Homeಕರ್ನಾಟಕಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆ ವಿರುದ್ಧದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌!

ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆ ವಿರುದ್ಧದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌!

- Advertisement -
- Advertisement -

ಬೆಂಗಳೂರಿನ ‘ನಮ್ಮ ಮೆಟ್ರೋ’ ದರ ಏರಿಕೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಆಟೋಮೊಬೈಲ್ ಎಂಜಿನಿಯರ್ ಸನತ್ ಕುಮಾರ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರ ವಿಭಾಗೀಯ ಪೀಠ ವಜಾಗೊಳಿಸಿದೆ. ಬೆಂಗಳೂರು ಮೆಟ್ರೋ

ಅರ್ಜಿಯಲ್ಲಿನ ಖಂಡನೆಗಳನ್ನು ಪರಿಶೀಲಿಸಿ ಅರ್ಜಿಯನ್ನು ಪರಿಗಣಿಸಿದ್ದ ಪೀಠವು, ಪ್ರಸ್ತುತ ದರ ಏರಿಕೆಯ ವಿಷಯಕ್ಕೆ ಸಂಬಂಧಿಸಿದಂತೆ, ಕಾಯ್ದೆಯ ಸೆಕ್ಷನ್ 33 ರ ಅಡಿಯಲ್ಲಿ ಮೆಟ್ರೋ ಆಡಳಿತವು ಕಾಲಕಾಲಕ್ಕೆ ದರವನ್ನು ನಿಗದಿಪಡಿಸಲು ಅಧಿಕಾರ ಹೊಂದಿದೆ. ಇದನ್ನು ದರ ನಿಗದಿ ಸಮಿತಿಯ ಶಿಫಾರಸ್ಸಿನ ಮೇಲೆ ಮಾಡಲಾಗುತ್ತದೆ ಎಂದು ಹೈಕೋರ್ಟ್‌ ಹೇಳಿದೆ. ಬೆಂಗಳೂರು ಮೆಟ್ರೋ

“ಮೆಟ್ರೋ ರೈಲು ಕಾರ್ಯಾಚರಣೆಗಾಗಿ ರೈಲ್ವೆ ಆಡಳಿತದ ದರ ನಿಗದಿಯು ಶಾಸನಬದ್ಧ ಪ್ರಕ್ರಿಯೆಯಾಗಿದೆ. ದರ ನಿಗದಿ ಸಮಿತಿಗೆ ಇದರ ಕಾರ್ಯವನ್ನು ವಹಿಸಲಾಗಿದೆ. ದರ ನಿಗದಿಯು ತಜ್ಞರ ಪ್ರಕ್ರಿಯೆಯಾಗಿದೆ. ಅಂತಹ ಅಂಶಗಳನ್ನು ಪರಿಶೀಲಿಸುವುದು ನ್ಯಾಯಾಲಯದ ಕೆಲಸವಲ್ಲ. ಅದನ್ನು ದರ ನಿಗದಿ ಸಮಿತಿಯಿಂದ ಪರಿಗಣಿಸುವುದು ಉತ್ತಮ. ಶಾಸನಬದ್ಧ ಉಲ್ಲಂಘನೆಯನ್ನು ಸೂಚಿಸದ ಹೊರತು ನ್ಯಾಯಾಲಯವು ಅಂತಹ ನಿರ್ಧಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ” ಎಂದು ಪೀಠವೂ ಹೇಳಿದೆ.

ಅರ್ಜಿದಾರರ ಪರ ವಾದಿಸಿದ ವಕೀಲರು, ದರ ಹೆಚ್ಚಳವನ್ನು ಶೇಕಡಾ 71 ರಷ್ಟು ಹೆಚ್ಚಿಸಲಾಗಿದೆ. ಇದು ಪ್ರಾಮಿಸರಿ ಎಸ್ಟೋಪೆಲ್ ತತ್ವಗಳು ಮತ್ತು ಕಾನೂನುಬದ್ಧ ನಿರೀಕ್ಷೆಗೆ ವಿರುದ್ಧವಾಗಿದೆ ಎಂದು ವಾದಿಸಿದರು. ಇದಲ್ಲದೆ ಅವರು (ಬೆಂಗಳೂರು ಮೆಟ್ರೋ ರೈಲ್ವೆ ನಿಗಮ) ನಿಲ್ದಾಣವಾರು ದರಗಳನ್ನು ನಿಗದಿಪಡಿಸಬೇಕಿತ್ತು. ಆದರೆ ಅವರು ಅದರ ಬದಲಿಗೆ ಅದನ್ನು ಹಂತವಾರು ನಿಗದಿಪಡಿಸಿದ್ದಾರೆ. ಇದರಲ್ಲಿ ಒಂದು ಹಂತದಲ್ಲಿ 2 ರಿಂದ 3 ನಿಲ್ದಾಣಗಳನ್ನು ಒಳಗೊಂಡಿದೆ ಎಂದು ವಾದಿಸಲಾಯಿತು.

“ಪ್ರಾಮಿಸರಿ ಎಸ್ಟೊಪೆಲ್ ಉಲ್ಲಂಘನೆ ಅಥವಾ ಕಾನೂನುಬದ್ಧ ನಿರೀಕ್ಷೆಯ ನಿರಾಕರಣೆಯ ಬಗ್ಗೆ ಅರ್ಜಿದಾರರ ವಾದವನ್ನು ತಿರಸ್ಕರಿಸಿದ ನ್ಯಾಯಾಲಯವು,” ಯಾವುದೇ ಸಮಯದಲ್ಲೂ ದರವನ್ನು ಹೆಚ್ಚಿಸುವುದಿಲ್ಲ ಎಂದು ಯಾವುದೇ ಭರವಸೆ ನೀಡಲಾಗಿಲ್ಲ. ಕಾನೂನುಬದ್ಧ ನಿರೀಕ್ಷೆಯ ಪರಿಕಲ್ಪನೆಯನ್ನು ಇದರಲ್ಲಿ ಅನ್ವಯಿಸಲಾಗುವುದಿಲ್ಲ. ಇದರ ಸಂದರ್ಭಗಳು ಕಾನೂನುಬದ್ಧ ನಿರೀಕ್ಷೆಯ ಉಲ್ಲಂಘನೆಯಾಗಿದೆ ಎಂದು ಸೂಚಿಸುವುದಿಲ್ಲ ಎಂದು ಕೋರ್ಟ್‌ ಅರ್ಜಿಯನ್ನು ವಜಾಗೊಳಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ದೆಹಲಿ ಗಲಭೆ ಪ್ರಕರಣ | ಬಿಜೆಪಿ ನಾಯಕ ಕಪಿಲ್ ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ದೆಹಲಿ ಗಲಭೆ ಪ್ರಕರಣ | ಬಿಜೆಪಿ ನಾಯಕ ಕಪಿಲ್ ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...

ದೆಹಲಿಯಲ್ಲಿ ಹೆಣ್ಣು ಮಕ್ಕಳು ನಾಪತ್ತೆ ಪ್ರಕರಣ ಹೆಚ್ಚಳವಾಗುತ್ತಿರುವ ವರದಿ ನಿರಾಕರಿಸಿದ ಪೊಲೀಸರು: ಕಠಿಣ ಕ್ರಮದ ಎಚ್ಚರಿಕೆ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹುಡುಗಿಯರು ಕಾಣೆಯಾಗುವ ಪ್ರಕರಣಗಳು ಹೆಚ್ಚಳವಾಗುತ್ತಿವೆ ಎಂಬ ವರದಿಗಳನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದಾರೆ. ಈ ಆರೋಪಗಳು ದಾರಿತಪ್ಪಿಸುವಂತಿದ್ದು, ಭೀತಿ ಸೃಷ್ಟಿಸುವ ಗುರಿಯನ್ನು ಹೊಂದಿರುವ ಪಾವತಿಸಿದ ಆನ್‌ಲೈನ್ ಪ್ರಚಾರದಿಂದ ನಡೆಸಲ್ಪಡುತ್ತಿದೆ ಎಂದು ಅವರು...

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...