆದರೆ ಪಕ್ಷವೂ ಈಗ ಅನಿವಾರ್ಯ ಆಗಿರುವುದರಿಂದ ಅವರಿಗೆ ಬೆಂಬಲ ನೀಡುತ್ತಿದ್ದೇನೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...