Homeಮುಖಪುಟಬೆಂಗಳೂರು ಅತ್ಯುತ್ತಮ ನಗರ : ಈಸಿ ಆಫ್ ಲಿವಿಂಗ್ ಇಂಡೆಕ್ಸ್-2020

ಬೆಂಗಳೂರು ಅತ್ಯುತ್ತಮ ನಗರ : ಈಸಿ ಆಫ್ ಲಿವಿಂಗ್ ಇಂಡೆಕ್ಸ್-2020

- Advertisement -
- Advertisement -

ಗೌರ್ಮೆಂಟ್‌ ಈಸಿ ಆಫ್ ಲಿವಿಂಗ್ ಇಂಡೆಕ್ಸ್-2020 ರಲ್ಲಿ 111 ನಗರಗಳಲ್ಲಿ ಬೆಂಗಳೂರು ಅತ್ಯುತ್ತಮ ನಗರವಾಗಿ ಹೊರಹೊಮ್ಮಿದೆ. ಈ ಪಟ್ಟಿಯಲ್ಲಿ ಪುಣೆ ಎರಡನೇ ಸ್ಥಾನ ಪಡೆದರೆ, ಅಹಮದಾಬಾದ್ ಮೂರನೇ ಸ್ಥಾನದಲ್ಲಿದೆ.

“ಹತ್ತು ಲಕ್ಷಕ್ಕಿಂತಲೂ ಹೆಚ್ಚು ಜನಸಂಖ್ಯೆಯ ವಿಭಾಗದಲ್ಲಿ ಬೆಂಗಳೂರು ಅಗ್ರ ಸ್ಥಾನ ಪಡೆದಿದೆ. ನಂತರ ಪುಣೆ, ಅಹಮದಾಬಾದ್, ಚೆನ್ನೈ, ಸೂರತ್, ನವೀ ಮುಂಬೈ, ಕೊಯಮತ್ತೂರು, ವಡೋದರಾ, ಇಂದೋರ್ ಮತ್ತು ಗ್ರೇಟರ್ ಮುಂಬೈ ನಗರಗಳು ಸ್ಥಾನ ಪಡೆದಿದೆ” ಎಂದು PIB ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

ವರ್ಗ: ಹತ್ತು ಲಕ್ಷಕ್ಕಿಂತಲೂ ಹೆಚ್ಚು ಜನಸಂಖ್ಯೆ ಹೊಂದಿರುವ ಟಾಪ್‌ 10 ನಗರಗಳು
1. ಬೆಂಗಳೂರು
2. ಪುಣೆ
3. ಅಹಮದಾಬಾದ್
4. ಚೆನ್ನೈ
5. ಸೂರತ್
6. ನವೀ ಮುಂಬೈ
7. ಕೊಯಮತ್ತೂರು
8. ವಡೋದರಾ
9. ಇಂದೋರ್
10. ಗ್ರೇಟರ್ ಮುಂಬೈ

ಇದನ್ನೂ ಓದಿ: ’ಅಸಮಾನತೆಗಾಗಿ ಮೀಸಲಾತಿ’ ಹೋರಾಟದ ಭರಾಟೆಯಲ್ಲಿ ಅಬ್ರಾಹ್ಮಣರಿಗೆ ಮೀಸಲಾತಿ ದಕ್ಕುವುದು ಸುಲಭವಲ್ಲ!

‘ಹತ್ತು ಲಕ್ಷಕ್ಕಿಂತಲೂ ಕಡಿಮೆ ಜನಸಂಖ್ಯೆ’ ಎಂಬ ವಿಭಾಗದಲ್ಲಿ, ಶಿಮ್ಲಾ ಮೊದಲ ಸ್ಥಾನದಲ್ಲಿದ್ದರೆ, ನಂತರದ ಸ್ಥಾನದಲ್ಲಿ ಭುವನೇಶ್ವರ, ಸಿಲ್ವಾಸ್ಸ, ಕಾಕಿನಾಡ, ಸೇಲಂ, ವೆಲ್ಲೂರು, ಗಾಂಧಿನಗರ, ಗುರುಗ್ರಾಮ್, ದಾವಂಗೆರೆ ಮತ್ತು ತಿರುಚಿರಾಪಳ್ಳಿ.

ವರ್ಗ: ಜನಸಂಖ್ಯೆ ಮಿಲಿಯನ್‌ಗಿಂತ ಕಡಿಮೆ
1. ಶಿಮ್ಲಾ
2. ಭುವನೇಶ್ವರ
3. ಸಿಲ್ವಾಸ್ಸಾ
4. ಕಾಕಿನಾಡ
5. ಸೇಲಂ
6. ವೆಲ್ಲೂರು
7. ಗಾಂಧಿನಗರ
8. ಗುರುಗ್ರಾಮ್
9. ದವಾಂಗೆರೆ
10. ತಿರುಚಿರಾಪಳ್ಳಿ

ಹತ್ತು ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಿಗೆ ಮತ್ತು ಹತ್ತು ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ನಗರಗಳಿಗೆ ಈಸಿ ಆಫ್ ಲಿವಿಂಗ್ ಇಂಡೆಕ್ಸ್-2020 ರ ಶ್ರೇಯಾಂಕಗಳನ್ನು ಘೋಷಿಸಲಾಗಿದೆ. ಮೌಲ್ಯಮಾಪನವನ್ನು 2020 ರಲ್ಲಿ ನಡೆಸಲಾಗಿದ್ದು, ಒಟ್ಟು 111 ನಗರಗಳು ಈ ಮೌಲ್ಯಮಾಪನದಲ್ಲಿ ಭಾಗವಹಿಸಿದ್ದವು.

ಪಿಐಬಿ ಬಿಡುಗಡೆ ಮಾಡಿರುವ ಹೇಳಿಕೆಯ ಪ್ರಕಾರ, “ಈಸಿ ಆಫ್ ಲಿವಿಂಗ್ ಇಂಡೆಕ್ಸ್ ಎಂಬುದು, ಜೀವನೋಪಾಯ ಮತ್ತು ನಗರ ಅಭಿವೃದ್ಧಿಗೆ ವಿವಿಧ ಯೋಜನೆಗಳ ಪ್ರಭಾವವನ್ನು ಮೌಲ್ಯಮಾಪನ ಮಾಡುವ ಸಾಧನವಾಗಿದೆ.”

“ಇದು ಜೀವನದ ಗುಣಮಟ್ಟ, ನಗರದ ಆರ್ಥಿಕ-ಸಾಮರ್ಥ್ಯ ಮತ್ತು ಅದರ ಸುಸ್ಥಿರತೆ ಮತ್ತು ಸ್ಥಿತಿಸ್ಥಾಪಕತ್ವವನ್ನು ಆಧರಿಸಿ ಭಾರತದಾದ್ಯಂತ ನಗರಗಳ ಬಗ್ಗೆ ಸಮಗ್ರ ತಿಳುವಳಿಕೆಯನ್ನು ಒದಗಿಸುತ್ತದೆ. ನಾಗರಿಕ ಗ್ರಹಿಕೆ ಮೂಲಕ ನಗರ ಆಡಳಿತವು ಒದಗಿಸುವ ಸೇವೆಗಳ ಬಗ್ಗೆ ನಿವಾಸಿಗಳ ದೃಷ್ಟಿಕೋನವನ್ನು ಮೌಲ್ಯಮಾಪನವು ಒಳಗೊಂಡಿದೆ” ಎಂದು ಪ್ರಕಟಣೆ ತಿಳಿಸಿದೆ.


 

ಇದನ್ನೂ ಓದಿ: ವಿಧಾನಸಭಾ ಅಧಿವೇಶನ | ನಾನುಗೌರಿ ಫೇಸ್‌‌ಬುಕ್ ಲೈ‌ವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...