Homeಮುಖಪುಟದಿಶಾ ಬಂಧನಕ್ಕೂ ಮುನ್ನ ಬೆಂಗಳೂರು ಪೊಲೀಸರಿಗೆ ಮಾಹಿತಿಯೇ ಇಲ್ಲ: ಇದೆಂಥ ಒಕ್ಕೂಟ ವ್ಯವಸ್ಥೆ?

ದಿಶಾ ಬಂಧನಕ್ಕೂ ಮುನ್ನ ಬೆಂಗಳೂರು ಪೊಲೀಸರಿಗೆ ಮಾಹಿತಿಯೇ ಇಲ್ಲ: ಇದೆಂಥ ಒಕ್ಕೂಟ ವ್ಯವಸ್ಥೆ?

- Advertisement -
- Advertisement -

ಶನಿವಾರ (ಫೆಬ್ರವರಿ 13) ದೇಶದ್ರೋಹ ಆರೋಪದ ಮೇಲೆ ಬಂಧನವಾಗಿರುವ ಬೆಂಗಳೂರು ಮೂಲದ ಪರಿಸರ ಹೋರಾಟಗಾರ್ತಿ ದಿಶಾ ರವಿಯವರ ಮೇಲೆ ದೆಹಲಿ ಪೊಲೀಸರು ನಿಗಾ ಇಟ್ಟಿದ್ದರು ಮತ್ತು ಬಂಧನಕ್ಕೆ ಸಂಪೂರ್ಣ ಸಿದ್ಧರಾಗಿದ್ದರು ಎಂದು ಹೇಳಲಾಗುತ್ತಿದೆ. ಆದರೆ ದಿಶಾ ಅವರನ್ನು ದೆಹಲಿ ಪೊಲೀಸರು ಬಂಧಿಸಿ ಆಕೆಯನ್ನು ವಿಮಾನ ಹತ್ತಿಸುವ ತನಕವೂ ಬೆಂಗಳೂರಿನ ಸ್ಥಳಿಯ ಪೊಲೀಸರಿಗಾಗಲೀ, ರಾಜ್ಯ ಸರ್ಕಾರಕ್ಕಾಗಲೀ ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂಬುದು ಈ ಬಹು ಚರ್ಚಿತ ವಿಷಯವಾಗಿದೆ. ಇದರ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.

ರಾಜ್ಯಕ್ಕೆ ಮತ್ತು ಸ್ಥಳೀಯ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೇ ವ್ಯಕ್ತಿಯೊಬ್ಬರನ್ನು ಬಂಧಿಸುವಂತೆ ಕ್ರಮ ತೆಗೆದುಕೊಂಡಿರುವ ದೆಹಲಿ ಪೊಲೀಸರು ಮತ್ತು ಕೇಂದ್ರ ಸರ್ಕಾರದ ವಿರುದ್ಧ ಹಲವರು ಟೀಕೆ ಮಾಡುತ್ತಿದ್ದಾರೆ. ಮತ್ತೊಂದು ಕಡೆ ಈ ಪ್ರಕರಣದಲ್ಲಿ ರಾಜ್ಯಸರ್ಕಾರ ಇನ್ನೂ ಈ ವಿಚಾರಕ್ಕೆ ಪ್ರತಿಕ್ರಿಯಿಸದೇ ಇರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಶನಿವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಇಬ್ಬರು ಮಹಿಳಾ ಸಿಬ್ಬಂದಿ ಸೇರಿದಂತೆ ಐವರು ಸದಸ್ಯರ ಪೊಲೀಸ್ ತಂಡ ಬೆಂಗಳೂರಿಗೆ ಆಗಮಿಸಿದೆ ಎಂದು ನಗರ ಪೊಲೀಸ್ ಮೂಲಗಳು ತಿಳಿಸಿವೆ. ತಂಡವು ನೇರವಾಗಿ ದಿಶಾ ವಾಸಿಸುತ್ತಿರುವ ಬೆಂಗಳೂರು ಉತ್ತರದ ಅಬ್ಬಿಗರೆ, ಚಿಕ್ಕಬಾಣಾವರ ಪ್ರದೇಶಕ್ಕೆ ತೆರಳಿತು. ಆದರೆ ಅವರು ತಕ್ಷಣ ದಿಶಾ ಮನೆಗೆ ಪ್ರವೇಶಿಸಲಿಲ್ಲ. ಆಕೆಯ ಮೊಬೈಲ್ ಫೋನ್ ಅನ್ನು ಟ್ರ್ಯಾಕ್ ಮಾಡುವ ಮೂಲಕ ದಿಶಾ ಮನೆಯಲ್ಲಿದ್ದಾಳೆಯೇ ಎಂಬುದನ್ನು ಮೊದಲು ಖಚಿತಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ದಿಶಾ ರವಿ ಸ್ಥಾಪಿಸಿರುವ ‘Fridays For Future’ ಸಂಸ್ಥೆಯ ಬಗ್ಗೆ ಗೊತ್ತೆ?

“ಮೊದಲು, ಕಾರಿನಲ್ಲಿದ್ದ ಮೂವರು ಈ ಪ್ರದೇಶಕ್ಕೆ ಭೇಟಿ ನೀಡಿದ್ದು, ಹೊರಡುವ ಮೊದಲು ಮನೆ ಮತ್ತು ಸುತ್ತಮುತ್ತಲಿನ ಪರಿಸ್ಥಿತಿಯ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ” ಎಂದು ಮೂಲಗಳು ತಿಳಿಸಿವೆ. ನಂತರ ಈ ಮೂವರು ಇಬ್ಬರು ಮಹಿಳಾ ಪೊಲೀಸರೊಂದಿಗೆ ಮತ್ತೆ ದಿಶಾಳ ಮನೆಗೆ ಬಂದಿದ್ದಾರೆ. ಮಹಿಳಾ ಪೊಲೀಸರು ಬಾಗಿಲು ಬಡಿದು ಮನೆಯೊಳಗೆ ಪ್ರವೇಶಿಸುವಾಗ ಮೂವರು ಹೊರಗೆ ನಿಂತಿದ್ದರು. ಸ್ವಲ್ಪ ಸಮಯದ ನಂತರ, ಇಬ್ಬರು ಪುರುಷರೂ ಮನೆಯೊಳಗೆ ಪ್ರವೇಶಿಸಿ ಸಂಜೆ 5 ರೊಳಗೆ ಬಂಧನದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದರು ಎಂದು ದಿ ಪ್ರಿಂಟ್ ವರದಿ ಮಾಡಿದೆ.

ದೆಹಲಿಯ ಸ್ಥಳೀಯ ನ್ಯಾಯಾಲಯವೊಂದು ನೀಡಿದ ಐಡಿ ಕಾರ್ಡ್‌ಗಳು ಮತ್ತು ಬಂಧನದ ವಾರಂಟ್‌ ಪ್ರತಿಯನ್ನು ತೋರಿಸಿದ ನಂತರವೇ ದಿಶಾ ಮತ್ತು ಆಕೆಯ ತಾಯಿ ಪೊಲೀಸರನ್ನು ಮನೆಯ ಒಳಗೆ ಅನುಮತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದಿಶಾಳನ್ನು ವಶಕ್ಕೆ ಪಡೆದ ನಂತರ ತಂಡದ ಇಬ್ಬರು ಆಕೆಯ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್‌ಗಳನ್ನು ತೆಗೆದುಕೊಂಡು ಬಂದಿದ್ದಾರೆ. ಇನ್ನೊಬ್ಬ ಪೊಲೀಸ್ ಸಂಪೂರ್ಣ ವಿಚಾರಣೆಯನ್ನು ದಾಖಲಿಸಿದ್ದಾರೆ. ನಂತರ ದಿಶಾಳ ತಾಯಿ ಮಂಜುಳಾ ಅವರ ಬಳಿ ಈ ಪ್ರಕರಣ ಮತ್ತು ಬಂಧನದ ಬಗ್ಗೆ ಖಚಿತಪಡಿಸುವ ದಾಖಲೆಗೆ ಸಹಿ ಹಾಕುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಜನರಿಂದ ಲೂಟಿ ಮಾಡಿ, ಕೇವಲ ‘ಇಬ್ಬರ’ ವಿಕಾಸ: ಎಲ್‌ಪಿಜಿ ದರ ಏರಿಕೆ ವಿರುದ್ದ ರಾಹುಲ್‌‌…

“ಸಂಜೆ 5.30 ರ ಸುಮಾರಿಗೆ ಪೊಲೀಸರ ತಂಡವು ದಿಶಾಳೊಂದಿಗೆ ವಿಮಾನ ನಿಲ್ದಾಣಕ್ಕೆ ತಲುಪಿತು. ಮಹಿಳಾ ಪೊಲೀಸರು ದಿಶಾಳ ತಾಯಿಗೆ ಆಕೆಯ ಕೆಲವು ಬಟ್ಟೆಗಳನ್ನು ಪ್ಯಾಕ್ ಮಾಡಿಸಿಕೊಂಡರು. ಆಕೆಯ ತಾಯಿ ಕೆಲವು ಹಣ್ಣುಗಳು ಮತ್ತು ದಿಶಾ ಬಳಸುವ ಇತರ ಔಷಧಿಗಳನ್ನು ಸಹ ಪ್ಯಾಕ್ ಮಾಡಿಕೊಟ್ಟಿದ್ದಾರೆ” ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ನಂತರ ಪೊಲೀಸರ ತಂಡವು ಎರಡು ಭಾಗಗಳಾಗಿ ವಿಭಜಿತಗೊಂಡು, ಒಂದು ತಂಡವು ದಿಶಾಳನ್ನು ಕರೆದುಕೊಂಡು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳಿದರು. ಮತ್ತೊಂದು ತಂಡವು ಸೋಲದೇವನಹಳ್ಳಿ ವ್ಯಾಪ್ತಿಯ  ಪೊಲೀಸರನ್ನು ಭೇಟಿ ಮಾಡಿ ಬಂಧನದ ಬಗ್ಗೆ ಅಧಿಕೃತವಾಗಿ ತಿಳಿಸಲು ಹೊರಟರು. ಈ ವಿಷಯ ತಿಳಿದ ನಂತರ ದಿಶಾಳ ಮನೆಯ ಬಳಿಯ ಪರಿಸ್ಥಿಯನ್ನು ಗಮನಿಸಲು ಸ್ಥಲೀಯ ಪೊಲೀಸ್ ಅಧಿಕಾರಿಗಳು ಗಸ್ತು ತಿರುಗುವ ಹೊಯ್ಸಳ ತಂಡವನ್ನು ಕಳುಹಿಸಿದರು ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಇದನ್ನೂ ಓದಿ: 3ರಲ್ಲಿ 2 ಪ್ರಕರಣಗಳಲ್ಲಿ ಜಾಮೀನು ಪಡೆದ ದಲಿತ ಹೋರಾಟಗಾರ್ತಿ ನೊದೀಪ್ ಕೌರ್

ಅಂದರೆ ದಿಶಾಳ ಬಂಧನವೆಲ್ಲಾ ಮುಗಿದ ನಂತರ ವಿಮಾನ ನಿಲ್ದಾಣಕ್ಕೆ ತೆರಳುವಾಗಲಷ್ಟೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಷ್ಟೆ ಅಲ್ಲದೇ ಈ ಪ್ರಕರಣದಲ್ಲಿ ಯಾವುದೇ ನೋಟಿಸ್ ಆಗಲೀ ಅಥವಾ ವಾರೆಂಟ್ ಆಗಲಿ ನೀಡಿರುವುದಿಲ್ಲ. ಹಾಗಾಗಿ ಈ ಬಂಧನವು ಕಾನೂನು ಬಾಹಿರವೆಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ದಿಶಾಳನ್ನು ಬಂಧಿಸರು ದೆಹಲಿ ಪೊಲೀಸರು ತೆಗೆದುಕೊಂಡ ಶ್ರಮವನ್ನು ನೋಡಿದರೆ ಒಬ್ಬ ಭಯೋತ್ಪಾದಕನನ್ನು ಹೊಂಚುಹಾಕಿ ಹಿಡಿಯುವ ರೀತಿಯಲ್ಲಿ ಯೋಜನೆಯನ್ನು ರೂಪಿಸಿದ್ದಾರೆ ಎಂದು ಹಲವಾರು ಜನ ಆರೋಪಿಸಿದ್ದಾರೆ. ಹಾಗಾಗಿ ದಿಶಾ ಬಂಧನವಾಗಿಲ್ಲ ಬದಲಿಗೆ ಅಪಹರಿಸಲ್ಪಟ್ಟಿದ್ದಾಳೆ ಎಂದು ದೂರಿದ್ದಾರೆ.

ಅಷ್ಟಕ್ಕೂ ದಿಶಾ ಹಂಚಿಕೊಂಡಿರುವ ಟೂಲ್‌ಕಿಟ್‌ನಲ್ಲಿ, “ರೈತರ ಹೋರಾಟವನ್ನು ತೀವ್ರಗೊಳಿಸಲು ಏನು ಮಾಡಬಹದು? ನಾವಿರುವಲ್ಲಿಂದಲೇ ರೈತ ಹೋರಾಟವನ್ನು ಹೇಗೆ ಬೆಂಬಲಿಸಬಹುದು?” ಎನ್ನುವುದರ ಬಗ್ಗೆ ಕೆಲವು ಮಾಹಿತಿಗಳಿವೆ ಅಷ್ಟೆ. ಆದರೆ ಇದಕ್ಕೆ ಖಲೀಸ್ತಾನದ ನಂಟಿನ ಆರೋಪ ಹೊರಿಸಿ, ಭಯೋತ್ಪಾದಕ ಕೃತ್ಯ ಎಂದು ಬಿಂಬಿಸಿ, ದೇಶದ್ರೋಹ ಪ್ರಕರಣ ದಾಖಲಿಸುವಷ್ಟು ಸರ್ಕಾರದ ನಿದ್ದೆಗೆಡಿಸಿದೆಯೆಂದರೆ ಇದನ್ನು ನಾವು ಯಾವ ದೃಷ್ಟಿಕೋನದಿಂದ ನೋಡಬೇಕು? ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಕನ್ನಡ ಮಾಯ, ತಮಿಳುನಾಡಿನಲ್ಲಿ ತಮಿಳುಮಯ: ಹಿಂದಿ ಹೇರಿಕೆಗೆ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೆಹಲಿಯ ಪೊಲೀಸರು ಬೇರೊಂದು ರಾಜ್ಯದಲ್ಲಿ ಹೀಗೆ ನಿಯಮಬಾಹಿರವಾಗಿ ವ್ಯಕ್ತಿಯೊಬ್ಬನ್ನು ಬಂದಿಸಿರುವುದು, ಸರ್ವಾಧಿಕಾರ ಕಾಲಿಕ್ಕಿರುವುದಕ್ಕೆ, ಅಧಿಕೃತ ಸಾಕ್ಷಿಯಾಗಿದೆ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...