Homeಮುಖಪುಟಬೆಂಗಳೂರು: ಮುನಾವರ್‌ ಬಳಿಕ ಕುನಾಲ್ ಕಮ್ರಾ ಕಾರ್ಯಕ್ರಮವೂ ರದ್ದು; ಬೆದರಿಕೆ ಆರೋಪ

ಬೆಂಗಳೂರು: ಮುನಾವರ್‌ ಬಳಿಕ ಕುನಾಲ್ ಕಮ್ರಾ ಕಾರ್ಯಕ್ರಮವೂ ರದ್ದು; ಬೆದರಿಕೆ ಆರೋಪ

- Advertisement -
- Advertisement -

ಸ್ಥಳವನ್ನು ಬಂದ್ ಮಾಡುವ ಬೆದರಿಕೆ ಮತ್ತು ವಿಶೇಷ ಆಸನ ಅನುಮತಿಗಳನ್ನು ನಿರಾಕರಿಸಿದ ಕಾರಣ ಮುಂದಿನ 20 ದಿನಗಳಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ತಮ್ಮ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಕಾಮೆಡಿಯನ್‌‌ ಕುನಾಲ್ ಕಮ್ರಾ ಘೋಷಿಸಿದ್ದಾರೆ.

ಡಿಸೆಂಬರ್ 1ರಿಂದ 19ರ ನಡುವೆ ಬೆಂಗಳೂರಿನ ಜೆಪಿ ನಗರದ ಸ್ಥಳವೊಂದರಲ್ಲಿ ‘ಕುನಾಲ್ ಕಮ್ರಾ ಲೈವ್’ ಎಂಬ ಶೀರ್ಷಿಕೆಯ ಕಾರ್ಯಕ್ರಮವನ್ನು ಕಮ್ರಾ ಪ್ರದರ್ಶಿಸಲು ಸಜ್ಜಾಗಿದ್ದರು. ಇತರ ರಾಜ್ಯಗಳಲ್ಲಿ ಇದೇ ರೀತಿಯ ಕಾರಣಗಳಿಂದಾಗಿ ಅವರ ಪ್ರದರ್ಶನಗಳನ್ನು ರದ್ದುಗೊಳಿಸಲಾಗಿದೆ ಎಂದು ಕುನಾಲ್ ಅವರ ಆಪ್ತ ಮೂಲಗಳು ಹೇಳಿವೆ. ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕಮ್ರಾ ಅವರ ಕಾರ್ಯಕ್ರಮ ರದ್ದಾಗಿದೆ.

ಗುಜರಾತ್ ಮೂಲದ ಮುನಾವರ್ ಫರೂಕಿ ನಂತರ ಕಳೆದ ಐದು ದಿನಗಳಲ್ಲಿ ಬೆಂಗಳೂರಿನಲ್ಲಿ ತನ್ನ ಪ್ರದರ್ಶನವನ್ನು ರದ್ದುಪಡಿಸಿದ ಎರಡನೇ ಹಾಸ್ಯನಟ ಕಮ್ರಾ. ಮೂಲಗಳ ಪ್ರಕಾರ, ಬೆಂಗಳೂರಿನ ಜೆಪಿ ನಗರ ಪೊಲೀಸ್ ಠಾಣೆಯು ಕಮ್ರಾ ಅವರ ಪ್ರದರ್ಶನ ನಡೆಯಲಿರುವ ಆರ್ಟ್ ಖೋಜ್‌ ಮಾಲೀಕರಿಗೆ ಸಮನ್ಸ್ ನೀಡಿತ್ತು.

ಈ ಮಧ್ಯೆ, ನವೆಂಬರ್ 30 ರಂದು ಕೆಲವು ಜನರು ಸ್ಥಳದ ಹೊರಗೆ ಜಮಾಯಿಸಿ, ಪ್ರದರ್ಶನವನ್ನು ವಿರೋಧಿಸಿದರು. ಈ ವೇಳೆ ಪೊಲೀಸ್ ವ್ಯಾನ್ ಸ್ಥಳಕ್ಕೆ ಆಗಮಿಸಿ ಗುಂಪನ್ನು ಚದುರಿಸಿತು ಎಂದು ಮೂಲಗಳು ತಿಳಿಸಿವೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಆರ್ಟ್ ಖೋಜ್ ಜೊತೆ ಪೊಲೀಸರು ಠಾಣೆಯಲ್ಲಿ ಸಭೆ ನಡೆಸಿದರು. ಕೋವಿಡ್-19 ನಿರ್ಬಂಧಗಳಿಂದಾಗಿ ಪ್ರದರ್ಶನವನ್ನು ರದ್ದುಗೊಳಿಸಲಾಗುತ್ತಿದೆ ಎಂದು ಲಿಖಿತವಾಗಿ ತಿಳಿಸಲು ಕೇಳಿಕೊಂಡರು ಎಂದು ಮೂಲಗಳು ಹೇಳುತ್ತವೆ. ಆದರೆ, ಕುನಾಲ್ ಕಮ್ರಾ ತಮ್ಮ ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ, ಬೆದರಿಕೆಗಳಿಂದಾಗಿ ಕಾರ್ಯಕ್ರಮ ರದ್ದು ಮಾಡಲಾಗಿದೆ ಆರೋಪಿಸಿದ್ದಾರೆ. ಡಿಸೆಂಬರ್ 31ರವರೆಗೆ ಯಾವುದೇ ಕಾರ್ಯಕ್ರಮಗಳನ್ನು ನಡೆಸದಂತೆ ಪೊಲೀಸರು ಸ್ಥಳದ ಮಾಲೀಕರಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಮ್ರಾ ಅವರ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ ಎಂದು ಡಿಸೆಂಬರ್‌ 1ರಂದು ಮಾಹಿತಿ ಹೊರಬಿದ್ದಿದೆ. ಮುನಾವರ್ ಅವರ ಕಾರ್ಯಕ್ರಮವನ್ನು ಬೆಂಗಳೂರಿನ ಗುಡ್ ಶೆಫರ್ಡ್ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ರದ್ದು ಮಾಡುವಾಗ ಪೊಲೀಸರು, “ಮುನಾವರ್ ಅವರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ವಿವಾದಾತ್ಮಕ ವ್ಯಕ್ತಿಯಾಗಿರುವುದರಿಂದ ಕಾರ್ಯಕ್ರಮವನ್ನು ರದ್ದುಗೊಳಿಸಬೇಕು” ಎಂದಿದ್ದರು. ಕುನಾಲ್ ಕಮ್ರಾ ಪ್ರಕರಣದಲ್ಲಿ, ಪೊಲೀಸರು ಯಾವುದೇ ಆಕ್ಷೇಪಣೆಯನ್ನು ಲಿಖಿತವಾಗಿ ನೀಡಿಲ್ಲ.

ಎರಡು ಕಾರಣಗಳಿಂದಾಗಿ ಬೆಂಗಳೂರಿನಲ್ಲಿ ತನ್ನ ಪ್ರದರ್ಶನಗಳನ್ನು ರದ್ದುಗೊಳಿಸಲಾಗಿದೆ ಎಂದು ಕಮ್ರಾ ಆರೋಪಿಸಿದ್ದಾರೆ. “ಮೊದಲನೆಯದಾಗಿ, ಹೆಚ್ಚು ಕುಳಿತುಕೊಳ್ಳಬಹುದಾದ ಸ್ಥಳದಲ್ಲಿ 45 ಜನರನ್ನು ಕೂರಿಸಲು ನಾವು ವಿಶೇಷ ಅನುಮತಿಗಳನ್ನು ಪಡೆದಿಲ್ಲ. ಎರಡನೆಯದಾಗಿ, ನಾನು ಎಂದಾದರೂ ಅಲ್ಲಿ ಪ್ರದರ್ಶನ ನೀಡಿದರೆ ಸ್ಥಳವನ್ನು ಮುಚ್ಚುವುದಾಗಿ ಬೆದರಿಕೆ ಹಾಕಲಾಗಿದೆ. ಇದು COVID-19 ಪ್ರೋಟೋಕಾಲ್ ಮತ್ತು ಹೊಸ ಮಾರ್ಗಸೂಚಿಗಳ ಭಾಗವಾಗಿದೆ ಎಂದು ನಾನು ಭಾವಿಸುತ್ತೇನೆ. ವೈರಸ್‌ನ ರೂಪಾಂತರದಂತೆ ನಾನು ಕಾಣುತ್ತಿದ್ದೇನೆ ಎಂದು ಭಾವಿಸುತ್ತೇನೆ” ಎಂದಿದ್ದಾರೆ ಕಮ್ರಾ.

“ತನ್ನ ಪರಿಸ್ಥಿತಿಯನ್ನು ಮುನಾವರ್‌ಗೆ ಹೋಲಿಸಿರುವ ಕಮ್ರಾ, ಇಬ್ಬರನ್ನೂ ಒಂದೇ ರೀತಿಯಲ್ಲಿ ಮೌನಗೊಳಿಸಲಾಗುತ್ತಿದೆ ಎಂದು ದೂರಿದ್ದಾರೆ. ‘ಫಾರೂಕಿ ಹಾಸ್ಯವನ್ನು ತೊರೆಯಬೇಕಾದಾಗ ಕಮ್ರಾ ಹೇಗೆ ಪ್ರದರ್ಶನ ನೀಡುತ್ತಾನೆ’ ಎಂದು ಆಶ್ಚರ್ಯ ಪಡುವವರಿಗೆ ಆಡಳಿತ ವರ್ಗವು ಕನಿಷ್ಠ ಸಮಾನತೆಯಿಂದ ದಬ್ಬಾಳಿಕೆ ಮಾಡಲು ಪ್ರಯತ್ನಿಸುತ್ತಿದೆ ಎಂಬ ಅಂಶದಿಂದ ನಾವು ಸಾಂತ್ವನವನ್ನು ಕಂಡುಕೊಳ್ಳಬಹುದು” ಎಂದು ಅವರು ಬರೆದಿದ್ದಾರೆ.


ಇದನ್ನೂ ಓದಿರಿ: ಕರ್ನಾಟಕ ಹೈಕೋರ್ಟ್‌ನ ವಿಚಾರಣೆಯ ವೇಳೆ ಅರೆಬೆತ್ತಲೆಯಾಗಿ ಸ್ನಾನ ಮಾಡಿದ ವ್ಯಕ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...