Homeಮುಖಪುಟಬೆಂಗಳೂರು ಅತ್ಯುತ್ತಮ ನಗರ : ಈಸಿ ಆಫ್ ಲಿವಿಂಗ್ ಇಂಡೆಕ್ಸ್-2020

ಬೆಂಗಳೂರು ಅತ್ಯುತ್ತಮ ನಗರ : ಈಸಿ ಆಫ್ ಲಿವಿಂಗ್ ಇಂಡೆಕ್ಸ್-2020

- Advertisement -
- Advertisement -

ಗೌರ್ಮೆಂಟ್‌ ಈಸಿ ಆಫ್ ಲಿವಿಂಗ್ ಇಂಡೆಕ್ಸ್-2020 ರಲ್ಲಿ 111 ನಗರಗಳಲ್ಲಿ ಬೆಂಗಳೂರು ಅತ್ಯುತ್ತಮ ನಗರವಾಗಿ ಹೊರಹೊಮ್ಮಿದೆ. ಈ ಪಟ್ಟಿಯಲ್ಲಿ ಪುಣೆ ಎರಡನೇ ಸ್ಥಾನ ಪಡೆದರೆ, ಅಹಮದಾಬಾದ್ ಮೂರನೇ ಸ್ಥಾನದಲ್ಲಿದೆ.

“ಹತ್ತು ಲಕ್ಷಕ್ಕಿಂತಲೂ ಹೆಚ್ಚು ಜನಸಂಖ್ಯೆಯ ವಿಭಾಗದಲ್ಲಿ ಬೆಂಗಳೂರು ಅಗ್ರ ಸ್ಥಾನ ಪಡೆದಿದೆ. ನಂತರ ಪುಣೆ, ಅಹಮದಾಬಾದ್, ಚೆನ್ನೈ, ಸೂರತ್, ನವೀ ಮುಂಬೈ, ಕೊಯಮತ್ತೂರು, ವಡೋದರಾ, ಇಂದೋರ್ ಮತ್ತು ಗ್ರೇಟರ್ ಮುಂಬೈ ನಗರಗಳು ಸ್ಥಾನ ಪಡೆದಿದೆ” ಎಂದು PIB ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

ವರ್ಗ: ಹತ್ತು ಲಕ್ಷಕ್ಕಿಂತಲೂ ಹೆಚ್ಚು ಜನಸಂಖ್ಯೆ ಹೊಂದಿರುವ ಟಾಪ್‌ 10 ನಗರಗಳು
1. ಬೆಂಗಳೂರು
2. ಪುಣೆ
3. ಅಹಮದಾಬಾದ್
4. ಚೆನ್ನೈ
5. ಸೂರತ್
6. ನವೀ ಮುಂಬೈ
7. ಕೊಯಮತ್ತೂರು
8. ವಡೋದರಾ
9. ಇಂದೋರ್
10. ಗ್ರೇಟರ್ ಮುಂಬೈ

ಇದನ್ನೂ ಓದಿ: ’ಅಸಮಾನತೆಗಾಗಿ ಮೀಸಲಾತಿ’ ಹೋರಾಟದ ಭರಾಟೆಯಲ್ಲಿ ಅಬ್ರಾಹ್ಮಣರಿಗೆ ಮೀಸಲಾತಿ ದಕ್ಕುವುದು ಸುಲಭವಲ್ಲ!

‘ಹತ್ತು ಲಕ್ಷಕ್ಕಿಂತಲೂ ಕಡಿಮೆ ಜನಸಂಖ್ಯೆ’ ಎಂಬ ವಿಭಾಗದಲ್ಲಿ, ಶಿಮ್ಲಾ ಮೊದಲ ಸ್ಥಾನದಲ್ಲಿದ್ದರೆ, ನಂತರದ ಸ್ಥಾನದಲ್ಲಿ ಭುವನೇಶ್ವರ, ಸಿಲ್ವಾಸ್ಸ, ಕಾಕಿನಾಡ, ಸೇಲಂ, ವೆಲ್ಲೂರು, ಗಾಂಧಿನಗರ, ಗುರುಗ್ರಾಮ್, ದಾವಂಗೆರೆ ಮತ್ತು ತಿರುಚಿರಾಪಳ್ಳಿ.

ವರ್ಗ: ಜನಸಂಖ್ಯೆ ಮಿಲಿಯನ್‌ಗಿಂತ ಕಡಿಮೆ
1. ಶಿಮ್ಲಾ
2. ಭುವನೇಶ್ವರ
3. ಸಿಲ್ವಾಸ್ಸಾ
4. ಕಾಕಿನಾಡ
5. ಸೇಲಂ
6. ವೆಲ್ಲೂರು
7. ಗಾಂಧಿನಗರ
8. ಗುರುಗ್ರಾಮ್
9. ದವಾಂಗೆರೆ
10. ತಿರುಚಿರಾಪಳ್ಳಿ

ಹತ್ತು ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಿಗೆ ಮತ್ತು ಹತ್ತು ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ನಗರಗಳಿಗೆ ಈಸಿ ಆಫ್ ಲಿವಿಂಗ್ ಇಂಡೆಕ್ಸ್-2020 ರ ಶ್ರೇಯಾಂಕಗಳನ್ನು ಘೋಷಿಸಲಾಗಿದೆ. ಮೌಲ್ಯಮಾಪನವನ್ನು 2020 ರಲ್ಲಿ ನಡೆಸಲಾಗಿದ್ದು, ಒಟ್ಟು 111 ನಗರಗಳು ಈ ಮೌಲ್ಯಮಾಪನದಲ್ಲಿ ಭಾಗವಹಿಸಿದ್ದವು.

ಪಿಐಬಿ ಬಿಡುಗಡೆ ಮಾಡಿರುವ ಹೇಳಿಕೆಯ ಪ್ರಕಾರ, “ಈಸಿ ಆಫ್ ಲಿವಿಂಗ್ ಇಂಡೆಕ್ಸ್ ಎಂಬುದು, ಜೀವನೋಪಾಯ ಮತ್ತು ನಗರ ಅಭಿವೃದ್ಧಿಗೆ ವಿವಿಧ ಯೋಜನೆಗಳ ಪ್ರಭಾವವನ್ನು ಮೌಲ್ಯಮಾಪನ ಮಾಡುವ ಸಾಧನವಾಗಿದೆ.”

“ಇದು ಜೀವನದ ಗುಣಮಟ್ಟ, ನಗರದ ಆರ್ಥಿಕ-ಸಾಮರ್ಥ್ಯ ಮತ್ತು ಅದರ ಸುಸ್ಥಿರತೆ ಮತ್ತು ಸ್ಥಿತಿಸ್ಥಾಪಕತ್ವವನ್ನು ಆಧರಿಸಿ ಭಾರತದಾದ್ಯಂತ ನಗರಗಳ ಬಗ್ಗೆ ಸಮಗ್ರ ತಿಳುವಳಿಕೆಯನ್ನು ಒದಗಿಸುತ್ತದೆ. ನಾಗರಿಕ ಗ್ರಹಿಕೆ ಮೂಲಕ ನಗರ ಆಡಳಿತವು ಒದಗಿಸುವ ಸೇವೆಗಳ ಬಗ್ಗೆ ನಿವಾಸಿಗಳ ದೃಷ್ಟಿಕೋನವನ್ನು ಮೌಲ್ಯಮಾಪನವು ಒಳಗೊಂಡಿದೆ” ಎಂದು ಪ್ರಕಟಣೆ ತಿಳಿಸಿದೆ.


 

ಇದನ್ನೂ ಓದಿ: ವಿಧಾನಸಭಾ ಅಧಿವೇಶನ | ನಾನುಗೌರಿ ಫೇಸ್‌‌ಬುಕ್ ಲೈ‌ವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...