Homeಮುಖಪುಟದಿಶಾ ಬಂಧನಕ್ಕೂ ಮುನ್ನ ಬೆಂಗಳೂರು ಪೊಲೀಸರಿಗೆ ಮಾಹಿತಿಯೇ ಇಲ್ಲ: ಇದೆಂಥ ಒಕ್ಕೂಟ ವ್ಯವಸ್ಥೆ?

ದಿಶಾ ಬಂಧನಕ್ಕೂ ಮುನ್ನ ಬೆಂಗಳೂರು ಪೊಲೀಸರಿಗೆ ಮಾಹಿತಿಯೇ ಇಲ್ಲ: ಇದೆಂಥ ಒಕ್ಕೂಟ ವ್ಯವಸ್ಥೆ?

- Advertisement -
- Advertisement -

ಶನಿವಾರ (ಫೆಬ್ರವರಿ 13) ದೇಶದ್ರೋಹ ಆರೋಪದ ಮೇಲೆ ಬಂಧನವಾಗಿರುವ ಬೆಂಗಳೂರು ಮೂಲದ ಪರಿಸರ ಹೋರಾಟಗಾರ್ತಿ ದಿಶಾ ರವಿಯವರ ಮೇಲೆ ದೆಹಲಿ ಪೊಲೀಸರು ನಿಗಾ ಇಟ್ಟಿದ್ದರು ಮತ್ತು ಬಂಧನಕ್ಕೆ ಸಂಪೂರ್ಣ ಸಿದ್ಧರಾಗಿದ್ದರು ಎಂದು ಹೇಳಲಾಗುತ್ತಿದೆ. ಆದರೆ ದಿಶಾ ಅವರನ್ನು ದೆಹಲಿ ಪೊಲೀಸರು ಬಂಧಿಸಿ ಆಕೆಯನ್ನು ವಿಮಾನ ಹತ್ತಿಸುವ ತನಕವೂ ಬೆಂಗಳೂರಿನ ಸ್ಥಳಿಯ ಪೊಲೀಸರಿಗಾಗಲೀ, ರಾಜ್ಯ ಸರ್ಕಾರಕ್ಕಾಗಲೀ ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂಬುದು ಈ ಬಹು ಚರ್ಚಿತ ವಿಷಯವಾಗಿದೆ. ಇದರ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.

ರಾಜ್ಯಕ್ಕೆ ಮತ್ತು ಸ್ಥಳೀಯ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೇ ವ್ಯಕ್ತಿಯೊಬ್ಬರನ್ನು ಬಂಧಿಸುವಂತೆ ಕ್ರಮ ತೆಗೆದುಕೊಂಡಿರುವ ದೆಹಲಿ ಪೊಲೀಸರು ಮತ್ತು ಕೇಂದ್ರ ಸರ್ಕಾರದ ವಿರುದ್ಧ ಹಲವರು ಟೀಕೆ ಮಾಡುತ್ತಿದ್ದಾರೆ. ಮತ್ತೊಂದು ಕಡೆ ಈ ಪ್ರಕರಣದಲ್ಲಿ ರಾಜ್ಯಸರ್ಕಾರ ಇನ್ನೂ ಈ ವಿಚಾರಕ್ಕೆ ಪ್ರತಿಕ್ರಿಯಿಸದೇ ಇರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಶನಿವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಇಬ್ಬರು ಮಹಿಳಾ ಸಿಬ್ಬಂದಿ ಸೇರಿದಂತೆ ಐವರು ಸದಸ್ಯರ ಪೊಲೀಸ್ ತಂಡ ಬೆಂಗಳೂರಿಗೆ ಆಗಮಿಸಿದೆ ಎಂದು ನಗರ ಪೊಲೀಸ್ ಮೂಲಗಳು ತಿಳಿಸಿವೆ. ತಂಡವು ನೇರವಾಗಿ ದಿಶಾ ವಾಸಿಸುತ್ತಿರುವ ಬೆಂಗಳೂರು ಉತ್ತರದ ಅಬ್ಬಿಗರೆ, ಚಿಕ್ಕಬಾಣಾವರ ಪ್ರದೇಶಕ್ಕೆ ತೆರಳಿತು. ಆದರೆ ಅವರು ತಕ್ಷಣ ದಿಶಾ ಮನೆಗೆ ಪ್ರವೇಶಿಸಲಿಲ್ಲ. ಆಕೆಯ ಮೊಬೈಲ್ ಫೋನ್ ಅನ್ನು ಟ್ರ್ಯಾಕ್ ಮಾಡುವ ಮೂಲಕ ದಿಶಾ ಮನೆಯಲ್ಲಿದ್ದಾಳೆಯೇ ಎಂಬುದನ್ನು ಮೊದಲು ಖಚಿತಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ದಿಶಾ ರವಿ ಸ್ಥಾಪಿಸಿರುವ ‘Fridays For Future’ ಸಂಸ್ಥೆಯ ಬಗ್ಗೆ ಗೊತ್ತೆ?

“ಮೊದಲು, ಕಾರಿನಲ್ಲಿದ್ದ ಮೂವರು ಈ ಪ್ರದೇಶಕ್ಕೆ ಭೇಟಿ ನೀಡಿದ್ದು, ಹೊರಡುವ ಮೊದಲು ಮನೆ ಮತ್ತು ಸುತ್ತಮುತ್ತಲಿನ ಪರಿಸ್ಥಿತಿಯ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ” ಎಂದು ಮೂಲಗಳು ತಿಳಿಸಿವೆ. ನಂತರ ಈ ಮೂವರು ಇಬ್ಬರು ಮಹಿಳಾ ಪೊಲೀಸರೊಂದಿಗೆ ಮತ್ತೆ ದಿಶಾಳ ಮನೆಗೆ ಬಂದಿದ್ದಾರೆ. ಮಹಿಳಾ ಪೊಲೀಸರು ಬಾಗಿಲು ಬಡಿದು ಮನೆಯೊಳಗೆ ಪ್ರವೇಶಿಸುವಾಗ ಮೂವರು ಹೊರಗೆ ನಿಂತಿದ್ದರು. ಸ್ವಲ್ಪ ಸಮಯದ ನಂತರ, ಇಬ್ಬರು ಪುರುಷರೂ ಮನೆಯೊಳಗೆ ಪ್ರವೇಶಿಸಿ ಸಂಜೆ 5 ರೊಳಗೆ ಬಂಧನದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದರು ಎಂದು ದಿ ಪ್ರಿಂಟ್ ವರದಿ ಮಾಡಿದೆ.

ದೆಹಲಿಯ ಸ್ಥಳೀಯ ನ್ಯಾಯಾಲಯವೊಂದು ನೀಡಿದ ಐಡಿ ಕಾರ್ಡ್‌ಗಳು ಮತ್ತು ಬಂಧನದ ವಾರಂಟ್‌ ಪ್ರತಿಯನ್ನು ತೋರಿಸಿದ ನಂತರವೇ ದಿಶಾ ಮತ್ತು ಆಕೆಯ ತಾಯಿ ಪೊಲೀಸರನ್ನು ಮನೆಯ ಒಳಗೆ ಅನುಮತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದಿಶಾಳನ್ನು ವಶಕ್ಕೆ ಪಡೆದ ನಂತರ ತಂಡದ ಇಬ್ಬರು ಆಕೆಯ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್‌ಗಳನ್ನು ತೆಗೆದುಕೊಂಡು ಬಂದಿದ್ದಾರೆ. ಇನ್ನೊಬ್ಬ ಪೊಲೀಸ್ ಸಂಪೂರ್ಣ ವಿಚಾರಣೆಯನ್ನು ದಾಖಲಿಸಿದ್ದಾರೆ. ನಂತರ ದಿಶಾಳ ತಾಯಿ ಮಂಜುಳಾ ಅವರ ಬಳಿ ಈ ಪ್ರಕರಣ ಮತ್ತು ಬಂಧನದ ಬಗ್ಗೆ ಖಚಿತಪಡಿಸುವ ದಾಖಲೆಗೆ ಸಹಿ ಹಾಕುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಜನರಿಂದ ಲೂಟಿ ಮಾಡಿ, ಕೇವಲ ‘ಇಬ್ಬರ’ ವಿಕಾಸ: ಎಲ್‌ಪಿಜಿ ದರ ಏರಿಕೆ ವಿರುದ್ದ ರಾಹುಲ್‌‌…

“ಸಂಜೆ 5.30 ರ ಸುಮಾರಿಗೆ ಪೊಲೀಸರ ತಂಡವು ದಿಶಾಳೊಂದಿಗೆ ವಿಮಾನ ನಿಲ್ದಾಣಕ್ಕೆ ತಲುಪಿತು. ಮಹಿಳಾ ಪೊಲೀಸರು ದಿಶಾಳ ತಾಯಿಗೆ ಆಕೆಯ ಕೆಲವು ಬಟ್ಟೆಗಳನ್ನು ಪ್ಯಾಕ್ ಮಾಡಿಸಿಕೊಂಡರು. ಆಕೆಯ ತಾಯಿ ಕೆಲವು ಹಣ್ಣುಗಳು ಮತ್ತು ದಿಶಾ ಬಳಸುವ ಇತರ ಔಷಧಿಗಳನ್ನು ಸಹ ಪ್ಯಾಕ್ ಮಾಡಿಕೊಟ್ಟಿದ್ದಾರೆ” ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ನಂತರ ಪೊಲೀಸರ ತಂಡವು ಎರಡು ಭಾಗಗಳಾಗಿ ವಿಭಜಿತಗೊಂಡು, ಒಂದು ತಂಡವು ದಿಶಾಳನ್ನು ಕರೆದುಕೊಂಡು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳಿದರು. ಮತ್ತೊಂದು ತಂಡವು ಸೋಲದೇವನಹಳ್ಳಿ ವ್ಯಾಪ್ತಿಯ  ಪೊಲೀಸರನ್ನು ಭೇಟಿ ಮಾಡಿ ಬಂಧನದ ಬಗ್ಗೆ ಅಧಿಕೃತವಾಗಿ ತಿಳಿಸಲು ಹೊರಟರು. ಈ ವಿಷಯ ತಿಳಿದ ನಂತರ ದಿಶಾಳ ಮನೆಯ ಬಳಿಯ ಪರಿಸ್ಥಿಯನ್ನು ಗಮನಿಸಲು ಸ್ಥಲೀಯ ಪೊಲೀಸ್ ಅಧಿಕಾರಿಗಳು ಗಸ್ತು ತಿರುಗುವ ಹೊಯ್ಸಳ ತಂಡವನ್ನು ಕಳುಹಿಸಿದರು ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಇದನ್ನೂ ಓದಿ: 3ರಲ್ಲಿ 2 ಪ್ರಕರಣಗಳಲ್ಲಿ ಜಾಮೀನು ಪಡೆದ ದಲಿತ ಹೋರಾಟಗಾರ್ತಿ ನೊದೀಪ್ ಕೌರ್

ಅಂದರೆ ದಿಶಾಳ ಬಂಧನವೆಲ್ಲಾ ಮುಗಿದ ನಂತರ ವಿಮಾನ ನಿಲ್ದಾಣಕ್ಕೆ ತೆರಳುವಾಗಲಷ್ಟೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಷ್ಟೆ ಅಲ್ಲದೇ ಈ ಪ್ರಕರಣದಲ್ಲಿ ಯಾವುದೇ ನೋಟಿಸ್ ಆಗಲೀ ಅಥವಾ ವಾರೆಂಟ್ ಆಗಲಿ ನೀಡಿರುವುದಿಲ್ಲ. ಹಾಗಾಗಿ ಈ ಬಂಧನವು ಕಾನೂನು ಬಾಹಿರವೆಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ದಿಶಾಳನ್ನು ಬಂಧಿಸರು ದೆಹಲಿ ಪೊಲೀಸರು ತೆಗೆದುಕೊಂಡ ಶ್ರಮವನ್ನು ನೋಡಿದರೆ ಒಬ್ಬ ಭಯೋತ್ಪಾದಕನನ್ನು ಹೊಂಚುಹಾಕಿ ಹಿಡಿಯುವ ರೀತಿಯಲ್ಲಿ ಯೋಜನೆಯನ್ನು ರೂಪಿಸಿದ್ದಾರೆ ಎಂದು ಹಲವಾರು ಜನ ಆರೋಪಿಸಿದ್ದಾರೆ. ಹಾಗಾಗಿ ದಿಶಾ ಬಂಧನವಾಗಿಲ್ಲ ಬದಲಿಗೆ ಅಪಹರಿಸಲ್ಪಟ್ಟಿದ್ದಾಳೆ ಎಂದು ದೂರಿದ್ದಾರೆ.

ಅಷ್ಟಕ್ಕೂ ದಿಶಾ ಹಂಚಿಕೊಂಡಿರುವ ಟೂಲ್‌ಕಿಟ್‌ನಲ್ಲಿ, “ರೈತರ ಹೋರಾಟವನ್ನು ತೀವ್ರಗೊಳಿಸಲು ಏನು ಮಾಡಬಹದು? ನಾವಿರುವಲ್ಲಿಂದಲೇ ರೈತ ಹೋರಾಟವನ್ನು ಹೇಗೆ ಬೆಂಬಲಿಸಬಹುದು?” ಎನ್ನುವುದರ ಬಗ್ಗೆ ಕೆಲವು ಮಾಹಿತಿಗಳಿವೆ ಅಷ್ಟೆ. ಆದರೆ ಇದಕ್ಕೆ ಖಲೀಸ್ತಾನದ ನಂಟಿನ ಆರೋಪ ಹೊರಿಸಿ, ಭಯೋತ್ಪಾದಕ ಕೃತ್ಯ ಎಂದು ಬಿಂಬಿಸಿ, ದೇಶದ್ರೋಹ ಪ್ರಕರಣ ದಾಖಲಿಸುವಷ್ಟು ಸರ್ಕಾರದ ನಿದ್ದೆಗೆಡಿಸಿದೆಯೆಂದರೆ ಇದನ್ನು ನಾವು ಯಾವ ದೃಷ್ಟಿಕೋನದಿಂದ ನೋಡಬೇಕು? ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಕನ್ನಡ ಮಾಯ, ತಮಿಳುನಾಡಿನಲ್ಲಿ ತಮಿಳುಮಯ: ಹಿಂದಿ ಹೇರಿಕೆಗೆ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೆಹಲಿಯ ಪೊಲೀಸರು ಬೇರೊಂದು ರಾಜ್ಯದಲ್ಲಿ ಹೀಗೆ ನಿಯಮಬಾಹಿರವಾಗಿ ವ್ಯಕ್ತಿಯೊಬ್ಬನ್ನು ಬಂದಿಸಿರುವುದು, ಸರ್ವಾಧಿಕಾರ ಕಾಲಿಕ್ಕಿರುವುದಕ್ಕೆ, ಅಧಿಕೃತ ಸಾಕ್ಷಿಯಾಗಿದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...