Homeಮುಖಪುಟಬೆಂಗಳೂರು: ಮುನಾವರ್‌ ಬಳಿಕ ಕುನಾಲ್ ಕಮ್ರಾ ಕಾರ್ಯಕ್ರಮವೂ ರದ್ದು; ಬೆದರಿಕೆ ಆರೋಪ

ಬೆಂಗಳೂರು: ಮುನಾವರ್‌ ಬಳಿಕ ಕುನಾಲ್ ಕಮ್ರಾ ಕಾರ್ಯಕ್ರಮವೂ ರದ್ದು; ಬೆದರಿಕೆ ಆರೋಪ

- Advertisement -
- Advertisement -

ಸ್ಥಳವನ್ನು ಬಂದ್ ಮಾಡುವ ಬೆದರಿಕೆ ಮತ್ತು ವಿಶೇಷ ಆಸನ ಅನುಮತಿಗಳನ್ನು ನಿರಾಕರಿಸಿದ ಕಾರಣ ಮುಂದಿನ 20 ದಿನಗಳಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ತಮ್ಮ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಕಾಮೆಡಿಯನ್‌‌ ಕುನಾಲ್ ಕಮ್ರಾ ಘೋಷಿಸಿದ್ದಾರೆ.

ಡಿಸೆಂಬರ್ 1ರಿಂದ 19ರ ನಡುವೆ ಬೆಂಗಳೂರಿನ ಜೆಪಿ ನಗರದ ಸ್ಥಳವೊಂದರಲ್ಲಿ ‘ಕುನಾಲ್ ಕಮ್ರಾ ಲೈವ್’ ಎಂಬ ಶೀರ್ಷಿಕೆಯ ಕಾರ್ಯಕ್ರಮವನ್ನು ಕಮ್ರಾ ಪ್ರದರ್ಶಿಸಲು ಸಜ್ಜಾಗಿದ್ದರು. ಇತರ ರಾಜ್ಯಗಳಲ್ಲಿ ಇದೇ ರೀತಿಯ ಕಾರಣಗಳಿಂದಾಗಿ ಅವರ ಪ್ರದರ್ಶನಗಳನ್ನು ರದ್ದುಗೊಳಿಸಲಾಗಿದೆ ಎಂದು ಕುನಾಲ್ ಅವರ ಆಪ್ತ ಮೂಲಗಳು ಹೇಳಿವೆ. ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕಮ್ರಾ ಅವರ ಕಾರ್ಯಕ್ರಮ ರದ್ದಾಗಿದೆ.

ಗುಜರಾತ್ ಮೂಲದ ಮುನಾವರ್ ಫರೂಕಿ ನಂತರ ಕಳೆದ ಐದು ದಿನಗಳಲ್ಲಿ ಬೆಂಗಳೂರಿನಲ್ಲಿ ತನ್ನ ಪ್ರದರ್ಶನವನ್ನು ರದ್ದುಪಡಿಸಿದ ಎರಡನೇ ಹಾಸ್ಯನಟ ಕಮ್ರಾ. ಮೂಲಗಳ ಪ್ರಕಾರ, ಬೆಂಗಳೂರಿನ ಜೆಪಿ ನಗರ ಪೊಲೀಸ್ ಠಾಣೆಯು ಕಮ್ರಾ ಅವರ ಪ್ರದರ್ಶನ ನಡೆಯಲಿರುವ ಆರ್ಟ್ ಖೋಜ್‌ ಮಾಲೀಕರಿಗೆ ಸಮನ್ಸ್ ನೀಡಿತ್ತು.

ಈ ಮಧ್ಯೆ, ನವೆಂಬರ್ 30 ರಂದು ಕೆಲವು ಜನರು ಸ್ಥಳದ ಹೊರಗೆ ಜಮಾಯಿಸಿ, ಪ್ರದರ್ಶನವನ್ನು ವಿರೋಧಿಸಿದರು. ಈ ವೇಳೆ ಪೊಲೀಸ್ ವ್ಯಾನ್ ಸ್ಥಳಕ್ಕೆ ಆಗಮಿಸಿ ಗುಂಪನ್ನು ಚದುರಿಸಿತು ಎಂದು ಮೂಲಗಳು ತಿಳಿಸಿವೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಆರ್ಟ್ ಖೋಜ್ ಜೊತೆ ಪೊಲೀಸರು ಠಾಣೆಯಲ್ಲಿ ಸಭೆ ನಡೆಸಿದರು. ಕೋವಿಡ್-19 ನಿರ್ಬಂಧಗಳಿಂದಾಗಿ ಪ್ರದರ್ಶನವನ್ನು ರದ್ದುಗೊಳಿಸಲಾಗುತ್ತಿದೆ ಎಂದು ಲಿಖಿತವಾಗಿ ತಿಳಿಸಲು ಕೇಳಿಕೊಂಡರು ಎಂದು ಮೂಲಗಳು ಹೇಳುತ್ತವೆ. ಆದರೆ, ಕುನಾಲ್ ಕಮ್ರಾ ತಮ್ಮ ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ, ಬೆದರಿಕೆಗಳಿಂದಾಗಿ ಕಾರ್ಯಕ್ರಮ ರದ್ದು ಮಾಡಲಾಗಿದೆ ಆರೋಪಿಸಿದ್ದಾರೆ. ಡಿಸೆಂಬರ್ 31ರವರೆಗೆ ಯಾವುದೇ ಕಾರ್ಯಕ್ರಮಗಳನ್ನು ನಡೆಸದಂತೆ ಪೊಲೀಸರು ಸ್ಥಳದ ಮಾಲೀಕರಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಮ್ರಾ ಅವರ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ ಎಂದು ಡಿಸೆಂಬರ್‌ 1ರಂದು ಮಾಹಿತಿ ಹೊರಬಿದ್ದಿದೆ. ಮುನಾವರ್ ಅವರ ಕಾರ್ಯಕ್ರಮವನ್ನು ಬೆಂಗಳೂರಿನ ಗುಡ್ ಶೆಫರ್ಡ್ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ರದ್ದು ಮಾಡುವಾಗ ಪೊಲೀಸರು, “ಮುನಾವರ್ ಅವರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ವಿವಾದಾತ್ಮಕ ವ್ಯಕ್ತಿಯಾಗಿರುವುದರಿಂದ ಕಾರ್ಯಕ್ರಮವನ್ನು ರದ್ದುಗೊಳಿಸಬೇಕು” ಎಂದಿದ್ದರು. ಕುನಾಲ್ ಕಮ್ರಾ ಪ್ರಕರಣದಲ್ಲಿ, ಪೊಲೀಸರು ಯಾವುದೇ ಆಕ್ಷೇಪಣೆಯನ್ನು ಲಿಖಿತವಾಗಿ ನೀಡಿಲ್ಲ.

ಎರಡು ಕಾರಣಗಳಿಂದಾಗಿ ಬೆಂಗಳೂರಿನಲ್ಲಿ ತನ್ನ ಪ್ರದರ್ಶನಗಳನ್ನು ರದ್ದುಗೊಳಿಸಲಾಗಿದೆ ಎಂದು ಕಮ್ರಾ ಆರೋಪಿಸಿದ್ದಾರೆ. “ಮೊದಲನೆಯದಾಗಿ, ಹೆಚ್ಚು ಕುಳಿತುಕೊಳ್ಳಬಹುದಾದ ಸ್ಥಳದಲ್ಲಿ 45 ಜನರನ್ನು ಕೂರಿಸಲು ನಾವು ವಿಶೇಷ ಅನುಮತಿಗಳನ್ನು ಪಡೆದಿಲ್ಲ. ಎರಡನೆಯದಾಗಿ, ನಾನು ಎಂದಾದರೂ ಅಲ್ಲಿ ಪ್ರದರ್ಶನ ನೀಡಿದರೆ ಸ್ಥಳವನ್ನು ಮುಚ್ಚುವುದಾಗಿ ಬೆದರಿಕೆ ಹಾಕಲಾಗಿದೆ. ಇದು COVID-19 ಪ್ರೋಟೋಕಾಲ್ ಮತ್ತು ಹೊಸ ಮಾರ್ಗಸೂಚಿಗಳ ಭಾಗವಾಗಿದೆ ಎಂದು ನಾನು ಭಾವಿಸುತ್ತೇನೆ. ವೈರಸ್‌ನ ರೂಪಾಂತರದಂತೆ ನಾನು ಕಾಣುತ್ತಿದ್ದೇನೆ ಎಂದು ಭಾವಿಸುತ್ತೇನೆ” ಎಂದಿದ್ದಾರೆ ಕಮ್ರಾ.

“ತನ್ನ ಪರಿಸ್ಥಿತಿಯನ್ನು ಮುನಾವರ್‌ಗೆ ಹೋಲಿಸಿರುವ ಕಮ್ರಾ, ಇಬ್ಬರನ್ನೂ ಒಂದೇ ರೀತಿಯಲ್ಲಿ ಮೌನಗೊಳಿಸಲಾಗುತ್ತಿದೆ ಎಂದು ದೂರಿದ್ದಾರೆ. ‘ಫಾರೂಕಿ ಹಾಸ್ಯವನ್ನು ತೊರೆಯಬೇಕಾದಾಗ ಕಮ್ರಾ ಹೇಗೆ ಪ್ರದರ್ಶನ ನೀಡುತ್ತಾನೆ’ ಎಂದು ಆಶ್ಚರ್ಯ ಪಡುವವರಿಗೆ ಆಡಳಿತ ವರ್ಗವು ಕನಿಷ್ಠ ಸಮಾನತೆಯಿಂದ ದಬ್ಬಾಳಿಕೆ ಮಾಡಲು ಪ್ರಯತ್ನಿಸುತ್ತಿದೆ ಎಂಬ ಅಂಶದಿಂದ ನಾವು ಸಾಂತ್ವನವನ್ನು ಕಂಡುಕೊಳ್ಳಬಹುದು” ಎಂದು ಅವರು ಬರೆದಿದ್ದಾರೆ.


ಇದನ್ನೂ ಓದಿರಿ: ಕರ್ನಾಟಕ ಹೈಕೋರ್ಟ್‌ನ ವಿಚಾರಣೆಯ ವೇಳೆ ಅರೆಬೆತ್ತಲೆಯಾಗಿ ಸ್ನಾನ ಮಾಡಿದ ವ್ಯಕ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...