Homeಮುಖಪುಟಬೆಂಗಳೂರು ಅತ್ಯುತ್ತಮ ನಗರ : ಈಸಿ ಆಫ್ ಲಿವಿಂಗ್ ಇಂಡೆಕ್ಸ್-2020

ಬೆಂಗಳೂರು ಅತ್ಯುತ್ತಮ ನಗರ : ಈಸಿ ಆಫ್ ಲಿವಿಂಗ್ ಇಂಡೆಕ್ಸ್-2020

- Advertisement -
- Advertisement -

ಗೌರ್ಮೆಂಟ್‌ ಈಸಿ ಆಫ್ ಲಿವಿಂಗ್ ಇಂಡೆಕ್ಸ್-2020 ರಲ್ಲಿ 111 ನಗರಗಳಲ್ಲಿ ಬೆಂಗಳೂರು ಅತ್ಯುತ್ತಮ ನಗರವಾಗಿ ಹೊರಹೊಮ್ಮಿದೆ. ಈ ಪಟ್ಟಿಯಲ್ಲಿ ಪುಣೆ ಎರಡನೇ ಸ್ಥಾನ ಪಡೆದರೆ, ಅಹಮದಾಬಾದ್ ಮೂರನೇ ಸ್ಥಾನದಲ್ಲಿದೆ.

“ಹತ್ತು ಲಕ್ಷಕ್ಕಿಂತಲೂ ಹೆಚ್ಚು ಜನಸಂಖ್ಯೆಯ ವಿಭಾಗದಲ್ಲಿ ಬೆಂಗಳೂರು ಅಗ್ರ ಸ್ಥಾನ ಪಡೆದಿದೆ. ನಂತರ ಪುಣೆ, ಅಹಮದಾಬಾದ್, ಚೆನ್ನೈ, ಸೂರತ್, ನವೀ ಮುಂಬೈ, ಕೊಯಮತ್ತೂರು, ವಡೋದರಾ, ಇಂದೋರ್ ಮತ್ತು ಗ್ರೇಟರ್ ಮುಂಬೈ ನಗರಗಳು ಸ್ಥಾನ ಪಡೆದಿದೆ” ಎಂದು PIB ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

ವರ್ಗ: ಹತ್ತು ಲಕ್ಷಕ್ಕಿಂತಲೂ ಹೆಚ್ಚು ಜನಸಂಖ್ಯೆ ಹೊಂದಿರುವ ಟಾಪ್‌ 10 ನಗರಗಳು
1. ಬೆಂಗಳೂರು
2. ಪುಣೆ
3. ಅಹಮದಾಬಾದ್
4. ಚೆನ್ನೈ
5. ಸೂರತ್
6. ನವೀ ಮುಂಬೈ
7. ಕೊಯಮತ್ತೂರು
8. ವಡೋದರಾ
9. ಇಂದೋರ್
10. ಗ್ರೇಟರ್ ಮುಂಬೈ

ಇದನ್ನೂ ಓದಿ: ’ಅಸಮಾನತೆಗಾಗಿ ಮೀಸಲಾತಿ’ ಹೋರಾಟದ ಭರಾಟೆಯಲ್ಲಿ ಅಬ್ರಾಹ್ಮಣರಿಗೆ ಮೀಸಲಾತಿ ದಕ್ಕುವುದು ಸುಲಭವಲ್ಲ!

‘ಹತ್ತು ಲಕ್ಷಕ್ಕಿಂತಲೂ ಕಡಿಮೆ ಜನಸಂಖ್ಯೆ’ ಎಂಬ ವಿಭಾಗದಲ್ಲಿ, ಶಿಮ್ಲಾ ಮೊದಲ ಸ್ಥಾನದಲ್ಲಿದ್ದರೆ, ನಂತರದ ಸ್ಥಾನದಲ್ಲಿ ಭುವನೇಶ್ವರ, ಸಿಲ್ವಾಸ್ಸ, ಕಾಕಿನಾಡ, ಸೇಲಂ, ವೆಲ್ಲೂರು, ಗಾಂಧಿನಗರ, ಗುರುಗ್ರಾಮ್, ದಾವಂಗೆರೆ ಮತ್ತು ತಿರುಚಿರಾಪಳ್ಳಿ.

ವರ್ಗ: ಜನಸಂಖ್ಯೆ ಮಿಲಿಯನ್‌ಗಿಂತ ಕಡಿಮೆ
1. ಶಿಮ್ಲಾ
2. ಭುವನೇಶ್ವರ
3. ಸಿಲ್ವಾಸ್ಸಾ
4. ಕಾಕಿನಾಡ
5. ಸೇಲಂ
6. ವೆಲ್ಲೂರು
7. ಗಾಂಧಿನಗರ
8. ಗುರುಗ್ರಾಮ್
9. ದವಾಂಗೆರೆ
10. ತಿರುಚಿರಾಪಳ್ಳಿ

ಹತ್ತು ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಿಗೆ ಮತ್ತು ಹತ್ತು ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ನಗರಗಳಿಗೆ ಈಸಿ ಆಫ್ ಲಿವಿಂಗ್ ಇಂಡೆಕ್ಸ್-2020 ರ ಶ್ರೇಯಾಂಕಗಳನ್ನು ಘೋಷಿಸಲಾಗಿದೆ. ಮೌಲ್ಯಮಾಪನವನ್ನು 2020 ರಲ್ಲಿ ನಡೆಸಲಾಗಿದ್ದು, ಒಟ್ಟು 111 ನಗರಗಳು ಈ ಮೌಲ್ಯಮಾಪನದಲ್ಲಿ ಭಾಗವಹಿಸಿದ್ದವು.

ಪಿಐಬಿ ಬಿಡುಗಡೆ ಮಾಡಿರುವ ಹೇಳಿಕೆಯ ಪ್ರಕಾರ, “ಈಸಿ ಆಫ್ ಲಿವಿಂಗ್ ಇಂಡೆಕ್ಸ್ ಎಂಬುದು, ಜೀವನೋಪಾಯ ಮತ್ತು ನಗರ ಅಭಿವೃದ್ಧಿಗೆ ವಿವಿಧ ಯೋಜನೆಗಳ ಪ್ರಭಾವವನ್ನು ಮೌಲ್ಯಮಾಪನ ಮಾಡುವ ಸಾಧನವಾಗಿದೆ.”

“ಇದು ಜೀವನದ ಗುಣಮಟ್ಟ, ನಗರದ ಆರ್ಥಿಕ-ಸಾಮರ್ಥ್ಯ ಮತ್ತು ಅದರ ಸುಸ್ಥಿರತೆ ಮತ್ತು ಸ್ಥಿತಿಸ್ಥಾಪಕತ್ವವನ್ನು ಆಧರಿಸಿ ಭಾರತದಾದ್ಯಂತ ನಗರಗಳ ಬಗ್ಗೆ ಸಮಗ್ರ ತಿಳುವಳಿಕೆಯನ್ನು ಒದಗಿಸುತ್ತದೆ. ನಾಗರಿಕ ಗ್ರಹಿಕೆ ಮೂಲಕ ನಗರ ಆಡಳಿತವು ಒದಗಿಸುವ ಸೇವೆಗಳ ಬಗ್ಗೆ ನಿವಾಸಿಗಳ ದೃಷ್ಟಿಕೋನವನ್ನು ಮೌಲ್ಯಮಾಪನವು ಒಳಗೊಂಡಿದೆ” ಎಂದು ಪ್ರಕಟಣೆ ತಿಳಿಸಿದೆ.


 

ಇದನ್ನೂ ಓದಿ: ವಿಧಾನಸಭಾ ಅಧಿವೇಶನ | ನಾನುಗೌರಿ ಫೇಸ್‌‌ಬುಕ್ ಲೈ‌ವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...