Homeಮುಖಪುಟದಿಶಾ ಬಂಧನಕ್ಕೂ ಮುನ್ನ ಬೆಂಗಳೂರು ಪೊಲೀಸರಿಗೆ ಮಾಹಿತಿಯೇ ಇಲ್ಲ: ಇದೆಂಥ ಒಕ್ಕೂಟ ವ್ಯವಸ್ಥೆ?

ದಿಶಾ ಬಂಧನಕ್ಕೂ ಮುನ್ನ ಬೆಂಗಳೂರು ಪೊಲೀಸರಿಗೆ ಮಾಹಿತಿಯೇ ಇಲ್ಲ: ಇದೆಂಥ ಒಕ್ಕೂಟ ವ್ಯವಸ್ಥೆ?

- Advertisement -
- Advertisement -

ಶನಿವಾರ (ಫೆಬ್ರವರಿ 13) ದೇಶದ್ರೋಹ ಆರೋಪದ ಮೇಲೆ ಬಂಧನವಾಗಿರುವ ಬೆಂಗಳೂರು ಮೂಲದ ಪರಿಸರ ಹೋರಾಟಗಾರ್ತಿ ದಿಶಾ ರವಿಯವರ ಮೇಲೆ ದೆಹಲಿ ಪೊಲೀಸರು ನಿಗಾ ಇಟ್ಟಿದ್ದರು ಮತ್ತು ಬಂಧನಕ್ಕೆ ಸಂಪೂರ್ಣ ಸಿದ್ಧರಾಗಿದ್ದರು ಎಂದು ಹೇಳಲಾಗುತ್ತಿದೆ. ಆದರೆ ದಿಶಾ ಅವರನ್ನು ದೆಹಲಿ ಪೊಲೀಸರು ಬಂಧಿಸಿ ಆಕೆಯನ್ನು ವಿಮಾನ ಹತ್ತಿಸುವ ತನಕವೂ ಬೆಂಗಳೂರಿನ ಸ್ಥಳಿಯ ಪೊಲೀಸರಿಗಾಗಲೀ, ರಾಜ್ಯ ಸರ್ಕಾರಕ್ಕಾಗಲೀ ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂಬುದು ಈ ಬಹು ಚರ್ಚಿತ ವಿಷಯವಾಗಿದೆ. ಇದರ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.

ರಾಜ್ಯಕ್ಕೆ ಮತ್ತು ಸ್ಥಳೀಯ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೇ ವ್ಯಕ್ತಿಯೊಬ್ಬರನ್ನು ಬಂಧಿಸುವಂತೆ ಕ್ರಮ ತೆಗೆದುಕೊಂಡಿರುವ ದೆಹಲಿ ಪೊಲೀಸರು ಮತ್ತು ಕೇಂದ್ರ ಸರ್ಕಾರದ ವಿರುದ್ಧ ಹಲವರು ಟೀಕೆ ಮಾಡುತ್ತಿದ್ದಾರೆ. ಮತ್ತೊಂದು ಕಡೆ ಈ ಪ್ರಕರಣದಲ್ಲಿ ರಾಜ್ಯಸರ್ಕಾರ ಇನ್ನೂ ಈ ವಿಚಾರಕ್ಕೆ ಪ್ರತಿಕ್ರಿಯಿಸದೇ ಇರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಶನಿವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಇಬ್ಬರು ಮಹಿಳಾ ಸಿಬ್ಬಂದಿ ಸೇರಿದಂತೆ ಐವರು ಸದಸ್ಯರ ಪೊಲೀಸ್ ತಂಡ ಬೆಂಗಳೂರಿಗೆ ಆಗಮಿಸಿದೆ ಎಂದು ನಗರ ಪೊಲೀಸ್ ಮೂಲಗಳು ತಿಳಿಸಿವೆ. ತಂಡವು ನೇರವಾಗಿ ದಿಶಾ ವಾಸಿಸುತ್ತಿರುವ ಬೆಂಗಳೂರು ಉತ್ತರದ ಅಬ್ಬಿಗರೆ, ಚಿಕ್ಕಬಾಣಾವರ ಪ್ರದೇಶಕ್ಕೆ ತೆರಳಿತು. ಆದರೆ ಅವರು ತಕ್ಷಣ ದಿಶಾ ಮನೆಗೆ ಪ್ರವೇಶಿಸಲಿಲ್ಲ. ಆಕೆಯ ಮೊಬೈಲ್ ಫೋನ್ ಅನ್ನು ಟ್ರ್ಯಾಕ್ ಮಾಡುವ ಮೂಲಕ ದಿಶಾ ಮನೆಯಲ್ಲಿದ್ದಾಳೆಯೇ ಎಂಬುದನ್ನು ಮೊದಲು ಖಚಿತಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ದಿಶಾ ರವಿ ಸ್ಥಾಪಿಸಿರುವ ‘Fridays For Future’ ಸಂಸ್ಥೆಯ ಬಗ್ಗೆ ಗೊತ್ತೆ?

“ಮೊದಲು, ಕಾರಿನಲ್ಲಿದ್ದ ಮೂವರು ಈ ಪ್ರದೇಶಕ್ಕೆ ಭೇಟಿ ನೀಡಿದ್ದು, ಹೊರಡುವ ಮೊದಲು ಮನೆ ಮತ್ತು ಸುತ್ತಮುತ್ತಲಿನ ಪರಿಸ್ಥಿತಿಯ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ” ಎಂದು ಮೂಲಗಳು ತಿಳಿಸಿವೆ. ನಂತರ ಈ ಮೂವರು ಇಬ್ಬರು ಮಹಿಳಾ ಪೊಲೀಸರೊಂದಿಗೆ ಮತ್ತೆ ದಿಶಾಳ ಮನೆಗೆ ಬಂದಿದ್ದಾರೆ. ಮಹಿಳಾ ಪೊಲೀಸರು ಬಾಗಿಲು ಬಡಿದು ಮನೆಯೊಳಗೆ ಪ್ರವೇಶಿಸುವಾಗ ಮೂವರು ಹೊರಗೆ ನಿಂತಿದ್ದರು. ಸ್ವಲ್ಪ ಸಮಯದ ನಂತರ, ಇಬ್ಬರು ಪುರುಷರೂ ಮನೆಯೊಳಗೆ ಪ್ರವೇಶಿಸಿ ಸಂಜೆ 5 ರೊಳಗೆ ಬಂಧನದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದರು ಎಂದು ದಿ ಪ್ರಿಂಟ್ ವರದಿ ಮಾಡಿದೆ.

ದೆಹಲಿಯ ಸ್ಥಳೀಯ ನ್ಯಾಯಾಲಯವೊಂದು ನೀಡಿದ ಐಡಿ ಕಾರ್ಡ್‌ಗಳು ಮತ್ತು ಬಂಧನದ ವಾರಂಟ್‌ ಪ್ರತಿಯನ್ನು ತೋರಿಸಿದ ನಂತರವೇ ದಿಶಾ ಮತ್ತು ಆಕೆಯ ತಾಯಿ ಪೊಲೀಸರನ್ನು ಮನೆಯ ಒಳಗೆ ಅನುಮತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದಿಶಾಳನ್ನು ವಶಕ್ಕೆ ಪಡೆದ ನಂತರ ತಂಡದ ಇಬ್ಬರು ಆಕೆಯ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್‌ಗಳನ್ನು ತೆಗೆದುಕೊಂಡು ಬಂದಿದ್ದಾರೆ. ಇನ್ನೊಬ್ಬ ಪೊಲೀಸ್ ಸಂಪೂರ್ಣ ವಿಚಾರಣೆಯನ್ನು ದಾಖಲಿಸಿದ್ದಾರೆ. ನಂತರ ದಿಶಾಳ ತಾಯಿ ಮಂಜುಳಾ ಅವರ ಬಳಿ ಈ ಪ್ರಕರಣ ಮತ್ತು ಬಂಧನದ ಬಗ್ಗೆ ಖಚಿತಪಡಿಸುವ ದಾಖಲೆಗೆ ಸಹಿ ಹಾಕುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಜನರಿಂದ ಲೂಟಿ ಮಾಡಿ, ಕೇವಲ ‘ಇಬ್ಬರ’ ವಿಕಾಸ: ಎಲ್‌ಪಿಜಿ ದರ ಏರಿಕೆ ವಿರುದ್ದ ರಾಹುಲ್‌‌…

“ಸಂಜೆ 5.30 ರ ಸುಮಾರಿಗೆ ಪೊಲೀಸರ ತಂಡವು ದಿಶಾಳೊಂದಿಗೆ ವಿಮಾನ ನಿಲ್ದಾಣಕ್ಕೆ ತಲುಪಿತು. ಮಹಿಳಾ ಪೊಲೀಸರು ದಿಶಾಳ ತಾಯಿಗೆ ಆಕೆಯ ಕೆಲವು ಬಟ್ಟೆಗಳನ್ನು ಪ್ಯಾಕ್ ಮಾಡಿಸಿಕೊಂಡರು. ಆಕೆಯ ತಾಯಿ ಕೆಲವು ಹಣ್ಣುಗಳು ಮತ್ತು ದಿಶಾ ಬಳಸುವ ಇತರ ಔಷಧಿಗಳನ್ನು ಸಹ ಪ್ಯಾಕ್ ಮಾಡಿಕೊಟ್ಟಿದ್ದಾರೆ” ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ನಂತರ ಪೊಲೀಸರ ತಂಡವು ಎರಡು ಭಾಗಗಳಾಗಿ ವಿಭಜಿತಗೊಂಡು, ಒಂದು ತಂಡವು ದಿಶಾಳನ್ನು ಕರೆದುಕೊಂಡು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳಿದರು. ಮತ್ತೊಂದು ತಂಡವು ಸೋಲದೇವನಹಳ್ಳಿ ವ್ಯಾಪ್ತಿಯ  ಪೊಲೀಸರನ್ನು ಭೇಟಿ ಮಾಡಿ ಬಂಧನದ ಬಗ್ಗೆ ಅಧಿಕೃತವಾಗಿ ತಿಳಿಸಲು ಹೊರಟರು. ಈ ವಿಷಯ ತಿಳಿದ ನಂತರ ದಿಶಾಳ ಮನೆಯ ಬಳಿಯ ಪರಿಸ್ಥಿಯನ್ನು ಗಮನಿಸಲು ಸ್ಥಲೀಯ ಪೊಲೀಸ್ ಅಧಿಕಾರಿಗಳು ಗಸ್ತು ತಿರುಗುವ ಹೊಯ್ಸಳ ತಂಡವನ್ನು ಕಳುಹಿಸಿದರು ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಇದನ್ನೂ ಓದಿ: 3ರಲ್ಲಿ 2 ಪ್ರಕರಣಗಳಲ್ಲಿ ಜಾಮೀನು ಪಡೆದ ದಲಿತ ಹೋರಾಟಗಾರ್ತಿ ನೊದೀಪ್ ಕೌರ್

ಅಂದರೆ ದಿಶಾಳ ಬಂಧನವೆಲ್ಲಾ ಮುಗಿದ ನಂತರ ವಿಮಾನ ನಿಲ್ದಾಣಕ್ಕೆ ತೆರಳುವಾಗಲಷ್ಟೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಷ್ಟೆ ಅಲ್ಲದೇ ಈ ಪ್ರಕರಣದಲ್ಲಿ ಯಾವುದೇ ನೋಟಿಸ್ ಆಗಲೀ ಅಥವಾ ವಾರೆಂಟ್ ಆಗಲಿ ನೀಡಿರುವುದಿಲ್ಲ. ಹಾಗಾಗಿ ಈ ಬಂಧನವು ಕಾನೂನು ಬಾಹಿರವೆಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ದಿಶಾಳನ್ನು ಬಂಧಿಸರು ದೆಹಲಿ ಪೊಲೀಸರು ತೆಗೆದುಕೊಂಡ ಶ್ರಮವನ್ನು ನೋಡಿದರೆ ಒಬ್ಬ ಭಯೋತ್ಪಾದಕನನ್ನು ಹೊಂಚುಹಾಕಿ ಹಿಡಿಯುವ ರೀತಿಯಲ್ಲಿ ಯೋಜನೆಯನ್ನು ರೂಪಿಸಿದ್ದಾರೆ ಎಂದು ಹಲವಾರು ಜನ ಆರೋಪಿಸಿದ್ದಾರೆ. ಹಾಗಾಗಿ ದಿಶಾ ಬಂಧನವಾಗಿಲ್ಲ ಬದಲಿಗೆ ಅಪಹರಿಸಲ್ಪಟ್ಟಿದ್ದಾಳೆ ಎಂದು ದೂರಿದ್ದಾರೆ.

ಅಷ್ಟಕ್ಕೂ ದಿಶಾ ಹಂಚಿಕೊಂಡಿರುವ ಟೂಲ್‌ಕಿಟ್‌ನಲ್ಲಿ, “ರೈತರ ಹೋರಾಟವನ್ನು ತೀವ್ರಗೊಳಿಸಲು ಏನು ಮಾಡಬಹದು? ನಾವಿರುವಲ್ಲಿಂದಲೇ ರೈತ ಹೋರಾಟವನ್ನು ಹೇಗೆ ಬೆಂಬಲಿಸಬಹುದು?” ಎನ್ನುವುದರ ಬಗ್ಗೆ ಕೆಲವು ಮಾಹಿತಿಗಳಿವೆ ಅಷ್ಟೆ. ಆದರೆ ಇದಕ್ಕೆ ಖಲೀಸ್ತಾನದ ನಂಟಿನ ಆರೋಪ ಹೊರಿಸಿ, ಭಯೋತ್ಪಾದಕ ಕೃತ್ಯ ಎಂದು ಬಿಂಬಿಸಿ, ದೇಶದ್ರೋಹ ಪ್ರಕರಣ ದಾಖಲಿಸುವಷ್ಟು ಸರ್ಕಾರದ ನಿದ್ದೆಗೆಡಿಸಿದೆಯೆಂದರೆ ಇದನ್ನು ನಾವು ಯಾವ ದೃಷ್ಟಿಕೋನದಿಂದ ನೋಡಬೇಕು? ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಕನ್ನಡ ಮಾಯ, ತಮಿಳುನಾಡಿನಲ್ಲಿ ತಮಿಳುಮಯ: ಹಿಂದಿ ಹೇರಿಕೆಗೆ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೆಹಲಿಯ ಪೊಲೀಸರು ಬೇರೊಂದು ರಾಜ್ಯದಲ್ಲಿ ಹೀಗೆ ನಿಯಮಬಾಹಿರವಾಗಿ ವ್ಯಕ್ತಿಯೊಬ್ಬನ್ನು ಬಂದಿಸಿರುವುದು, ಸರ್ವಾಧಿಕಾರ ಕಾಲಿಕ್ಕಿರುವುದಕ್ಕೆ, ಅಧಿಕೃತ ಸಾಕ್ಷಿಯಾಗಿದೆ.

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...